Home namma chikmagalur chikamagalur ಡಾ.ಪ್ರದೀಪ್ ಕೆಂಜಿಗೆ ಕೃತಿಗೆ ಅತ್ಯುತ್ತಮ ಪುಸ್ತಕ ಪ್ರಶಸ್ತಿ
chikamagalurHomeLatest Newsnamma chikmagalur

ಡಾ.ಪ್ರದೀಪ್ ಕೆಂಜಿಗೆ ಕೃತಿಗೆ ಅತ್ಯುತ್ತಮ ಪುಸ್ತಕ ಪ್ರಶಸ್ತಿ

Share
Share

ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆಯ ಸೃಜನಶೀಲ ಲೇಖಕ ಹಾಗೂ ಸೂಕ್ಷ್ಮಮತಿಯ ಮಾತುಗಾರ ಡಾ.ಪ್ರದೀಪ್ ಕೆಂಜಿಗೆ ಅವರ ನರವಾನರ ಕೃತಿಗೆ ಕನ್ನಡ ಸಾಹಿತ್ಯ ಅಕಾಡೆಮಿಯಿಂದ ಕೊಡಮಾಡುವ 2024ನೇ ಸಾಲಿನ ಅತ್ಯುತ್ತಮ ಪುಸ್ತಕ ಪ್ರಶಸ್ತಿಗೆ ಭಾಜನವಾಗಿದೆ.

ಈ ಪುರಸ್ಕಾರಕ್ಕೆ ರಾಜ್ಯದಂತಒಟ್ಟು 17 ಪುಸ್ತಕ ಗಳು ಆಯ್ಕೆಯಾಗಿದ್ದು ಅದರಲ್ಲಿ ಚಿಕ್ಕಮಗಳೂರು ಜಿಲ್ಲೆಯ ಡಾ. ಪ್ರದೀಪ್ ಕೆಂಜಿಗೆ ಮತ್ತು ಶಶಿ ತರೀಕೆರೆ ಈ ಎರಡು ಜನ ಕೃತಿಕಾರ ಎರಡು ಪುಸ್ತಕಗಳಿಗೆ ಈ ಮನ್ನಣೆ ಲಭಿಸಿರುವುದು ಜಿಲ್ಲೆಯ ವಿಷೇಶತೆಯಾಗಿದೆ.

2024ನೇ ಇಸವಿಯಲ್ಲಿ ಪ್ರಕಟವಾದ ವಿವಿಧ 17 ಸಾಹಿತ್ಯ ಪ್ರಕಾರದ ಕೃತಿಗಳಿಗೆ ವಿಮರ್ಶಕರ ಅಭಿಪ್ರಾಯಗಳನ್ನು ಆಧರಿಸಿ ಅತ್ಯುತ್ತಮ ಕೃತಿಗಳೆಂದು ಪರಿಗಣಿಸಿ ಆಯ್ಕೆ ಮಾಡಲಾಗಿದ್ದು ಸಂಕೀರ್ಣ ಪ್ರಕಾರದಲ್ಲಿ ಡಾ.ಪ್ರದೀಪ್ ಕೆಂಜಿಗೆ ಅವರ ನರವಾನರ ಕೃತಿಗೆ ಅತ್ಯುತ್ತಮ ಪುಸ್ತಕ ಪ್ರಶಸ್ತಿ ದೊರೆತಿದೆ.

ಪ್ರಶಸ್ತಿ 25 ಸಾವಿರ ನಗದು ಬಹುಮಾನ,ಶಾಲು. ಹಾರ ಫಲಕ ಪ್ರಮಾಣ ಪತ್ರವನ್ನು ಒಳಗೊಂಡಿದೆ.

ನರವಾನರ ಕೃತಿ ಚಿಂಪಾoಜಿಗಳ ನಡವಳಿಕೆ, ಜೀವನವಿಧಾನ ಮುಂತಾದವುಗಳನ್ನು ವಿಶ್ಲೇಷಿಸುವ ವೈಜ್ಞಾನಿಕ ಕೃತಿಯಾಗಿದ್ದು ಜೀವ ವಿಜ್ಞಾನದ ಸಂಶೋಧನೆಗಳನ್ನು, ಹಲವಾರು ವಿಸ್ಮಯಕಾರಿ ಸಂಗತಿಗಳನ್ನು ಮನಮುಟ್ಟುವಂತೇ ಈ ಕೃತಿಯಲ್ಲಿ ಕಟ್ಟಿಕೊಟ್ಟಿದ್ದಾರೆ.

ಡಾ.ಪ್ರದೀಪ್ ಕೆಂಜಿಗೆ ಅವರು ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಅವರೊಡನೆ ಪ್ಯಾಪಿಲಾನ್ 1. 2, ವಿಸ್ಮಯ 1 2 3 ಕೃತಿಗಳನ್ನು ರಚಿಸಿದ್ದು ಪ್ಯಾಪಿಯೋನ್ 3, ಬರ್ಮುಡಾ ಟ್ರಯಾ0ಗಲ್ ಒಂದು ಅದ್ಭುತಯಾನವಾಗಿದೆ.

ಹೆಬ್ಬಾವಿನೊಡನೆ ಹೋರಾಟ ಕೃತಿಯನ್ನು ಸಹ ಪ್ರಕಟಿಸಿದ್ದಾರೆ. ಪಶ್ಚಿಮ ಘಟ್ಟಗಳ ಜೀವ ವೈವಿಧ್ಯತೆ ಹಾಗೂ ಅದರ ಮೇಲೆ ಕ್ರಿಮಿನಾಶಕಗಳ ದುಷ್ಪರಿಣಾಮಗಳ ಅಧ್ಯಯನದಲ್ಲಿ ಡಾ. ಪ್ರದೀಪ್ ಕೆಂಜಿಗೆ ಅವರು ಮಹಾಪ್ರಬಂಧ ಮಂಡಿಸಿ ಪಿಎಚ್‌ಡಿ ಪಡೆದಿದ್ದಾರೆ.

ಕೆಫೆ ಕಾಫಿ ಡೇಯಲ್ಲಿ ಸಂಶೋಧನಾ ಮತ್ತು ಅಭಿವೃದ್ದಿ ವಿಭಾಗದ ಮುಖ್ಯ ವಿಜ್ಞಾನಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಪ್ರಸ್ತುತ ಕೊಟ್ಟಿಗೆಹಾರದಲ್ಲಿರುವ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ಅಧ್ಯಕ್ಷರಾಗಿ ಕೂಡ ಸೇವೆ ಸಲ್ಲಿಸುತ್ತಿದ್ದಾರೆ.

Dr. Pradeep Kenji wins best book award for his work

Share

Leave a comment

Leave a Reply

Your email address will not be published. Required fields are marked *

Don't Miss

ಶೃಂಗೇರಿ ಜೆಎಂಎಫ್ಸಿ ನ್ಯಾಯಾಲಯಕ್ಕೆ ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿ

ಶೃಂಗೇರಿ: ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿಯನ್ನು ಕೇರಳ ಪೊಲೀಸರು ಶೃಂಗೇರಿ ಜೆಎಂಎಫ್ಸಿ ನ್ಯಾಯಾಲಯಕ್ಕೆ ಶುಕ್ರವಾರ  ಹಾಜರುಪಡಿಸಿದರು. ಶೃಂಗೇರಿ ತಾಲೂಕಿನ ಬುಕ್ಕಡಿಬೈಲು ಗ್ರಾಮದ ನಿವಾಸಿಯಾಗಿರುವ ಬಿ.ಜಿ. ಕೃಷ್ಣಮೂರ್ತಿ ವಿರುದ್ಧ ಕರ್ನಾಟಕದಲ್ಲಿ ಒಟ್ಟು 54...

ವಾಹನಗಳ ಮಿರರ್ ತಗುಲಿ-ಕತ್ತಿ-ಬಂದೂಕು ಝಳಪಿಸಿದ ಗಲಾಟೆ

ಚಿಕ್ಕಮಗಳೂರು: ವಾಹನಗಳ ಮಿರರ್ ಪರಸ್ಪರ ತಗುಲಿದ ಸಣ್ಣ ವಿಚಾರ ಕತ್ತಿ-ಬಂದೂಕು ಝಳಪಿಸುವ ಹಂತಕ್ಕೆ ತಲುಪಿರುವ ಆರೋಪವೊಂದು ಚಿಕ್ಕಮಗಳೂರು ತಾಲೂಕಿನ ಆಲ್ಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಸರವಳ್ಳಿ ಗ್ರಾಮದಲ್ಲಿ ಜುಲೈ 2...

Related Articles

ಮಹಿಳೆ ಗಮನ ಬೇರೆಡೆ ಸೆಳೆದು ₹ 3.90 ಲಕ್ಷ ವಂಚನೆ

ಕಡೂರು: ಕಳೆದ ಜೂನ್‌ನಲ್ಲಿ ಗಮನ ಬೇರೆಡೆಗೆ ಸೆಳೆದು ಗ್ರಾಹಕರೋರ್ವರ ಖಾತೆಯಿಂದ ₹3.90 ಲಕ್ಷಡ್ರಾ ಮಾಡಿರುವ ಪ್ರಕರಣ...

ಶಿವಮೊಗ್ಗ-ಶೃಂಗೇರಿ ಮಾರ್ಗ ಪರಿಗಣಿಸಿ

ಚಿಕ್ಕಮಗಳೂರು: ನೂತನ ರೈಲ್ವೆ ಯೋಜನೆಗೆ ಅಂತಿಮ ಸ್ಥಳ ನಿರ್ಧಾರ ಸಮೀಕ್ಷೆ ಮಾಡುವ ವೇಳೆ ಶಿವಮೊಗ್ಗ, ಭದ್ರಾವತಿ,...

ಕವಿಕಲ್ ಮಠದ ರಸ್ತೆಯಲ್ಲಿ ಹುಲಿ ದಿಢೀರನೆ ಪ್ರತ್ಯಕ್ಷ

ಚಿಕ್ಕಮಗಳೂರು: ಕಾಫಿನಾಡಿನ ಹಸಿರು ಕಾಡುಗಳ ನಡುವೆ ಸಂಚರಿಸುತ್ತಿದ್ದ ಪ್ರವಾಸಿಗರಿಗೆ ಮರೆಯಲಾಗದ ಅನುಭವವೊಂದು ಎದುರಾಗಿದೆ. ಚಿಕ್ಕಮಗಳೂರು ತಾಲೂಕಿನ...

ಭದ್ರಾ ಜಲಾಶಯದ ನೀರು ಕುಡಿಯುವ ಉದ್ದೇಶಕ್ಕೆ ಮಾತ್ರ ಬಳಸಲು ಸೂಚನೆ

ಚಿಕ್ಕಮಗಳೂರು: ಪ್ರಸಕ್ತ ಸಾಲಿನಲ್ಲಿ ಮುಂಗಾರು ಮಳೆಯ ತೀವ್ರ ಕೊರತೆಯಿಂದಾಗಿ ಜಲಾಶಯಗಳಲ್ಲಿ ನೀರಿನ ಮಟ್ಟ ಗಣನೀಯವಾಗಿ ಕುಸಿಯುತ್ತಿದ್ದು,...