Home namma chikmagalur ಮಾಡೆಲ್ ಶಾಲೆಯಲ್ಲಿ ನಾಯಕರ ಆಯ್ಕೆಗೆ ಚುನಾವಣೆ
namma chikmagalurchikamagalurHomeLatest News

ಮಾಡೆಲ್ ಶಾಲೆಯಲ್ಲಿ ನಾಯಕರ ಆಯ್ಕೆಗೆ ಚುನಾವಣೆ

Share
Share

ಚಿಕ್ಕಮಗಳೂರು: ನಗರದ ಹೊರವಲಯದಲ್ಲಿರುವ ಉಪ್ಪಳ್ಳಿಯ ಮಾಡೆಲ್ ಆಂಗ್ಲ ಪ್ರೌಢಶಾಲೆಯಲ್ಲಿ ಶಾಲಾ ಸಾಕ್ಷರತಾ ವತಿಯಿಂದ ಶಾಲಾ ಚುನಾವಣೆಯನ್ನು ಆಯೋಜಿಸಲಾಗಿತ್ತು.

ಮಕ್ಕಳಿಗೆ ಪ್ರಜಾಪ್ರಭುತ್ವದ ಮಹತ್ವ ಮತ್ತು ಮತದಾನದ ಅರಿವನ್ನು ಮೂಡಿಸಲು ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಇದರಿಂದ ವಿದ್ಯಾರ್ಥಿಗಳು ಮತದಾನದ ಮಹತ್ವ, ಮತದಾನದ ಪ್ರಕ್ರಿಯೆ ಮತ್ತು ಸದೃಢ ದೇಶ ನಿರ್ಮಾಣಕ್ಕಾಗಿ ಉತ್ತಮ ನಾಯಕರ ಆಯ್ಕೆ ಮಾಡುವುದನ್ನು ತಿಳಿದುಕೊಂಡರು

ಚುನಾವಣೆ ಪ್ರಕ್ರಿಯೆಯಲ್ಲಿ ಒಂಬತ್ತು ಮತ್ತು ಹತ್ತನೆಯ ತರಗತಿಯ ವಿದ್ಯಾರ್ಥಿಗಳು ಸ್ಕೂಲ್ ಲೀಡರ್, ಸ್ಪೋರ್ಟ್ಸ್ ಲೀಡರ್, ಲಿಟರರಿ ಆಕ್ಟಿವಿಟಿ ಲೀಡರ್ ಮತ್ತು ಡಿಸಿಪ್ಲಿನ್ ಲೀಡರ್ ಸ್ಥಾನಗಳಿಗೆ ಸ್ಪರ್ಧಿಸಲು ಅವಕಾಶ ಕಲ್ಪಿಸಲಾಗಿತ್ತು. ಮತದಾನ ಮಾಡಲು ನಾಲ್ಕನೇ ತರಗತಿಯಿಂದ ಹತ್ತನೆಯ ತರಗತಿ ವಿದ್ಯಾರ್ಥಿಗಳಿಗೆ ಅವಕಾಶವನ್ನು ಕಲ್ಪಿಸಿಕೊಡಲಾಗಿತ್ತು.

ಡೈರಿಯಲ್ಲಿ ಮಗುವಿನ ಫೋಟೋ. ಮಗುವಿನ ವಿವರ ಮತ್ತು ಪೋಷಕರ ಸಹಿ ಕಡ್ಡಾಯವಾಗಿ ಇರಬೇಕು.ಐಡಿ ಕಾರ್ಡ್ ಅಥವಾ ಡೈರಿ ಇರದವರಿಗೆ ಮತದಾನ ಮಾಡಲು ಅವಕಾಶ ಇರಲಿಲ್ಲ. ತರಗತಿವಾರು ವಿದ್ಯಾರ್ಥಿಗಳು ಅತ್ಯಂತ ಉತ್ಸಾಹದಿಂದ ಮತದಾನ ಮಾಡಿದರು ಶಿಕ್ಷಕರು ಕೂಡ ಮತದಾನ ಮಾಡಿದರು.

ಸಂಪೂರ್ಣ ಮತ ಎಣಿಕೆ ಪ್ರಕ್ರಿಯೆ ಮುಗಿದ ನಂತರ ಮಾಡೆಲ್ ಶಾಲಾ ನಾಯಕನಾಗಿ ಹತ್ತನೇ ತರಗತಿ ವಿದ್ಯಾರ್ಥಿ ಮುಂತಾಸಿರ್ ರಜಾ, ಕ್ರೀಡಾ ನಾಯಕಿಯಾಗಿ ೯ನೇ ತರಗತಿ ವಿದ್ಯಾರ್ಥಿನಿ ಸಾರಿಯ ಸುಲ್ತಾನ, ಲಿಟರೆರಿ ಆಕ್ಟಿವಿಟಿ ನಾಯಕಿಯಾಗಿ ಹತ್ತನೇ ತರಗತಿ ವಿದ್ಯಾರ್ಥಿನಿ ವಿದ್ಯಾ ಐ. ವಿ. ಮತ್ತು ಡಿಸಿಪ್ಲಿನ್ ನಾಯಕಿಯಾಗಿ ೯ನೇ ತರಗತಿ ವಿದ್ಯಾರ್ಥಿನಿ ಅಲೀನಾ ಖಾನ್ ಆಯ್ಕೆಯಾದರು.

ಶಾಲೆಯ ಶಿಕ್ಷಕರು, ಮುಖ್ಯ ಶಿಕ್ಷಕರು ಮತ್ತು ಶಾಲಾ ಮ್ಯಾನೇಜ್ಮೆಂಟ್ ವತಿಯಿಂದ ವಿಜೇತ ಸ್ಪರ್ಧಿಗಳಿಗೆ ಅಭಿನಂದನೆಗಳನ್ನು ಸಲ್ಲಿಸುತ್ತಾ, ತಮಗೆ ಸಿಕ್ಕಿರುವ ಸ್ಥಾನಕ್ಕೆ ಮಹತ್ವ ಕೊಟ್ಟು ಆಡಳಿತ ಪಕ್ಷವಾಗಿ ದಕ್ಷತೆಯಿಂದ ಕಾರ್ಯ ನಿರ್ವಹಿಸಬೇಕೆಂದು ತಿಳಿಸಲಾಯಿತು.

ಶಾಲಾ ಚುನಾವಣಾ ಪ್ರಕ್ರಿಯೆ ನಡೆದಿದ್ದು ಚುನಾವಣಾ ಪ್ರಕ್ರಿಯೆಯ ಉಸ್ತುವಾರಿಯನ್ನು ವಹಿಸಿಕೊಂಡಿದ್ದ ಮುಖ್ಯ ಶಿಕ್ಷಕ ಯೋಗೀಶ್, ಕ್ರಿಷ್ಟಿ ಪ್ರಭ ಮತ್ತು ದಿವ್ಯಶ್ರಿ ಇದ್ದರು.

Election to select leaders in model school

 

 

Share

Leave a comment

Leave a Reply

Your email address will not be published. Required fields are marked *

Don't Miss

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕ ಹುದ್ದೆಗೆ ಅರ್ಜಿಅಹ್ವಾನ

ಚಿಕ್ಕಮಗಳೂರು: ಕಾಲೇಜು ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ (ಸರ್ಕಾರಿ ಸಂಸ್ಕೃತ ಹಾಗೂ ಚಿತ್ರಕಲಾ ಕಾಲೇಜುಗಳು ಒಳಗೊಂಡಂತೆ) ೨೦೨೬-೨೭ನೇ ಶೈಕ್ಷಣಿಕ ಸಾಲಿಗೆ ಖಾಯಂ ಉಪನ್ಯಾಸಕರಿಗೆ ಕಾರ್ಯಭಾರ ಹಂಚಿಕೆ ಮಾಡಿದ...

ಆಯುಷ್ಮಾನ್ ಆರೋಗ್ಯ ಕೇಂದ್ರದ ಕಾಮಗಾರಿಗೆ ಗುದ್ದಲಿ ಪೂಜೆ

ಚಿಕ್ಕಮಗಳೂರು: ಆರೋಗ್ಯ, ಶಿಕ್ಷಣ ಮತ್ತು ಜನರ ಬದುಕಿಗಾಗಿ ಆದ್ಯತೆಯ ಮೇಲೆ ಕೆಲಸ ಮಾಡಬೇಕಾಗಿರುವುದು ಚುನಾಯಿತ ಪ್ರತಿನಿಧಿಗಳ ಕರ್ತವ್ಯ ಆಗಿರುತ್ತದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಅವರು ಹೇಳಿದರು. ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ...

Related Articles

ಅಂಬೇಡ್ಕರ್ ವಸತಿ ಶಾಲೆಯಲ್ಲಿ ತರಗತಿ ಬಹಿಷ್ಕರಿಸಿ ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆ

ಚಿಕ್ಕಮಗಳೂರು: ಅಂಬೇಡ್ಕರ್ ವಸತಿ ಶಾಲೆಯಲ್ಲಿ ಕಳಪೆ ಮಟ್ಟದ ಹಾಗೂ ಅರೆಬೆಂದ ಆಹಾರ ನೀಡಲಾಗುತ್ತಿದೆ ಎಂದು ಆರೋಪಿಸಿ...

15.99 ಲಕ್ಷ ಜನರ ಸಂಧ್ಯಾ ಸುರಕ್ಷಾ ಯೋಜನೆಯ ರದ್ದು

ಚಿಕ್ಕಮಗಳೂರು: ರಾಜ್ಯ ಸರಕಾರ ನೀಡುತ್ತಿರುವ ಸಂಧ್ಯಾ ಸುರಕ್ಷಾ ಯೋಜನೆಯ ಪ್ರಯೋಜನ ೧೫.೯೯ ಲಕ್ಷ ಜನರಿಗೆ ರದ್ದಾಗಿದ್ದು...

ಅಯೋದ್ಯೆ ಹಣ ಕಳವು-ಸುಪ್ರೀಂನಿಂದ ಪಾರದರ್ಶಕ ತನಿಖೆಯಾಗಲಿ

ಚಿಕ್ಕಮಗಳೂರು: ಶ್ರೀರಾಮನ ಹೆಸರಲ್ಲಿ ಅಕಾರಕ್ಕೆ ಬಂದ ಬಿಜೆಪಿ ಶ್ರೀರಾಮನ ಟ್ರಸ್ಟ್ ಮೂಲಕ ಹಣಲೂಟಿ ಮಾಡಿದ್ದೇ ಸಾಧನೆಯಾಗಿದೆ....

ಚಿಕ್ಕಮಗಳೂರು ಜಿಲ್ಲೆಯ ಯಾರಿಗೂ ಸಚಿವ ಸ್ಥಾನವಿಲ್ಲ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಯಾವ ಶಾಸಕರಿಗೂ ಮಂತ್ರಿ ಸ್ಥಾನ ಸಿಗುವುದಿಲ್ಲ ಎಂದು ಖಚಿತ ಮಾಹಿತಿ ಇದೆ....