Home namma chikmagalur ಶರತ್ ಪಂಪ್‌ವೆಲ್‌ಗೆ ಜಿಲ್ಲಾ ಪ್ರವೇಶ ನಿರ್ಬಂಧ
namma chikmagalurchikamagalurHomeLatest News

ಶರತ್ ಪಂಪ್‌ವೆಲ್‌ಗೆ ಜಿಲ್ಲಾ ಪ್ರವೇಶ ನಿರ್ಬಂಧ

Share
Share

ಚಿಕ್ಕಮಗಳೂರು: ಹಿಂದೂ ಮುಖಂಡ ಶರತ್ ಪಂಪ್‌ವೆಲ್‌ಗೆ ಒಂದು ತಿಂಗಳ ಕಾಲ ಜಿಲ್ಲಾಡಳಿತ ನಿರ್ಬಂಧ ವಿಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಪ್ರಚೋದನಕಾರಿ ಭಾಷಣದಿಂದ ಗಲಾಟೆ, ಗುಂಪುಘರ್ಷಣೆ ಸನ್ನಿವೇಶಗಳು ಸೃಷ್ಟಿಯಾ ಗುವ ಸಾಧ್ಯತೆಗಳಿರುವುದರಿಂದ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.

ಶರತ್ ಪಂಪ್‌ವೆಲ್ ಜಿಲ್ಲೆ ಪ್ರವೇಶಿಸದಂತೆ ಜು.೬ ರಿಂದ ಆ.೪ರವರೆಗೂ ನಿರ್ಬಂಧಿಸಿ ಆದೇಶಿದ್ದು, ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ, ಆಲ್ದೂರಿನಲ್ಲಿ ಪಂಪ್‌ವೆಲ್ ಕರೆಸಿ ಬೈಠಕ್ ಹಮ್ಮಿಕೊಂಡಿದ್ದು, ಪಂಪ್‌ವೆಲ್ ಬಲಪಂಥೀಯ ನಿಲುವಿನಿಂದ ಪ್ರಭಾವಿತರಾಗಿದ್ದಾರೆ.

ಮುದ್ವೇಷ ಹರಡುವ ಭಾಷಣ ಮಾಡುವ ಪ್ರವೃತ್ತಿ ಉಳ್ಳವರಾಗಿದ್ದಾರೆ. ಇವರ ಪ್ರಚೋದನಾಕಾರಿ ಭಾಷಣದಿಂದ ಗಲಾಟೆ, ಗುಂಪು ಸಂರ್ಘಣೆ ಸಂಭವಿಸುವ ಸನ್ನಿವೇಶಗಳು ಹೆಚ್ಚಿವೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಶರತ್ ಪಂಪ್‌ವೆಲ್ ವಿರುದ್ಧ ೨೨ಕ್ಕೂ ಹೆಚ್ಚು ಪ್ರಕರಣಗಳಿದ್ದು, ಚಿಕ್ಕಮಗಳೂರು ಸೇರಿ ಕೆಲ ಪಟ್ಟಣಗಳು ಮತೀಯ ಸೂಕ್ಷ್ಮ ಪ್ರದೇಶವಾಗಿದ್ದು, ಸಣ್ಣ ಘಟನೆಯೂ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಗೆ ಭಂಗ ತರುವ ಸಾಧ್ಯತೆಗಳಿದ್ದು ಮುಂದಿನ ೩೦ ದಿನಗಳ ಕಾಲ ಪಂಪ್‌ವೆಲ್ ಅವರು ಚಿಕ್ಕಮಗಳೂರಿಗೆ ಆಗಮಿಸದಂತೆ ನಿರ್ಬಂಧ ವಿಧಿಸಿ ಆದೇಶ ಹೊರಡಿಸಲಾಗಿದೆ.

District entry ban on Sharath Pumpwell

Share

Leave a comment

Leave a Reply

Your email address will not be published. Required fields are marked *

Don't Miss

ಗುಡುಗು-ಸಿಡಿಲಿನ ಭಾರಿ ಮಳೆಗೆ ಇಡೀ ನಗರ ತಲ್ಲಣ

ಚಿಕ್ಕಮಗಳೂರು: ಶುಕ್ರವಾರ ಮಧ್ಯರಾತ್ರಿ ಗುಡುಗು-ಸಿಡಿಲಿನ ಅಬ್ಬರದೊಂದಿಗೆ ಸುರಿದ ಭಾರಿ ಮಳೆಗೆ ಇಡೀ ನಗರ ತಲ್ಲಣಗೊಂಡಿದೆ. ಮರಗಳು ವಿದ್ಯುತ್ ಕಂಬಗಳ ಸಹಿತ ರಸ್ತೆಗೆ ಉರಳಿದವು. ಹಲವು ಕಟ್ಟಡಗಳ ಚಾವಣಿ ಹಾರಿ ಹೋಗಿವೆ. ಮಧ್ಯರಾತ್ರಿ...

ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ನೇಮಕ ನಿಯಮ ಬಾಹಿರ

ಚಿಕ್ಕಮಗಳೂರು: ಇತ್ತೀಚೆಗೆ ಡಿ. ರಾಮೇಗೌಡರವರನ್ನು ಕರ್ನಾಟಕ ರಾಜ್ಯ ರೈತ ಸಂಘದ ಚಿಕ್ಕಮಗಳೂರು ತಾಲ್ಲೂಕು ಘಟಕದ ಅಧ್ಯಕ್ಷನಾಗಿ ನೇಮಕ ಮಾಡಿರುವುದು ನಿಯಮ ಬಾಹಿರವಾಗಿದ್ದು, ಈ ಆಯ್ಕೆ ಅಮಾನ್ಯ ಎಂದು ಜಿಲ್ಲಾಧ್ಯಕ್ಷ ಮಹೇಶ್ ಹೇಳಿದರು....

Related Articles

‘ನಮ್ಮೂರಿಗೆ ರಸ್ತೆ ಅಭಿವೃದ್ಧಿ ಬೇಡ’ ಎಂದು ಗ್ರಾಮಸ್ಥರು….?

ಚಿಕ್ಕಮಗಳೂರು: ಸಾಮಾನ್ಯವಾಗಿ ಗ್ರಾಮಗಳಿಗೆ ರಸ್ತೆ ಬೇಕು, ಕುಡಿಯುವ ನೀರು ಬೇಕು, ವಿದ್ಯುತ್ ಬೇಕು ಎಂದು ಜನ...

ಜಿಲ್ಲೆಯಲ್ಲಿ ಅಧಿಕಗೊಂಡ ನಾಪತ್ತೆ ಪ್ರಕರಣಗಳು

ಚಿಕ್ಕಮಗಳೂರು: ಬೀರೂರು ಮತ್ತು ಲಿಂಗದಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೂರು ಪ್ರತ್ಯೇಕ ನಾಪತ್ತೆ ಪ್ರಕರಣಗಳು ದಾಖಲಾಗಿದ್ದು,...

ಮಲೆನಾಡಿನಲ್ಲಿ ಮತ್ತೆ ಅಪಾಯಕಾರಿ ಕಾಲುಸಂಕಗಳನ್ನೇ ಆಶ್ರಯ ಪಡೆದ ಗ್ರಾಮಸ್ಥರು

ಚಿಕ್ಕಮಗಳೂರು: ಕಾಫಿನಾಡಿನ ಮಲೆನಾಡು ಭಾಗದಲ್ಲಿ ನಕ್ಸಲ್ ಚಟುವಟಿಕೆಗಳು ಸ್ತಬ್ಧವಾಗುತ್ತಿದ್ದಂತೆ ಸರ್ಕಾರ ಅಲ್ಲಿನ ಕುಗ್ರಾಮಗಳನ್ನು ಸಂಪೂರ್ಣವಾಗಿ ಕೈಬಿಟ್ಟಿದೆ...

ಜೆಜೆಎಂನಲ್ಲಿ ನಕಲಿ ಛಾಪಾ ಕಾಗದ ಬಳಸಿ ಸರ್ಕಾರಕ್ಕೆ ವಂಚನೆ

ಶೃಂಗೇರಿ:  ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಜೆಜೆಎಂ (ಜಲ ಜೀವನ್ ಮಿಷನ್) ಹಾಗೂ ಟಾಸ್ಕ್ ಫೋರ್ಸ್...