Home ಜಿಲ್ಲೆಯ ಸಹಕಾರ ಸಂಘಗಳು ಅತ್ಯುತ್ತಮವಾಗಿ ಕಾರ್ಯನಿರ್ವಹಣೆ
HomechikamagalurLatest Newsnamma chikmagalur

ಜಿಲ್ಲೆಯ ಸಹಕಾರ ಸಂಘಗಳು ಅತ್ಯುತ್ತಮವಾಗಿ ಕಾರ್ಯನಿರ್ವಹಣೆ

Share
????????????????????????????????????
Share

ಚಿಕ್ಕಮಗಳೂರು: ಜಿಲ್ಲೆಯ ಸಹಕಾರಿ ಕ್ಷೇತ್ರದ ಸಹಕಾರಿ ಸಂಘಗಳು ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಸಾಲಸೌಲಭ್ಯ ಒದಗಿಸುವ ಮೂಲಕ ಆರ್ಥಿಕ ಶಕ್ತಿಯಾಗಿ ಯಶಸ್ಸು ಸಾಧಿಸುತ್ತಿದೆ ಎಂದು ಕಾಸ್ಕಾರ್ಡ್ ಬ್ಯಾಂಕ್ ಜಿಲ್ಲಾ ನಿರ್ದೇಶಕ ಈಶ್ವರಹಳ್ಳಿ ಮಹೇಶ್ ಹೇಳಿದರು.

ನಗರದ ಜಿಲ್ಲಾ ಸಹಕಾರ ಯೂನಿಯನ್ನಿನ ಸಭಾಂಗಣದಲ್ಲಿ ಶುಕ್ರವಾರ ರಾಜ್ಯ ಸಹಕಾರ ಮಹಾಮಂಡ ಳ, ಸಹಕಾರ ಯೂನಿಯನ್, ಸಹಕಾರ ಕೇಂದ್ರ ಬ್ಯಾಂಕ್, ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂ ಟದ ಸಹಯೋಗದಲ್ಲಿ ಹಮ್ಮಿಕೊಂಡಿದ್ಧ ೭೨ನೇ ಅಖಿಲ ಭಾರತ ಸಹಕಾರ ಸಪ್ತಾಹದ ಉದ್ಘಾಟನೆ ನೆರವೇರಿ ಸಿ ಅವರು ಮಾತನಾಡಿದರು.

ಜಿಲ್ಲೆಯ ಡಿಸಿಸಿ ಬ್ಯಾಂಕ್, ಹಾಲು ಒಕ್ಕೂಟ, ಪಿಸಿಎಲ್‌ಡಿ ಬ್ಯಾಂಕ್ ಹಾಗೂ ಸಹಕಾರ ಸಂಘಗಳು ಸದ ಸ್ಯ ಬಂಧುಗಳಿಗೆ ಸಕಾಲಕ್ಕೆ ಸಾಲಸೌಲಭ್ಯ ಪೂರೈಸುವ ಮೂಲಕ, ನಿಗಧಿತ ಸಮಯಕ್ಕೆ ಸದಸ್ಯರು ಮರುಪಾ ವತಿಸುತ್ತಿರುವ ಕಾರಣ ಲಾಭದಾಯಕವಾಗಿ ಮುನ್ನೆಡೆ ಸಾಧಿಸುತ್ತಿದೆ ಎಂದರು.

ಸಹಕಾರ ಚಳುವಳಿ ಹಲವಾರು ಸವಾಲು, ಸ್ಪರ್ಧೆಗಳನ್ನು ಎದುರಿಸಿದರೂ ದೃತಿಗೆಡದೇ ಮುಂದುವರಿ ದಿದೆ. ಸ್ವಾವಲಂಬಿ ಆರ್ಥಿಕತೆಯತ್ತ ದಾಪುಗಾಲಿಡುತ್ತಿರುವ ಕಾರಣ ರಾಷ್ಟ್ರದಲ್ಲಿ ಸಹಕಾರಿ ಸಂಸ್ಥೆಗಳು ವೇಗ ವರ್ಧಕವಾಗಿ ಕೆಲಸ ಮಾಡುತ್ತಿವೆ ಎಂದು ತಿಳಿಸಿದರು.

ಸುಸ್ಥಿರ ಅಭಿವೃದ್ದಿ, ಸಮ ಸಮಾಜ ನಿರ್ಮಾಣ, ಸಂಪನ್ಮೂಗಳ ಸಮಾನ ಹಂಚಿಕೆ ಹಾಗೂ ಸಾಂಘಿಕ ಭವ್ಯತೆಯನ್ನು ಆತ್ಮನಿರ್ಭಾರ ಭಾರತ ಕಲ್ಪನೆಯಲ್ಲಿ ಕಾಣುತ್ತಿದ್ದು ೭೨ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅವಧಿಯಲ್ಲಿ ವಿಚಾರಗೋಷ್ಠಿ, ಸ್ಪರ್ಧೆ, ಮುಂತಾದವು ಸಹಕಾರ ಕ್ಷೇತ್ರದ ಬಗ್ಗೆ ಜನಜಾಗೃತಿ ಉಂಟು ಮಾಡು ತ್ತಿದೆ ಎಂದು ಹೇಳಿದರು.

ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಪ್ರಧಾನ ನಿರ್ದೇಶಕಿ ಡಾ|| ಆರ್.ಎಸ್.ರೇಣುಕಾ ಮಾತನಾಡಿ ಸಹಕಾ ರ ಸಂಘಗಳಲ್ಲಿ ಡಿಜಿಲೀಕರಣದ ಅಳವಡಿಕೆಯು ದಕ್ಷತೆ ಮತ್ತು ಹೊಂದಾಣಿಕೆಯ ಕೆಲಸದ ಸಂಸ್ಕೃತಿಗೆ ಹೊ ಸ ಅವಕಾಶಗಳನ್ನು ತೆರೆಯಲಿದೆ. ತಂತ್ರಜ್ಞಾನವನ್ನು ಬಳಸಿಕೊಳ್ಳುವ ಮೂಲಕ ಸಹಕಾರಿ ಸಂಸ್ಥೆಗಳು ದತ್ತಾಂ ಶ ಚಾಲಿತ ನಿರ್ಧಾರಗಳನ್ನು ತೆಗೆದುಕೊಳ್ಳಬಹುದು ಎಂದರು.

ಅನೇಕ ಸಹಕಾರಿ ಸಂಸ್ಥೆಗಳು ಇತ್ತೀಚಿನ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡು ಪರಿಣಾಮಕಾರಿಯಾ ಗಿ ಬಳಸುತ್ತಿವೆ. ಆದರೆ ತಮ್ಮ ಸ್ವಂತ ಅಗತ್ಯಗಳಿಗೆ ಅನುಗುಣವಾಗಿ ಕಸ್ಟಮೈಸ್ ಮಾಡಬಹುದಾದ ತಂತ್ರಜ್ಞಾ ನವನ್ನು ಉಪಯೋಗಿಸಿಕೊಂಡು ಉತ್ಪನ್ನಗಳನ್ನು ಹೆಚ್ಚಿಸಿಕೊಂಡು ಮಾರಾಟ ಹಾಗೂ ಸೇವೆಯನ್ನು ವಿಸ್ತರಿ ಸಿಕೊಳ್ಳಲು ಅವಕಾಶಗಳಿವೆ ಎಂದು ತಿಳಿಸಿದರು.

ಆತ್ಮನಿರ್ಭಾರ ಭಾರತದ ಗುರಿಯನ್ನು ತಲುಪಲು ಸಹಕಾರ ಸಂಸ್ಥೆಗಳು ಮುಂದಾಗಲು ಪ್ರಮುಖ ಪಾ ತ್ರವನ್ನು ನಿರ್ವಹಿಸುತ್ತಿವೆ. ಸಹಕಾರ ಸಂಸ್ಥೆಗಳು ಆರ್ಥಿಕ ಸ್ವಾವಲಂಬನೆ ಸುಸ್ಥಿರ ಅಭಿವೃಧ್ದಿ ಸ್ಥಳೀಯ ಸಂಸ್ಥೆ ಗಳ ಪ್ರಕ್ರಿಯೆ ಯಶಸ್ಸಿಗೆ ಕಾರಣವಾಗಲಿದೆ ಎಂದು ಹೇಳಿದರು.

ಇದೇ ವೇಳೆ ತಾಲ್ಲೂಕಿನಲ್ಲಿ ಕೆ.ಆರ್.ಪೇಟೆ ಕೃಷಿ ಪತ್ತಿನ ಸಹಕಾರ ಸಂಘ ಹಾಗೂ ಮುಗುಳುವಳ್ಳಿ ಗ್ರಾಮ ದ ಹಾಲು ಉತ್ಪಾದಕರ ಸಂಘಕ್ಕೆ ಉತ್ತಮ ಸಹಕಾರ ಸಂಘವೆಂದು ಗುರುತಿಸಿ ಪ್ರಶಸ್ತಿ ನೀಡಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಸಹಕಾರ ಯೂನಿಯನ್ ಉಪಾಧ್ಯಕ್ಷರಾದ ಹೆಚ್.ಬಿ.ಸತೀಶ್, ಜಿ.ಕೆ.ದಿವಾ ಕರ್, ನಿರ್ದೇಶಕರಾದ ಸಿ.ಎಸ್.ರಂಗನಾಥ್, ವರಸಿದ್ದಿ ವೇಣುಗೋಪಾಲ್, ಎಂ.ಪರಮೇಶ್ವರಪ್ಪ, ಸಹಕಾರ ಸಂಘಗಳ ಸಹಾಯಕ ನಿಬಂಧಕ ಎಂ.ಎಸ್.ದಯಾನಂದ್, ಮುಖ್ಯಕಾರ್ಯನಿರ್ವಹಣಾಧಿಕಾರಿ ಯಶಸ್, ವ್ಯವಸ್ಥಾಪಕ ಇಂದ್ರೇಶ್ ಮತ್ತಿತರರು ಉಪಸ್ಥಿತರಿದ್ದರು.

District cooperative societies are performing well.

Share

Leave a comment

Leave a Reply

Your email address will not be published. Required fields are marked *

Don't Miss

ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದ ಬಳಿ ಹೊಸ ವಿವಾದ

ಚಿಕ್ಕಮಗಳೂರು: ಕಾಫಿನಾಡಿನ ಧಾರ್ಮಿಕ ಕ್ಷೇತ್ರ ‘ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ’ (ದತ್ತಪೀಠ) ಆವರಣದಲ್ಲಿ ಈಗ ಮತ್ತೊಂದು ಹೊಸ ವಿವಾದ ಮುನ್ನೆಲೆಗೆ ಬಂದಿದೆ. ದತ್ತಪೀಠದಿಂದ ಸುಮಾರು 6 ಕಿಲೋಮೀಟರ್ ದೂರದಲ್ಲಿರುವ ಮಾಣಿಕ್ಯಧಾರಕ್ಕೆ ತೆರಳುವ...

ರ್‍ಯಾಪಿಡ್ ಬೈಕ್-ಆಟೋ ಪರವಾನಗಿ ನಿಲ್ಲಿಸುವಂತೆ ಆಗ್ರಹಿಸಿ ಪ್ರತಿಭಟನೆ

ಚಿಕ್ಕಮಗಳೂರು: ರ್‍ಯಾಪಿಡ್ ಬೈಕ್ ಮತ್ತು ಆಟೋ ಪರವಾನಗಿಯನ್ನು ನಿಲ್ಲಿಸಬೇಕು ಎ ಂದು ಒತ್ತಾಯಿಸಿ ಸೋಮವಾರ ಚಿಕ್ಕಮಗಳೂರು ನಗರ ಆಟೋ ಚಾಲಕರು ಮತ್ತು ಮಾಲೀಕರ ಸಂಘವು ನಗರದ ಹನುಮಂತಪ್ಪ ವೃತ್ತದಿಂದ ಆಜಾದ್‌ಪಾರ್ಕ್ ವೃತ್ತದವರೆಗೆ...

Related Articles

ರಾಜ್ಯ ಪರಿಸರ ಮೌಲ್ಯಮಾಪನ ಸಮಿತಿಯು ದೇಶದಲ್ಲೇ ನಂ.1ನೇ ಸ್ಥಾನ

ಚಿಕ್ಕಮಗಳೂರು: ಪರಿಸರದ ಮೇಲೆ ಹಾನಿ, ಒತ್ತಡ ತಡೆಯುವ ನಿಟ್ಟಿನಲ್ಲಿ ಈವರೆಗೆ ಯಾವುದೇ ಕೈಗಾರಿಕೆ ಅಥವಾ ಕಟ್ಟಡ...

ಅಶ್ಲೀಲ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೆ ಪ್ರಕರಣ ದಾಖಲು

ಚಿಕ್ಕಮಗಳೂರು: ಸೈಬರ್ ಕ್ರೈಮ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ವಯಸ್ಸಿನ ಮಕ್ಕಳ ಲೈಂಗಿಕ ಶೋಷಣೆಯ ಅಶ್ಲೀಲ...

ಬಾಹ್ಯಾಕಾಶ ಕ್ಷೇತ್ರದಲ್ಲಿ ಆಲ್ದೂರಿನ ಯುವಕನ ಸಾಧನೆ

ಚಿಕ್ಕಮಗಳೂರಿನ ಆಲ್ದೂರು ಗ್ರಾಮದ ಅವೈಸ್ ಅಹ್ಮದ್, ತಮ್ಮ ‘Pixxeಟ’ ಸ್ಟಾರ್ಟ್‌ಅಪ್ ಮೂಲಕ ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ...

ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಪದ ಬಳಸಲು ಮನವಿ

ಚಿಕ್ಕಮಗಳೂರು: ಕರ್ನಾಟಕ ಸರ್ಕಾರದ ಆದೇಶದಂತೆ ಜಿಲ್ಲೆಯ ಅಂಗಡಿ-ಮುಂಗಟ್ಟು ಹಾಗೂ ಸಾರ್ವಜನಿಕ ಪ್ರದೇಶದಲ್ಲಿ ಶೇ.೬೦ರಷ್ಟು ಕನ್ನಡ ಪದಗಳ...