Home Crime News ಡಬಲ್ ಮರ್ಡರ್ ಮಾಡಿ ಎಸ್ಕೇಪ್ ಆಗಿದ್ದ ಆರೋಪಿ ಬಂಧನ
Crime News

ಡಬಲ್ ಮರ್ಡರ್ ಮಾಡಿ ಎಸ್ಕೇಪ್ ಆಗಿದ್ದ ಆರೋಪಿ ಬಂಧನ

Share
Share

ಚಿಕ್ಕಮಗಳೂರು :

ಅಜ್ಜ ಅಜ್ಜಿ ಡಬರ್ ಮರ್ಡರ್ ಮಾಡಿ ಎಸ್ಕೇಪ್ ಆಗಿದ್ದ ಸೈಕೊ ಕ್ಯಾಬ್ ಡ್ರೈವರ್ ನನ್ನು ಘಟನೆ ನಡೆದ 48 ಗಂಟೆಗಳ ಒಳಗೆ ಮಲ್ಲಂದೂರು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ

ಅಜ್ಜಿ ರೇಪ್ ಮಾಡಲು ಹೋಗಿ ಅಜ್ಜ ಅಜ್ಜಿ ಇಬ್ಬರನ್ನೂ ಮುಗಿಸಿದ ನಿಶಾಂತ್ ಕೊಲೆಗೆ ಕಾರಣವಾದ ರೋಚಕತೆಯನ್ನು ಪೊಲೀಸರು ಕೊನೆಗೂ ಬಾಯಿ ಬಿಡಿಸಿದ್ದಾರೆ.
ಮಾರಕ ಕಾಯಿಲೆಗೆ ತುತ್ತಾಗಿದ್ದ ಎಂದು ಸ್ನೇಹಿತರು ಹೇಳಿದ್ದರಿಂದ ಅದಕ್ಕೆ ಅಜ್ಜಿಯನ್ನು ರೇಪ್ ಮಾಡಲು ಮುಂದಾಗಿದ್ದ ಇವನ ಸೈಕೊ ಟ್ರೀಟ್ ಮೆಂಟ್ ಗೆ ಪೊಲೀಸರಿಗೆ ಬೆಚ್ಚಿ ಬಿದ್ದಿದ್ದಾರೆ.

ರಾತ್ರೋರಾತ್ರಿ ಹತ್ಯೆ ಮಾಡಿ ಬೆಂಗಳೂರಿನಲ್ಲಿ ತಲೆ ಮರೆಸಿಕೊಂಡಿದ್ದ ಪಾಪಿಯನ್ನು ಮಲ್ಲಂದೂರು ಪಿಎಸ್ಐ ಗುರು ಸಜ್ಜನ್ ನೇತೃತ್ವದ ತಂಡ ಬಂಧಿಸಿ ಕರೆ ತಂದಿತ್ತು. ಆದರೆ ಕೊಲೆಗೆ ಕಾರಣ ಮಾತ್ರ ಬೇರೆಯೇ ಹೇಳುತ್ತಿದ್ದ ಕಿರಾತಕನಿಗೆ ಆಲ್ದೂರು ವೃತ್ತ ನಿರೀಕ್ಷಕರಾದ ಪಿ.ಪಿ ಸೋಮೇಗೌಡರು ತಮ್ಮದೇ ಸ್ಟೈಲ್ ನಲ್ಲಿ ಬಾಯಿ ಬಿಡಿಸಿದ್ದಾರೆ. ಮೊದಲು ಹೇಳಿದ್ದು ಸುಳ್ಳು ಎಂದು ನಂತರ ಸತ್ಯ ಹೇಳಿದ್ದಾನೆ.

ಕೊಲೆ ಮಾಡಿ ಬೆಂಗಳೂರಿನ ಗಲ್ಲಿ ಯಲ್ಲಿ ಮಲಗಿದ್ದ ಆರೋಪಿಯನ್ನು ಸಿಬ್ಬಂದಿಗಳಾದ ದೇವರಾಜ್, ಅಶೋಕ್, ಭರತ್ ಭೂಷಣ್, ಅಭಿಷೇಕ್, ಶರತ್, ಚಿದಾನಂದ, ನವೀನ್ ಕುಮಾರ್, ಮಂಜುನಾಥ್, ಹರ್ಷ, ಶಾಂತರಾಜು, ಚಾಲಕರಾದ ರಾಜಯ್ಯ ಮತ್ತು ಜಿಲ್ಲಾ ತಾಂತ್ರಿಕ ವಿಭಾಗದ ಸಿಬ್ಬಂದಿಗಳಾದ ರಬ್ಬಾನಿ ಬಂಧನಕ್ಕೆ ಸಹಕರಿಸಿದ್ದಾರೆ. ಕೃತ್ಯ ನಡೆದ ನಂತರ ಪರಾರಿಯಾಗಲು ಬಳಸಿದ ಕೆಎ-02 ಕೆಪಿ- 4270 ಎನ್ ಟಾರ್ಕ್ ಸ್ಕೂಟಿಯನ್ನು ವಶಕ್ಕೆ ಪಡೆದುಕೊಂಡು, ಆರೋಪಿಯು ಬಸಪ್ಪ ಹಾಗೂ ಲಲಿತಮ್ಮ ರವರನ್ನು ಕೊಲೆ ಮಾಡಲು ಬಳಸಿದ ವಸ್ತುಗಳನ್ನು ಅಮಾನತ್ತು ಪಡಿಸಿಕೊಂಡಿರುತ್ತಾರೆ.

ಕೃತ್ಯ ನಡೆದ ಕೇವಲ 48 ಗಂಟೆ ಒಳಗಾಗಿ ಆರೋಪಿಯನ್ನು ಪತ್ತೆ ಮಾಡಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿರುತ್ತದೆ. ಪ್ರಕರಣದಲ್ಲಿ ಆರೋಪಿಯನ್ನು ಯಶಸ್ವಿಯಾಗಿ ಕೃತ್ಯ ನಡೆದ ಕೇವಲ 48 ಗಂಟೆ ಒಳಗಾಗಿ ದಸ್ತಗಿರಿ ಮಾಡಿ ಕಾನೂನು ಕ್ರಮ ಜರುಗಿಸಲು ಶ್ರಮಿಸಿದ ಎಲ್ಲಾ ಪೊಲೀಸ್ ಅಧಿಕಾರಿ ಸಿಬ್ಬಂದಿಗಳನ್ನು ಡಾ. ವಿಕ್ರಂ ಅಮಟೆ ಐಪಿಎಸ್ ಪೊಲೀಸ್ ಅಧೀಕ್ಷಕರು ಚಿಕ್ಕಮಗಳೂರು ಜಿಲ್ಲೆ ರವರು ಪ್ರಶಂಸಿಸಿ ಶ್ಲಾಘಿಸಿರುತ್ತಾರೆ.

Share

Leave a comment

Leave a Reply

Your email address will not be published. Required fields are marked *

Don't Miss

ಜೀವಾಣು ಹೆಚ್ಚಿಸುವ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕು

ಚಿಕ್ಕಮಗಳೂರು: ಮಣ್ಣು ರೋಗಯುಕ್ತವಾಗಿದ್ದು, ಅದಕ್ಕೆ ಬೇಕಿರುವ ಜೀವಾಣುಗಳನ್ನು ಹೆಚ್ಚಿಸುವ ಮೂಲಕ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕಾದ ಅನಿವಾರ್ಯ ಇದೆ’ ಎಂದು ಕನ್ನೇರ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ತಿಳಿಸಿದರು. ಸಾವಯವ ರೈತರ ಬಳಗದಿಂದ...

ಅಡ್ಡ ಮತದಾನದ ಸತ್ಯಶೋಧನಾ ಸಮಿತಿ ವರದಿ ಸಿದ್ದ

ಚಿಕ್ಕಮಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನದ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ರಚಿಸಿರುವ ಸತ್ಯಶೋಧನಾ ಸಮಿತಿಯು ತನ್ನ ಪ್ರಾಥಮಿಕ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ. ಸಮಿತಿಯ ಸದಸ್ಯರಾದ ಸಿ.ಟಿ. ರವಿ ಅವರು ಚಿಕ್ಕಮಗಳೂರಿನಲ್ಲಿ ಈ...

Related Articles

ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ

ಚಿಕ್ಕಮಗಳೂರು:  ಜಿಲ್ಲಾ ನ್ಯಾಯಾಲಯಕ್ಕೆ ಬಂದಿರುವ ಬಾಂಬ್ ಬೆದರಿಕೆ ಇ-ಮೇಲ್ ಆತಂಕಕ್ಕೆ ಕಾರಣವಾಗಿದೆ. ಮಧ್ಯಾಹ್ನ 1.30 ರಿಂದ...

ಅತ್ತಿಗೆಯನ್ನೇ ಹತ್ಯೆಗೈದ ಆರೋಪಿಗೆ 7 ವರ್ಷಗಳ ಕಠಿಣ ಜೈಲು ಶಿಕ್ಷೆ

ಚಿಕ್ಕಮಗಳೂರು:  ಜಿಲ್ಲೆಯ ತರೀಕೆರೆ ತಾಲ್ಲೂಕಿನ ಬಾವಿಕೆರೆ ಗ್ರಾಮದಲ್ಲಿ ನಡೆದಿದ್ದ ಭೀಕರ ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ, ಅತ್ತಿಗೆಯನ್ನೇ...

ಗಾಂಜಾ ಸೇವಿಸಿ ರಂಪಾಟ – ಏಳು ಮಂದಿ ಬಂಧನ

ಚಿಕ್ಕಮಗಳೂರು: ಜಿಲ್ಲೆಯಾದ್ಯಂತ ಮಾದಕ ದ್ರವ್ಯ ಸೇವನೆ ವಿರುದ್ಧ ಪೊಲೀಸರು ವಿಶೇಷ ಕಾರ್ಯಾಚರಣೆ ಚುರುಕುಗೊಳಿಸಿದ್ದು ಸಾರ್ವಜನಿಕ ಸ್ಥಳಗಳಲ್ಲಿ...

ಎಐಟಿ ವೃತ್ತದ ಬಳಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಎಐಟಿ ವೃತ್ತದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಚೇರಿಯಿಂದ ಮೋಟಾರ್ ಸೈಕಲ್‌ನಲ್ಲಿ...