Home Crime News ಡ್ರೋನ್ ಅವಿ ಸಾವು : ಸಿ.ಟಿ ರವಿಗೆ ಯಡವಟ್ಟುಗಳ ಸೂಚನೆ ನಾ ?
Crime News

ಡ್ರೋನ್ ಅವಿ ಸಾವು : ಸಿ.ಟಿ ರವಿಗೆ ಯಡವಟ್ಟುಗಳ ಸೂಚನೆ ನಾ ?

Share
Share

ಚಿಕ್ಕಮಗಳೂರು : ಲಕ್ಷ್ಮಿ ಹೆಬ್ಬಾಳ್ಕರ್ ಗೆ ಅಶ್ಲೀಲ ಪದ ಬಳಕೆ ನಂತರ ಸಿ.ಟಿ ರವಿ ಗ್ರಹಚಾರ ಯಡವಟ್ಟುಗಳ ಸರಮಾಲೆಯಾಗಿ ಪರಿಣಮಿಸಿದಂತೆ ಗೋಚರಿಸುತ್ತಿದೆ. ಪೊಲೀಸರ ಬಂಧನದ ನಂತರ ತಲೆಗೆ ಬಿದ್ದ ಪೆಟ್ಟು, ತವರಿಗೆ ವಾಪಸ್ ಆದ ದಿನ ಆಂಬುಲೆನ್ಸ್ ದುರ್ಬಳಕೆ,, ಭದ್ರತೆಗಾಗಿ ಎಸ್ಕಾರ್ಟ್ ಪಡೆದಿದ್ದ ವಿಷಯಗಳ ಜೊತೆಗೆ ಇದೀಗ ಕಾರ್ಯಕರ್ತರ ಅದ್ದೂರಿ ಸ್ವಾಗತದ ವೇಳೆ ಸಿ.ಟಿ ರವಿ ಮನೆ ಎದುರು ಕುಸಿದು ಬಿದ್ದ ಡ್ರೋನ್ ಛಾಯಾಗ್ರಾಹಕನ ಸಾವು ಹೊಸ ಸೇರ್ಪಡೆಯಾಗಿದೆ.

ಸಿ.ಟಿ ರವಿ ಕಳೆದ ಶನಿವಾರ ನಗರಕ್ಕೆ ಆಗಮಿಸಿದ ವೇಳೆ ರಾತ್ರಿಯಿಡೀ ಮೆರವಣಿಗೆ ನಡೆದಿತ್ತು ಈ ವೇಳೆ ಖಾಸಗಿ ವಾಹಿನಿಯ ಐ.ಬಿ ವಾಹನದ ಮೇಲಿಂದ ಬಿದ್ದಿದ್ದ ಡ್ರೋನ್ ಛಾಯಾಗ್ರಾಹಕ ಅವಿನಾಶ್ ಇಂದು ಸಾವನ್ನಪ್ಪಿದ್ದಾನೆ.
ಕಳೆದೊಂದು ವಾರದಿಂದ ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದ ಅವಿನಾಶ್ ಇಂದು ಕೊನೆಯುಸಿರೆಳೆದಿದ್ದಾನೆ.

ಬಿಜೆಪಿ ಕಾರ್ಯಕರ್ತರು ಸಿ.ಟಿ.ರವಿಗೆ ಸ್ವಾಗತ ಕೋರುವ ದಿನ ಲೈವ್ ವಾಹನದ ಮೇಲಿಂದ ಬಿದ್ದಿದ್ದ
ಅವಿನಾಶ್ (26) ಇಂದು ಮುಂಜಾನೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಬೆಳಗಾವಿಯಲ್ಲಿ ಬಂಧನದ ಬಳಿಕ ಬಿಡುಗಡೆಯಾಗಿ ಕಳೆದ ಶನಿವಾರ ಚಿಕ್ಕಮಗಳೂರಿಗೆ ಬಂದಿದ್ದ ಸಿ.ಟಿ.ರವಿ ಸುದ್ದಿ ಪ್ರಸಾರಕ್ಕೆ ಅಂದು ಖಾಸಗಿ ಚಾನಲ್ ವಾಹನದ ಮೇಲೆ ನಿಂತು ಡ್ರೋನ್ ಹಾರಿಸುತ್ತಿದ್ದ ಅವಿನಾಶ್ ಗೆ ಮೈಲ್ಡ್ ಹಾರ್ಟ್ ಅಟ್ಯಾಕ್ ಆಗಿತ್ತು, ಬಸವನಹಳ್ಳಿ ಮುಖ್ಯ ರಸ್ತೆಯ ಸಿ.ಟಿ ರವಿ ಮನೆ ಎದುರು ನಿಲ್ಲಿಸಿದ್ದ ವಾಹನದ ಮೇಲಿಂದ ಬಿದ್ದಿದ್ದ ಅವಿನಾಶ್ ನನ್ನು ಕೂಡಲೇ ಕೆ.ಆರ್.ಎಸ್. ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಸಿ.ಟಿ ರವಿ ಕೂಡ ಆಸ್ಪತ್ರೆಗೆ ಹೋಗಿ ಅವಿನಾಶ್ ಆರೋಗ್ಯ ವಿಚಾರಿಸಿದ್ರು
ಚಿಕಿತ್ಸೆಗಾಗಿ ಶಿವಮೊಗ್ಗ, ಮೈಸೂರು, ಬೆಂಗಳೂರಿಗೆ ಆತನನ್ನು ರವಾನೆ ಮಾಡಲಾಗಿತ್ತು, ಆದರೆ ಇಂದು ಬೆಳಿಗ್ಗೆ ಚಿಕಿತ್ಸೆ ಫಲಕಾರಿಯಾಗಿದೆ ಅವಿನಾಶ್ ಸಾವನ್ನಪ್ಪಿದ್ದಾನೆ.

Share

Leave a comment

Leave a Reply

Your email address will not be published. Required fields are marked *

Don't Miss

30 ಲಕ್ಷ ರೂಪಾಯಿ ಹಣ ನೀಡುವಂತೆ ಬ್ಲಾಕ್‌ ಮೆಲ್

ಚಿಕ್ಕಮಗಳೂರು: ಎಡಿಟ್ ಮಾಡಿದ ಗೃಹಿಣಿಯೊಬ್ಬರ ಫೋಟೋಗಳನ್ನು ಅವರ ಮೊಬೈಲ್‌ಗೇ ಕಳುಹಿಸಿ, ಬರೋಬ್ಬರಿ 30 ಲಕ್ಷ ರೂಪಾಯಿ ಹಣ ನೀಡುವಂತೆ ಕಿಡಿಗೇಡಿಗಳು ಬೇಡಿಕೆಯಿಟ್ಟಿದ್ದ ಘಟನೆ ಬೆಳಕಿಗೆ ಬಂದಿದೆ. ಒಂದು ವೇಳೆ ಹಣ ನೀಡದಿದ್ದರೆ...

ವಿವಾಹಿತ ಮಹಿಳೆಗಾಗಿ ನಡೆದ ಜಗಳದಲ್ಲಿ ಕೈ ಕಟ್

ಎನ್.ಆ‌ರ್.ಪುರ: ವಿವಾಹಿತ ಮಹಿಳೆಯೊಬ್ಬರಿಗಾಗಿ ಇಬ್ಬರು ವ್ಯಕ್ತಿಗಳು ಲಾಂಗು ಮಚ್ಚಿನಿಂದ ಬಡಿದಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆ‌ರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಅಡಿಗೆಬೈಲು ಗ್ರಾಮದಲ್ಲಿ ನಡೆದಿದೆ. ಗಂಡನಿಂದ ದೂರವಿದ್ದ ಮಹಿಳೆಯೊಬ್ಬರ ವಿಚಾರವಾಗಿ ಶೇಷಗಿರಿ...

Related Articles

ಅತ್ತಿಗೆಯನ್ನೇ ಹತ್ಯೆಗೈದ ಆರೋಪಿಗೆ 7 ವರ್ಷಗಳ ಕಠಿಣ ಜೈಲು ಶಿಕ್ಷೆ

ಚಿಕ್ಕಮಗಳೂರು:  ಜಿಲ್ಲೆಯ ತರೀಕೆರೆ ತಾಲ್ಲೂಕಿನ ಬಾವಿಕೆರೆ ಗ್ರಾಮದಲ್ಲಿ ನಡೆದಿದ್ದ ಭೀಕರ ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ, ಅತ್ತಿಗೆಯನ್ನೇ...

ಗಾಂಜಾ ಸೇವಿಸಿ ರಂಪಾಟ – ಏಳು ಮಂದಿ ಬಂಧನ

ಚಿಕ್ಕಮಗಳೂರು: ಜಿಲ್ಲೆಯಾದ್ಯಂತ ಮಾದಕ ದ್ರವ್ಯ ಸೇವನೆ ವಿರುದ್ಧ ಪೊಲೀಸರು ವಿಶೇಷ ಕಾರ್ಯಾಚರಣೆ ಚುರುಕುಗೊಳಿಸಿದ್ದು ಸಾರ್ವಜನಿಕ ಸ್ಥಳಗಳಲ್ಲಿ...

ಎಐಟಿ ವೃತ್ತದ ಬಳಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಎಐಟಿ ವೃತ್ತದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಚೇರಿಯಿಂದ ಮೋಟಾರ್ ಸೈಕಲ್‌ನಲ್ಲಿ...

ಜಿಲ್ಲಾ ಆಟದ ಮೈದಾನದ ಬಳಿ ಎ.ಎಸ್.ಐ ಮೇಲೆ ಹಲ್ಲೆ

ಚಿಕ್ಕಮಗಳೂರು: ಜಿಲ್ಲಾ ಆಟದ ಮೈದಾನದ ಗೇಟ್ ಮುಂಭಾಗದ ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮಹೀಂದ್ರ ಥಾರ್ ಜೀಪನ್ನು...