Home Political News ಭದ್ರತೆ ನೆಪದಲ್ಲಿ ಸಿ.ಟಿ ರವಿಗೆ ಡಬಲ್ ಎಸ್ಕಾರ್ಟ್ : ಪೊಲೀಸರ ಎಡವಟ್ಟು
Political News

ಭದ್ರತೆ ನೆಪದಲ್ಲಿ ಸಿ.ಟಿ ರವಿಗೆ ಡಬಲ್ ಎಸ್ಕಾರ್ಟ್ : ಪೊಲೀಸರ ಎಡವಟ್ಟು

Share
Share

ಚಿಕ್ಕಮಗಳೂರು : ಬೆಳಗಾವಿಯ ಸುವರ್ಣ ಸೌಧದಲ್ಲಿ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಧ್ಯೆ ನಡೆದ ಜಾಟಪಟಿಯಲ್ಲಿ ಅಶ್ಲೀಲ ಪದ ಪ್ರಯೋಗ ನಂತರ ನಡೆದ ನಾಟಕೀಯ ಬೆಳವಣಿಗೆಗಳು ಆರೋಪ ಪ್ರತ್ಯಾರೋಪಗಳ ಮಧ್ಯೆ ಸಿ.ಟಿ.ರವಿಯವರಿಗೆ ಪೊಲೀಸ್ ಭದ್ರತೆ ನೀಡಿರುವುದು, ಸೈರನ್ ಮೂಲಕ ಎಸ್ಕಾರ್ಟ್ ಅನ್ನು ಒದಗಿಸಿರುವುದಕ್ಕೆ ತೀವ್ರ ಚರ್ಚೆ ಆರಂಭವಾಗಿದೆ.

ಸಿ.ಟಿ.ರವಿ ಸೋಲಿಸಿದ ತಮ್ಮಯ್ಯ ವಾಹನ ಸಂಚರಿಸುವ ವೇಳೆ ಸಿ.ಟಿ. ರವಿ ಕಾರಿನ ಹಿಂದೆ ಮುಂದೆ ಪೊಲೀಸ್ ಜೀಪ್ ಜೊತೆಗೆ ಸೈರನ್ ಸೌಂಡ್ ಕೇಳಿ ಕೆರಳಿದ ಕಾಂಗ್ರೆಸ್ ಮುಖಂಡರು ಪೊಲೀಸ್ ಇಲಾಖೆ ಅಧಿಕಾರಿಗಳನ್ನು ಪ್ರಶ್ನೆ ಮಾಡಿದ್ದಾರೆ ಈ. ವೇಳೆ ಮೇಲಾಧಿಕಾರಿಗಳ ಸೂಚನೆಯಂತೆ ಈ ಕ್ರಮ ಕೈಗೊಳ್ಳಲಾಗಿದೆ ಎಂಬ ಉತ್ತರ ಬಂದಿದೆ.

ಸಿ.ಟಿ.ರವಿ ಕುಳಿತರು ಸುದ್ದಿ ನಿಂತರು ಸುದ್ದಿ ಇನ್ನೂ ಸೈರನ್ ಸೌಂಡ್ ಹಾಕಿಕೊಂಡು ಓಡಾಡಿದರೆ ಸುದ್ದಿ ಆಗಲ್ವಾ ಎಂಬ ಮಾತು ರಾಜಕೀಯ ಪಡಸಾಲೆಯಲ್ಲಿ ಕಳೆದ ಎಂಟು ದಿನಗಳಿಂದ ಎಡಬಿಡದೆ ಎಲ್ಲೆಲ್ಲೂ ಸುದ್ದಿಯಾಗುತ್ತಿರುವಾಗ ಎಸ್ಕಾರ್ಟ್ ಬಗ್ಗೆ ಕಾಂಗ್ರೆಸ್ ನ ಶಾಸಕರಿಗೂ ಎಸ್ಕಾರ್ಟ್ ಜೊತೆಗೆ ಸೈರನ್ ಗ್ಯಾರಂಟಿ ಒದಗಿಸಿ ಎಂದು ಆಗ್ರಹಿಸಿದರು ಆಶ್ಚರ್ಯವಿಲ್ಲ.

ಅಭಿವೃದ್ಧಿ ದೃಷ್ಟಿಯಿಂದ ನಾವೆಲ್ಲರೂ ಒಂದಾಗಿದ್ದೇವೆ ಎಂದು ಹೇಳಿದ್ದ ಶಾಸಕ ತಮ್ಮಯ್ಯ ಈಗ ಸೈರನ್ ಸೌಂಡ್ ಗೆ ತಿರುಗಿ ಬಿದ್ದಿರುವುದು ಲಕ್ಷ್ಮೀ ಹೆಬ್ಬಾಳ್ಕರ್ ವಿಚಾರದಲ್ಲಿ ಖಾರವಾಗಿ ಟೀಕಿಸಿರುವುದು ಎಲ್ಲವೂ ಸರಿಯಿಲ್ಲ ಎನ್ನುತ್ತಲೇ ಸರ್ಕಾರಿ ನೌಕರರ ಸಂಘದ ದೇವೇಂದ್ರ ಪರ ನಿಂತು ಬೋಜೇಗೌಡರ ವಿರುದ್ದ ಹೆಜ್ಜೆ ಇಟ್ಟಿರುವುದು ನೋಡಿದರೆ ಒಗ್ಗಟ್ಟಿನಲ್ಲಿ ಒಡುಕು ಉಂಟಾಗಿದೆ. ಅಭಿವೃದ್ಧಿ ವಿಚಾರಕ್ಕಿಂತ ಅಸ್ತಿತ್ವದ ವಿಚಾರ ಬಂದಾಗ ಎದುರಾಳಿಗಳ ಬಾಯಿ ಮುಚ್ಚಿಸುತ್ತಾರೆ ಎಂಬುದು ಸತ್ಯವಾದಂತಿದೆ

Share

Leave a comment

Leave a Reply

Your email address will not be published. Required fields are marked *

Don't Miss

ಬಾಲಕಾರ್ಮಿಕರನ್ನು ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧ

ಚಿಕ್ಕಮಗಳೂರು:  ಬಾಲ ಕಾರ್ಮಿಕರನ್ನು ಯಾವುದೇ ಅಪಾಯಕಾರಿ ಕ್ಷೇತ್ರದಲ್ಲಿ ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪ ರಾಧವಾಗಿದ್ದು, ಬಾಲ ಕಾರ್ಮಿಕರನ್ನು ದುಡಿಸಿಕೊಳ್ಳುವ ಮಾಲೀಕರಿಗೆ ೬ ತಿಂಗಳಿಗಿಂತ ಕಡಿಮೆಯಿಲ್ಲದಂತೆ ೨ ವರ್ಷ ಜೈಲು ಶಿಕ್ಷೆ ಹಾ ಗೂ...

ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಂಸದರ ಅಸಮಾಧಾನ

ಚಿಕ್ಕಮಗಳೂರು: ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಮಹತ್ವದ ಸಭೆಯಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ವಿವಿಧ ಏಜೆನ್ಸಿಗಳ ಆಮೆಗತಿಯ ಕಾರ್ಯವೈಖರಿಯ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿ, ಬಿಗಿ...

Related Articles

ರಾಜಕಾರಣದಲ್ಲಿ ಮಠಗಳ, ಸಂಘಟನೆಗಳ “ಆರ್ಭಟ”

ರಾಜ್ಯ ರಾಜಕಾರಣದಲ್ಲಿ ಇತ್ತೀಚಿನ ವರ್ಷಗಳಲ್ಲಿ ಮಠಗಳ ಪ್ರಭಾವ ಮತ್ತು ಸಂಘಟನೆಗಳು ಆರ್ಭಟ ಮಾಡುತ್ತಿರುವುದು ನೋಡಿದರೆ ಎತ್ತ...

ಜಿಲ್ಲೆಯಲ್ಲಿ ಗೂಟದ ಕಾರಿಗಾಗಿ “ಕೈ ಪಡೆ” ಯ ಕಸರತ್ತು !

ಚಿಕ್ಕಮಗಳೂರು: ಮುಖ್ಯ ಮಂತ್ರಿಯಾಗಿದ್ದ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದರಿಂದ ಉಳಿದ ಎರಡು ವರ್ಷಗಳ ಅವಧಿಗೆ ಡಿ.ಕೆ.ಮುಖ್ಯಮಂತ್ರಿಯಾಗಿ ದೇವಸ್ಥಾನ,...

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಂಪುಟದ 13 ಸಚಿವರಿಗೆ ಖಾತೆ ಹಂಚಿಕೆ

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್  ಅವರು ತಮ್ಮ ಸಂಪುಟದ (Cabinet) ಮೊದಲ 13 ಸಚಿವರಿಗೆ ಖಾತೆಯನ್ನು...

ಡಿ.ಕೆ.ಗೆ ಪ್ರಾರಂಭದಲ್ಲಿ ಡಿಚ್ಚಿ ! ಹರಿ ಬ್ರೇಕ್, ಸಿದ್ದು ಸ್ಟೀರಿಂಗ್ ಯಾವ ಕಡೆ ತಿರುಗುತ್ತದೆ

ಬೆಂಗಳೂರು:  ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಯಾರನ್ನು ನಂಬಿದ್ದರು ಅವರೇ ಕೈ ಕೊಡುವ ಸೂಚನೆ ಅರಿತು ರಾಹುಲ್...