Home ರೈಲಿನಲ್ಲಿ 2.16 ಲಕ್ಷ ರೂ ಮೌಲ್ಯದ ಮಾದಕ ವಸ್ತು ಪತ್ತೆ
Home

ರೈಲಿನಲ್ಲಿ 2.16 ಲಕ್ಷ ರೂ ಮೌಲ್ಯದ ಮಾದಕ ವಸ್ತು ಪತ್ತೆ

Share
Share

ಚಿಕ್ಕಮಗಳೂರು: “ಆಪರೇಷನ್ ನಾರ್ಕೋಸ್” ಎಂಬ ವಿಶೇಷ ಕಾರ್ಯಚರಣೆಯ ಅಡಿಯಲ್ಲಿ, ನೈಋತ್ಯ ರೈಲ್ವೆ ಮೈಸೂರು ವಿಭಾಗದ ರೈಲ್ವೆ ರಕ್ಷಣಾ ಪಡೆಯ (ಆರ್‌ಪಿಎಫ್) ವಿಶೇಷ ತಂಡವು ನಡೆಸಿದ ತಪಾಸಣೆಯಲ್ಲಿ 2.16 ಲಕ್ಷ ರೂ ಮೌಲ್ಯದ ಮಾದಕ ವಸ್ತು ದೊರಕಿದೆ.

ರೈಲು ಸಂಖ್ಯೆ 18111 ಟಾಟಾ – ಯಶವಂತಪುರ ಎಕ್ಸ್‌ಪ್ರೆಸ್‌ ನಲ್ಲಿ ಬೀರೂರು ಮತ್ತು ಕಡೂರು ನಿಲ್ದಾಣಗಳ ನಡುವೆ ತಪಾಸಣೆ ನಡೆಸಿದ ವೇಳೆ ಮಾದಕ ವಸ್ತುಗಳು ಪತ್ತೆಯಾಗಿವೆ. ತಂಡವು ಜನರಲ್ ಕೋಚ್ ಸಂಖ್ಯೆ SWR 247321 ರಲ್ಲಿ ಪ್ರಾಥಮಿಕ ತನಿಖೆ ವೇಳೆ ವಾರಸುದಾರರು ಇಲ್ಲದ ಬ್ಯಾಗ್ ಪತ್ತೆಯಾಗಿದೆ.

ಅನುಮಾನಾಸ್ಪದ ರೀತಿಯಲ್ಲಿದ್ದ ಬ್ಯಾಗ್ ತೆರೆಯಲಾಗಿದ್ದು, ಅದರಲ್ಲಿ ಸುಮಾರು ₹1,25,000 ಮೌಲ್ಯದ 25 ಗ್ರಾಂ ಎಂಡಿಎಂಎ (ಕೃತಕ ಮಾದಕ ವಸ್ತು), ₹90,000 ಮೌಲ್ಯದ 1.522 ಕೆ.ಜಿ ಗಾಂಜಾ ಮತ್ತು ₹1,850 ಮೌಲ್ಯದ 210 ಗ್ರಾಂ ತೂಕದ 37 ಭಾಂಗ್ ಚಾಕೊಲೇಟ್‌ಗಳನ್ನು ಪತ್ತೆಯಾಗಿದೆ. ವಶಪಡಿಸಿಕೊಂಡ ಮಾದಕ ವಸ್ತುಗಳ ಒಟ್ಟು ಅಂದಾಜು ಮೌಲ್ಯ ₹2,16,850.

ಈ ಬ್ಯಾಗ್ ಅನ್ನು ಆರ್‌ಪಿಎಫ್ ತಂಡವು ಕಡೂರು ಅಬಕಾರಿ ಇಲಾಖೆಗೆ ಹಸ್ತಾಂತರಿಸಿದೆ. ಈ ಕಾರ್ಯಚರಣೆ ಮೈಸೂರು ವಿಭಾಗದ ಹಿರಿಯ ವಿಭಾಗೀಯ ಸುರಕ್ಷತಾ ಆಯುಕ್ತರಾದ ಶ್ರೀ ಸ್ಯಾಮ್ ಪ್ರಸಾಂತ್ ಜೆ.ಆರ್. ಅವರ ನೇತೃತ್ವದಲ್ಲಿ ನಡೆಯಿತು. ಈ ತಂಡದಲ್ಲಿ ಆನಂದ ಬಿ. (ASI/CIB/MYS, ಕ್ರೈಮ್ ಪ್ರಿವೆನ್ಷನ್ ಡಿಟೆಕ್ಷನ್ ತಂಡದ ಉಸ್ತುವಾರಿ), ಶಿವಾನಂದ ಟಿ, ಹೆಡ್ ಕಾನ್ಸ್ಟೇಬಲ್, ಸಿ. ವೆಂಕಟೇಶ (ASI/RPF/RRB) ಇದ್ದರು.

Drugs worth Rs 2.16 lakh found on train

Share

Leave a comment

Leave a Reply

Your email address will not be published. Required fields are marked *

Don't Miss

ಪದವಿ ಪೂರ್ವ ಕಾಲೇಜುಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟ

ಚಿಕ್ಕಮಗಳೂರು:  ಪರಿಶ್ರಮ ವಹಿಸಿದಾಗ ನಿಮ್ಮ ಭವಿಷ್ಯ ಸ್ವತಹಾ ನೀವೇ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು. ಅವರು ಇಂದು ರಾಮನಹಳ್ಳಿಯ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಶಾಲಾ ಶಿಕ್ಷಣ...

ನಗರಸಭೆ ನೂತನ ಉಪಾಧ್ಯಕ್ಷರಾಗಿ ಲಲಿತಾ ರವಿನಾಯ್ಕ ಅವಿರೋಧ ಆಯ್ಕೆ

ಚಿಕ್ಕಮಗಳೂರು:  ನಗರಸಭೆ ೩೫ನೇ ವಾರ್ಡಿನ ಕೆಂಪನಹಳ್ಳಿ ಬಡಾವಣೆಯ ಬಿಜೆಪಿ ಸದಸ್ಯೆ ಲಲಿತಾ ರವಿನಾಯ್ಕ ನಗರಸಭೆ ನೂತನ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿಯಾಗಿದ್ದ ಉಪವಿಭಾಗಾಧಿಕಾರಿ ಸುದರ್ಶನ್ ಘೋಷಿಸಿದರು. ಅವರು ಇಂದು ನಗರಸಭೆಯಲ್ಲಿ ಪಕ್ಷದ...

Related Articles

ಗಾಯಾಳಿಗೆ ಚಿಕಿತ್ಸೆ ನಿರಾಕರಿಸಿದರೆ 1 ಲಕ್ಷದವರೆಗೆ ದಂಡ

ಬೆಂಗಳೂರು: ರಸ್ತೆ ಅಪಘಾತದಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾದವರಿಗೆ, ಯಾವುದೇ ಮುಂಗಡ ಹಣ ಕೇಳದೆ ಚಿಕಿತ್ಸೆ ನೀಡಬೇಕು...

ಜಿಂಕೆ ಮಾಂಸ ವಶ – ಮೂವರು ಆರೋಪಿಗಳ ಬಂಧನ

ನರಸಿಂಹರಾಜಪುರ: ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಸುಬೂರು ಗ್ರಾಮದ ಆರಂಬಳ್ಳಿ ಅರಣ್ಯ ಪ್ರದೇಶದಲ್ಲಿ ಜಿಂಕೆ ಕೊಂದು...

ಕಾರ್ಪೋರೇಟ್ ಕಂಪನಿಗಳ ಆಸೆಗೆ ರೈತರು ಬಲಿಪಶು

ಚಿಕ್ಕಮಗಳೂರು:  ದೇಶದಲ್ಲಿ ರೈತ ವಿರೋಧಿ ಕಾಯ್ದೆಗಳು ಜಾರಿಗೊಂಡಲ್ಲಿ ಸಣ್ಣಪು ಟ್ಟ ಕೃಷಿಕರು ಬಹುರಾಷ್ಟ್ರೀಯ ಕಂಪನಿಗಳ ಅಡಿಯಾಳಾಗುತ್ತೇವೆ....

ಈದ್‌–ಮಿಲಾದ್ ಅಂಗವಾಗಿ ನಗರದಲ್ಲಿ ಬೃಹತ್‌ ಮೆರವಣಿಗೆ

ಚಿಕ್ಕಮಗಳೂರು: ಪ್ರವಾದಿ ಮಹಮ್ಮದ್ ಜನ್ಮದಿನದ ಅಂಗವಾಗಿ ನಗರದಲ್ಲಿ ಮುಸ್ಲಿಂ ಬಾಂಧವರು ಈದ್‌–ಮಿಲಾದ್ ಹಬ್ಬವನ್ನು ಶುಕ್ರವಾರ ಸಂಭ್ರಮದಿಂದ ಆಚರಣೆ...