Home ನೀರಿನ ಟ್ಯಾಂಕ್ ತೆರವುಗೊಳಿಸುವ ವೇಳೆ ಅನಾಹುತ
HomeajjampuraCrime NewsLatest Newsnamma chikmagalur

ನೀರಿನ ಟ್ಯಾಂಕ್ ತೆರವುಗೊಳಿಸುವ ವೇಳೆ ಅನಾಹುತ

Share
Share

ಚಿಕ್ಕಮಗಳೂರು: ಶಿಥಿಲಾವಸ್ಥೆಯಲ್ಲಿದ್ದ ನೀರಿನ ಟ್ಯಾಂಕ್ ತೆರವುಗೊಳಿಸುವ ವೇಳೆ ಕಾರ್ಮಿಕರ ಎಡವಟ್ಟಿನಿಂದ ಕೂದಲೆಳೆ ಅಂತರದಲ್ಲಿ ಅನಾಹುತ ತಪ್ಪಿದ್ದು, ಟ್ಯಾಂಕ್ ನೆಲಕ್ಕೆ ಅಪ್ಪಳಿಸಿದ ರಭಸಕ್ಕೆ ಅನೇಕ ವಿದ್ಯುತ್ ಕಂಬಗಳು ಧರೆಗುರುಳಿವೆ. ಕಾರು ಹಾಗೂ ವ್ಯಕ್ತಿಯೊಬ್ಬರು ಸ್ವಲ್ಪದರಲ್ಲಿ ಪಾರಾಗಿದ್ದು, ಸ್ಥಳದಲ್ಲಿ ನೆರೆದಿದ್ದ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಜಿಲ್ಲೆಯ ಅಜ್ಜಂಪುರ ಪಟ್ಟಣದ ಬುಕ್ಕಾಂಬೂದಿ ರಸ್ತೆಯಲ್ಲಿನ ಶಿಥಿಲವ್ಯಸ್ಥೆಯಲ್ಲಿದ್ದ ೮೦ವರ್ಷಗಳ ಹಿಂದಿನ ನೀರಿನ ಟ್ಯಾಂಕ್ ತೆರವುಗೊಳಿಸುವಂತೆ ಸಾರ್ವಜನಿಕರು ಆಗ್ರಹಿಸಿದ್ದರು. ಜಿಲ್ಲಾಧಿಕಾರಿಗಳು ಟ್ಯಾಂಕ್ ತೆರವುಗೊಳಿಸುವಂತೆ ಪಟ್ಟಣ ಪಂಚಾಯತ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.

ಶುಕ್ರವಾರ ಟ್ಯಾಂಕ್ ತೆರವುಗೊಳಿಸಲು ಪಟ್ಟಣ ಪಂಚಾಯತ್ ಅಧಿಕಾರಿಗಳು ಮುಂದಾಗಿದ್ದು, ತೆರವು ಕಾರ್ಯದಲ್ಲಿ ಭಾಗಿಯಾಗಿದ್ದ ಕಾರ್ಮಿಕರು ಯಾವುದೇ ಮುಂಜಾಗೃತ ಕ್ರಮಗಳನ್ನು ಕೈಗೊಳ್ಳದೆ. ಟ್ಯಾಂಕ್ ತೆರವು ಕಾರ್ಯಾ ಚರಣೆಗೆ ಮುಂದಾಗಿದ್ದರಿಂದ ಬೃಹತ್ ಟ್ಯಾಂಕ್ ಏಕಾಏಕಿ ಬಿದ್ದಿದೆ.

ರಸ್ತೆಯಲ್ಲಿ ಚಲಿಸುತ್ತಿದ್ದ ಕಾರಿನ ಸಮೀಪದಲ್ಲಿಯೆ ನೀರಿನ ಟ್ಯಾಂಕ್ ಬಿದ್ದಿದ್ದು, ಕಾರಿನಲ್ಲಿದ್ದವರು ಸ್ವಲ್ಪದರಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಸ್ತೆ ಬದಿಯಲ್ಲಿದ್ದ ವ್ಯಕ್ತಿಯೊಬ್ಬರು ಟ್ಯಾಂಕ್ ಬೀಳುತ್ತಿದ್ದಂತೆ ಓಡಿ ಅನಾಹುತ ದಿಂದ ತಪ್ಪಿಸಿಕೊಂಡಿದ್ದಾರೆ. ಟ್ಯಾಂಕ್ ಬಿದ್ದ ರಭಸಕ್ಕೆ ಕಾರಿನ ಗಾಂಜಿಗೆ ಹಾನಿಯಾಗಿದೆ. ಜತೆಗೆ ವಿದ್ಯುತ್ ಕಂಬ ಗಳಿಗೆ ಹಾನಿಯಾಗಿದೆ. ಮುಂಜಾಗೃತ ಕ್ರಮಗಳನ್ನು ಅನುಸರಿಸದೆ ಟ್ಯಾಂಕ್ ತೆರವಿಗೆ ಮುಂದಾದ ಪಟ್ಟಣ ಪಂಚಾ ಯತ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಮೇಲೆ ಇಲ್ಲಿನ ಜನರು ಆಕ್ರೋಶ ಹೊರ ಹಾಕಿದ್ದಾರೆ.

Disaster while cleaning water tank

 

Share

Leave a comment

Leave a Reply

Your email address will not be published. Required fields are marked *

Don't Miss

ಜಿಲ್ಲೆಯಲ್ಲಿ ಮಳೆಯ ಆರ್ಭಟ – ಕಾಫಿಬೆಳೆ ನಾಶ – ರಸ್ತೆ ಹುಡುಕಾಡುವ ಕಾಟ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳಿಂದ ಎಡ ಬಿಡದೆ ಮಳೆ ಸುರಿಯುತ್ತಿದೆ ಅದರಲ್ಲೂ ಮಲೆನಾಡು ಭಾಗದಲ್ಲಿ ಮಳೆಯ ಆರ್ಭಟ ಹೆಚ್ಚಾಗಿದೆ. ಮಳೆಯ ಆರ್ಭಟದಿಂದ ಕಾಫಿ ಕೊಳೆಯಲು ಆರಂಭವಾಗಿದೆ ಎಂದು ಕಾಫಿ ಬೆಳೆಗಾರರ...

12ನೇ ಶತಮಾನದಲ್ಲೇ ಕನ್ನಡಕ್ಕೆ ವಚನಾಕಾರಿಂದ ಬಹಳ ದೊಡ್ಡ ಕೊಡುಗೆ

ಚಿಕ್ಕಮಗಳೂರು: ವಚನಾಕಾರರು ಕನ್ನಡಕ್ಕೆ ಬಹಳ ದೊಡ್ಡ ಕೊಡುಗೆಯನ್ನು ೧೨ನೇ ಶತಮಾನದಲ್ಲೇ ನೀಡಿದ್ದಾರೆ. ಜಗಜ್ಯೋತಿ ಬಸವಣ್ಣನವರು ಕೊಟ್ಟ ಸಾಂಸ್ಕೃತಿಕ ಚಳುವಳಿ ಬದುಕಿನ ಅನುಭವಗಳು ಅನುಭಾವವಾಗಿ ಜನರ ಆಡುಭಾಷೆಯಲ್ಲಿ ಸಾಹಿತ್ಯ ರಚಿಸಿ ಇಡೀ ಜಗತ್ತಿಗೆ ನೈತಿಕ...

Related Articles

ದೊಡ್ಡ ಮನೆ ಡಿಚ್ಚಿ ಯಾರಿಗೆ – ಕೈ ಕಸರತ್ತು ? ಬಿಜೆಪಿಯಲ್ಲಿ ತಳಮಳ !

ಅಜ್ಜಂಪುರ: ಪಟ್ಟಣ ಪಂಚಾಯತಿ ಚುನಾವಣೆ ನಡೆದು ಇಪ್ಪತ್ತು ದಿನಗಳಾಗಿದೆ ಆದರೆ ಅಧ್ಯಕ್ಷ/ ಉಪಾಧ್ಯಕ್ಷರ ಚುನಾವಣೆ ವಿಳಂಬ...

ಜನರಿಗೆ ವಾಸ್ತವ ಸಂಗತಿ ಕಾಂಗ್ರೆಸ್ ಪ್ರಚಾರ ಸಮಿತಿ ರಾಜ್ಯಾದ್ಯಂತ ಪ್ರವಾಸ

ಚಿಕ್ಕಮಗಳೂರು : ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ನೀಡುತ್ತಿರುವ ಜನಪರ ಯೋಜನೆಗಳ ಪ್ರಚಾರ ಕೈಗೊಳ್ಳುವುದರೊಂದಿಗೆ ವಿರೋಧ...

ನನ್ನ ವಿರುದ್ಧ ಸುಳ್ಳು ಆರೋಪ ಮಾಡಿದ ಆರೋಪಿಗಳನ್ನು ಗಡಿಪಾರು ಮಾಡಬೇಕು

ಚಿಕ್ಕಮಗಳೂರು: ‘ಅಲ್ಲಂಪುರ ನಿವಾಸಿ ಓಂಕಾರಮೂರ್ತಿ ಮೇಲಿನ ಹಲ್ಲೆ ಸಂಬಂಧ ಪೊಲೀಸರು ತನಿಖೆ ನಡೆಸಿ ನ್ಯಾಯಾಲಯಕ್ಕೆ ‘ಬಿ’...

ಅಂಬೇಡ್ಕರ್ ಸಂವಿಧಾನದ ತತ್ವ ಹೊಂದಿರುವ ಪಕ್ಷ ಕಾಂಗ್ರೆಸ್

ಚಿಕ್ಕಮಗಳೂರು:  ಅಂಬೇಡ್ಕರ್ ಸಂವಿಧಾನದ ತತ್ವವನ್ನು ಹೊಂದಿರುವ ಪಕ್ಷ ಕಾಂ ಗ್ರೆಸ್. ಚುನಾವಣೆಗೆ ಮಾತ್ರ ಪಕ್ಷ ಸೀಮಿತವಾಗದೇ...