Home namma chikmagalur chikamagalur ಕಂದಾಯ ಇಲಾಖೆಯ ಎಂಟು ಮಂದಿ ಅಧಿಕಾರಿಗಳ ಅಮಾನತು
chikamagalurHomeLatest Newsnamma chikmagalur

ಕಂದಾಯ ಇಲಾಖೆಯ ಎಂಟು ಮಂದಿ ಅಧಿಕಾರಿಗಳ ಅಮಾನತು

Share
Share
ಚಿಕ್ಕಮಗಳೂರು: ಕಡೂರು ತಾಲ್ಲೂಕಿನಲ್ಲಿ ಮಧ್ಯ ವಯಸ್ಸಿನವರಿಗೆ ಅಕ್ರಮವಾಗಿ ವೃದ್ಧಾಪ್ಯ ವೇತನ ಮಂಜೂರು ಮಾಡಿರುವ ಆರೋಪದಲ್ಲಿ ಕಂದಾಯ ಇಲಾಖೆಯ ಎಂಟು ಮಂದಿ ಅಧಿಕಾರಿಗಳನ್ನು ಅಮಾನತು ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ನಾಡ ಕಚೇರಿ ವಿಷಯ ನಿರ್ವಾಹಕ ಗಿರೀಶ್, ಕಂದಾಯ ಅಧಿಕಾರಿ ಪಿ.ಆರ್.ರವಿಕುಮಾರ್, ಗ್ರಾಮ ಆಡಳಿತಾಧಿಕಾರಿಗಳಾದ ನಿರ್ಮಲಾ ಟಿ.ಎಸ್., ಹನುಮಂತಪ್ಪ ಆರ್., ರವಿ ಕೆ.ಆರ್., ಲಿಂಗರಾಜು ಕೆ.,ಕಾವ್ಯಾ ಟಿ.ಎಂ., ಕುಮಾರ್ ಜೆ.ಎಂ. ಅವರನ್ನು ಅಮಾನತು ಮಾಡಲಾಗಿದೆ.

ಎನ್‌.ಕೆ.(ನಾಡ ಕಚೇರಿ)–5 ತಂತ್ರಾಂಶದಲ್ಲಿ ಅಕ್ರಮವಾಗಿ 64 ಜನರಿಗೆ ಪಿಂಚಣಿ ಮಂಜೂರು ಮಾಡಿ ಸರ್ಕಾರಕ್ಕೆ ₹9.03 ಲಕ್ಷ ನಷ್ಟ ಮಾಡಿದ್ದಾರೆ ಎಂದು ತಹಶೀಲ್ದಾರ್ ವರದಿಯಲ್ಲಿ ತಿಳಿಸಿ ದ್ದರು. ಅದನ್ನು ಆಧರಿಸಿ ತನಿಖೆ ನಡೆಸಿದ್ದ ಕಂದಾಯ ಇಲಾಖೆ, 11 ಜನರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿತ್ತು.

ಕಡೂರು ತಹಶೀಲ್ದಾರ್ ಇತ್ತೀಚೆಗೆ ಮತ್ತೊಂದು ವರದಿಯನ್ನು ಸಲ್ಲಿಸಿದ್ದು, ಕಡೂರು ತಾಲ್ಲೂಕಿನ ಕಸಬಾ ಹೋಬಳಿಯಲ್ಲಿ  ಎನ್.ಕೆ.–4 ತಂತ್ರಾಂಶದಲ್ಲೂ 1,485 ಅನರ್ಹರಿಗೆ ಅಕ್ರಮವಾಗಿ ಪಿಂಚಣಿ ಮಂಜೂರಾಗಿ ಸರ್ಕಾರಕ್ಕೆ ₹2.17 ಕೋಟಿ ನಷ್ಟವಾಗಿದೆ ಎಂದು ಉಲ್ಲೇಖಿಸಿದ್ದರು.

ಈ ಪ್ರಕರಣಗಳಲ್ಲಿ ಯಾವ ಅಧಿಕಾರಿಗಳ ಎಲ್ಲೆಲ್ಲಿ ಕರ್ತವ್ಯಲೋಪ ಎಸಗಿದ್ದಾರೆ. ಯಾರಿಂದ ಎಷ್ಟು ನಷ್ಟ ಆಗಿದೆ ಎಂದು ಕೂಲಂಕಷವಾಗಿ ಪರಿಶೀಲಿಸಿರುವ ಜಿಲ್ಲಾಧಿಕಾರಿ ಮೀನಾ ನಾಗರಾಜ್, 8 ಸಿಬ್ಬಂದಿ ಅಮಾನತು ಮಾಡಿ ಆದೇಶಿಸಿದ್ದಾರೆ. ಶಿರಸ್ತೇದಾರ್ ಕಲ್ಮರುಡಪ್ಪ ಅವರನ್ನು ಈ ಹಿಂದೆಯೇ ಅಮಾನತು ಮಾಡಲಾಗಿತ್ತು.

‘ಆಕ್ರಮವಾಗಿ ಪಿಂಚಣಿ ಮಂಜೂರಾತಿ ಪ್ರಕರಣದಲ್ಲಿ ಸಿಬ್ಬಂದಿಯನ್ನು ಅಮಾನತು ಮಾಡಿರುವ ಕ್ರಮ ಸ್ವಾಗತಾರ್ಹ. ಎಲ್ಲಾ ತಾಲ್ಲೂಕು ಮತ್ತು ಹೋಬಳಿಗಳಲ್ಲಿ ಎನ್‌.ಕೆ.–4 ಮತ್ತು ಎನ್.ಕೆ.–5 ತಂತ್ರಾಂಶ ಪರಿಶೀಲಿಸಬೇಕು. ಅಕ್ರಮಗಳನ್ನು ಪತ್ತೆ ಹಚ್ಚಬೇಕು’ ಎಂದು ಕಡೂರಿನ ವಕೀಲ ನಾಗರಾಜ್ ಆಗ್ರಹಿಸಿದ್ದಾರೆ.

Eight Revenue Department officials suspended

Share

Leave a comment

Leave a Reply

Your email address will not be published. Required fields are marked *

Don't Miss

ನಾಮಫಲಕದಲ್ಲಿ ಶೇ.೬೦ರಷ್ಟು ಕನ್ನಡಕ್ಕೆ ಪ್ರಾಧಾನ್ಯತೆಗೆ ಸೂಚನೆ

ಚಿಕ್ಕಮಗಳೂರು: ಮುಂದಿನ ಒಂದು ವಾರದೊಳಗೆ ಉದ್ಯಮದ ಎಲ್ಲಾ ನಾಮಫಲಕಗಳಲ್ಲಿ ಸರ್ಕಾರದ ನಿಯಮಗಳ ಅನ್ವಯ ಶೇ. ೬೦ರಷ್ಟು ಕನ್ನಡ ನಾಮಫಲಕ ಇರುವಂತೆ ಕ್ರಮ ಕೈಗೊಳ್ಳಬೇಕು. ತಪ್ಪಿದಲ್ಲಿ ನಗರಸಭೆಯಿಂದ ನಾಮಫಲಕಗಳನ್ನು ತೆರವುಗೊಳಿಸಿ ಕಾನೂನು ರೀತಿ...

ಮದುವೆ ಮನೆಯಲ್ಲಿ ₹3.75 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

ಚಿಕ್ಕಮಗಳೂರು: ಜಿಲ್ಲೆಯ ಬಾಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮದುವೆ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಸುಮಾರು ₹3.75 ಲಕ್ಷ ಮೌಲ್ಯದ ಚಿನ್ನಾಭರಣ ಕಳುವಾಗಿರುವ ಘಟನೆ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಇಬ್ಬರು ಸಂಬಂಧಿಕರ...

Related Articles

ಮನೆಯಲ್ಲಿ ಇಟ್ಟಿದ್ದ ಚಿನ್ನಾಭರಣ-20 ಸಾವಿರ ನಗದು ಕಳವು

ಚಿಕ್ಕಮಗಳೂರು: ಮನೆಯ ಬೀರುವಿನಲ್ಲಿ ಇರಿಸಿದ್ದ ಸುಮಾರು ೨೮ ಗ್ರಾಂ ಚಿನ್ನಾಭರಣ ಹಾಗೂ ?೨೦ ಸಾವಿರ ನಗದು...

ವೃದ್ದಾಪ್ಯ, ಅಂಗವಿಕಲ ವೇತನ ವಿಳಂಬ ಖಂಡಿಸಿ ಬಿಜೆಪಿ ಪ್ರತಿಭಟನೆ

ಚಿಕ್ಕಮಗಳೂರು: ವೃದ್ದಾಪ್ಯ, ವಿಧವಾ, ವಿಕಲಚೇತನ ಹಾಗೂ ಬಿಪಿಎಲ್ ಕಾರ್ಡ್ ರದ್ದು ಪಡಿಸಿರುವ ರಾಜ್ಯದ ಕಾಂಗ್ರೆಸ್ ಸರ್ಕಾರದ...

19 ಲಕ್ಷ ಜನರ ಪಿಂಚಣಿ ರದ್ದು: ಸರ್ಕಾರದ ವಿರುದ್ಧ ವಿಧಾನಮಂಡಲದಲ್ಲಿ ಸಂಗ್ರಾಮ

ಸಖರಾಯಪಟ್ಟಣ: ರಾಜ್ಯದಲ್ಲಿ 19 ಲಕ್ಷಕ್ಕೂ ಹೆಚ್ಚು ಜನರ ವೃದ್ಧಾಪ್ಯ, ವಿಧವಾ ಹಾಗೂ ಅಂಗವಿಕಲ ಪಿಂಚಣಿಯನ್ನು ರದ್ದುಪಡಿಸಲಾಗಿದೆ....

ಸಖರಾಯಪಟ್ಟಣದ ಮೂಲಸೌಕರ್ಯ ಸಮಸ್ಯೆ ಪರಿಹಾರಕ್ಕೆ 5 ಬೇಡಿಕೆ

ಚಿಕ್ಕಮಗಳೂರು: ಜಿಲ್ಲೆಯ ಪ್ರಮುಖ ಗ್ರಾಮ ಪಂಚಾಯಿತಿಗಳಲ್ಲಿ ಒಂದಾಗಿರುವ ಸಖರಾಯಪಟ್ಟಣದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಜನರು ತೊಂದರೆ...