Home namma chikmagalur ರಸ್ತೆ ಅಪಘಾತದಲ್ಲಿ ವೃದ್ದ ದಂಪತಿಗಳ ಸಾವು
namma chikmagalurajjampuraCrime NewsHomeLatest News

ರಸ್ತೆ ಅಪಘಾತದಲ್ಲಿ ವೃದ್ದ ದಂಪತಿಗಳ ಸಾವು

Share
Share

ಅಜ್ಜಂಪುರ: ತಾಲ್ಲೂಕಿನ ಮಾಕೋ ನಹಳ್ಳಿ (ಬುಕ್ಕಾಂಬುಧಿ) ಅತ್ತಿಗಟ್ಟೆ ಕ್ರಾಸ್‌ ಬಳಿ ಭಾನುವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ ಪತಿ-ಪತ್ನಿ ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ.

ಅಜ್ಜಂಪುರದಿಂದ ಬುಕ್ಕಾಂಬುಧಿ ಕಡೆಗೆ ಸಾಗುತ್ತಿದ್ದ ಕಾರು, ಬೈಕ್‌ ನಡುವೆ ಅ‍ಪಘಾತ ನಡೆದಿದ್ದು, ಬೈಕ್‌ನ ಹಿಂಬದಿಯಲ್ಲಿ ಕುಳಿತಿದ್ದ ಹೊಸಹಳ್ಳಿ ತಾಂಡ್ಯದ ನಾಗಿ ಬಾಯಿ (68) ಸ್ಥಳದಲ್ಲಿಯೇ ಮೃತಪಟ್ಟಿದ್ದರೆ. ಪತಿ ಗೋವಿಂದ ನಾಯ್ಕ್ (‌75) ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಬೈಕ್‌ ಚಲಾಯಿಸುತ್ತಿದ್ದ ಸಂತೋಷ ನಾಯ್ಕ ಗಾಯಗೊಂಡಿದ್ದಾರೆ. ಅಪಘಾತ ಸ್ಥಳದಲ್ಲಿ ಬಸ್‌ಗಾಗಿ ಕಾಯುತ್ತಿದ್ದ ಅತ್ತಿಗಟ್ಟೆ ಪಾರ್ವತಿ ಎಂಬುವರು ಗಾಯಗೊಂಡಿದ್ದು, ಇಬ್ಬರೂ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಬಗ್ಗೆ ಮೃತರ ಸಂಬಂಧಿ ಚಂದ್ರಾನಾಯ್ಕ ಪಟ್ಟಣ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

Elderly couple killed in road accident
Share

Leave a comment

Leave a Reply

Your email address will not be published. Required fields are marked *

Don't Miss

ಸಿ.ಡಿ.ಎ ಮಾಜಿ ಅಧ್ಯಕ್ಷ ಆನಂದ್ ಮೇಲೆ ಹಲ್ಲೆ …?

ಚಿಕ್ಕಮಗಳೂರು: ಮಾಜಿ ಸಚಿವ ಸಿ.ಟಿ.ರವಿ ಆಪ್ತ ಸುದರ್ಶನ್ ಬಲಗೈ ಬಂಟ ಹಾಲಿ ಮೂಗ್ತಿಹಳ್ಳಿ ಸಹಕಾರ ಸಂಘದ ಅಧ್ಯಕ್ಷ ಆನಂದ್ ನ ರಸಲೀಲೆ ನಡೆಸುತ್ತಿದ್ದಾರೆ ಎಂದು ಕೆಲವರು ಹೋಮ್ ಸ್ಟೇಗೆ ನುಗ್ಗಿ ಗಲಾಟೆ...

ರೈತರಿಗೆ ತೋಟಗಾರಿಕೆ ಬೆಳೆಗಳ ಬಗ್ಗೆ ಮಾಹಿತಿ ನೀಡುವುದೇ ಚೈತ್ರೋತ್ಸವದ ಉದ್ದೇಶ

ಚಿಕ್ಕಮಗಳೂರು: ಜಿಲ್ಲೆಯರೈತರು ಮತ್ತು ಬೆಳೆಗಾರರಿಗೆ ತೋಟಗಾರಿಕೆ ಬೆಳೆಗಳ ಬಗ್ಗೆ ಉಪಯುಕ್ತ ಮಾಹಿತಿ ನೀಡುವುದೇಚೈತ್ರೋತ್ಸವದಉದ್ದೇಶಎಂದುಜಿಲ್ಲಾಧಿಕಾರಿಎಂ.ಎನ್ ನಾಗರಾಜ್ ತಿಳಿಸಿದರು. ಅವರುಇಂದು ನಗರದ ನೇತಾಜಿ ಸುಭಾಷ್‌ಚಂದ್ರಬೋಸ್‌ಜಿಲ್ಲಾಆಟದ ಮೈದಾನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಪಶುಪಾಲನಾ ಮತ್ತು ಪಶು...

Related Articles

ಲಾಭಾಂಶ ಆಮಿಷ ಯುವಕನಿಗೆ ಲಕ್ಷಾಂತರ ರೂಪಾಯಿ ವಂಚನೆ

ಚಿಕ್ಕಮಗಳೂರು: ಟ್ರೇಡಿಂಗ್ ಹೆಸರಿನಲ್ಲಿ ಹೆಚ್ಚಿನ ಲಾಭಾಂಶ ನೀಡುವ ಆಮಿಷವೊಡ್ಡಿ ಯುವಕನೊಬ್ಬನಿಗೆ ಲಕ್ಷಾಂತರ ರೂಪಾಯಿ ವಂಚಿಸಿರುವ ಘಟನೆ...

ಸಿಡಿಎ ಅಧ್ಯಕ್ಷರಾಗಿ ಎಚ್‌.ಪಿ. ಮಂಜೇಗೌಡ ನೇಮಕ

ಚಿಕ್ಕಮಗಳೂರು: ಚಿಕ್ಕಮಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ (ಸಿಡಿಎ) ಚಿಕ್ಕಮಗಳೂರು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಎಚ್‌.ಪಿ. ಮಂಜೇಗೌಡ ಅವರನ್ನು...

ಕಾಂಗ್ರೆಸ್ ನಲ್ಲಿ ಸಿ.ಡಿ.ಎ. ಫೈಟ್ – ಕಾಂಗ್ರೆಸ್ ನಲ್ಲಿ ಸಿ.ಡಿ.ಎ. ಫೈಟ್ – ರಾಮಚಂದ್ರ ಬಿಗಿ ಪಟ್ಟು

ಚಿಕ್ಕಮಗಳೂರು: ಹಿರೇಮಗಳೂರು ರಾಮಚಂದ್ರ ಸಿ.ಡಿ.ಎ.ಅಧ್ಯಕ್ಷ ಸ್ಥಾನ ಪಡೆಯಲು ಬಿಗಿ ಪಟ್ಟು ಹಿಡಿದು ಒತ್ತಾಯ ಮಾಡುತ್ತಿದ್ದಾರೆ. ಕಳೆದ...

ಪ್ರತ್ಯೇಕ ಅಪಘಾತ ಪ್ರಕರಣಗಳಲ್ಲಿ ಮೂವರು ಸಾವು

ಚಿಕ್ಕಮಗಳೂರು :ಜಿಲ್ಲೆಯಲ್ಲಿ ನಡೆದ ಮೂರು ಪ್ರತ್ಯೇಕ ಅಪಘಾತ ಪ್ರಕರಣಗಳಲ್ಲಿ ಮೂವರು ಸಾವಪ್ಪಿದ್ದಾರೆ. ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್...