Home namma chikmagalur ಮಾಡೆಲ್ ಶಾಲೆಯಲ್ಲಿ ನಾಯಕರ ಆಯ್ಕೆಗೆ ಚುನಾವಣೆ
namma chikmagalurchikamagalurHomeLatest News

ಮಾಡೆಲ್ ಶಾಲೆಯಲ್ಲಿ ನಾಯಕರ ಆಯ್ಕೆಗೆ ಚುನಾವಣೆ

Share
Share

ಚಿಕ್ಕಮಗಳೂರು: ನಗರದ ಹೊರವಲಯದಲ್ಲಿರುವ ಉಪ್ಪಳ್ಳಿಯ ಮಾಡೆಲ್ ಆಂಗ್ಲ ಪ್ರೌಢಶಾಲೆಯಲ್ಲಿ ಶಾಲಾ ಸಾಕ್ಷರತಾ ವತಿಯಿಂದ ಶಾಲಾ ಚುನಾವಣೆಯನ್ನು ಆಯೋಜಿಸಲಾಗಿತ್ತು.

ಮಕ್ಕಳಿಗೆ ಪ್ರಜಾಪ್ರಭುತ್ವದ ಮಹತ್ವ ಮತ್ತು ಮತದಾನದ ಅರಿವನ್ನು ಮೂಡಿಸಲು ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಇದರಿಂದ ವಿದ್ಯಾರ್ಥಿಗಳು ಮತದಾನದ ಮಹತ್ವ, ಮತದಾನದ ಪ್ರಕ್ರಿಯೆ ಮತ್ತು ಸದೃಢ ದೇಶ ನಿರ್ಮಾಣಕ್ಕಾಗಿ ಉತ್ತಮ ನಾಯಕರ ಆಯ್ಕೆ ಮಾಡುವುದನ್ನು ತಿಳಿದುಕೊಂಡರು

ಚುನಾವಣೆ ಪ್ರಕ್ರಿಯೆಯಲ್ಲಿ ಒಂಬತ್ತು ಮತ್ತು ಹತ್ತನೆಯ ತರಗತಿಯ ವಿದ್ಯಾರ್ಥಿಗಳು ಸ್ಕೂಲ್ ಲೀಡರ್, ಸ್ಪೋರ್ಟ್ಸ್ ಲೀಡರ್, ಲಿಟರರಿ ಆಕ್ಟಿವಿಟಿ ಲೀಡರ್ ಮತ್ತು ಡಿಸಿಪ್ಲಿನ್ ಲೀಡರ್ ಸ್ಥಾನಗಳಿಗೆ ಸ್ಪರ್ಧಿಸಲು ಅವಕಾಶ ಕಲ್ಪಿಸಲಾಗಿತ್ತು. ಮತದಾನ ಮಾಡಲು ನಾಲ್ಕನೇ ತರಗತಿಯಿಂದ ಹತ್ತನೆಯ ತರಗತಿ ವಿದ್ಯಾರ್ಥಿಗಳಿಗೆ ಅವಕಾಶವನ್ನು ಕಲ್ಪಿಸಿಕೊಡಲಾಗಿತ್ತು.

ಡೈರಿಯಲ್ಲಿ ಮಗುವಿನ ಫೋಟೋ. ಮಗುವಿನ ವಿವರ ಮತ್ತು ಪೋಷಕರ ಸಹಿ ಕಡ್ಡಾಯವಾಗಿ ಇರಬೇಕು.ಐಡಿ ಕಾರ್ಡ್ ಅಥವಾ ಡೈರಿ ಇರದವರಿಗೆ ಮತದಾನ ಮಾಡಲು ಅವಕಾಶ ಇರಲಿಲ್ಲ. ತರಗತಿವಾರು ವಿದ್ಯಾರ್ಥಿಗಳು ಅತ್ಯಂತ ಉತ್ಸಾಹದಿಂದ ಮತದಾನ ಮಾಡಿದರು ಶಿಕ್ಷಕರು ಕೂಡ ಮತದಾನ ಮಾಡಿದರು.

ಸಂಪೂರ್ಣ ಮತ ಎಣಿಕೆ ಪ್ರಕ್ರಿಯೆ ಮುಗಿದ ನಂತರ ಮಾಡೆಲ್ ಶಾಲಾ ನಾಯಕನಾಗಿ ಹತ್ತನೇ ತರಗತಿ ವಿದ್ಯಾರ್ಥಿ ಮುಂತಾಸಿರ್ ರಜಾ, ಕ್ರೀಡಾ ನಾಯಕಿಯಾಗಿ ೯ನೇ ತರಗತಿ ವಿದ್ಯಾರ್ಥಿನಿ ಸಾರಿಯ ಸುಲ್ತಾನ, ಲಿಟರೆರಿ ಆಕ್ಟಿವಿಟಿ ನಾಯಕಿಯಾಗಿ ಹತ್ತನೇ ತರಗತಿ ವಿದ್ಯಾರ್ಥಿನಿ ವಿದ್ಯಾ ಐ. ವಿ. ಮತ್ತು ಡಿಸಿಪ್ಲಿನ್ ನಾಯಕಿಯಾಗಿ ೯ನೇ ತರಗತಿ ವಿದ್ಯಾರ್ಥಿನಿ ಅಲೀನಾ ಖಾನ್ ಆಯ್ಕೆಯಾದರು.

ಶಾಲೆಯ ಶಿಕ್ಷಕರು, ಮುಖ್ಯ ಶಿಕ್ಷಕರು ಮತ್ತು ಶಾಲಾ ಮ್ಯಾನೇಜ್ಮೆಂಟ್ ವತಿಯಿಂದ ವಿಜೇತ ಸ್ಪರ್ಧಿಗಳಿಗೆ ಅಭಿನಂದನೆಗಳನ್ನು ಸಲ್ಲಿಸುತ್ತಾ, ತಮಗೆ ಸಿಕ್ಕಿರುವ ಸ್ಥಾನಕ್ಕೆ ಮಹತ್ವ ಕೊಟ್ಟು ಆಡಳಿತ ಪಕ್ಷವಾಗಿ ದಕ್ಷತೆಯಿಂದ ಕಾರ್ಯ ನಿರ್ವಹಿಸಬೇಕೆಂದು ತಿಳಿಸಲಾಯಿತು.

ಶಾಲಾ ಚುನಾವಣಾ ಪ್ರಕ್ರಿಯೆ ನಡೆದಿದ್ದು ಚುನಾವಣಾ ಪ್ರಕ್ರಿಯೆಯ ಉಸ್ತುವಾರಿಯನ್ನು ವಹಿಸಿಕೊಂಡಿದ್ದ ಮುಖ್ಯ ಶಿಕ್ಷಕ ಯೋಗೀಶ್, ಕ್ರಿಷ್ಟಿ ಪ್ರಭ ಮತ್ತು ದಿವ್ಯಶ್ರಿ ಇದ್ದರು.

Election to select leaders in model school

 

 

Share

Leave a comment

Leave a Reply

Your email address will not be published. Required fields are marked *

Don't Miss

ಚಿಕ್ಕಮಗಳೂರು ಜಿಲ್ಲಾಸ್ಪತ್ರೆ ವೈದ್ಯನ ಡಬಲ್ ಡ್ಯೂಟಿ.!

ಚಿಕ್ಕಮಗಳೂರು : ಸರ್ಕಾರದ ಬೊಕ್ಕಸದಿಂದ ಕೈತುಂಬಾ ಸಂಬಳ ಪಡೆಯುತ್ತಾ, ಕರ್ತವ್ಯದ ಸ್ಥಳದಲ್ಲಿ ರೋಗಿಗಳನ್ನು ಸತಾಯಿಸಿ ನೆರೆಯ ಕೇರಳದ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿ ಅಲ್ಲಿನ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವ ಗಂಭೀರ ಆರೋಪ...

ಶಾಸಕರುಗಳಿಗೆ ಅಧಿಕಾರದ ಹಠ-ರೈತರಿಗೆ ಬರಗಾಲದ ಭಯ

ಕಡೂರು ಬರಪೀಡಿತ ತಾಲೂಕು ಪಟ್ಟಿಯಿಂದ ಹೊರಕ್ಕೆ: ಜನಪ್ರತಿನಿಧಿಗಳು, ಅಧಿಕಾರಿಗಳ ವಿರುದ್ಧ ರೈತರ ಆಕ್ರೋಶ ಕಡೂರು: ಕಡೂರು ತಾಲ್ಲೂಕು ಪ್ರತಿ ವರ್ಷವೂ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದರೂ, ಪ್ರಸಕ್ತ ಸಾಲಿನ ಬರಪೀಡಿತ ತಾಲೂಕುಗಳ ಪಟ್ಟಿಯಿಂದ...

Related Articles

ಕಾಡಾನೆ-ಕಾಡುಕೋಣ ದಾಳಿಯಿಂದ ಭೀತಿಯಲ್ಲಿ ಕಾರ್ಮಿಕರು

ಮೂಡಿಗೆರೆ: ಮಲೆನಾಡಿನಲ್ಲಿ ಕಾಡಾನೆಗಳ ಹಾವಳಿ ಮಿತಿ ಮೀರಿದ್ದು, ಬೆಳೆಗಾರರು ಹಾಗೂ ಕಾರ್ಮಿಕರು ಆತಂಕದಲ್ಲಿ ದಿನದೂಡುತ್ತಿದ್ದಾರೆ. ಒಂದೆಡೆ...

ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸಹಪ್ರಾಧ್ಯಾಪಕರ ಹಾಜರಾತಿ ತಿದ್ದುಪಡಿ ಆರೋಪ

ಚಿಕ್ಕಮಗಳೂರು: ಚಿಕ್ಕಮಗಳೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (CIMS)ಯಲ್ಲಿ ಸಹಪ್ರಾಧ್ಯಾಪಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಡಾ. ಗಣೇಶ್ ಪಿ....

ನೂತನ ಜಿಲ್ಲಾಡಳಿತ ಸಂಕೀರ್ಣ ಮಾರ್ಚ್-ಏಪ್ರಿಲ್ ವೇಳೆಗೆ ಲೋಕಾರ್ಪಣೆ

ಚಿಕ್ಕಮಗಳೂರು: ಕಾಫಿನಾಡಿನ ಸಮಗ್ರ ಅಭಿವೃದ್ಧಿ ನೀಲನಕ್ಷೆಯ ಭಾಗವಾಗಿ ನಿರ್ಮಾಣವಾಗುತ್ತಿರುವ ಬಹುನಿರೀಕ್ಷಿತ ನೂತನ ಜಿಲ್ಲಾಡಳಿತ ಸಂಕೀರ್ಣದ (ಡಿಸಿ...

ತರೀಕೆರೆಯಲ್ಲಿ ಖಾಸಗಿ ಬಸ್ ಏಜೆಂಟ್‌ರ ನಡುರಸ್ತೆಯಲ್ಲೇ ಪುಂಡಾಟ

ತರೀಕೆರೆ: ಸರ್ಕಾರಿ ಬಸ್ ಚಾಲಕನ ಮೇಲೆ ಖಾಸಗಿ ಬಸ್ ಏಜೆಂಟ್‌ಗಳು ನಡುರಸ್ತೆಯಲ್ಲೇ ಪುಂಡಾಟ ನಡೆಸಿ, ರಕ್ತ...