Home ಸಿಎಂ-ಡಿಸಿಎಂ ವಿರುದ್ದ ಜಿಲ್ಲಾ ಬಿಜಪಿ ಪ್ರತಿಭಟನೆ
HomechikamagalurLatest Newsnamma chikmagalur

ಸಿಎಂ-ಡಿಸಿಎಂ ವಿರುದ್ದ ಜಿಲ್ಲಾ ಬಿಜಪಿ ಪ್ರತಿಭಟನೆ

Share
????????????????????????????????????
Share

ಚಿಕ್ಕಮಗಳೂರು: ಬೆಳಗಾವಿಯುಲ್ಲಿ ವೇದಿಕೆಯಲ್ಲೇ ಎಎಸ್ಪಿ ಒಬ್ಬರ ಕಪಾಳ ಮೋಕ್ಷಕ್ಕೆ ಮುಂದಾದ ಮುಖ್ಯಮಂತ್ರಿ ಸಿದ್ದರಾಮುಯ್ಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಜಿಲ್ಲಾ ಬಿಜೆಪಿ ಕಾರ್ಯಕರ್ತರು ಮಂಗಳವಾರ ನಗರದ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಿದರು.

ಸಂವಿಧಾನ ವಿರೋಧಿ ಕಾಂಗ್ರೆಸ್‌ಗೆ ಧಿಕ್ಕಾರ, ಕಾಂಗ್ರೆಸ್ ಸರ್ಕಾರ ಗೂಂಡಾ ಸರ್ಕಾರ, ಸಿದ್ದರಾಮಯ್ಯ ಗೋ ಗೋ ಪಾಕಿಸ್ಥಾನ್, ದರ್ಪ-ದಬ್ಬಾಳಿಕೆ ತೋರುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ, ಮಾನಸಿಕ ಸ್ಥಿಮಿತ ಕಳೆದುಕೊಂಡಿರುವ ಸಿದ್ದರಾಮಯ್ಯರನ್ನು ಅಧಿಕಾರದಿಂದ ಕೆಳಗಿಳಿಸಿ ಎನ್ನುವ ಭಿತ್ತಿಪತ್ರಗಳನ್ನು ಪ್ರದರ್ಶಿಸಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾ ಬಿಜೆಪಿ ಅಧ್ಯಕ್ಷ ಎಂ.ಆರ್.ದೇವರಾಜಶೆಟ್ಟಿ ಮಾತನಾಡಿ, ಪೊಲೀಸರೊಂದಿಗೆ ಅಸಭ್ಯತನ ಹಾಗೂ ಪಾಕಿಸ್ಥಾನಿ ಪ್ರೇಮಿಗಳಂತೆ ಸಿದ್ದರಾಮಯ್ಯ ವರ್ತಿಸುತ್ತಿದ್ದಾರೆ. ಪೊಲೀಸ್ ವರಿಷ್ಠಾಧಿಕಾರಿಯನ್ನು ಏಕವಚನದಲ್ಲಿ ಕರೆದು ಎಎಸ್ಪಿಗೆ ಕಪಾಳಮೋಕ್ಷಕ್ಕೆ ಮುಂದಾದ ಮುಖ್ಯಮಂತ್ರಿಗಳಿಗೆ ಅಧಿಕಾರದಲ್ಲಿರಲು ನೈತಿಕತೆ ಇಲ್ಲ ಎಂದರು.

ದೇಶಾದ್ಯಂತ ಜನತೆ ಪ್ರವಾಸಿಗರ ಸಾವಿನ ದುಃಖದಿಂದ ಬಳಲುತ್ತಿರುವಾಗ ಪಾಕಿಸ್ಥಾನ ಪ್ರೇಮಿಯಂತೆ ವರ್ತಿಸಿದ ಸಿದ್ದರಾಮಯ್ಯ ನಡೆಯ ವಿರುದ್ಧ ಬಿಜೆಪಿ ಮಹಿಳಾ ಕಾರ್ಯಕರ್ತರು ಸಮಾವೇಶದಲ್ಲಿ ಕಪ್ಪುಪಟ್ಟಿ ಧಿಕ್ಕಾರ ಕೂಗಿದರು. ಇದರಿಂದ ಮುಜುಗರಕ್ಕೆ ಒಳಗಾಗಿ ಸಿಎಂ ಭದ್ರತಾ ಸಿಬ್ಬಂದಿ ಧಾರವಾಡ ಎಎಸ್ಪಿಗೆ ಕೆನ್ನೆಗೆ ಬಾರಿಸಲು ಮುಂದಾಗಿರುವುದು ನಾಚಿಕೇಡಿನ ಸಂಗತಿ ಎಂದರು.

ಸಮಾಜದ ಹಿತ ಕಾಪಾಡುವ ಪೊಲೀಸರು ಅತ್ಯಂತ ಶ್ರೇಷ್ಟ ಸೇವೆ ಸಲ್ಲಿಸುತ್ತಿದೆ. ಆದರೆ ತಮ್ಮ ಮನೆಯ ಮನೆ ಜೀತದಾಳಿನಂತೆ ಅವರನ್ನು ನಡೆಸಿಕೊಳ್ಳಲು ಮುಂದಾದ ಸಿದ್ದರಾಮಯ್ಯ ಅತಿಯಾದ ದುರಂಕಾರ, ಅಧಿಕಾರ ದರ್ಪದಿಂದ ಮೆರೆಯುತ್ತಿದ್ದಾರೆ ಎಂದರು.

ಬಿಜೆಪಿಯವರ ಕಾರ್ಯಕ್ರಮಗಳಿಗೆ ಅಡ್ಡಿ ಪಡಿಸುತ್ತೇವೆಂದು ಬೆದರಿಕೆ ಹಾಕಿರುವ ಸಿದ್ದರಾಮಯ್ಯ ಅವರ ಪಂಥಾಹ್ವಾನವನ್ನು ಸ್ವೀಕರಿಸಿ ಇಂದು ರಾಜ್ಯದೆಲ್ಲೆಡೆ ಪ್ರತಿಭಟನೆ ನಡೆಸಲಾಗುತ್ತಿದೆ. ತಾಕತ್ತಿದ್ದರೆ ತಡೆಯುವ ಪ್ರಯತ್ನಕ್ಕೆ ಕಾಂಗ್ರೆಸ್ಸಿಗರು ಕೈಹಾಕಲಿ ಎಂದು ಸವಾಲೆಸೆದ ಅವರು, ಕೂಡಲೇ ಪೊಲೀಸರು ಸ್ವಯಂ ಪ್ರೇರಿತವಾಗಿ ಸಿಎಂ ಮೇಲೆ ಪ್ರಕರಣ ದಾಖಲಿಸಿ ಜೈಲಿ ಗಟ್ಟುವ ಕೆಲಸ ಮಾಡಬೇಕು. ಬಿಜೆಪಿ ಕೋಟ್ಯಾಂತರ ಕಾರ್ಯಕರ್ತರಿಂದ ಗಟ್ಟಿಯಾಗಿ ಬೆಳೆದು ನಿಂತಿದೆ. ಓರ್ವ ಕಾರ್ಯಕರ್ತನನ್ನೂ ಮುಟ್ಟುವ ಶಕ್ತಿ ಕಾಂಗ್ರೆಸ್ಸಿಗಿಲ್ಲ ಎಂದು ಹೇಳಿದರು.

ಬಿಜೆಪಿ ರಾಜ್ಯ ರೈತ ಮೋರ್ಚಾ ಕಾರ್ಯದರ್ಶಿ ಹೆಚ್.ಸಿ.ಕಲ್ಮರುಡಪ್ಪ ಮಾತನಾಡಿ ಸಿದ್ದರಾಮಯ್ಯ ಸರ್ಕಾರ ಪ್ರತಿ ಸಂದರ್ಭ ಹಿಂದೂಗಳನ್ನು ಅಣುಕಿಸುತ್ತಿದೆ. ಅಧಿಕಾರ ದರ್ಪ, ಎಡಚಿಂತನೆಗಳಿಂದ ಅಲ್ಪಸಂಖ್ಯಾತರ ಒಲೈಕೆ ಹಾಗೂ ಮತಕ್ಕಾಗಿ ಮುಸ್ಲೀಮನಾಗಿ ಹುಟ್ಟುತ್ತೇನೆಂಬ ಹೇಳಿಕೆ ಹಾಗೂ ಕೆಜೆಹಳ್ಳಿ, ಡಿಜೆಹಳ್ಳಿ ದಾಳಿಕೋರರನ್ನು ಬ್ರದರ್ಸ್ ಎಂದು ಕರೆದಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ತಮ್ಮ ನಿಚಬುದ್ದಿಯನ್ನು ತೋರ್ಪಡಿಸಿಕೊಂಡಿದ್ದಾರೆ ಎಂದು ದೂರಿದರು.

ಭಾರತ-ಪಾಕಿಸ್ಥಾನ ಎಂದಾಗ ಮೊಟ್ಟಮೊದಲು ಭಾರತದ ಪರವಾಗಿ ನಿಲ್ಲುವುದು ದೇಶದ ಪ್ರತಿಯೊಬ್ಬ ಪ್ರಜೆಯ ಕರ್ತವ್ಯ, ಹಕ್ಕು ಹಾಗೂ ಮಣ್ಣಿನ ಋಣ ತೀರಿಸುದಂತೆ. ಆದರೆ ಮುಖ್ಯಮಂತ್ರಿ ಪಾಕಿಸ್ತಾನಿಯರ ಪರವಾಗಿ ನಿಂತಿರುವುದು ಘನತೆಗೆ ಸರಿಯಲ್ಲ. ಅಲ್ಲದೇ ಬಿಜೆಪಿ ಹಾಗೂ ಆರ್‌ಎಸ್‌ಎಸ್‌ನ್ನು ಕಟ್ಟಿ ಹಾಕುವ ಗೊಡ್ಡು ಬೆದರಿಕೆಗೆ ಹೆದರುವುದಿಲ್ಲ. ಹಲವಾರು ಹೋರಾಟದಿಂದ ಜನಿಸಿದ ಪಕ್ಷಕ್ಕೆ ನೂರು ಸಿದ್ದರಾಮಯ್ಯರ ಕುತಂತ್ರ ತಟ್ಟುವುದಿಲ್ಲ ಎಂದರು.

ಬಿಜೆಪಿ ಮುಖಂಡ ಪ್ರೇಮ್‌ಕುಮಾರ್ ಮಾತನಾಡಿ ಪಾಕಿಸ್ಥಾನದ ಬಗ್ಗೆ ಅಪಾರ ಕಾಳಜಿ ಹೊಂದಿರುವ ಸಿದ್ದರಾಮಯ್ಯ ಅವರನ್ನು ನಾಡಿನ ಜನತೆ ಸಂತೋಷದಿಂದ ಬೀಳ್ಕೊಟ್ಟು ಪಾಕಿಸ್ಥಾನಕ್ಕೆ ಕಳಿಸಿಕೊಡಲಿದೆ. ಆ ದೇಶದಲ್ಲಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಲಿ ಹಾಗೂ ಅಲ್ಲಿನ ಸರ್ಕಾರವು ಪಾಕಿಸ್ಥಾನ ರತ್ನ ಎಂಬ ಬಿರುದು ಕೊಡಲಿದ್ದಾರೆ ಎಂದು ಮೂದಲಿಸಿದರು.

ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಸಂತೋಷ್ ಕೋಟ್ಯಾನ್ ಮಾತನಾಡಿ ದಕ್ಷ ಪೊಲೀಸ್ ಅಧಿಕಾರಿಗೆ ಕಪಾಳಮೋಕ್ಷಕ್ಕೆ ಮುಂದಾದ ಸಿಎಂ ನಡೆ ಸಮಾಜ ತಲೆತಗ್ಗಿಸುವಂಥದ್ದು ಎಂದರು.

ಈ ಸಂದರ್ಭದಲ್ಲಿ ಬಿಜೆಪಿ ನಗರಾಧ್ಯಕ್ಷ ಪುಷ್ಪರಾಜ್, ಗ್ರಾಮಾಂತರ ಮಂಡಲ ಅಧ್ಯಕ್ಷ ವಿಜಯ್‌ಕುಮಾ ರ್, ವಕ್ತಾರರಾದ ಹಿರೇಮಗಳೂರು ಪುಟ್ಟಸ್ವಾಮಿ, ಸಿ.ಹೆಚ್.ಲೋಕೇಶ್, ನಗರಸಭೆ ಅಧ್ಯಕ್ಷ ಸುಜಾತ ಶಿವಕುಮಾರ್, ಮುಖಂಡರುಗಳಾದ ಸೀತರಾಮ ಭರಣ್ಯ, ಜಸಂತಾ ಅನಿಲ್‌ಕುಮಾರ್, ಬಿ.ರಾಜಪ್ಪ, ನಾರಾಯಣಗೌಡ, ಹೆಚ್.ಕೆ.ಕೇಶವಮೂರ್ತಿ, ಕೋಟೆ ರಂಗನಾಥ್, ನಿಶಾಂತ್, ಸಚಿನ್‌ಗೌಡ, ಪ್ರದೀಪ್, ಚೈತ್ರ ಮತ್ತಿತರರು ಹಾಜರಿದ್ದರು.

District BJP protests against CM-DCM

Share

Leave a comment

Leave a Reply

Your email address will not be published. Required fields are marked *

Don't Miss

ಬೀಗ ಹಾಕಿದ್ದ ಮನೆಯೊಂದರ ಹಿಂಬಾಗಿಲು ಮುರಿದು ಕಳ್ಳತನ

ಚಿಕ್ಕಮಗಳೂರು: ಬೀಗ ಹಾಕಿದ್ದ ಮನೆಯೊಂದರ ಹಿಂಬಾಗಿಲು ಮುರಿದು ಕಳ್ಳತನ ನಡೆಸಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕೆ.ಬಿ. ಹಾಳ್‌ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಿವಾಸಿ ಕಮಲಮ್ಮ ಎಂಬುವರು ಮೇ 19ರಂದು ತಮ್ಮ ಸೊಸೆಯೊಂದಿಗೆ...

ಟ್ರ್ಯಾಕ್ಟರ್‌ನಲ್ಲಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಪ್ರಕರಣ ಪತ್ತೆ

ಕೊಪ್ಪ: ಟ್ರ್ಯಾಕ್ಟರ್‌ನಲ್ಲಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ದಂಧೆಯನ್ನು ಪೊಲೀಸರು ಯಶಸ್ವಿಯಾಗಿ ಪತ್ತೆ ಹಚ್ಚಿದ್ದಾರೆ. ಕೊಪ್ಪ ತಾಲೂಕಿನ ಹರಿಹರಪುರ ಪೊಲೀಸ್ ಠಾಣಾ ವ್ಯಾಪ್ತಿಯ ಭಂಡಿಗಡಿ ಕಡೆಯಿಂದ ಹರಿಹರಪುರದ ಕಡೆಗೆ ಮರಳು ಸಾಗಿಸುತ್ತಿದ್ದಾಗ ಖಚಿತ...

Related Articles

ಬೆಳ್ಳಿ ಮಾರಾಟ ಪ್ರಕರಣದ ಆರೋಪಿಯಿಂದ 41.90 ಲಕ್ಷ ರೂ ನಗದು ಜಪ್ತಿ

ಚಿಕ್ಕಮಗಳೂರು: ಬೆಳ್ಳಿ ಮಾರಾಟದ ಹೆಸರಿನಲ್ಲಿ ನಡೆದಿದ್ದ ಬರೋಬ್ಬರಿ 45 ಲಕ್ಷ ರೂಪಾಯಿ ವಂಚನೆ ಪ್ರಕರಣವನ್ನು ಭೇದಿಸುವಲ್ಲಿ...

ಭದ್ರಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಪುಂಡಾಟ

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಹೆಬ್ಬೆ ವಲಯ ವ್ಯಾಪ್ತಿಯ ಭದ್ರಾ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ...

ರೈತ ಸಂಘದ ಡಿ.ರಾಮೇಗೌಡ ಕಲ್ಲಹಳ್ಳಿ ಆಯ್ಕೆ ಕ್ರಮಬದ್ಧ

ಚಿಕ್ಕಮಗಳೂರು: ತಾಲ್ಲೂಕು ಅಧ್ಯಕ್ಷರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ತಾಲ್ಲೂಕು ಸಮಿತಿಯ ಸಭೆಯಲ್ಲಿ ಹಾಜರಿದ್ದ ಪದಾಧಿಕಾರಿಗಳ ನಿರ್ಣಯದಂತೆ...

ಮುಂಗಾರು ಹಾನಿ ತಡೆಗೆ ಕಟ್ಟೆಚ್ಚರ ವಹಿಸಲು ಸೂಚನೆ

ಚಿಕ್ಕಮಗಳೂರು: ಮುಂಗಾರು ಬಿರುಗಾಳಿ ಮಳೆಗೆ ಸಂಭವನೀಯ ಅಪಾಯ, ಹಾನಿ ತಡೆಗಟ್ಟುವುದು ಹಾಗೂ ತುರ್ತು ಕ್ರಮ ವಹಿಸುವ...