Home namma chikmagalur ಪ್ರವಾಸಿಗರು ಗಿರಿಭಾಗದ ಪ್ರವಾಸ ಮುಂದೂಡಲು ಜಿಲ್ಲಾಡಳಿತ ಮನವಿ
namma chikmagalurchikamagalurHomeLatest News

ಪ್ರವಾಸಿಗರು ಗಿರಿಭಾಗದ ಪ್ರವಾಸ ಮುಂದೂಡಲು ಜಿಲ್ಲಾಡಳಿತ ಮನವಿ

Share
Share

ಚಿಕ್ಕಮಗಳೂರು: ಗಣೇಶ ಚತುರ್ಥಿಯ ಸಂದರ್ಭ ಗಿರಿ ಭಾಗದಲ್ಲಿ ಚಿಕ್ಕಮಗಳೂರು ತಾಲ್ಲೂಕಿನ ಗ್ರಾಮಸ್ಥರು ಧಾರ್ಮಿಕ ಕಾರ್ಯಕ್ರಮ ಹಮ್ಮಿಕೊಳ್ಳುವುದರಿಂದ ಗಿರಿ ಭಾಗದ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಈ ಪ್ರದೇಶಗಳಿಗೆ ಭೇಟಿ ನೀಡಲು ಉದ್ದೇಶಿಸಿರುವ ಪ್ರವಾಸಿಗರು, ತಮ್ಮ ಪ್ರವಾಸವನ್ನು ಮುಂದೂಡುವಂತೆ ಸಾರ್ವಜನಿಕರು ಹಾಗೂ ಪ್ರವಾಸಿಗರಿಗೆ ಜಿಲ್ಲಾಡಳಿತ ಮನವಿ ಮಾಡಿದೆ.

ಆಗಸ್ಟ್ ೨೭ರ ಗಣೇಶ ಚತುರ್ಥಿ ಹಬ್ಬದ ಸಂದರ್ಭದಲ್ಲಿ ಚಿಕ್ಕಮಗಳೂರು ತಾಲ್ಲೂಕಿನ ಕಸಬಾ ಹೋಬಳಿ, ವಸ್ತಾರೆ, ಆವತಿ, ಅಂಬಳೆ ಮತ್ತು ಜಾಗರ ಹೋಬಳಿಯ ೪೦ಕ್ಕೂ ಹೆಚ್ಚು ಗ್ರಾಮಗಳ ಗ್ರಾಮಸ್ಥರು ಶ್ರೀ ಮೇಲು ಗದ್ದುಗೆ ಮುಳ್ಳಯ್ಯನಗಿರಿ, ಶ್ರೀ ಸೀತಾಳಯ್ಯನಗಿರಿ ಮತ್ತು ಶ್ರೀ ಗುರು ನಾರುಕಂತೆ ಮಠಗಳಿಗೆ ತೆರಳಿ ಚೌತಿ ಕಾಯಿ ಒಡೆಸಿ ಹಣ್ಣು ಕಾಯಿ ಮಾಡಿಸಿಕೊಂಡು ಬರುವುದು ನೂರಾರು ವರ್ಷಗಳ ಪಾರಂಪರಿಕ ಆಚರಣೆ.

ಮೇಲ್ಕಾಣಿಸಿದ ದಿನದಲ್ಲಿ ಸಾರ್ವತ್ರಿಕ ರಜೆ ಇರುವ ಕಾರಣ, ಚಿಕ್ಕಮಗಳೂರು ತಾಲ್ಲೂಕಿನ ಸೀತಾಳಯ್ಯನಗಿರಿ, ಮುಳ್ಳಯ್ಯನಗಿರಿ, ಶ್ರೀ ಗುರುದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ ಐ.ಡಿ.ಪೀಠ, ಮಾಣಿಕ್ಯಧಾರ ಇತ್ಯಾದಿ ಪ್ರವಾಸಿ ತಾಣಗಳಿಗೆ ಹೊರ ರಾಜ್ಯ, ಜಿಲ್ಲೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡುವ ನಿರೀಕ್ಷೆ ಇದೆ.

ಈ ಮಾರ್ಗಗಳಲ್ಲಿ ಕಿರಿದಾದ ರಸ್ತೆಗಳಿದ್ದು, ಜನ ಹಾಗೂ ವಾಹನಗಳ ದಟ್ಟಣೆ ಉಂಟಾಗಿ ಅಪಘಾತಗಳು ಸಂಭವಿಸುವ ಸಾಧ್ಯತೆಗಳು ಹೆಚ್ಚಾಗಿವೆ. ಆದ್ದರಿಂದ ಈ ಮಾರ್ಗದಲ್ಲಿ ಹೋಂಸ್ಟೇ ಮತ್ತು ರೆಸಾರ್ಟ್‌ಗಳಲ್ಲಿ ಮುಂಗಡವಾಗಿ ಕೊಠಡಿಗಳನ್ನು ಕಾಯ್ದಿರಿಸಿರುವ ಪ್ರವಾಸಿಗರನ್ನು ಹೊರತುಪಡಿಸಿ, ಉಳಿದವರು ತಮ್ಮ ಪ್ರವಾಸವನ್ನು ಮುಂದೂಡುವಂತೆ ಅವರು ಗಮನ ಸೆಳೆದಿದ್ದಾರೆ.

District administration appeals to tourists to postpone hill trips

Share

Leave a comment

Leave a Reply

Your email address will not be published. Required fields are marked *

Don't Miss

ದಾಸರಹಳ್ಳಿ ಕೆರೆ ಸೆ.೧೦ ರಂದು ಲೋಕಾರ್ಪಣೆ

ಚಿಕ್ಕಮಗಳೂರು: ಸುಮಾರು ೨ ಕೋಟಿ ರುಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿರುವ ದಾಸರಹಳ್ಳಿ ಕೆರೆಯನ್ನು ಸೆಪ್ಟಂಬರ್ ೧೦ ರಂದು ಲೋಕಾರ್ಪಣೆ ಮಾಡಲಾಗುವುದು ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಅವರು ಹೇಳಿದರು. ಸೋಮವಾರ ಕೆರೆಯ...

ಸಾಮಾಜಿಕ ಹೋರಾಟಗಾರನ ಹತ್ಯೆಯ ಆರೋಪಿಗಳ ಕಠಿಣ ಶಿಕ್ಷೆಗೆ ಮನವಿ

ಚಿಕ್ಕಮಗಳೂರು:  ಸಾಮಾಜಿಕ ಹೋರಾಟಗಾರ ಹಾಗೂ ದಲಿತ ಮುಖಂಡ ಭೂಮಾನ ಂದ ಹತ್ಯೆಗೈದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಿ, ನೊಂದ ಕುಟುಂಬಕ್ಕೆ ಸರ್ಕಾರಿ ಹುದ್ದೆ ಕಲ್ಪಿಸಿಕೊಡಬೇ ಕು ಎಂದು ಆಗ್ರಹಿಸಿ ದಸಂಸ ಮುಖಂಡರುಗಳು...

Related Articles

ನಗರದಲ್ಲಿ ಅವಿಧಿ ಮುಗಿದ ಚಾಕೊಲೇಟ್ ಸಾಸ್ ಬಳಸಿ ಕೇಕ್ ….?

ಚಿಕ್ಕಮಗಳೂರು: ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ಹೋಟೆಲ್‌ ಹಾಗೂ ಬೇಕರಿಗಳ ಮೇಲೆ ಕ್ಷಿಪ್ರ ಕಾರ್ಯಾಚರಣೆ...

ಬಿಜೆಪಿ-ಸಂಘಪರಿವಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಚಿಕ್ಕಮಗಳೂರು: ಉತ್ತರಾಖಾಂಡ ರಾಜ್ಯದ ಹಾಲದ್ವಾನಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಮೈದಾನವನ್ನು...

ಸಚಿವ ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ

ಚಿಕ್ಕಮಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿಯಿಂದ...

ರಾಷ್ಟ್ರಧ್ವಜ ಅವಮಾನ ಆರೋಪ: ಕಾನೂನು ಕ್ರಮಕ್ಕೆ ರೈತ ಸಂಘ ಆಗ್ರಹ

ಚಿಕ್ಕಮಗಳೂರು: ಸ್ವಾತಂತ್ರ್ಯ ದಿನಾಚರಣೆಯಂದು ಬೆಳಿಗ್ಗೆ ರಾಷ್ಟ್ರಧ್ವಜಾರೋಹಣ ಮಾಡಿ, ಮಧ್ಯಾಹ್ನದ ವೇಳೆಗೆ ಧ್ವಜವನ್ನು ಅವರೋಹಣ ಮಾಡಿರುವ ಘಟನೆಗೆ...