Home namma chikmagalur ಜಿಲ್ಲಾ ಬಿಜೆಪಿಯಿಂದ ಸಿಹಿ ಹಂಚುವ ಮೂಲಕ ಜಿಎಸ್‌ಟಿ ವಿಜಯೋತ್ಸವ
namma chikmagalurchikamagalurHomeLatest News

ಜಿಲ್ಲಾ ಬಿಜೆಪಿಯಿಂದ ಸಿಹಿ ಹಂಚುವ ಮೂಲಕ ಜಿಎಸ್‌ಟಿ ವಿಜಯೋತ್ಸವ

Share
Share

ಚಿಕ್ಕಮಗಳೂರು:  ರಾಜ್ಯದ ಕಾಂಗ್ರೆಸ್ ಸರ್ಕಾರ ಜನತೆಯ ತೆರಿಗೆ ಹೊರೆ ಹೆಚ್ಚಿಸಿ ಪಾಪ ಕಟ್ಟಿಕೊಂಡರೆ, ಕೇಂದ್ರದ ನರೇಂದ್ರ ಮೋದಿ ಸರ್ಕಾರ ದೇಶದ ನಾಗರೀಕರ ಜಿಎಸ್‌ಟಿಯನ್ನು ಇಳಿಕೆಗೊ ಳಿಸುವ ಮುಖಾಂತರ ಪುಣ್ಯವನ್ನು ಕಟ್ಟಿಕೊಳ್ಳುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಹೇಳಿದರು.

ನಗರದ ಜಿಲ್ಲಾ ಬಿಜೆಪಿ ಕಚೇರಿಯಿಂದ ಕಾರ್ಯಕರ್ತರು ಎಂ.ಜಿ.ರಸ್ತೆಯ ಎಲೆಕ್ಟಾçನಿಕ್ಸ್ ಅಂಗಡಿ ಮಳಿಗೆ ಯಲ್ಲಿ ಕಾಲ್ನಡಿಗೆ ಜಾಥಾದಲ್ಲಿ ಸಾಗಿ ಪಟಾಕಿ ಸಿಡಿಸಿದರು. ಬಳಿಕ ಅಂಗಡಿ ಸಿಬ್ಬಂದಿ, ಗ್ರಾಹಕರು ಹಾಗೂ ಪರಸ್ಪರ ಸಿಹಿ ಹಂಚುವ ಮೂಲಕ ಜಿಎಸ್‌ಟಿ ವಿಜಯೋತ್ಸವವನ್ನು ಸಂಭ್ರಮದಿAದ ಆಚರಿಸಿದರು.

ರಾಜ್ಯದಲ್ಲಿ ಹುಟ್ಟಿದ ಮಕ್ಕಳು ಸೇರಿದಂತೆ ಸತ್ತ ಹೆಣದ ಮೇಲೂ ತೆರಿಗೆಯಿದೆ ಹಾಗೂ ದೇವಸ್ಥಾನಕ್ಕೆ ಪೂಜೆ ಸಲ್ಲಿಸಲು ತೆರಳಿದರೆ ಅತಿಹೆಚ್ಚು ದರವಿದೆ. ನವರಾತ್ರಿಯಂದು ದಸರಾ ಆನಂದಿಸಲು ತೆರಳಲಾಗು ತ್ತಿಲ್ಲ. ಅದು ಕೂಡಾ ಶ್ರೀಮಂತರ ದಸರಾವಾಗಿದೆ. ಪಂಜಿನ ಕವಾಯಿತ್ ೩ ಸಾವಿರ, ಯುವದಸರಾ ವೀಕ್ಷಣೆಗೆ ೬ ಸಾವಿರ ಈ ರೀತಿ ಬೆಲೆಏರಿಕೆ ಬರೆ ಎಳೆಯುತ್ತಿದೆ ಎಂದು ಆರೋಪಿಸಿದರು.

ರಾಜ್ಯದ ಮುಖ್ಯಮಂತ್ರಿಗಳು ಕನಿಷ್ಟ ಪ್ರಧಾನಿ ಹಾದಿಯಲ್ಲಿ ಎರಡು ಹೆಜ್ಜೆ ಸಾಗಿ, ಆಗ ರಾಜ್ಯ ಜನತೆಗೆ ಹಾಗೂ ವೈಯಕ್ತಿಕವಾಗಿ ಒಳಿತಾಗಲಿದೆ. ಮೋದಿಯವರು ತೆರಿಗೆ ಇಳಿಸಿ ರಾಜ್ಯಕ್ಕೆ ಲಾಭಾಂಶ ನೀಡಿದರೆ, ಸಿದ್ದ ರಾಮಯ್ಯನವರು ತೆರಿಗೆ ಹೆಚ್ಚಿಸಿ ಪಾಪವನ್ನು ಕಟ್ಟಿಕೊಳ್ಳುತ್ತಿದ್ದು ಶೀಘ್ರವೇ ಈ ಪಾಪದಿಂದ ಮುಕ್ತರಾಗಿ ಪುಣ್ಯ ಕಟ್ಟಿಕೊಳ್ಳುವ ಕೆಲಸ ಮಾಡಲಿ ಎಂದು ಆಗ್ರಹಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಕ್ಷಣ ೨೦ ರೂ. ಛಾಪಾಕಾಗದ ೨೦೦ ರೂ., ೧೫ ರೂ. ಪಹಣಿ ಬೆಲೆ ೩೦ ರೂ., ೧೦ ರೂ.ನ ಜನನ ಪ್ರಮಾಣಪತ್ರ ೫೦ ರೂ., ಸಬ್‌ರಿಜಿಸ್ಟರ್ ಎರಡುಪಟ್ಟು ಹೆಚ್ಚಳ, ಮೋಟಾ ರ್ ವಾಹನ ತೆರಿಗೆ ಹೆಚ್ಚು, ಅಡುಗೆ ಎಣ್ಣೆಯಿಂದ ಕುಡಿಯುವ ಎಣ್ಣೆವರೆಗೂ ಬೆಲೆಏರಿಸಿ ಗ್ರಾಹಕರಿಗೆ ಬರೆ ಎಳೆಯಲಾಗುತ್ತಿದೆ ಎಂದು ದೂರಿದರು.

ಕೇಂದ್ರ ಸರ್ಕಾರ ಜನಸಾಮಾನ್ಯರಿಗೆ ಹೊರೆಯಾಗದೆಂಬ ದೃಷ್ಟಿಯಿಂದ ಒಂದು ದೇಶ, ಒಂದೇ ತೆರಿಗೆ ಚಿಂತನೆಯಡಿ ೧೩ ಬಗೆಯ ಸೆಸ್ ಹಾಗೂ ೧೭ ವಿವಿಧ ರೀತಿಯ ತೆರಿಗೆಗಳನ್ನು ರದ್ದುಪಡಿಸಿ, ಜನತೆ ಕಷ್ಟದಿಂದ ವಿಮುಕ್ತರಾಗಿ ಹಾಗೂ ಸುಲಭವಾಗಿ ಉದ್ಯೋಗ ನಡೆಸುವಂತೆ ಮಾಡಿದೆ. ಅಲ್ಲದೇ ೨೨ ವಿವಿಧ ಬಗೆಯ ಜೀ ವರಕ್ಷಕ ಔಷಧಿಗಳ ಮೇಲೆ ಶೂನ್ಯ ತೆರಿಗೆಗೊಳಿಸಿದೆ ಎಂದರು.

ಎಲ್ಲಾ ಬಗೆಯ ಜೀವರಕ್ಷಕ ಔಷಧಿಗಳಿಗೆ ಶೇ.೧೮ರಷ್ಟಿದ್ದ ತೆರಿಗೆ ಶೇ.೫ಕ್ಕೆ ಇಳಿಸಿ ನೇರ ಲಾಭವನ್ನು ಗ್ರಾಹ ಕರ ಮಾಡಿಕೊಟ್ಟಿದ್ದಾರೆ. ಕಟ್ಟಡ ಸಾಮಾಗ್ರಿಗಳಾದ ಸಿಮೆಂಟ್, ಕಬ್ಬಿಣ ಇತ್ಯಾದಿ ವಸ್ತು, ಖಾಸಗೀ ವಾಹನಗಳ ಖರೀದಿಯಲ್ಲಿ ಶೇ.೨೮ರಷ್ಟಿದ್ದ ತೆರಿಗೆ ಶೇ.೧೮ರಷ್ಟಾಗಿದೆ. ಎಲೆಕ್ಟಾçನಿಕ್ ವಸ್ತುಗಳು, ಹಾಲು, ಮೊಸರು, ಬೆಣ್ಣೆ, ತು ಪ್ಪ ಇತ್ಯಾದಿಗಳ ತೆರಿಗೆಯನ್ನು ಶೇ.೫ರಷ್ಟು ಇಳಿಸಿ ದಸರಾಗೆ ಬಹುಮಾನ ಘೋಷಿಸಿದ್ದಾರೆ ಎಂದರು.

ಇನ್ನುಳಿದAತೆ ಆರೋಗ್ಯ ಹಾನಿಕಾರಕ ವಸ್ತುಗಳಾದ ಕುಟ್ಕಾ, ತಂಬಾಕು ವಸ್ತುಗಳು ಬೆಲೆಏರಿಕೆಗೊಂಡಿವೆ ಹಾಗೂ ಬಹುತೇಕ ಶ್ರೀಮಂತರು ಉಪಯೋಗಿಸುವ ಐಶರಾಮಿ ವಸ್ತುಗಳು ಬೆಲೆಏರಿಕೆಗೊಂಡಿದೆ. ಅಲ್ಲದೇ ಬಡವರು, ವರ್ತಕರು, ಉತ್ಪಾದಕರ, ಗ್ರಾಹಕರ ಪರವಾಗಿ ಉತ್ತಮ ನಿರ್ಣಯ ಕೈಗೊಂಡಿರುವ ಪ್ರಧಾನಿಗಳು ಜನಸಾಮಾನ್ಯರು ಪ್ರಶಂಸೆಗೆ ಪಾತ್ರರಾಗಿದ್ದಾರೆ.

ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಆರ್.ದೇವರಾಜ್‌ಶೆಟ್ಟಿ ಮಾತನಾಡಿ ದೇಶದ ಜನರಿಗೆ ಹಬ್ಬದ ವಾತಾವರಣವ ನ್ನು ನರೇಂದ್ರ ಮೋದಿ ಸರ್ಕಾರ ಮಾಡಿಕೊಟ್ಟಿದೆ. ದೇಶದ ಜನರಿಗೆ ಶೇ.೨೮ರ ಜಿಎಸ್‌ಟಿ ತೆರಿಗೆಯನ್ನು ಶೇ.೧೮ ಕ್ಕೆ ಇಳಿಕೆ, ಶೇ.೧೮ರ ತೆರಿಗೆ ಶೇ.೫ ಇಳಿಕೆ ಹಾಗೂ ಬಹುತೇಕ ಶೇ.೯೯ ಮಂದಿ ಬಳಸುವಂತ ವಸ್ತುಗಳ ಶೇ.೫ರ ಜಿಎಸ್‌ಟಿ ತೆರಿಗೆಯನ್ನು ಶೂನ್ಯಗೊಳಿಸುವ ಮೂಲಕ ಸಂತಸದ ವಾತಾವರಣ ಸೃಷ್ಟಿಸಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಕನಕರಾಜ್, ಬಿಜೆಪಿ ನಗರಾಧ್ಯಕ್ಷ ಪುಷ್ಪರಾಜ್, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸಂತೋಷ್ ಕೋಟ್ಯಾನ್, ಸಿಡಿಎ ಮಾಜಿ ಅಧ್ಯಕ್ಷ ಕೋಟೆ ರಂಗನಾಥ್, ಜಿಲ್ಲಾ ಬಿಜೆಪಿ ಮಹಿಳಾ ಘಟಕದ ಅಧ್ಯಕ್ಷೆ ಜಸಂತಾ ಅನಿಲ್‌ಕುಮಾರ್, ಎಸ್ಸಿ ಘಟಕದ ಜಿಲ್ಲಾಧ್ಯಕ್ಷ ಕುರುವಂಗಿ ವೆಂಕಟೇಶ್, ನಗರಸಭೆ ಸದಸ್ಯರಾದ ಕವಿತಾ ಶೇಖರ್, ಮಧುಕುಮಾರ್, ಮುಖಂಡರುಗಳದ ಪುಟ್ಟಸ್ವಾಮಿ, ಹೆಚ್.ಕೆ. ಕೇಶವಮೂರ್ತಿ, ಕೌಶಿಕ್, ದಿನೇಶ್, ಬೆನಡಿಕ್ಟ್ ಜೇಮ್ಸ್, ಪ್ರದೀಪ್ ಮತ್ತಿತರರಿದ್ದರು.

District BJP celebrates GST victory by distributing sweets

Share

Leave a comment

Leave a Reply

Your email address will not be published. Required fields are marked *

Don't Miss

19 ಲಕ್ಷ ಜನರ ಪಿಂಚಣಿ ರದ್ದು: ಸರ್ಕಾರದ ವಿರುದ್ಧ ವಿಧಾನಮಂಡಲದಲ್ಲಿ ಸಂಗ್ರಾಮ

ಸಖರಾಯಪಟ್ಟಣ: ರಾಜ್ಯದಲ್ಲಿ 19 ಲಕ್ಷಕ್ಕೂ ಹೆಚ್ಚು ಜನರ ವೃದ್ಧಾಪ್ಯ, ವಿಧವಾ ಹಾಗೂ ಅಂಗವಿಕಲ ಪಿಂಚಣಿಯನ್ನು ರದ್ದುಪಡಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಸುಮಾರು 67 ಸಾವಿರ ಫಲಾನುಭವಿಗಳ ಪಿಂಚಣಿ ಸ್ಥಗಿತಗೊಳಿಸಲಾಗಿದೆ ಎಂದು ವಿಧಾನಪರಿಷತ್ ಸದಸ್ಯ...

ಸಖರಾಯಪಟ್ಟಣದ ಮೂಲಸೌಕರ್ಯ ಸಮಸ್ಯೆ ಪರಿಹಾರಕ್ಕೆ 5 ಬೇಡಿಕೆ

ಚಿಕ್ಕಮಗಳೂರು: ಜಿಲ್ಲೆಯ ಪ್ರಮುಖ ಗ್ರಾಮ ಪಂಚಾಯಿತಿಗಳಲ್ಲಿ ಒಂದಾಗಿರುವ ಸಖರಾಯಪಟ್ಟಣದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಜನರು ತೊಂದರೆ ಅನುಭವಿಸುತ್ತಿದ್ದು, ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಜಿಪಂ–ತಾಪಂ ಸದಸ್ಯ...

Related Articles

ಮಳೆಗಾಲದಲ್ಲಿ ಟಿಂಬರ್ ಸಾಗಣೆರಸ್ತೆಯಿಂದ ರಸ್ತೆ ಹಾಳು

ಕೊಪ್ಪ: ತಾಲೂಕಿನ ಅಸಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಮಳೆಗಾಲದಲ್ಲಿಯೇ ಟಿಂಬರ್‌ಗಳನ್ನು ಕಡಿದು ಸಾಗಿಸುತ್ತಿರುವುದರಿಂದ...

ನಗರಕ್ಕೆ ಎರಡು ದಿನಗಳ ಕಾಲ ಕುಡಿಯುವ ನೀರಿನ ಸರಬರಾಜು ಸ್ಥಗಿತ

ಚಿಕ್ಕಮಗಳೂರು: ನಗರದ ದಂಟರಮಕ್ಕಿ ವ್ಯಾಪ್ತಿಯಲ್ಲಿ 600 ಎಂಎಂ ಸಾಮರ್ಥ್ಯದ ಪ್ರಮುಖ ಕುಡಿಯುವ ನೀರಿನ ಕೊಳವೆ ಮಾರ್ಗ...

ಚಿಕ್ಕಮಗಳೂರು-ಯಶವಂತಪುರ ಎಕ್ಸ್‌ಪ್ರೆಸ್ ರೈಲು ಸಂಚಾರ ಸ್ಥಗಿತ…?

ಚಿಕ್ಕಮಗಳೂರು: ಮಲ್ಲಸಂದ್ರ ಮತ್ತು ಗುಬ್ಬಿ ರೈಲ್ವೆ ನಿಲ್ದಾಣಗಳ ನಡುವಿನ ಲೆವೆಲ್ ಕ್ರಾಸಿಂಗ್ ಗೇಟ್ (LC-48) ಬದಲಿಗೆ...

ಅಣ್ಣ-ತಮ್ಮಂದಿರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ

ತರೀಕೆರೆ: ಮನೆಯಲ್ಲಿ ಆಟವಾಡುತ್ತಿದ್ದ ಮಗುವಿನ ಕೆನ್ನೆ ಊದಿಕೊಂಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಕ್ಷುಲ್ಲಕ ಕಾರಣಕ್ಕೆ ಅಣ್ಣ-ತಮ್ಮಂದಿರ ನಡುವೆ...