Home namma chikmagalur chikamagalur ಅಪಘಾತದಲ್ಲಿ ಸಾವು: ಚಾಲಕನಿಗೆ 9 ತಿಂಗಳು ಸಜೆ
chikamagalurHomeLatest Newsnamma chikmagalur

ಅಪಘಾತದಲ್ಲಿ ಸಾವು: ಚಾಲಕನಿಗೆ 9 ತಿಂಗಳು ಸಜೆ

Share
Share

ಚಿಕ್ಕಮಗಳೂರು: ಅತೀ ವೇಗ ಮತ್ತು ಅಜಾಗರೂಕತೆಯಿಂದ ಕಾರು ಚಾಲನೆ ಮಾಡಿ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಮೃತಪಟ್ಟು ಇನ್ನಿಬ್ಬರು ಗಾಯಗೊಂಡ ಘಟನೆಗೆ ಸಂಬಂಧಿಸಿದಂತೆ ಚಾಲಕನಿಗೆ ನಗರದ ಒಂದನೇ ಅಧಿಕ ಹಿರಿಯ ಸಿ.ಜೆ. ಮತ್ತು ಜೆ.ಎಂ.ಎಂ.ಸಿ. ನ್ಯಾಯಾಲಯವು ೯ ತಿಂಗಳ ಕಾರಾಗೃಹ ಶಿಕ್ಷೆ ವಿಧಿಸಿ ತೀರ್ಪಿತ್ತಿದೆ.

ಬೇಲೂರು ತಾಲ್ಲೂಕು ಬಿಳುಗುಲಿ ಗ್ರಾಮದ ಬಿ.ಎಸ್.ಮೋಹಿತ್ ಎಂಬಾತನೇ ಶಿಕ್ಷೆಗೆ ಒಳಗಾದ ವ್ಯಕ್ತಿ. ಈತ ೨೦೨೩ರ ಮಾರ್ಚ್ ೨೩ರ ರಾತ್ರಿ ವಿವೇಕ್ ಮುನ್ಸಿ, ದರ್ಶನ್ ಆರಾಧ್ಯ ಹಾಗೂ ಕಾರ್ತಿಕ್ ಎಂಬುವವರೊಂದಿಗೆ ನಗರದ ಹೌಸಿಂಗ್ ಬೋರ್ಡ್‌ನ ಟೀಚರ್‍ಸ್ ಕಾಲೋನಿಯಿಂದ ಕಣಿವೆದಾಸರಹಳ್ಳಿಗೆ ತೆರಳಿ ಮರಳುತ್ತಿದ್ದಾಗ ರಸ್ತೆಯ ಇಳಿಜಾರಿನಲ್ಲಿ ಅಜಾಗರೂಕತೆಯಿಂದ ಕಾರು ಚಲಾಯಿಸಿದ ಪರಿಣಾಮವಾಗಿ ನಿಯಂತ್ರಣ ತಪ್ಪಿದ ಕಾರು ಫಾರೆಸ್ಟ್ ಗೇಟ್ ಸಮೀಪ ಮಗುಚಿ ಬಿದ್ದಿತೆನ್ನಲಾಗಿದೆ.

ಘಟನೆಯಲ್ಲಿ ಮುಂದಿನ ಸೀಟಿನಲ್ಲಿ ಕುಳಿತಿದ್ದ ವಿವೇಕ್ ಮುನ್ಸಿ ತೀವ್ರ ಗಾಯಗೊಂಡು ಸ್ಥಳದಲ್ಲೇ ಸಾವಿಗೀಡಾದರೆ, ಹಿಂದಿನ ಸೀಟಿನಲ್ಲಿದ್ದ ದರ್ಶನ್ ಆರಾಧ್ಯ ಮತ್ತು ಕಾರ್ತಿಕ್ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದರು. ಈ ಬಗ್ಗೆ ಗ್ರಾಮಾಂತರ ಪೊಲೀಸರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಈ ಬಗ್ಗೆ ಒಂದನೇ ಅಧಿಕ ಹಿರಿಯ ಸಿ.ಜೆ. ಮತ್ತು ಜೆ.ಎಂ.ಎಂ.ಸಿ. ನ್ಯಾಯಾಲಯದ ನ್ಯಾಯಾಧೀಶರಾದ  ದ್ಯಾವಪ್ಪ ಅವರು ವಿಚಾರಣೆ ನಡೆಸಿದ ಸಂದರ್ಭ ಮೋಹಿತ್ ವಿರುದ್ಧ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಆಗಸ್ಟ್ ೧ ರಂದು ತೀರ್ಪು ನೀಡಿದ್ದು, ಆರೋಪಿಗೆ ೯ ತಿಂಗಳು ಕಾರಾಗೃಹ ಶಿಕ್ಷೆ ಹಾಗೂ ೪ ಸಾವಿರ ರೂ. ದಂಡ ವಿಧಿಸಿದ್ದಾರೆ. ದಂಡ ತೆರಲು ತಪ್ಪಿದಲ್ಲಿ ಮತ್ತೆ ೬೦ ದಿನಗಳ ಕಾರಾಗೃಹ ಶಿಕ್ಷೆ ಅನುಭವಿಸುವಂತೆ ತೀರ್ಪಿನಲ್ಲಿ ಆದೇಶಿಸಿದ್ದಾರೆ.

ಪ್ರಕರಣದಲ್ಲಿ ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಕವಿತಾ ಎಚ್.ಡಿ. ಅವರು ವಾದ ಮಂಡಿಸಿದ್ದರು. ಗ್ರಾಮಾಂತರ ಪೊಲೀಸರು ಸಾಕ್ಷಿದಾರರನ್ನು ಸಮರ್ಪಕವಾಗಿ ನ್ಯಾಯಾಲಯಕ್ಕೆ ಹಾಜರುಪಡಿಸಿ ಸಹಕರಿಸಿದ್ದರು.

Driver sentenced to 9 months in prison for death in accident

Share

Leave a comment

Leave a Reply

Your email address will not be published. Required fields are marked *

Don't Miss

ಮರು ಮತ ಎಣಿಕೆಯಲ್ಲಿ ಗಾಯತ್ರಿ ಶಾಂತೇಗೌಡಗೆ 9 ಮತಗಳ ಗೆಲವು

ಚಿಕ್ಕಮಗಳೂರು:  ಚಿಕ್ಕಮಗಳೂರು ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿದ ಮಹತ್ವದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ಇಂದು ಐತಿಹಾಸಿಕ ತೀರ್ಪು ನೀಡಿದೆ. ನ್ಯಾಯಮೂರ್ತಿ ಎಸ್.ಜಿ. ಪಂಡಿತ್ ಅವರಿದ್ದ ಏಕಸದಸ್ಯ...

ಎನ್‌ಆರ್‌ಪುರ, ಶೃಂಗೇರಿ – ಕೊಪ್ಪ ತಾಲ್ಲೂಕಿನ ಶಾಲೆಗಳಿಗೆ ಇಂದು ರಜೆ

ಚಿಕ್ಕಮಗಳೂರು: ಮಲೆನಾಡು ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆ, ಪ್ರವಾಹ ಹಾಗೂ ಭೂಕುಸಿತದ ಆತಂಕದ ಹಿನ್ನೆಲೆಯಲ್ಲಿ ಜಿಲ್ಲೆಯ ನರಸಿಂಹರಾಜಪುರ, ಶೃಂಗೇರಿ ಮತ್ತು ಕೊಪ್ಪ ತಾಲ್ಲೂಕುಗಳ ಎಲ್ಲ ಅಂಗನವಾಡಿ ಕೇಂದ್ರಗಳು,...

Related Articles

ಪೆಟ್ರೋಲ್ ಬಂಕ್ ಅಳತೆಯಲ್ಲಿ ಮೋಸ ಮಾಡುತ್ತಿರುವ ಆರೋಪ

ಚಿಕ್ಕಮಗಳೂರು: ಪೆಟ್ರೋಲ್ ಬಂಕ್‌ನಲ್ಲಿ ಗ್ರಾಹಕರಿಗೆ ಅಳತೆಯಲ್ಲಿ ಮೋಸ ಮಾಡುತ್ತಿರುವ ಆರೋಪ ಚಿಕ್ಕಮಗಳೂರು ಕೆಎಸ್‌ಆರ್‌ಟಿಸಿ (KSRTC) ಬಸ್...

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಸಂಭಾವ್ಯ ಪಟ್ಟಿ ಪ್ರಕಟ

ಚಿಕ್ಕಮಗಳೂರು: ಜಿಲ್ಲಾಡಳಿತ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳ ಕಾರ್ಯಾಲಯವು ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯ...

ಸಾಲದ ಹಣ ಕೇಳಿದ್ದಕ್ಕೆ ಹಲ್ಲೆ; ತಾಯಿ-ಮಗನ ವಿರುದ್ಧ ಪ್ರಕರಣ

ಕಡೂರು: ಸಾಲವಾಗಿ ನೀಡಿದ್ದ ₹50 ಸಾವಿರವನ್ನು ಹಿಂದಿರುಗಿಸುವಂತೆ ಕೇಳಿದ್ದಕ್ಕೆ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದಡಿ...

ಹುಬ್ಬಳ್ಳಿಯಲ್ಲಿ ಆಗಸ್ಟ್ 9ರಂದು ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ

ಚಿಕ್ಕಮಗಳೂರು: ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್ ಹಾಗೂ ಆದಿವಾಸಿ ಹರಣ ಶಿಖಾರಿ ಪಾರಿ ಸಮಾಜ ಕ್ಷೇಮಾಭಿವೃದ್ಧಿ...