ಚಿಕ್ಕಮಗಳೂರು: ರಾಜ್ಯದಲ್ಲಿ ವಿದ್ಯುತ್ ದರ ಏರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
ನಗರದಲ್ಲಿ ಸುದ್ದಿಗಾರರೋಂದಿಗೆ ಮಾತನಾಡಿ ವಿದ್ಯುತ್ ದರವನ್ನು ಅತಿಯಾದ ಮಟ್ಟಕ್ಕೆ ಏರಿಸಿರುವುದನ್ನು ಖಂಡಿಸಿರುವ ಅವರು, “ವಿದ್ಯುತ್ ದರವನ್ನು ಹುಚ್ಚಂಬಟ್ಟೆ ಏರಿಕೆ ಮಾಡಿದ್ದಾರೆ. ಇದು ಖಂಡಿತವಾಗಿಯೂ ಸರಿಯಲ್ಲ” ಎಂದು ಹೇಳಿದ್ದಾರೆ.
ಸರ್ಕಾರದ ಆಡಳಿತ ವೈಫಲ್ಯವನ್ನೂ ಉಲ್ಲೇಖಿಸಿದ ಅವರು, “ಸರಿಯಾಗಿ ಆಡಳಿತ ಮಾಡಲು ಬಾರದೆ, ಹಣಕಾಸಿನ ವ್ಯವಸ್ಥೆಯನ್ನು ಸರಿಪಡಿಸಲು ವಿಫಲವಾಗಿರುವ ಸರ್ಕಾರ ಈಗ ಬೇಕಾಬಿಟ್ಟಿಯಾಗಿ ವಿದ್ಯುತ್ ದರ ಹೆಚ್ಚಿಸಿದೆ” ಎಂದು ಆರೋಪಿಸಿದ್ದಾರೆ.
ಇನ್ನಷ್ಟು ಮಾತನಾಡಿದ ಅವರು, “ದರ ಈ ರೀತಿಯಾಗಿ ಏರಿಕೆಯಾಗಿದ್ರೆ ಸಾಮಾನ್ಯ ಜನರು ಬದುಕೋದು ಕಷ್ಟವಾಗುತ್ತದೆ. ಸರ್ಕಾರ ಕೂಡಲೇ ಈ ನಿರ್ಧಾರವನ್ನು ವಾಪಸ್ ಪಡೆಯಬೇಕು” ಎಂದು ಒತ್ತಾಯಿಸಿದರು.
ಜನರಿಗೆ ನೆಮ್ಮದಿಯಿಂದ ಬದುಕಲು ಅವಕಾಶ ಕಲ್ಪಿಸುವಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಅವರು ಹೇಳಿದ್ದಾರೆ.
Electricity prices in the state have skyrocketed.
Leave a comment