Home ಜಿಲ್ಲೆಯ ಸಹಕಾರ ಸಂಘಗಳು ಅತ್ಯುತ್ತಮವಾಗಿ ಕಾರ್ಯನಿರ್ವಹಣೆ
HomechikamagalurLatest Newsnamma chikmagalur

ಜಿಲ್ಲೆಯ ಸಹಕಾರ ಸಂಘಗಳು ಅತ್ಯುತ್ತಮವಾಗಿ ಕಾರ್ಯನಿರ್ವಹಣೆ

Share
????????????????????????????????????
Share

ಚಿಕ್ಕಮಗಳೂರು: ಜಿಲ್ಲೆಯ ಸಹಕಾರಿ ಕ್ಷೇತ್ರದ ಸಹಕಾರಿ ಸಂಘಗಳು ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಸಾಲಸೌಲಭ್ಯ ಒದಗಿಸುವ ಮೂಲಕ ಆರ್ಥಿಕ ಶಕ್ತಿಯಾಗಿ ಯಶಸ್ಸು ಸಾಧಿಸುತ್ತಿದೆ ಎಂದು ಕಾಸ್ಕಾರ್ಡ್ ಬ್ಯಾಂಕ್ ಜಿಲ್ಲಾ ನಿರ್ದೇಶಕ ಈಶ್ವರಹಳ್ಳಿ ಮಹೇಶ್ ಹೇಳಿದರು.

ನಗರದ ಜಿಲ್ಲಾ ಸಹಕಾರ ಯೂನಿಯನ್ನಿನ ಸಭಾಂಗಣದಲ್ಲಿ ಶುಕ್ರವಾರ ರಾಜ್ಯ ಸಹಕಾರ ಮಹಾಮಂಡ ಳ, ಸಹಕಾರ ಯೂನಿಯನ್, ಸಹಕಾರ ಕೇಂದ್ರ ಬ್ಯಾಂಕ್, ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂ ಟದ ಸಹಯೋಗದಲ್ಲಿ ಹಮ್ಮಿಕೊಂಡಿದ್ಧ ೭೨ನೇ ಅಖಿಲ ಭಾರತ ಸಹಕಾರ ಸಪ್ತಾಹದ ಉದ್ಘಾಟನೆ ನೆರವೇರಿ ಸಿ ಅವರು ಮಾತನಾಡಿದರು.

ಜಿಲ್ಲೆಯ ಡಿಸಿಸಿ ಬ್ಯಾಂಕ್, ಹಾಲು ಒಕ್ಕೂಟ, ಪಿಸಿಎಲ್‌ಡಿ ಬ್ಯಾಂಕ್ ಹಾಗೂ ಸಹಕಾರ ಸಂಘಗಳು ಸದ ಸ್ಯ ಬಂಧುಗಳಿಗೆ ಸಕಾಲಕ್ಕೆ ಸಾಲಸೌಲಭ್ಯ ಪೂರೈಸುವ ಮೂಲಕ, ನಿಗಧಿತ ಸಮಯಕ್ಕೆ ಸದಸ್ಯರು ಮರುಪಾ ವತಿಸುತ್ತಿರುವ ಕಾರಣ ಲಾಭದಾಯಕವಾಗಿ ಮುನ್ನೆಡೆ ಸಾಧಿಸುತ್ತಿದೆ ಎಂದರು.

ಸಹಕಾರ ಚಳುವಳಿ ಹಲವಾರು ಸವಾಲು, ಸ್ಪರ್ಧೆಗಳನ್ನು ಎದುರಿಸಿದರೂ ದೃತಿಗೆಡದೇ ಮುಂದುವರಿ ದಿದೆ. ಸ್ವಾವಲಂಬಿ ಆರ್ಥಿಕತೆಯತ್ತ ದಾಪುಗಾಲಿಡುತ್ತಿರುವ ಕಾರಣ ರಾಷ್ಟ್ರದಲ್ಲಿ ಸಹಕಾರಿ ಸಂಸ್ಥೆಗಳು ವೇಗ ವರ್ಧಕವಾಗಿ ಕೆಲಸ ಮಾಡುತ್ತಿವೆ ಎಂದು ತಿಳಿಸಿದರು.

ಸುಸ್ಥಿರ ಅಭಿವೃದ್ದಿ, ಸಮ ಸಮಾಜ ನಿರ್ಮಾಣ, ಸಂಪನ್ಮೂಗಳ ಸಮಾನ ಹಂಚಿಕೆ ಹಾಗೂ ಸಾಂಘಿಕ ಭವ್ಯತೆಯನ್ನು ಆತ್ಮನಿರ್ಭಾರ ಭಾರತ ಕಲ್ಪನೆಯಲ್ಲಿ ಕಾಣುತ್ತಿದ್ದು ೭೨ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅವಧಿಯಲ್ಲಿ ವಿಚಾರಗೋಷ್ಠಿ, ಸ್ಪರ್ಧೆ, ಮುಂತಾದವು ಸಹಕಾರ ಕ್ಷೇತ್ರದ ಬಗ್ಗೆ ಜನಜಾಗೃತಿ ಉಂಟು ಮಾಡು ತ್ತಿದೆ ಎಂದು ಹೇಳಿದರು.

ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಪ್ರಧಾನ ನಿರ್ದೇಶಕಿ ಡಾ|| ಆರ್.ಎಸ್.ರೇಣುಕಾ ಮಾತನಾಡಿ ಸಹಕಾ ರ ಸಂಘಗಳಲ್ಲಿ ಡಿಜಿಲೀಕರಣದ ಅಳವಡಿಕೆಯು ದಕ್ಷತೆ ಮತ್ತು ಹೊಂದಾಣಿಕೆಯ ಕೆಲಸದ ಸಂಸ್ಕೃತಿಗೆ ಹೊ ಸ ಅವಕಾಶಗಳನ್ನು ತೆರೆಯಲಿದೆ. ತಂತ್ರಜ್ಞಾನವನ್ನು ಬಳಸಿಕೊಳ್ಳುವ ಮೂಲಕ ಸಹಕಾರಿ ಸಂಸ್ಥೆಗಳು ದತ್ತಾಂ ಶ ಚಾಲಿತ ನಿರ್ಧಾರಗಳನ್ನು ತೆಗೆದುಕೊಳ್ಳಬಹುದು ಎಂದರು.

ಅನೇಕ ಸಹಕಾರಿ ಸಂಸ್ಥೆಗಳು ಇತ್ತೀಚಿನ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡು ಪರಿಣಾಮಕಾರಿಯಾ ಗಿ ಬಳಸುತ್ತಿವೆ. ಆದರೆ ತಮ್ಮ ಸ್ವಂತ ಅಗತ್ಯಗಳಿಗೆ ಅನುಗುಣವಾಗಿ ಕಸ್ಟಮೈಸ್ ಮಾಡಬಹುದಾದ ತಂತ್ರಜ್ಞಾ ನವನ್ನು ಉಪಯೋಗಿಸಿಕೊಂಡು ಉತ್ಪನ್ನಗಳನ್ನು ಹೆಚ್ಚಿಸಿಕೊಂಡು ಮಾರಾಟ ಹಾಗೂ ಸೇವೆಯನ್ನು ವಿಸ್ತರಿ ಸಿಕೊಳ್ಳಲು ಅವಕಾಶಗಳಿವೆ ಎಂದು ತಿಳಿಸಿದರು.

ಆತ್ಮನಿರ್ಭಾರ ಭಾರತದ ಗುರಿಯನ್ನು ತಲುಪಲು ಸಹಕಾರ ಸಂಸ್ಥೆಗಳು ಮುಂದಾಗಲು ಪ್ರಮುಖ ಪಾ ತ್ರವನ್ನು ನಿರ್ವಹಿಸುತ್ತಿವೆ. ಸಹಕಾರ ಸಂಸ್ಥೆಗಳು ಆರ್ಥಿಕ ಸ್ವಾವಲಂಬನೆ ಸುಸ್ಥಿರ ಅಭಿವೃಧ್ದಿ ಸ್ಥಳೀಯ ಸಂಸ್ಥೆ ಗಳ ಪ್ರಕ್ರಿಯೆ ಯಶಸ್ಸಿಗೆ ಕಾರಣವಾಗಲಿದೆ ಎಂದು ಹೇಳಿದರು.

ಇದೇ ವೇಳೆ ತಾಲ್ಲೂಕಿನಲ್ಲಿ ಕೆ.ಆರ್.ಪೇಟೆ ಕೃಷಿ ಪತ್ತಿನ ಸಹಕಾರ ಸಂಘ ಹಾಗೂ ಮುಗುಳುವಳ್ಳಿ ಗ್ರಾಮ ದ ಹಾಲು ಉತ್ಪಾದಕರ ಸಂಘಕ್ಕೆ ಉತ್ತಮ ಸಹಕಾರ ಸಂಘವೆಂದು ಗುರುತಿಸಿ ಪ್ರಶಸ್ತಿ ನೀಡಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಸಹಕಾರ ಯೂನಿಯನ್ ಉಪಾಧ್ಯಕ್ಷರಾದ ಹೆಚ್.ಬಿ.ಸತೀಶ್, ಜಿ.ಕೆ.ದಿವಾ ಕರ್, ನಿರ್ದೇಶಕರಾದ ಸಿ.ಎಸ್.ರಂಗನಾಥ್, ವರಸಿದ್ದಿ ವೇಣುಗೋಪಾಲ್, ಎಂ.ಪರಮೇಶ್ವರಪ್ಪ, ಸಹಕಾರ ಸಂಘಗಳ ಸಹಾಯಕ ನಿಬಂಧಕ ಎಂ.ಎಸ್.ದಯಾನಂದ್, ಮುಖ್ಯಕಾರ್ಯನಿರ್ವಹಣಾಧಿಕಾರಿ ಯಶಸ್, ವ್ಯವಸ್ಥಾಪಕ ಇಂದ್ರೇಶ್ ಮತ್ತಿತರರು ಉಪಸ್ಥಿತರಿದ್ದರು.

District cooperative societies are performing well.

Share

Leave a comment

Leave a Reply

Your email address will not be published. Required fields are marked *

Don't Miss

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಜಿಲ್ಲೆಯಲ್ಲಿ ಅಗತ್ಯ ಸಿದ್ಧತೆ-ಜಿಲ್ಲಾಧಿಕಾರಿ

ಚಿಕ್ಕಮಗಳೂರು: ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ಇದೇ ಮಾರ್ಚ್ ೧೮ ರಿಂದ ಪ್ರಾರಂಭವಾಗಲಿದ್ದು, ಪರೀಕ್ಷೆಗಳು ಸುಸೂತ್ರವಾಗಿ ನಡೆಯಲು ಎಲ್ಲಾ ರೀತಿಯ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ ತಿಳಿಸಿದರು. ಜಿ.ಪಂ.ನ ಅಬ್ದುಲ್...

ಜಿಲ್ಲೆಯಲ್ಲಿ ಗೃಹಬಳಕೆ ಸಿಲಿಂಡರ್‌ಗೆ ಕೊರತೆ ಇಲ್ಲ

ಚಿಕ್ಕಮಗಳೂರು, ಮಾ.೧೩: ಜಿಲ್ಲೆಯಲ್ಲಿ ಗೃಹಬಳಕೆ ಗ್ಯಾಸ್ ಸಿಲಿಂಡರ್‌ಗಳ ಸಮರ್ಪಕ ಸಂಗ್ರಹ ಮತ್ತು ಸರಬರಾಜು ಲಭ್ಯವಿರುವುದನ್ನು ದೃಢಪಡಿಸಿ ಎಂದಿನಂತೆ ಎಲ್‌ಪಿಜಿ ವಿತರಕರು ಗ್ರಾಹಕರ ಮನೆಬಾಗಿಲಿಗೆ ಸರಬರಾಜು ಮಾಡಲಿದ್ದಾರೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಜಿಲ್ಲೆಯಲ್ಲಿ...

Related Articles

ವಿದ್ಯುತ್ ಸ್ಪರ್ಶಕ್ಕೆ ಯುವಕನ ಧಾರುಣ ಸಾವು

ಅಜ್ಜಂಪುರ: ವಿದ್ಯುತ್ ಸ್ಪರ್ಶದಿಂದ ಪ್ರವೀಣ್ ಎಂಬ ಯುವಕ ಮೃತಪಟ್ಟಿದ್ದಾನೆ ಸೊಕ್ಕೆ ಪರಮೇಶಣ್ಣ ಅವರ ಮಗ. ಹೆಬ್ಬೂರು...

ಏಕಲವ್ಯ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳ ಮೇಲೆ ಮನಸೋಇಚ್ಛೆ ಹಲ್ಲೆ

ಮೂಡಿಗೆರೆ:  ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ತರುವೆ ಗ್ರಾಮದಲ್ಲಿರುವ ಏಕಲವ್ಯ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳ...

ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯ 25ಕ್ಕೂ ಹೆಚ್ಚುಕಡೆ ಬೆಂಕಿ

ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು  ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ...

3.50 ಕೋಟಿ ರೂ ವೆಚ್ಚದ ವಿವಿಧ ರಸ್ತೆಗಳ ಲೋಕಾರ್ಪಣೆ

ಚಿಕ್ಕಮಗಳೂರು:  ಬಡವರ ಬಗ್ಗೆ ಕಾಳಜಿ ಇಲ್ಲದ ಕೇಂದ್ರ ಸರ್ಕಾರ ಧರ್ಮ ಧರ್ಮಗಳ ಮಧ್ಯೆ ವಿಷಬೀಜ ಬಿತ್ತಿ...