Home namma chikmagalur chikamagalur ವಿಶಿಷ್ಠ ಮಾದರಿಯಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಜಯಂತಿ
chikamagalurHomeLatest Newsnamma chikmagalur

ವಿಶಿಷ್ಠ ಮಾದರಿಯಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಜಯಂತಿ

Share
Oplus_16908288
Share

ಚಿಕ್ಕಮಗಳೂರು : ಸರ್ವ ಜನರ ಉತ್ಸವವಾಗಿ ಜನೋತ್ಸವದ ರೀತಿ ವಿಶಿಷ್ಠ ಮಾದರಿಯಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ರವರ ೧೩೫ನೇ ಜಯಂತಿಯನ್ನು ವೈಚಾರಿಕಾ ಕಾರ್ಯಕ್ರಮವಾಗಿ ಏ.೨೭ ರಂದು ಸೋಮವಾರ ಬೆಳಿಗ್ಗೆ ೧೦.೩೦ ಕ್ಕೆ ಮೂಡಿಗೆರೆ ಅಡ್ಯಂತಾಯ ರಂಗಮಂದಿರದಲ್ಲಿ ಆಯೋಜಿಸಲಾಗಿದೆ ಎಂದು ಆಚರಣಾ ಸಮಿತಿಯ ಅಧ್ಯಕ್ಷರು ಹಾಗೂ ಮಾಜಿ ಸಚಿವರಾದ ಬಿ.ಬಿ ನಿಂಗಯ್ಯ ತಿಳಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಡಾ. ಅಂಬೇಡ್ಕರ್ ಜಯಂತಿಯನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಲು ನಿರ್ಧರಿಸಲಾಗಿದ್ದು, ಅನುಭವ ಮಂಟಪ ವೇದಿಕೆ, ರಾಷ್ಟ್ರ ಕವಿ ಕುವೆಂಪು ಹಾಗೂ ನಾರಾಯಣ ಗುರುಗಳ ಮಹಾದ್ವಾರ ನಿರ್ಮಾಣ ಮಾಡಲಾಗುವುದು ಎಂದು ಹೇಳಿದರು.

ಈ ಕಾರ್ಯಕ್ರಮದ ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ಪುರಸ್ಕೃತರಾದ ಬಾನು ಮುಸ್ತಾಕ್ ರವರು ನೆರೆವೇರಿಸುವರು, ಜನಪರ ಚಿಂತಕರು ಹಾಗೂ ಬರಹಗಾರರಾದ ಶಿವಸುಂದರ್ ರವರು ಮುಖ್ಯ ಭಾಷಣಾಕಾರರಾಗಿ ಭಾಗವಹಿಸಲಿದ್ದಾರೆಂದು ತಿಳಿಸಿದರು.

ಶೋಷಿತ ಜನಾಂಗದ ಮುಖವಾಣಿಯಾಗಿ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಮತ್ತು ರಾಜಕೀಯ ಸಮಾನ ಅವಕಾಶಗಳು ಕಾನೂನು ಬದ್ಧವಾಗಿ ಲಭ್ಯವಾಗುವಂತೆ ಸತತ ಹೋರಾಟದ ಫಲವಾಗಿ ಹೊಸ ಅರಿವು, ಜ್ಞಾನ, ಜಾಗೃತಿ, ಪ್ರಜ್ಞೆ ಮೂಡುವಂತಾಗಿದೆ ಆದರೆ ಇತ್ತೀಚಿನ ಬೆಳವಣಿಗೆಗಳು ಅಂಬೇಡ್ಕರ್ ರವರ ಚಿಂತನೆ ಮತ್ತು ಆಲೋಚನೆಗೆ ವಿರುದ್ಧವಾಗಿ ಸಂಘಟಿತ ದಾಳಿಯ ಮೂಲಕ ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಅಲುಗಾಡಿಸುವ ಪ್ರಯತ್ನ ನೆಡೆದಿದೆ ಎಂದು ವಿಷಾಧಿಸಿದರು.

ಜಾತಿ-ಉಪಜಾತಿ, ಧರ್ಮ, ಕೋಮು ದಳ್ಳುರಿಯ ಮೀಸಲಾತಿಯ ಒಳ ಮೀಸಲಾತಿ ಸಂಘರ್ಷ ಮಿತಿಮೀರಿದೆ, ಐಕ್ಯತೆ ಬದಲು ವಿಭಜನೆ ಮೂಲಕ ಧೀನ, ದಲಿತ, ಬಡವ ಶೋಷಿತರಲ್ಲಿ ಆತ್ಮ ವಿಶ್ವಾಸವನ್ನೆ ಹತ್ತಿಕ್ಕುವ ಸಂಚು ನೆಡೆಯುತ್ತಿದೆ, ಅದಕ್ಕಾಗಿ ವಿಚಾರದ ಬದಲು ಪ್ರಚಾರ, ಬರವಣೆಗೆಯ ಬದಲು ಮೆರವಣಿಗೆ ಗೊತ್ತು-ಗುರಿ ಇಲ್ಲದ ಕಾರ್ಯಕ್ರಮಗಳ ಮೂಲಕ ಡಾ. ಬಿ.ಆರ್ ಅಂಬೇಡ್ಕರ್ ರವರನ್ನು ಅವಮಾನಿಸುತ್ತಾ ತನ್ನ ಸ್ವಾರ್ಥ ಸಾಧನೆಗೆ ಕೆಲವು ಶಕ್ತಿಗಳು ಮುಂದಾಗುತ್ತಿವೆ ಎಂದು ಆರೋಪಿಸಿದರು.

ಹಲ್ಲೆ, ಅತ್ಯಾಚಾರ, ಅಸಮಾನತೆ, ಅವಮಾನ, ಹಸಿವು, ಬಡತನ, ನಿರುದ್ಯೋಗದ ವಿರುದ್ಧ ಬೀದಿಗಿಳಿದು ಹೋರಾಟ ಮಾಡುವ ಜನರನ್ನು ದಾರಿ ತಪ್ಪಿಸಲಾಗುತ್ತಿದೆ, ಈ ಹಿನ್ನಲೆಯಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ರವರು ಮೂಡಿಸಿದ ಆತ್ಮವಿಶ್ವಾಸ, ಚೈತನ್ಯ ಮತ್ತು ಸ್ಪೂರ್ತಿಯಿಂದ ಪಡೆಯಬೇಕಾದ ವಿಚಾರಗಳನ್ನು ಕಾರ್ಯರೂಪಕ್ಕೆ ತರಲು ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಮೂಡಿಗೆರೆ ತಾಲ್ಲೂಕಿನ ಸರ್ಕಾರಿ ಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿರುವ ೧೨ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರತಿಭಾ ಪುರಸ್ಕಾರ ನೀಡಲಾಗುವುದು ಹಾಗೂ ಇದೇ ವೇದಿಕೆಯಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ತಾಲ್ಲೂಕಿನ ಸರ್ವ ಜನಾಂಗದ ಹಿರಿಯ ನಾಗರೀಕರನ್ನು ಸನ್ಮಾನಿಸಿ ಗೌರವಿಸಲು ತೀರ್ಮಾನಿಸಲಾಗಿದೆ ಎಂದರು.

ಈ ಕಾರ್ಯಕ್ರಮಕ್ಕೆ ಅತಿ ಹೆಚ್ಚಿನ ಸಂಖ್ಯೆಯಲ್ಲಿ ನಾಗರೀಕರು, ವಿವಿಧ ಜನಪರ ಸಂಘಟನೆಗಳ ಮುಖಂಡರು, ರಾಜಕೀಯ ಪಕ್ಷದ ಮುಖಂಡರು, ವಕೀಲರು, ಮಹಿಳೆಯರು, ದಲಿತಪರ ಶಕ್ತಿಗಳು, ವಿದ್ಯಾರ್ಥಿ ಯುವಜನರು ಭಾಗವಹಿಸುವಂತೆ ಮನವಿ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಎಂ.ಪಿ ಕುಮಾರಸ್ವಾಮಿ, ಕಾಂಗ್ರೆಸ್ ವಕ್ತಾರ ಎಂ.ಎಸ್ ಅನಂತ್, ಎಸ್‌ಡಿಪಿಐ ಅಧ್ಯಕ್ಷ ಗೌಸ್ ಮುನೀರ್, ಆಚರಣಾ ಸಮಿತಿ ಕಾರ್ಯದರ್ಶಿ ಅಭಿಜಿತ್ ಹೆಡದಾಳ್, ಖಜಾಂಚಿ ಸಿದ್ದೇಶ್ ಕೆಸವಳಲು, ಸಹಕಾರ್ಯದರ್ಶಿ ಡಾ. ಹರೀಶ್ ನಲ್ಕೆ, ಬಿಳಿಯಪ್ಪ, ಶಿವಪ್ರಸಾದ್, ರಮೇಶ್ ಮತ್ತಿತರರು ಉಪಸ್ಥಿತರಿದ್ದರು

Dr. B.R. Ambedkar Jayanti in a unique way

Share

Leave a comment

Leave a Reply

Your email address will not be published. Required fields are marked *

Don't Miss

ಅಜ್ಜಂಪುರ ತಾಲೂಕಿನ ಆಸಂಧಿ ಗ್ರಾಮದಲ್ಲಿ ರೈತರೊಬ್ಬರ ಎತ್ತಿನ ಗಾಡಿ ಕಳ್ಳತನ

ಅಜ್ಜಂಪುರ: ರೈತರೊಬ್ಬರ ಎತ್ತಿನ ಗಾಡಿ ಕಳ್ಳತನವಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ಆಸಂಧಿ ಗ್ರಾಮದಲ್ಲಿ ನಡೆದಿದೆ. ಮಲ್ಲಪ್ಪ ಎಂಬುವವರು ಕಳೆದುಹೋದ ತಮ್ಮ ಕಬ್ಬಿಣದ ಎತ್ತಿನ ಗಾಡಿಗಾಗಿ ದೂರು ನೀಡಿದ್ದು, ಪೊಲೀಸರು...

ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಕಳ್ಳತನ

ಶೃಂಗೇರಿ: ತಾಲೂಕಿನ ಕಿಗ್ಗಾ ಸಮೀಪದ ಯಡದಳ್ಳಿ ಗ್ರಾಮದ ಕೊಚ್ಚಾರಿನಲ್ಲಿರುವ ಐತಿಹಾಸಿಕ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಕಳ್ಳತನ ನಡೆದಿದ್ದು, ದೈವ ಸನ್ನಿಧಿಯಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಬೆಳ್ಳಿಯ ಆಭರಣಗಳು ಹಾಗೂ ಕಾಣಿಕೆ...

Related Articles

ಮಹಿಳಾ ವಿರೋಧಿ ಕಾಂಗ್ರೆಸ್ ಪಕ್ಷದ ನಡೆ ಖಂಡಿಸಿ ಮಹಿಳೆಯರು ಪ್ರತಿಭಟನೆ

ಚಿಕ್ಕಮಗಳೂರು: ಲೋಕಸಭಾ ಸ್ಥಾನದಲ್ಲಿ ಮಹಿಳೆಯರಿಗೆ ಶೇ.೩೩ ಮೀಸಲಾತಿ ಮಂಡನೆ ಅನುಷ್ಟಾನ ಗೊಳಿಸದಂತೆ ತಡೆಹಿಡಿದ ಮಹಿಳಾ ವಿರೋಧಿ...

ಲವ್ ಜಿಹಾದ್ ಖಂಡಿಸಿ ನಗರದಲ್ಲಿ ಪ್ರತಿಭಟನೆ

ಚಿಕ್ಕಮಗಳೂರು: ರಾಜ್ಯ ಹಾಗೂ ದೇಶದ ಹಲವೆಡೆ ನಡೆಯುತ್ತಿರುವ ಲವ್ ಜಿಹಾದ್ ಹಾಗೂ ಕಾರ್ಪೊರೇಟ್ ಜಿಹಾದ್‌ನಂತಹ ಕೃತ್ಯಗಳನ್ನು...

ತಾಂಡಗಳಿಗೆ ಕಾಂಗ್ರೆಸ್ ಶಾಸಕರ ಭೇಟಿ ಪ್ರವೇಶ ನಿಷೇಧ ಫಲಕ ಅಳವಡಿಕೆ

ಚಿಕ್ಕಮಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಳಮೀಸಲಾತಿಯಲ್ಲಿ ಬಂಜಾರ ಸಮುದಾಯಕ್ಕೆ ಅನ್ಯಾಯ ಮಾಡಿದ್ದಾರೆ. ಕಾಂಗ್ರೆಸ್ ಶಾಸಕರು ನಮ್ಮ...

ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಮೂಡಿಗೆರೆ: ತಂದೆ ಬೈದರು ಎಂಬ ಕ್ಷುಲ್ಲಕ ಕಾರಣಕ್ಕೆ ಅವಿವಾಹಿತೆ ಯುವತಿಯೋರ್ವರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ...