ಚಿಕ್ಕಮಗಳೂರು: ಕಾಫಿನಾಡಲ್ಲಿ ಮಹಾಮಳೆಗೆ ಮೊದಲ ಬಲಿಯಾಗಿದೆ. ತಾಲೂಕಿನ ಕುರುಬರಹಳ್ಳಿಯಲ್ಲಿ ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೃದ್ಧೆಯೊಬ್ಬರು ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ.
ಮೃತ ವೃದ್ಧೆಯನ್ನು ನಾಗಮ್ಮ (65) ಎಂದು ಗುರುತಿಸಲಾಗಿದೆ. ಬೇಲೂರು ತಾಲೂಕಿನ ಹೆಬ್ಬಾಳ ತಿಮ್ಮನಹಳ್ಳಿಯ ನಾಗಮ್ಮ, ತಮ್ಮ ಮಗಳ ಮನೆಗೆ ಶುಂಠಿ ಬಿತ್ತನೆಗೆ ಬಂದಿದ್ದರು. ಈ ವೇಳೆ ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸಿಡಿಲು ಬಡಿದಿದೆ. ಪರಿಣಾಮ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
Leave a comment