Home namma chikmagalur ಜಿಪಂ-ತಾಪಂಗೆ ಶಾಶ್ವತವಾಗಿ ಚುನಾವಣೆ ನಡೆಸಬಾರದು
namma chikmagalurchikamagalurHomeLatest News

ಜಿಪಂ-ತಾಪಂಗೆ ಶಾಶ್ವತವಾಗಿ ಚುನಾವಣೆ ನಡೆಸಬಾರದು

Share
Share

ಚಿಕ್ಕಮಗಳೂರು: ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿಗೆ ಸರ್ಕಾರದಿಂದ ಬರುವ ಅನುದಾನವನ್ನು ನೇರವಾಗಿ ಗ್ರಾಮ ಪಂಚಾಯಿತಿಗೆ ನೀಡಬೇಕು. ಜೊತೆಗೆ ಜಿಪಂ ಹಾಗೂ ತಾಪಂಗೆ ಚುನಾವಣೆಯನ್ನು ಶಾಶ್ವತವಾಗಿ ನಡೆಸಬಾರದು ಎಂದು ಮಳಲೂರು ಏತ ನೀರಾವರಿ ಹೋರಾಟಗಾರ ಸೋಮೇಗೌಡ ಒತ್ತಾಯಿಸಿದರು.

ನಗರದ ಪ್ರೆಸ್ ಕ್ಲಬ್ ನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಧಿಕಾರ ವಿಕೇಂದ್ರೀಕರಣ ಗ್ರಾಮಗಳ ಅಭಿವೃದ್ಧಿಗಾಗಿ ರೂಪಿಸಲಾಗಿದೆ. ಹೀಗಾಗಿ ಎಲ್ಲಾ ಅನುದಾನವನ್ನು ಗ್ರಾಮ ಪಂಚಾಯಿತಿಗಳಿಗೆ ನೀಡಬೇಕು ಎಂದು ಹೇಳಿದರು.

ಜಿಪಂ ಹಾಗು ತಾಪಂಗಳಿಗೆ ಚುನಾವಣೆ ನಡೆದರೆ ಹಣ ಖರ್ಚು ಮಾಡಿ ಗೆದ್ದು ಬರುವ ಜನಪ್ರತಿನಿಧಿಗಳು ಭ್ರಷ್ಟಾಚಾರ ನಡೆಸಿ ಗ್ರಾಮಾಂತರ ಪ್ರದೇಶಗಳಲ್ಲಿ ಅಭಿವೃದ್ಧಿ ಆಗದಂತೆ ಮಾಡುತ್ತಾರೆ. ಇದರ ಬದಲು ಜಿಪಂ ಅನ್ನು ಕೇವಲ ಆಡಳಿತ ವರ್ಗದ ಅಧಿಕಾರಿಗಳು ನಡೆಸಬೇಕು. ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ನೀಡುವ ಅನುದಾನವನ್ನು ಗ್ರಾಮ ಪಂಚಾಯಿತಿಗೆ ನೀಡಬೇಕು ಎಂದು ಆಗ್ರಹಿಸಿದರು.

ಜನಪ್ರತಿನಿಧಿಗಳ ಹಣದ ದಾಹದಿಂದ ಸಾವಿರಾರು ಕೆಲಸಗಳು ಗ್ರಾಮೀಣ ಮಟ್ಟದಲ್ಲಿ ಕಳಪೆಯಾಗಿ ನನೆಗುದಿಗೆ ಬಿದ್ದಿವೆ. ಹೀಗಾಗಿ ಅಭಿವೃದ್ಧಿಯೆಂಬುದು ಮರೀಚಿಕೆಯಾಗಿದೆ. ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಕನಸಾಗಿದ್ದ ಗ್ರಾಮ ಸ್ವರಾಜ್ಯ ದೇಶದಲ್ಲಿ ಜಾರಿಗೆ ಬರಬೇಕಾದರೆ ಈ ವ್ಯವಸ್ಥೆ ಮೊದಲು ಜಾರಿಯಾಗಬೇಕು ಎಂದರು.

ಸುದ್ದಿಗೋಷ್ಠಿಯಲ್ಲಿ ಮಳಲೂರು ಏತ ನೀರಾವರಿ ಹೋರಾಟಗಾರರಾದ ಟಿ.ಎಲ್. ಗಣೇಶ್, ಸೋಮೇಗೌಡ ಉಪಸ್ಥಿತರಿದ್ದರು.

Elections to Zilla Parishad and TPA should not be held permanently.

Share

Leave a comment

Leave a Reply

Your email address will not be published. Required fields are marked *

Don't Miss

19 ಲಕ್ಷ ಜನರ ಪಿಂಚಣಿ ರದ್ದು: ಸರ್ಕಾರದ ವಿರುದ್ಧ ವಿಧಾನಮಂಡಲದಲ್ಲಿ ಸಂಗ್ರಾಮ

ಸಖರಾಯಪಟ್ಟಣ: ರಾಜ್ಯದಲ್ಲಿ 19 ಲಕ್ಷಕ್ಕೂ ಹೆಚ್ಚು ಜನರ ವೃದ್ಧಾಪ್ಯ, ವಿಧವಾ ಹಾಗೂ ಅಂಗವಿಕಲ ಪಿಂಚಣಿಯನ್ನು ರದ್ದುಪಡಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಸುಮಾರು 67 ಸಾವಿರ ಫಲಾನುಭವಿಗಳ ಪಿಂಚಣಿ ಸ್ಥಗಿತಗೊಳಿಸಲಾಗಿದೆ ಎಂದು ವಿಧಾನಪರಿಷತ್ ಸದಸ್ಯ...

ಸಖರಾಯಪಟ್ಟಣದ ಮೂಲಸೌಕರ್ಯ ಸಮಸ್ಯೆ ಪರಿಹಾರಕ್ಕೆ 5 ಬೇಡಿಕೆ

ಚಿಕ್ಕಮಗಳೂರು: ಜಿಲ್ಲೆಯ ಪ್ರಮುಖ ಗ್ರಾಮ ಪಂಚಾಯಿತಿಗಳಲ್ಲಿ ಒಂದಾಗಿರುವ ಸಖರಾಯಪಟ್ಟಣದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಜನರು ತೊಂದರೆ ಅನುಭವಿಸುತ್ತಿದ್ದು, ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಜಿಪಂ–ತಾಪಂ ಸದಸ್ಯ...

Related Articles

ಮಳೆಗಾಲದಲ್ಲಿ ಟಿಂಬರ್ ಸಾಗಣೆರಸ್ತೆಯಿಂದ ರಸ್ತೆ ಹಾಳು

ಕೊಪ್ಪ: ತಾಲೂಕಿನ ಅಸಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಮಳೆಗಾಲದಲ್ಲಿಯೇ ಟಿಂಬರ್‌ಗಳನ್ನು ಕಡಿದು ಸಾಗಿಸುತ್ತಿರುವುದರಿಂದ...

ನಗರಕ್ಕೆ ಎರಡು ದಿನಗಳ ಕಾಲ ಕುಡಿಯುವ ನೀರಿನ ಸರಬರಾಜು ಸ್ಥಗಿತ

ಚಿಕ್ಕಮಗಳೂರು: ನಗರದ ದಂಟರಮಕ್ಕಿ ವ್ಯಾಪ್ತಿಯಲ್ಲಿ 600 ಎಂಎಂ ಸಾಮರ್ಥ್ಯದ ಪ್ರಮುಖ ಕುಡಿಯುವ ನೀರಿನ ಕೊಳವೆ ಮಾರ್ಗ...

ಚಿಕ್ಕಮಗಳೂರು-ಯಶವಂತಪುರ ಎಕ್ಸ್‌ಪ್ರೆಸ್ ರೈಲು ಸಂಚಾರ ಸ್ಥಗಿತ…?

ಚಿಕ್ಕಮಗಳೂರು: ಮಲ್ಲಸಂದ್ರ ಮತ್ತು ಗುಬ್ಬಿ ರೈಲ್ವೆ ನಿಲ್ದಾಣಗಳ ನಡುವಿನ ಲೆವೆಲ್ ಕ್ರಾಸಿಂಗ್ ಗೇಟ್ (LC-48) ಬದಲಿಗೆ...

ಅಣ್ಣ-ತಮ್ಮಂದಿರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ

ತರೀಕೆರೆ: ಮನೆಯಲ್ಲಿ ಆಟವಾಡುತ್ತಿದ್ದ ಮಗುವಿನ ಕೆನ್ನೆ ಊದಿಕೊಂಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಕ್ಷುಲ್ಲಕ ಕಾರಣಕ್ಕೆ ಅಣ್ಣ-ತಮ್ಮಂದಿರ ನಡುವೆ...