Home Crime News ವಿದ್ಯುತ್ ಸ್ಪರ್ಶಿಸಿ ಒಂಟಿ ಸಲಗ ಸಾವು : ಜಮೀನು ಮಾಲೀಕನ ವಿರುದ್ಧ ದೂರು
Crime News

ವಿದ್ಯುತ್ ಸ್ಪರ್ಶಿಸಿ ಒಂಟಿ ಸಲಗ ಸಾವು : ಜಮೀನು ಮಾಲೀಕನ ವಿರುದ್ಧ ದೂರು

Share
Share

ಚಿಕ್ಕಮಗಳೂರು : ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಡಾನೆಗಳ ಮರಣ ಮೃದಂಗ ನಿಲ್ಲದಂತಾಗಿದೆ, ಜಮೀನಿನಲ್ಲಿ ವಿದ್ಯುತ್ ತಂತಿ ತಗಲಿ ಕಾಡಾನೆಯೊಂದು ದಾರುಣವಾಗಿ ಸಾವು ಕಂಡಿದೆ. ಜಮೀನಿನಲ್ಲಿ ಕೆಳಭಾಗಕ್ಕೆ ಜೋತು ಬಿದ್ದಿದ್ದ ವಿದ್ಯುತ್ ತಂತಿಯಿಂದ ಈ ಅವಘಡ ನಡೆದಿದೆ.

ಆಹಾರ ಅರಿಸಿ ಬಂದ ಕಾಡಾನೆಗೆ ವಿದ್ಯುತ್ ತಂತಿ ತಗಲಿ ಸ್ಥಳದಲ್ಲೇ ಸಾವನ್ನಪ್ಪಿದೆ, ವಿದ್ಯುತ್ ತಂತಿ ತಗಲಿ ಕಂದಕಕ್ಕೆ ಉರುಳಿ ಬಿದ್ದಿರುವ ಒಂಟಿ ಸಲಗ ಅಸುನೀಗಿದೆ, ಕಳೆದ ಮೂರು ದಿನಗಳ ಹಿಂದೆ ಘಟನೆ ನಡೆದಿದ್ದರೂ ಕೂಡ ಅರಣ್ಯ ಇಲಾಖೆಗೆ ಮಾಹಿತಿ ಲಭ್ಯವೇ ಇರಲಿಲ್ಲ, ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಾನವ ಕಾಡಾನೆಗಳ ಸಂಘರ್ಷ ತೀವ್ರಗೊಂಡಿದೆ, ಒಂದೆಡೆ ಕಾಡಾನೆ ದಾಳಿಯಿಂದ ಮನುಷ್ಯರು ಮೃತಪಟ್ಟರೆ ಮತ್ತೊಂದೆಡೆ ವಿದ್ಯುತ್ ಅವಘಡಗಳಿಂದ ಕಾಡಾನೆಗಳು ಸಾವು ಕಾಣುತ್ತಿವೆ, ಜಮೀನಿನ ಕೆಲಸಕ್ಕೆ ತೆರಳಿದ ಶಿವಬಸಪ್ಪ ಆನೆಯ ದಾರುಣ ಸ್ಥಿತಿ ಕಂಡು ಮರುಕ ವ್ಯಕ್ತಪಡಿಸಿದ್ದಾರೆ, ಈ ಘಟನೆ ತರೀಕೆರೆ ತಾಲ್ಲೂಕಿನ ಲಿಂಗದಳ್ಳಿಯ ಉಡೆವಾ ಗ್ರಾಮದಲ್ಲಿ ನಡೆದಿದೆ, ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲ್ಲೂಕಿನಲ್ಲಿ ಎರಡು ಕಾಡಾನೆಗಳು ಮೃತಪಟ್ಟಂತಾಗಿದೆ.

Share

Leave a comment

Leave a Reply

Your email address will not be published. Required fields are marked *

Don't Miss

ಪದವಿ ಪೂರ್ವ ಕಾಲೇಜುಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟ

ಚಿಕ್ಕಮಗಳೂರು:  ಪರಿಶ್ರಮ ವಹಿಸಿದಾಗ ನಿಮ್ಮ ಭವಿಷ್ಯ ಸ್ವತಹಾ ನೀವೇ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು. ಅವರು ಇಂದು ರಾಮನಹಳ್ಳಿಯ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಶಾಲಾ ಶಿಕ್ಷಣ...

ನಗರಸಭೆ ನೂತನ ಉಪಾಧ್ಯಕ್ಷರಾಗಿ ಲಲಿತಾ ರವಿನಾಯ್ಕ ಅವಿರೋಧ ಆಯ್ಕೆ

ಚಿಕ್ಕಮಗಳೂರು:  ನಗರಸಭೆ ೩೫ನೇ ವಾರ್ಡಿನ ಕೆಂಪನಹಳ್ಳಿ ಬಡಾವಣೆಯ ಬಿಜೆಪಿ ಸದಸ್ಯೆ ಲಲಿತಾ ರವಿನಾಯ್ಕ ನಗರಸಭೆ ನೂತನ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿಯಾಗಿದ್ದ ಉಪವಿಭಾಗಾಧಿಕಾರಿ ಸುದರ್ಶನ್ ಘೋಷಿಸಿದರು. ಅವರು ಇಂದು ನಗರಸಭೆಯಲ್ಲಿ ಪಕ್ಷದ...

Related Articles

127 K.G ಚಿನ್ನದ ಕಳ್ಳಿ ರನ್ಯಾರಾವ್ ಗೆ 102 ಕೋಟಿ ದಂಡ

ಚಿಕ್ಕಮಗಳೂರು: ಚಿಕ್ಕಮಗಳೂರು ಮೂಲದ ಚಿತ್ರನಟಿ ರನ್ಯಾ ರಾವ್ ವಿದೇಶದಿಂದ 127ಕೆ,ಜಿ,ಚಿನ್ನ ಕದ್ದು ತಂದು ಕಂದಾಯ ಗುಪ್ತಚರ...

ಚಿನ್ನ ಕಳ್ಳಸಾಗಣೆ ಪ್ರಕರಣ: ₹277 ಕೋಟಿ ದಂಡ

ಬೆಂಗಳೂರು: ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ₹277 ಕೋಟಿ ದಂಡ ಪಾವತಿಸಿ ಎಂದು ರೆವೆನ್ಯು ಗುಪ್ತಚರ ನಿರ್ದೇಶನಾಲಯವು...

ಅಸ್ಸಾಂ ಜೈಲಿನಿಂದ ತಪ್ಪಿಸಿಕೊಂಡಿದ್ದ ಖೈದಿಗಳು ಕಾಫಿನಾಡಿನಲ್ಲಿ ಅರೆಸ್ಟ್

ಚಿಕ್ಕಮಗಳೂರು: ಪೋಕ್ಸೋ ಪ್ರಕರಣದಡಿ ಬಂಧನಕ್ಕೊಳಗಾಗಿ ಅಸ್ಸಾಂ ರಾಜ್ಯದ ಮೋರಿಗಾನ್ ಜಿಲ್ಲಾ ಕಾರಾಗೃಹದಲ್ಲಿ ಸಜಾ ಬಂಧಿಗಳಾಗಿದ್ದ ಇಬ್ಬರು...

ಪುನಗು ಬೆಕ್ಕು ಬೇಟೆಯಾಡಿದವನ ಬಂಧನ

ಚಿಕ್ಕಮಗಳೂರು:  ತಾಲೂಕಿನ ಉದ್ದೆಬೋರನಹಳ್ಳಿ ವ್ಯಾಪ್ತಿಯ ಪಾದುಮನೆ ಗ್ರಾಮದಲ್ಲಿ ಪುನುಗು ಬೆಕ್ಕು ಬೇಟೆಯಾಡಿದ್ದ ವ್ಯಕ್ತಿಯನ್ನು ಅರಣ್ಯ ಇಲಾಖೆ...