Home namma chikmagalur chikamagalur ವೃದ್ಧ ಮಹಿಳೆಯೊಬ್ಬರ ಚಿನ್ನದ ಸರ ಕಳವು
chikamagalurCrime NewsHomeLatest Newsnamma chikmagalur

ವೃದ್ಧ ಮಹಿಳೆಯೊಬ್ಬರ ಚಿನ್ನದ ಸರ ಕಳವು

Share
Share

ಚಿಕ್ಕಮಗಳೂರು: ಬಸವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಯುವಿಹಾರಕ್ಕೆ ತೆರಳಿದ್ದ ವೃದ್ಧ ಮಹಿಳೆಯೊಬ್ಬರನ್ನು ಅಡ್ಡಗಟ್ಟಿ, ಹಲ್ಲೆ ನಡೆಸಿ ಸುಮಾರು 2.25 ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಸರವನ್ನು ಕಿತ್ತುಕೊಂಡು ಹೋಗಿರುವ ಘಟನೆ ನಡೆದಿದೆ.

ಕರ್ಕಿಪೇಟೆ ಗ್ರಾಮದ ನಿವಾಸಿಯಾದ ವೃದ್ಧೆಯು ಸಂಜೆ 5 ಗಂಟೆ ಸುಮಾರಿಗೆ ವಾಕಿಂಗ್ ಹೊರಟಿದ್ದು, ಕೆಂಪನಹಳ್ಳಿ ರಸ್ತೆಯ ಸಾಯಿಬಾಬ ಸಾಮೀಲ್ ದಾಟಿದ ನಂತರ ಮಂಡಿ ನೋವಿನ ಕಾರಣ ರಸ್ತೆ ಪಕ್ಕದ ಸೇತುವೆಯ ಮೇಲೆ ವಿಶ್ರಮಿಸಲು ಕುಳಿತಿದ್ದರು.

ಈ ಸಮಯದಲ್ಲಿ ಸ್ಕೂಟಿಯಲ್ಲಿ ಬಂದ ಇಬ್ಬರು ಅಪರಿಚಿತರು ಈ ಕೃತ್ಯ ಎಸಗಿದ್ದಾರೆ. ಸಂಜೆ ಸುಮಾರು 5-30ರ ವೇಳೆಗೆ ಮುಖಕ್ಕೆ ಮಾಸ್ಕ್ ಧರಿಸಿ ಸ್ಕೂಟಿಯಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಮೊದಲು ವೃದ್ಧೆಯ ಹತ್ತಿರ ಬಂದು ಮಾತನಾಡಿಸುವಂತೆ ನಟಿಸಿ ಮುಂದೆ ಹೋಗಿದ್ದಾರೆ.

ನಂತರ ಪುನಃ ಸ್ಕೂಟಿಯನ್ನು ಹಿಂತಿರುಗಿಸಿಕೊಂಡು ಬಂದು, ವೃದ್ಧೆಯನ್ನು ಅಡ್ಡಗಟ್ಟಿ ಸ್ಕೂಟಿಯ ಹಿಂದೆ ಕುಳಿತಿದ್ದ ವ್ಯಕ್ತಿಯು ಏಕಾಏಕಿ ವೃದ್ಧೆಯ ಕೊರಳಿನಲ್ಲಿದ್ದ ಸುಮಾರು 45 ಗ್ರಾಂ ತೂಕದ ಚಿನ್ನದ ಮಾಂಗಲ್ಯ ಸರವನ್ನು ಕಿತ್ತುಕೊಂಡಿದ್ದಾನೆ.

ವೃದ್ಧೆ ಜೋರಾಗಿ ಕಿರುಚಿಕೊಂಡಾಗ, “ಕಿರುಚಾಡಿದರೆ ನಿನ್ನನ್ನು ಕೊಲ್ಲದೆ ಬಿಡುವುದಿಲ್ಲ” ಎಂದು ಜೀವ ಬೆದರಿಕೆ ಹಾಕಿ, ಅವರನ್ನು ಸೇತುವೆಯ ಮೇಲೆ ತಳ್ಳಿದ್ದಾರೆ.

ಈ ತಳ್ಳಾಟದ ರಭಸಕ್ಕೆ ವೃದ್ಧೆಯ ಬಲ ಮೊಣಕೈಗೆ ರಕ್ತಗಾಯವಾಗಿದ್ದು, ಕಪ್ಪು ಬಣ್ಣದ ಜರ್ಕೀನ್ ಧರಿಸಿದ್ದ ಆರೋಪಿಗಳು ಕೂಡಲೇ ಸ್ಥಳದಿಂದ ಪರಾರಿಯಾಗಿದ್ದಾರೆ. ಸುಲಿಗೆಯಾದ ಚಿನ್ನದ ಸರದ ಮೌಲ್ಯ ಅಂದಾಜು 2,25,000 ರೂಪಾಯಿ ಎಂದು ಅಂದಾಜಿಸಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ವೃದ್ಧೆ ನೀಡಿದ ದೂರಿನ ಮೇರೆಗೆ ಬಸವನಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ಕೈಗೊಂಡಿದ್ದಾರೆ.

Elderly woman’s gold chain stolen

Share

Leave a comment

Leave a Reply

Your email address will not be published. Required fields are marked *

Don't Miss

ಚಾರ್ಮಾಡಿ ಘಾಟಿಯಲ್ಲಿ ಸಂಚಾರ ಸ್ಥಗಿತಗೊಂಡು ಟ್ರಾಫಿಕ್ ಜಾಮ್

ಚಿಕ್ಕಮಗಳೂರು:  ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಭಾರೀ ಗಾಳಿ-ಮಳೆಯ ಅಬ್ಬರ ಮುಂದುವರಿದಿದೆ. ನಿರಂತರ ಮಳೆಯಿಂದ ಬೃಹತ್ ಬಂಡೆಯೊಂದು ಹಾಗೂ ಮರ ರಸ್ತೆ ಮೇಲೆ ಧರೆಗುರುಳಿದ ಪರಿಣಾಮ ಸುಮಾರು ಅರ್ಧ ಗಂಟೆ...

ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ

ಕೊಪ್ಪ: ಪೊಲೀಸರ ಭರ್ಜರಿ ಕಾರ್ಯಾಚರಣೆಯಿಂದ ಇನ್ನೋವಾ ಕಾರಿನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ ಮಾಡಲಾಗಿದೆ. ನಂಬರ್ ಪ್ಲೇಟ್ ಇಲ್ಲದ ಇನ್ನೋವಾ ಕಾರಿನಲ್ಲಿ ಗೋವುಗಳ ಸಾಗಣೆಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಿಢೀರ್...

Related Articles

ಉಪ ಸಭಾಪತಿ ಸ್ಥಾನಕ್ಕೆ ಪ್ರಾಣೇಶ ರಾಜೀನಾಮೆ ಖಚಿತ

ಚಿಕ್ಕಮಗಳೂರು: ಉಪ ಸಭಾಪತಿ ಸ್ಥಾನಕ್ಕೆ ಎಂ,ಕೆ.ಪ್ರಾಣೇಶ್ ನಾಳೆ ರಾಜೀನಾಮೆನೀಡುತ್ತಾರೆ. ಕಳೆದ ನಾಲ್ಕುವರೆ ವರ್ಷಗಳಿಂದ ಪ್ರಾಣೇಶ್ ವಿಧಾನ...

ಬಹುಕೋಟಿ ರೂ.ಗಳ ಹಗರಣ ಪ್ರಕರಣದ ಸಿಬಿಐ-ಇಡಿ ತನಿಖೆಗೆ ತನಿಖೆ ಆಗ್ರಹ

ಚಿಕ್ಕಮಗಳೂರು : ವಿವಿಧ ಬ್ಯಾಂಕುಗಳಲ್ಲಿ ಬಡವರು, ಕೂಲಿ ಕಾರ್ಮಿಕರು, ಕೃಷಿಕರ ಹೆಸರಿನಲ್ಲಿ ಖಾತೆಗಳನ್ನು ತೆರೆದು ಬಹುಕೋಟಿ...

ಶಾಸಕಿ ನಯನ ನೈತಿಕತೆ ಇದ್ದರೆ ರಾಜೀನಾಮೆ ನೀಡಿ ಗೆದ್ದು ಬರಲಿ

ಚಿಕ್ಕಮಗಳೂರು: ಮೂಡಿಗೆರೆ ಶಾಸಕಿ ನಯನ ನೈತಿಕತೆ ಇದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮತ್ತೆ ಚುನಾವಣೆಯಲ್ಲಿ...

 ಹೊಸ ಬುಲೆಟ್ ಬೈಕ್‌ನಲ್ಲಿ ತೆರಳುತ್ತಿದ್ದ ವಿದ್ಯಾರ್ಥಿ ರಸ್ತೆ ಅಪಘಾತದಲ್ಲಿ ಸಾವು

ಚಿಕ್ಕಮಗಳೂರು: ಹೊಸ ಬುಲೆಟ್ ಬೈಕ್‌ನಲ್ಲಿ ಸ್ನೇಹಿತನನ್ನು ಕರೆತರಲು ತೆರಳುತ್ತಿದ್ದ 19 ವರ್ಷದ ವಿದ್ಯಾರ್ಥಿಯೊಬ್ಬ ರಸ್ತೆ ಅಪಘಾತದಲ್ಲಿ...