Home Latest News ದಾನಿಗಳಿಂದ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ವಿತರಣೆ
Latest NewschikamagalurHomenamma chikmagalur

ದಾನಿಗಳಿಂದ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ವಿತರಣೆ

Share
Share

ಚಿಕ್ಕಮಗಳೂರು:  ಸಂಸ್ಕಾರದ ಮೂಲಕ ಶಿಕ್ಷಣ ಕೊಟ್ಟಾಗ ಮಾತ್ರ ಪರಿಪೂರ್ಣ ಶಿಕ್ಷಣವಾಗುತ್ತದೆ. ಜೊತೆಗೆ ಮಾನವೀಯ ಮೌಲ್ಯಗಳು ಬೆಳೆಯಲು ಸಹಕಾರಿಯಾಗುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅಭಿಪ್ರಾಯಿಸಿದರು.

ಅವರು ಇಂದು ಟಿ.ಎಂ.ಎಸ್ ಶಾಲೆಯಲ್ಲಿ ಜಿ.ಪಂ, ತಾ.ಪಂ, ಶಾಲಾ ಶಿಕ್ಷಣ ಇಲಾಖೆ, ಶಿಕ್ಷಕರ ಸೇವಾ ಬಳಗ ಇವರುಗಳ ಸಹಯೋಗದಲ್ಲಿ ಮಾರುತಿ ಮೆಡಿಕಲ್ಸ್ ಬೆಂಗಳೂರು ಇವರ ವತಿಯಿಂದ ವಿದ್ಯಾರ್ಥಿಗಳಿಗೆ ಏರ್ಪಡಿಸಲಾಗಿದ್ದ ನೋಟ್ ಪುಸ್ತಕ ವಿತರಣಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ನೋಟ್ ಪುಸ್ತಕ ವಿತರಿಸಿ ಮಾತನಾಡಿದರು.

ಧರ್ಮ, ಸಂಸ್ಕೃತಿ, ಸಂರಕ್ಷಣೆಗೆ ಇನ್ನೊಬ್ಬರಿಗೆ ಹಾನಿ ಮಾಡದಂತೆ ಜಾಗೃತಿ ಮೂಡಿಸುವ ಸಮಾಜಮುಖಿ ಕೆಲಸವನ್ನು ತನ್ನದೇ ಆದ ರೀತಿಯಲ್ಲಿ ಮಾರುತಿ ಮೆಡಿಕಲ್ಸ್‌ನ ಮಹೇಂದ್ರ ಅವರು ಮಾಡುತ್ತಿದ್ದಾರೆಂದು ಶ್ಲಾಘಿಸಿದರು.

ಕತ್ತಲು ಕತ್ತಲು ಎಂದು ಕೂಗಾಡುವುದರಿಂದ ಬೆಳಕು ಬರುವುದಿಲ್ಲ. ಪುಟ್ಟ ಹಣತೆ ಹಚ್ಚಿದಾಗ ಬೆಳಕು ಕೊಡುತ್ತದೆ. ಹಣತೆಯಿಂದ ಹಣತೆಗಳನ್ನು ಹೆಚ್ಚಿದರೆ ಮತ್ತಷ್ಟು ಬೆಳಕಾಗುತ್ತದೆ ಎಂಬುದಕ್ಕೆ ಉಳ್ಳವರು ಬಡವರಿಗೆ ದಾನವನ್ನು ನೀಡುವ ಮೂಲಕ ನೆರವಾದರೆ ಬದುಕು ಸಾರ್ಥಕವಾಗುತ್ತದೆ ಎಂದು ಹೇಳಿದರು.

ಮಾನವೀಯ ಮೌಲ್ಯಗಳ ಬಗ್ಗೆ ಕಾಲಜಿ ಇರುವ ಹಾಗೆ ಮತ್ತು ಸಂವಿಧಾನದ ಕುರಿತು ಜಾಗೃತಿ ಮೂಡಿಸುವ ಪರಿಸರದ ಬಗ್ಗೆ ಅರಿವು ಮೂಡಿಸುವ ಭೂರಕ್ಷಣೆ ಮಾಡುವ ಮೂಲಕ ಸಂದೇಶ ಕೊಡುವುದನ್ನು ಮಹೇಂದ್ರ ಅವರು ಸದ್ದಿಲ್ಲದೆ ಮಾಡುತ್ತಿದ್ದಾರೆಂದು ತಿಳಿಸಿದರು.

ಜಯಕಾರ ಹಾಕಿಸಿಕೊಳ್ಳದೆ ಧಿಕ್ಕಾರ ಕೂಗದೆ ತನ್ನ ಪಾಡಿಗೆ ಈ ರೀತಿಯ ಜಾಗೃತಿ ಮೂಡಿಸುವ ಕೆಲಸವನ್ನು ಮಾಡುತ್ತಿದ್ದಾರೆ. ಚಿಕ್ಕಮಗಳೂರು ತಾಲ್ಲೂಕಿನ ಎಲ್ಲಾ ಸರ್ಕಾರಿ ಶಾಲೆಗಳ ೧ ರಿಂದ ೭ನೇ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸುಮಾರು ೧೦ ಸಾವಿರ ವಿದ್ಯಾರ್ಥಿಗಳಿಗೆ ೬.೫ ಲಕ್ಷ ರೂ ವೆಚ್ಚದಲ್ಲಿ ನೋಟ್ ಪುಸ್ತಕಗಳನ್ನು ಮಹೇಂದ್ರ ಮನ್ನೋತ್ ನೀಡುತ್ತಿದ್ದಾರೆ ಎಂದು ಹೇಳಿದರು.

ಕೆಲಸ ಮಾಡಿ ಓಟ್ ಕೇಳುತ್ತೇವೆ. ಓಟ್‌ಗಾಗಿ ಇವರು ಕೆಲಸ ಮಾಡಿಲ್ಲ. ನೋಟ್ ಪುಸ್ತಕ ಕೊಟ್ಟು ಬಡ ವಿದ್ಯಾರ್ಥಿಗಳಲ್ಲಿ ಶಿಕ್ಷಣದ ಪ್ರಗತಿ ನಿರೀಕ್ಷಿಸಿದ್ದಾರೆ ಎಂದು ಅವರಿಗೆ ಅಭಿನಂದನೆ ಸಲ್ಲಿಸಿದರು. ನೋಟ್ ಪುಸ್ತಕಗಳ ಕೊಡುಗೆ ವಿದ್ಯಾರ್ಥಿಗಳ ಜೀವನಕ್ಕೆ ಮತ್ತು ಶಿಕ್ಷಣಕ್ಕೆ ಆಧಾರವಾಗುತ್ತದೆ ಎಂದು ಹೇಳಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಶಿಕ್ಷಕಿ ಗೀತಾ ಅವರು, ಬದಲಾದ ಶೈಕ್ಷಣಿಕ ಪದ್ಧತಿಯಲ್ಲಿ ಸರ್ಕಾರದ ಆದೇಶದಂತೆ ಎಲ್ಲಾ ಕೆಲಸಗಳನ್ನು ಶಿಕ್ಷಕರು ಮಾಡುತ್ತಾರೆ. ಸರ್ಕಾರಿ ಶಾಲೆ ಮಕ್ಕಳಿಗೆ ನಮ್ಮ ಮಕ್ಕಳೆಂಬ ಭಾವನೆಯಿಂದ ಸೇವೆ ಸಲ್ಲಿಸುತ್ತಿದ್ದಾರೆ ಎಂದು ತಿಳಿಸಿದರು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಜ್ಯ ಸರ್ಕಾರಿ ನೌಕರರ ಸಂಘದ ಕಾರ್ಯಾಧ್ಯಕ್ಷ ಬಿ.ಎನ್ ಸುಂದ್ರೇಶ್ ವಹಿಸಿದ್ದರು.ನೌಕರರ ಸಂಘದ ಜಿಲ್ಲಾಧ್ಯಕ್ಷ ದೇವೇಂದ್ರ, ವಿವಿಧ ಶಿಕ್ಷಕರ ಸಂಘಟನೆಗಳ ಮುಖಂಡರಾದ ಸುಮಿತ್ರ, ಚಂದ್ರೇಗೌಡ, ವಸಂತ ಕುಮಾರ್, ಪುಷ್ಪ, ಚಂದ್ರಯ್ಯ, ದಿನೇಶ್, ರಾಮದಾಸ್, ಅನ್ನಪೂರ್ಣ ಮತ್ತಿತರರು ಉಪಸ್ಥಿತರಿದ್ದರು. ಮೊದಲಿಗೆ ಜೋಗಪ್ಪ ಸ್ವಾಗತಿಸಿದರು.

Donors distribute notebooks to students

Share

Leave a comment

Leave a Reply

Your email address will not be published. Required fields are marked *

Don't Miss

ಅಮಾನವೀಯ ಜಾನುವಾರು ಸಾಗಾಟ – ಮೂವರ ಬಂಧನ

ಎನ್.ಆರ್. ಪುರ: ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಹಾಗೂ ಅಮಾನವೀಯ ಜಾನುವಾರು ಸಾಗಾಟ ಪ್ರಕರಣವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಈ ಸಂಬಂಧ ಮೂವರನ್ನು ಬಂಧಿಸಿ, ವಾಹನ ಮತ್ತು ಜಾನುವಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ...

ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವ ಕೆಲಸ ಮಾಧ್ಯಮಗಳು ಮಾಡಬೇಕು

ಚಿಕ್ಕಮಗಳೂರು: ಬಡವರ ಕಷ್ಟಗಳನ್ನು, ಸಮಸ್ಯೆಗಳನ್ನು ಸಮಾಜದ ಮತ್ತು ಸರ್ಕಾರದ ಗಮನಕ್ಕೆ ತರುವ ಕೆಲಸವನ್ನು ಮಾಧ್ಯಮಗಳು ಮಾಡಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಸಲಹೆ ಮಾಡಿದರು. ಹೊನ್ನ ಬಿತ್ತೇವು ಹೊಲಕೆಲ್ಲ ಮತ್ತು ನ್ಯೂಸ್ ಕಿಂಗ್...

Related Articles

ನೀರುಗಂಟಿ ಆತ್ಮಹತ್ಯೆ ಪ್ರಕರಣದಲ್ಲಿ ಎಫ್‌ಐಆರ್ ದಾಖಲು

ಚಿಕ್ಕಮಗಳೂರು: ಅಣೂರು ಗ್ರಾಮ ಪಂಚಾಯಿತಿಯಲ್ಲಿ ನೀರುಗಂಟಿಯಾಗಿ ಕೆಲಸ ಮಾಡುತ್ತಿದ್ದ ರಮೇಶ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ,...

ಹೇಮಾವತಿ ನದಿಯ ಅಕ್ರಮವಾಗಿ ಮರಳು ಸಾಗಣೆ ಪ್ರಕರಣ ಪತ್ತೆ

ಮೂಡಿಗೆರೆ: ಜೀವನದಿ ಹೇಮಾವತಿಯ ಒಡಲಿಗೆ ಕನ್ನ ಹಾಕಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಜಾಲದ ಮೇಲೆ ಗೋಣಿಬೀಡು...

ಕಾಫಿನಾಡಿನಲ್ಲಿ ರಂಜಾನ್ ಅಂಗವಾಗಿ ಸಾಮೂಹಿಕ ಪ್ರಾರ್ಥನೆ

ಚಿಕ್ಕಮಗಳೂರು : ಕಾಫಿನಾಡಿನಲ್ಲಿ ಪವಿತ್ರ ರಂಜಾನ್ ಹಬ್ಬದ ಸಂಭ್ರಮವು ಸಡಗರ ಹಾಗೂ ಸೌಹಾರ್ದತೆಯಿಂದ ಕಳೆಗಟ್ಟಿತ್ತು. ಕೆಂಪನಹಳ್ಳಿಯ...

ಕಾಫಿ ತೋಟದಲ್ಲಿ ಮರಗಸಿ – ಕಾರ್ಮಿಕನ ಸಾವು

ಚಿಕ್ಕಮಗಳೂರು : ಕಾಫಿ ತೋಟದ ಮಾಲೀಕರು ಮತ್ತು ಮೇಸ್ತ್ರಿಗಳ ನಿರ್ಲಕ್ಷ್ಯಕ್ಕೆ ಅಮಾಯಕ ಕಾರ್ಮಿಕನೊಬ್ಬ ಬಲಿಯಾದ ದಾರುಣ...