Home namma chikmagalur chikamagalur ಗ್ರಾಹಕ ಹಕ್ಕುಗಳ ಉಲ್ಲಂಘನೆಯಾದಲ್ಲಿ ಮೌನವಾಗಿರಬೇಡಿ
chikamagalurHomeLatest Newsnamma chikmagalur

ಗ್ರಾಹಕ ಹಕ್ಕುಗಳ ಉಲ್ಲಂಘನೆಯಾದಲ್ಲಿ ಮೌನವಾಗಿರಬೇಡಿ

Share
Share

ಚಿಕ್ಕಮಗಳೂರು: ಪ್ರತಿಯೊಬ್ಬ ಗ್ರಾಹಕನಿಗೂ ವಸ್ತುವಿನ ಸುರಕ್ಷತೆ, ಗುಣಮಟ್ಟದ ಮಾಹಿತಿ ಮತ್ತು ತನಗೆ ಬೇಕಾದ ವಸ್ತುವನ್ನು ಮುಕ್ತವಾಗಿ ಆಯ್ಕೆ ಮಾಡಿಕೊಳ್ಳುವ ಸಂಪೂರ್ಣ ಹಕ್ಕಿದೆ. ಈ ಹಕ್ಕುಗಳ ಉಲ್ಲಂಘನೆಯಾದಾಗ ಗ್ರಾಹಕರು ಮೌನವಾಗಿರಬಾರದು ಎಂದು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ಎನ್.ಆರ್.ಚನ್ನಕೇಶವ ತಿಳಿಸಿದರು.

ನಗರದ ತಾಲ್ಲೂಕು ಪಂಚಾಯಿತಿ ಕಚೇರಿಯ ಸಾಮರ್ಥ್ಯ ಸೌಧದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ವಿಶ್ವ ಗ್ರಾಹಕರ ದಿನಾಚರಣೆ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗಾಗಿ ಹಮ್ಮಿಕೊಳ್ಳಲಾಗಿದ್ದ ವಿಶೇಷ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಗ್ರಾಹಕರು ಮಾರುಕಟ್ಟೆಯಲ್ಲಿ ಕೇವಲ ವಸ್ತುಗಳನ್ನು ಖರೀದಿಸುವವರಲ್ಲ, ಬದಲಾಗಿ ಅವರು ವ್ಯವಸ್ಥೆಯ ಅತಿಥಿಗಳು. ಸುರಕ್ಷಿತ ಉತ್ಪನ್ನಗಳನ್ನು ಪಡೆಯುವುದು ಮತ್ತು ತಮ್ಮ ಹಕ್ಕುಗಳ ಬಗ್ಗೆ ಜಾಗೃತಿ ಹೊಂದುವುದು ಪ್ರತಿಯೊಬ್ಬ ಗ್ರಾಹಕನ ಆದ್ಯ ಕರ್ತವ್ಯ. ಮಹಾತ್ಮ ಗಾಂಧೀಜಿಯವರ ಆಶಯದಂತೆ, ಗ್ರಾಹಕರು ನಮಗೆ ಉಪಕಾರ ಮಾಡುವುದಿಲ್ಲ, ಬದಲಾಗಿ ಅವರಿಗೆ ಸೇವೆ ಸಲ್ಲಿಸಲು ನಮಗೆ ಅವಕಾಶ ನೀಡುವ ಮೂಲಕ ನಾವು ಅವರಿಗೆ ಚಿರಋಣಿಯಾಗಿರಬೇಕು ಎಂಬ ತತ್ವವನ್ನು ನಾವು ಪಾಲಿಸಬೇಕು ಎಂದರು.

ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಸದಸ್ಯೆ ಈ. ಪ್ರೇಮ ಮಾತನಾಡಿ, ಭಾರತದಲ್ಲಿ ೧೯೮೬ರ ಗ್ರಾಹಕ ಕಾಯ್ದೆ ಜಾರಿಗೆ ಬರಲು ಮುಂಬೈನ ಕೇವಲ ಎಂಟು ಮಂದಿ ಮಹಿಳೆಯರು ನಡೆಸಿದ ಹೋರಾಟವೇ ಪ್ರೇರಣೆ. ಅಲ್ಪ ಸಂಖ್ಯೆಯ ಮಹಿಳೆಯರ ಹೋರಾಟ ಇಂದು ದೇಶಾದ್ಯಂತ ದೊಡ್ಡ ಮಟ್ಟದ ಗ್ರಾಹಕ ಚಳುವಳಿಯಾಗಿ ಬೆಳೆದು ನಿಂತಿದೆ ಎಂದರು.

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಉಪನಿರ್ದೇಶಕ ಯೋಗಾನಂದ ಮಾತನಾಡಿ, ವ್ಯಾಪಾರ ವಹಿವಾಟಿನಲ್ಲಿ ಕಂಡು ಬರುವ ಬೆಲೆ ವ್ಯತ್ಯಾಸದ ಮೋಸ, ಕಳಪೆ ಗುಣಮಟ್ಟದ ವಸ್ತುಗಳು ಹಾಗೂ ಸೇವಾ ನ್ಯೂನತೆಗಳ ಬಗ್ಗೆ ಗ್ರಾಹಕರು ಸದಾ ಜಾಗರೂಕರಾಗಿರಬೇಕು. ಭಾರತದಲ್ಲಿ ೧೯೮೬ರಲ್ಲಿ ಜಾರಿಗೆ ಬಂದ ಗ್ರಾಹಕ ಸಂರಕ್ಷಣಾ ಕಾಯ್ದೆಯು ಈಗ ೨೦೧೯ರ ಹೊಸ ಕಾಯ್ದೆಯಾಗಿ ಮಾರ್ಪಟ್ಟು ಗ್ರಾಹಕರಿಗೆ ಹೆಚ್ಚಿನ ಬಲ ನೀಡಿದೆ ಎಂದು ತಿಳಿಸಿದರು.

ಈ ವರ್ಷ ಪ್ರಪಂಚದಾದ್ಯಂತ “ಸುರಕ್ಷಿತ ಉತ್ಪನ್ನಗಳು ಮತ್ತು ಆತ್ಮವಿಶ್ವಾಸದ ಗ್ರಾಹಕರು” ಎಂಬ ಘೋಷವಾಕ್ಯದೊಂದಿಗೆ ಅರಿವು ಮೂಡಿಸುವ ಕಾರ್ಯಕ್ರಮಗಳು ನಡೆಯುತ್ತಿವೆ. ಯಾವುದೇ ಸೇವಾ ನ್ಯೂನತೆ ಅಥವಾ ಮೋಸ ಕಂಡುಬಂದಲ್ಲಿ ಗ್ರಾಹಕರು ನೇರವಾಗಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗಕ್ಕೆ ದೂರು ನೀಡಿ ನ್ಯಾಯ ಪಡೆಯಲು ಅವಕಾಶವಿದೆ. ಸಮಾಜಮುಖಿ ಕೆಲಸಗಳಲ್ಲಿ ಮುಂಚೂಣಿಯಲ್ಲಿರುವ ಅಂಗನವಾಡಿ ಕಾರ್ಯಕರ್ತೆಯರು ಈ ಹಕ್ಕುಗಳ ಬಗ್ಗೆ ಜನಸಾಮಾನ್ಯರಿಗೆ ಪ್ರಚಾರ ಮಾಡಬೇಕು ಎಂದು ಯೋಗಾನಂದ ಸಲಹೆ ನೀಡಿದರು.

ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಸದಸ್ಯ ಡಾ.ಮಂಜುನಾಥ್ ಎಂ.ಬೊಮ್ಮನಕಟ್ಟಿ, ಸಹಾಯಕ ರಿಜಿಸ್ಟ್ರಾರ್ ಬಿ.ಆರ್.ಇಂದುಬಾಯಿ, ಕಾನೂನು ಮಾಪನ ಶಾಸ್ತ್ರ ಇಲಾಖೆಯ ಸಹಾಯಕ ನಿಯಂತ್ರಕ ಜಿ.ಮಹಾಂತೇಶ್ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಕಾರ್ಯಕ್ರಮದಲ್ಲಿದ್ದರು.

Don’t remain silent when consumer rights are violated.

Share

Leave a comment

Leave a Reply

Your email address will not be published. Required fields are marked *

Don't Miss

ಶೃಂಗೇರಿ ಜೆಎಂಎಫ್ಸಿ ನ್ಯಾಯಾಲಯಕ್ಕೆ ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿ

ಶೃಂಗೇರಿ: ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿಯನ್ನು ಕೇರಳ ಪೊಲೀಸರು ಶೃಂಗೇರಿ ಜೆಎಂಎಫ್ಸಿ ನ್ಯಾಯಾಲಯಕ್ಕೆ ಶುಕ್ರವಾರ  ಹಾಜರುಪಡಿಸಿದರು. ಶೃಂಗೇರಿ ತಾಲೂಕಿನ ಬುಕ್ಕಡಿಬೈಲು ಗ್ರಾಮದ ನಿವಾಸಿಯಾಗಿರುವ ಬಿ.ಜಿ. ಕೃಷ್ಣಮೂರ್ತಿ ವಿರುದ್ಧ ಕರ್ನಾಟಕದಲ್ಲಿ ಒಟ್ಟು 54...

ವಾಹನಗಳ ಮಿರರ್ ತಗುಲಿ-ಕತ್ತಿ-ಬಂದೂಕು ಝಳಪಿಸಿದ ಗಲಾಟೆ

ಚಿಕ್ಕಮಗಳೂರು: ವಾಹನಗಳ ಮಿರರ್ ಪರಸ್ಪರ ತಗುಲಿದ ಸಣ್ಣ ವಿಚಾರ ಕತ್ತಿ-ಬಂದೂಕು ಝಳಪಿಸುವ ಹಂತಕ್ಕೆ ತಲುಪಿರುವ ಆರೋಪವೊಂದು ಚಿಕ್ಕಮಗಳೂರು ತಾಲೂಕಿನ ಆಲ್ಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಸರವಳ್ಳಿ ಗ್ರಾಮದಲ್ಲಿ ಜುಲೈ 2...

Related Articles

ಮಹಿಳೆ ಗಮನ ಬೇರೆಡೆ ಸೆಳೆದು ₹ 3.90 ಲಕ್ಷ ವಂಚನೆ

ಕಡೂರು: ಕಳೆದ ಜೂನ್‌ನಲ್ಲಿ ಗಮನ ಬೇರೆಡೆಗೆ ಸೆಳೆದು ಗ್ರಾಹಕರೋರ್ವರ ಖಾತೆಯಿಂದ ₹3.90 ಲಕ್ಷಡ್ರಾ ಮಾಡಿರುವ ಪ್ರಕರಣ...

ಶಿವಮೊಗ್ಗ-ಶೃಂಗೇರಿ ಮಾರ್ಗ ಪರಿಗಣಿಸಿ

ಚಿಕ್ಕಮಗಳೂರು: ನೂತನ ರೈಲ್ವೆ ಯೋಜನೆಗೆ ಅಂತಿಮ ಸ್ಥಳ ನಿರ್ಧಾರ ಸಮೀಕ್ಷೆ ಮಾಡುವ ವೇಳೆ ಶಿವಮೊಗ್ಗ, ಭದ್ರಾವತಿ,...

ಕವಿಕಲ್ ಮಠದ ರಸ್ತೆಯಲ್ಲಿ ಹುಲಿ ದಿಢೀರನೆ ಪ್ರತ್ಯಕ್ಷ

ಚಿಕ್ಕಮಗಳೂರು: ಕಾಫಿನಾಡಿನ ಹಸಿರು ಕಾಡುಗಳ ನಡುವೆ ಸಂಚರಿಸುತ್ತಿದ್ದ ಪ್ರವಾಸಿಗರಿಗೆ ಮರೆಯಲಾಗದ ಅನುಭವವೊಂದು ಎದುರಾಗಿದೆ. ಚಿಕ್ಕಮಗಳೂರು ತಾಲೂಕಿನ...

ಭದ್ರಾ ಜಲಾಶಯದ ನೀರು ಕುಡಿಯುವ ಉದ್ದೇಶಕ್ಕೆ ಮಾತ್ರ ಬಳಸಲು ಸೂಚನೆ

ಚಿಕ್ಕಮಗಳೂರು: ಪ್ರಸಕ್ತ ಸಾಲಿನಲ್ಲಿ ಮುಂಗಾರು ಮಳೆಯ ತೀವ್ರ ಕೊರತೆಯಿಂದಾಗಿ ಜಲಾಶಯಗಳಲ್ಲಿ ನೀರಿನ ಮಟ್ಟ ಗಣನೀಯವಾಗಿ ಕುಸಿಯುತ್ತಿದ್ದು,...