Home namma chikmagalur chikamagalur ಜಿಲ್ಲಾ ಅಹಿಂದ ಘಟಕದಿಂದ ನಗರದಲ್ಲಿ ವಿಜಯೋತ್ಸವ
chikamagalurHomeLatest Newsnamma chikmagalur

ಜಿಲ್ಲಾ ಅಹಿಂದ ಘಟಕದಿಂದ ನಗರದಲ್ಲಿ ವಿಜಯೋತ್ಸವ

Share
Share

ಚಿಕ್ಕಮಗಳೂರು: ರಾಜ್ಯದ ಮುಖ್ಯಮಂತ್ರಿಯಾಗಿ ದೀರ್ಘಾವಧಿ ಆಡಳಿತ ನಡೆಸಿ ದಾಖಲೆ ನಿರ್ಮಿಸಿದ ಸಿದ್ದರಾಮಯ್ಯ ಅವರಿಗೆ ಜಿಲ್ಲಾ ಅಹಿಂದಾ ಘಟಕದಿಂದ ನಗರದಲ್ಲಿ ಅಭಿನಂದನಾ ಕಾರ್ಯಕ್ರಮ ನಡೆಯಿತು.

ನಗರದ ತಾಲೂಕು ಕಚೇರಿ ಆವರಣದಲ್ಲಿರುವ ಗಣಪತಿ ದೇವಾಲಯ ಮತ್ತು ಮಸಿದಿ, ಚರ್ಚ್‌ಗಳಲ್ಲಿ ವಿಶೇಷ ಪೂಜೆಸಲ್ಲಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಭಾವಚಿತ್ರದ ಪೋಸ್ಟರ್ ಹಿಡಿದು ತಾಲ್ಲೂಕು ಕಛೇರಿಯಿಂದ ಮೆರವಣಿಗೆ ಹೊರಟ ನೂರಾರು ಕಾರ್ಯಕರ್ತರು ಎಂಜಿ ರಸ್ತೆ ಮೂಲಕ ಆಜಾದ್ ಪಾರ್ಕ್ ವೃತ್ತದಲ್ಲಿ ಸಮಾವೇಶಗೊಂಡರು. ಸಿಎಂ ಪರವಾದ ಘೋಷಣೆ ಕೂಗಿ ಪಟಾಕಿ ಸಿಡಿಸಿ ಸಂಭ್ರಮಿಸಿದರು.

ಮಾಜಿ ಸಚಿವ ಬಿ.ಬಿ.ನಿಂಗಯ್ಯ ಈ ವೇಳೆ ಮಾತನಾಡಿ, ರಾಜ್ಯವನ್ನು ಆಳಿದಂತಹ ಬಹಳಷ್ಟು ಮುಖ್ಯಮಂತ್ರಿಗಳಲ್ಲಿ ದೇವರಾಜು ಅರಸು ನಂತರ ಮೈಸೂರಿನವರೇ ಆದ ನಮ್ಮ ನೆಚ್ಚಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅರುಸು ಆಡಳಿತ ಸರಿಗಟ್ಟಿ ನಾಳೆಗೆ ಅವರಿಗಿಂತ ಒಂದು ದಿನ ಹೆಚ್ಚು ಆಡಳಿತ ನಡೆಸಿದವರಾಗುತ್ತಾರೆ ಎಂದರು.

ಅವರ ಜತೆ ಮಂತ್ರಿಯಾಗಿ, ಎಂಎಲ್‌ಎ ಆಗಿ ಕೆಲಸ ಮಾಡುವ ಭಾಗ್ಯ ನನ್ನದಾಗಿತ್ತು. ಅವರು ೧೯೮೩ ರಲ್ಲೇ ಎಂಎಲ್‌ಎ ಆಯ್ಕೆಯಾದರು. ಹೆಗಡೆ ಮುಖ್ಯಮಂತ್ರಿ ಆಗಿದ್ದಾಗ ಕನ್ನಡ ಕಾವಲು ಸಮಿತಿ ಅಧ್ಯಕ್ಷರಾದರು. ಬಿ.ರಾಚಯ್ಯ ಅವರ ಕಾಲದಲ್ಲಿ ಮಂತ್ರಿಯೂ ಆದರು. ನಾನು ೧೯೮೫ ಕ್ಕೆ ಶಾಸಕನಾಗಿ ಅವರ ಜತೆಗೂಡಿದೆ. ಇಂದಿಗೂ ರಾಜ್ಯ ಕಂಡ ಶ್ರೇಷ್ಟ ನಾಯಕರಲ್ಲಿ ಸಿದ್ದರಾಮಯ್ಯ ಒಬ್ಬರು. ದನಿಯಿಲ್ಲದವರ ದನಿಯಾಗಿ, ಬಡವರ, ರೈತ ಕಾರ್ಮಿಕರ, ಎಲ್ಲರ ಪರವಾಗಿ ಜನ ಮೆಚ್ಚುವ ಕೆಲಸ ಮಾಡಿರುವ ಏಕೈಕ ಮುಖ್ಯಮಂತ್ರಿ ಎಂದರೆ ತಪ್ಪಾಗದು. ಅವರು ನೀಡಿದ ಭಾಗ್ಯಗಳು, ಪಂಚ ಗ್ಯಾರಂಟಿ ಕಾರ್ಯಕ್ರಮಗಳು ರಾಜ್ಯದ ಇತಿಹಾಸದಲ್ಲಿ ಮರೆಯಲಾಗದ ಕೆಲಸಗಳು. ಅರಸು ಅವರ ಎಲ್ಲ ಜನವರ್ಗವನ್ನು ಒಟ್ಟಿಗೆ ಕರೆದೊಯ್ದು ಒಳ್ಳೆಯ ಆಡಳಿತ ಕೊಟ್ಟರು. ಅವರ ಹಾದಿಯಲ್ಲೇ ಸಿದ್ದರಾಮಯ್ಯ ಸಾಗಿದ್ದು ಸಿಎಂ ಆಗಿ ಏನೆಲ್ಲಾ ಮಾಡಲು ಸಾಧ್ಯವಿತ್ತೋ ಅದನ್ನೆಲ್ಲಾ ಮಾಡಿದ್ದಾರೆ. ೧೬ ಬಾರಿ ಬಜೆಟ್ ಮಂಡಿಸಿದ ದಾಖಲೆ ಅವರ ಹೆಸರಲ್ಲಿದೆ ಎಂದು ಹೇಳಿದರು.

ಕೆಪಿಸಿಸಿ ವಕ್ತಾರ ಎಚ್.ಎಚ್.ದೇವರಾಜ್ ಮಾತನಾಡಿ, ೧೯೮೨ ರಿಂದ ನಾನು ಸಿದ್ದರಾಮಯ್ಯ ಅವರು ಒಟ್ಟೊಟ್ಟಿಗೆ ಬಂದವರು. ಅವರು ಮೈಸೂರು ಜಿಲ್ಲೆಯ ರೈತ ಸಂಘದ ಅಧ್ಯಕ್ಷರಾಗಿದ್ದಾಗ ನಾನು ಚಿಕ್ಕಮಗಳೂರು ತಾಲೂಕು ಅಧ್ಯಕ್ಷನಾಗಿದ್ದೆ. ಸಿದ್ದರಾಮಯ್ಯ ಅವರು ಪ್ರೊ. ನಂಜುಂಡಸ್ವಾಮಿ ಅಭಿಮಾನಿಯಾಗಿದ್ದರು. ಅವರಿಗೆ ಇರುವ ಬದ್ಧತೆ, ಸಿದ್ದಾಂತ ರಾಜ್ಯದಲ್ಲಿ ನಾವು ಯಾರಲ್ಲೂ ನೋಡಲು ಸಾಧ್ಯವಿಲ್ಲ. ಎಲ್ಲ ವರ್ಗದ ಪ್ರೀತಿ ಗಳಿಸಿರುವ ಮಹಾಚೇತನ ಎಂದು ಬಣ್ಣಿಸಿದರು.

ಸಿದ್ದರಾಮಯ್ಯ ಅವರ ಮೇಲೆ ಸುಳ್ಳು ಆರೋಪ ಮಾಡುವವರಿದ್ದಾರೆ. ಸುದೀರ್ಘ ಕಾಲದ ಸಿಎಂ ಆಗಿದ್ದರೂ ಒಂದೇ ಒಂದು ರೂ. ಭ್ರಷ್ಟಾಚಾರ ಮಾಡಿಲ್ಲ. ಇಂತಹ ಪ್ರಾಮಾಣಿಕತೆಯಿಂದ ಬಂದಿರುವ ಸಿಎಂಗೆ ಹತ್ತಾರು ಸಾವಿರ ಕೋಟಿ ರೂ.ಲೂಟಿ ಹೊಡೆದಿರುವವರು ಎಂದು ಆಪಾದನೆ ಮಾಡುತ್ತಾರೆ ಎಂದು ಟೀಕಿಸಿದರು.

ಮಾಜಿ ಎಂಎಲ್ಸಿ ಗಾಯತ್ರಿ ಶಾಂತೇಗೌಡ ಮಾತನಾಡಿ, ಸಿದ್ದರಾಮಯ್ಯ ಅವರು ತಮ್ಮ ೪೦ ವರ್ಷದ ರಾಜಕಾರಣದಲ್ಲಿ ಒಂದೇ ಒಂದು ಅಹಿತಕರ ಘಟನೆ ನಡೆಯದ ಹಾಗೆ ಸ್ವಚ್ಛ ಆಡಳಿತ ನೀಡಿದ್ದಾರೆ. ಅರಸು ತರಹನೇ ಸಿದ್ದರಾಮಯ್ಯ ಆಡಳಿತ ನಡೆಸಿಕೊಂಡು ಬಂದಿದ್ದಾರೆ ಎಂದು ಹೇಳಿದರು.

ಜಿಲ್ಲಾ ಅಹಿಂದ ಘಟಕದ ಜಿಲ್ಲಾಧ್ಯಕ್ಷ ತ್ರಿಭುವನ್ ಎತ್ತಿನಮನೆ ಮಾತನಾಡಿ, ಸಿದ್ದರಾಮಯ್ಯ ಅವರ ಹಿಂದೆ ಅಹಿಂದ ವರ್ಗ ಸದಾ ಇರತ್ತದೆ ಎಂದು ಹೇಳಿದರು.

ಹೆರಿಗೆ ಆಸ್ಪತ್ರೆಯಲ್ಲಿ ಹಣ್ಣು-ಹಂಪಲು ವಿತರಣೆ, ರಕ್ತದಾನ, ನೇತ್ರ, ಆರೋಗ್ಯ ತಪಾಸಣೆ ನಡೆಯಿತು. ಅಹಿಂದ ಮುಖಂಡರಾದ ಎ.ಎನ್.ಮಹೇಶ್, ಕುರುಬರ ಸಂಘದ ಅಧ್ಯಕ್ಷ ಕೆ.ಎಸ್ ಶಾಂತೇಗೌಡ, ಗ್ಯಾರಂಟಿ ಯೋಜನೆ ತಾಲೂಕು ಅಧ್ಯಕ್ಷ ಮಲ್ಲೇಶ ಸ್ವಾಮಿ, ಕೆಪಿಸಿಸಿ ಮಹಿಳಾ ಘಟಕದ ಉಪಾಧ್ಯಕ್ಷೆ ರೇಖಾಹುಲಿಯಪ್ಪಗೌಡ, ಅಹಿಂದ ಸದಸ್ಯರುಗಳಾದ ಹೆಚ್.ಪಿ ಮಂಜೇಗೌಡ, ಸಿ.ಸಿ. ಮಧು, ಪ್ರಕಾಶ್ ರೈ, ದಲಿತಪರ ಸಂಘಟನೆಯ ಅಣ್ಣಯ್ಯ, ಭೀಮಯ್ಯ, ಲಕ್ಷ್ಮಣ, ರಾಮಚಂದ್ರ ಸೇರಿದಂತೆ ಅನೇಕ ಮುಖಂಡರು ಭಾಗವಹಿಸಿದ್ದರು.

District Ahinda unit celebrates victory in the city

Share

Leave a comment

Leave a Reply

Your email address will not be published. Required fields are marked *

Don't Miss

ಅಮಾನವೀಯ ಜಾನುವಾರು ಸಾಗಾಟ – ಮೂವರ ಬಂಧನ

ಎನ್.ಆರ್. ಪುರ: ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಹಾಗೂ ಅಮಾನವೀಯ ಜಾನುವಾರು ಸಾಗಾಟ ಪ್ರಕರಣವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಈ ಸಂಬಂಧ ಮೂವರನ್ನು ಬಂಧಿಸಿ, ವಾಹನ ಮತ್ತು ಜಾನುವಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ...

ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವ ಕೆಲಸ ಮಾಧ್ಯಮಗಳು ಮಾಡಬೇಕು

ಚಿಕ್ಕಮಗಳೂರು: ಬಡವರ ಕಷ್ಟಗಳನ್ನು, ಸಮಸ್ಯೆಗಳನ್ನು ಸಮಾಜದ ಮತ್ತು ಸರ್ಕಾರದ ಗಮನಕ್ಕೆ ತರುವ ಕೆಲಸವನ್ನು ಮಾಧ್ಯಮಗಳು ಮಾಡಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಸಲಹೆ ಮಾಡಿದರು. ಹೊನ್ನ ಬಿತ್ತೇವು ಹೊಲಕೆಲ್ಲ ಮತ್ತು ನ್ಯೂಸ್ ಕಿಂಗ್...

Related Articles

ನೀರುಗಂಟಿ ಆತ್ಮಹತ್ಯೆ ಪ್ರಕರಣದಲ್ಲಿ ಎಫ್‌ಐಆರ್ ದಾಖಲು

ಚಿಕ್ಕಮಗಳೂರು: ಅಣೂರು ಗ್ರಾಮ ಪಂಚಾಯಿತಿಯಲ್ಲಿ ನೀರುಗಂಟಿಯಾಗಿ ಕೆಲಸ ಮಾಡುತ್ತಿದ್ದ ರಮೇಶ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ,...

ಹೇಮಾವತಿ ನದಿಯ ಅಕ್ರಮವಾಗಿ ಮರಳು ಸಾಗಣೆ ಪ್ರಕರಣ ಪತ್ತೆ

ಮೂಡಿಗೆರೆ: ಜೀವನದಿ ಹೇಮಾವತಿಯ ಒಡಲಿಗೆ ಕನ್ನ ಹಾಕಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಜಾಲದ ಮೇಲೆ ಗೋಣಿಬೀಡು...

ಕಾಫಿನಾಡಿನಲ್ಲಿ ರಂಜಾನ್ ಅಂಗವಾಗಿ ಸಾಮೂಹಿಕ ಪ್ರಾರ್ಥನೆ

ಚಿಕ್ಕಮಗಳೂರು : ಕಾಫಿನಾಡಿನಲ್ಲಿ ಪವಿತ್ರ ರಂಜಾನ್ ಹಬ್ಬದ ಸಂಭ್ರಮವು ಸಡಗರ ಹಾಗೂ ಸೌಹಾರ್ದತೆಯಿಂದ ಕಳೆಗಟ್ಟಿತ್ತು. ಕೆಂಪನಹಳ್ಳಿಯ...

ಕಾಫಿ ತೋಟದಲ್ಲಿ ಮರಗಸಿ – ಕಾರ್ಮಿಕನ ಸಾವು

ಚಿಕ್ಕಮಗಳೂರು : ಕಾಫಿ ತೋಟದ ಮಾಲೀಕರು ಮತ್ತು ಮೇಸ್ತ್ರಿಗಳ ನಿರ್ಲಕ್ಷ್ಯಕ್ಕೆ ಅಮಾಯಕ ಕಾರ್ಮಿಕನೊಬ್ಬ ಬಲಿಯಾದ ದಾರುಣ...