Home Crime News ವಿದ್ಯುತ್ ಸ್ಪರ್ಶಿಸಿ ಒಂಟಿ ಸಲಗ ಸಾವು : ಜಮೀನು ಮಾಲೀಕನ ವಿರುದ್ಧ ದೂರು
Crime News

ವಿದ್ಯುತ್ ಸ್ಪರ್ಶಿಸಿ ಒಂಟಿ ಸಲಗ ಸಾವು : ಜಮೀನು ಮಾಲೀಕನ ವಿರುದ್ಧ ದೂರು

Share
Share

ಚಿಕ್ಕಮಗಳೂರು : ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಡಾನೆಗಳ ಮರಣ ಮೃದಂಗ ನಿಲ್ಲದಂತಾಗಿದೆ, ಜಮೀನಿನಲ್ಲಿ ವಿದ್ಯುತ್ ತಂತಿ ತಗಲಿ ಕಾಡಾನೆಯೊಂದು ದಾರುಣವಾಗಿ ಸಾವು ಕಂಡಿದೆ. ಜಮೀನಿನಲ್ಲಿ ಕೆಳಭಾಗಕ್ಕೆ ಜೋತು ಬಿದ್ದಿದ್ದ ವಿದ್ಯುತ್ ತಂತಿಯಿಂದ ಈ ಅವಘಡ ನಡೆದಿದೆ.

ಆಹಾರ ಅರಿಸಿ ಬಂದ ಕಾಡಾನೆಗೆ ವಿದ್ಯುತ್ ತಂತಿ ತಗಲಿ ಸ್ಥಳದಲ್ಲೇ ಸಾವನ್ನಪ್ಪಿದೆ, ವಿದ್ಯುತ್ ತಂತಿ ತಗಲಿ ಕಂದಕಕ್ಕೆ ಉರುಳಿ ಬಿದ್ದಿರುವ ಒಂಟಿ ಸಲಗ ಅಸುನೀಗಿದೆ, ಕಳೆದ ಮೂರು ದಿನಗಳ ಹಿಂದೆ ಘಟನೆ ನಡೆದಿದ್ದರೂ ಕೂಡ ಅರಣ್ಯ ಇಲಾಖೆಗೆ ಮಾಹಿತಿ ಲಭ್ಯವೇ ಇರಲಿಲ್ಲ, ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಾನವ ಕಾಡಾನೆಗಳ ಸಂಘರ್ಷ ತೀವ್ರಗೊಂಡಿದೆ, ಒಂದೆಡೆ ಕಾಡಾನೆ ದಾಳಿಯಿಂದ ಮನುಷ್ಯರು ಮೃತಪಟ್ಟರೆ ಮತ್ತೊಂದೆಡೆ ವಿದ್ಯುತ್ ಅವಘಡಗಳಿಂದ ಕಾಡಾನೆಗಳು ಸಾವು ಕಾಣುತ್ತಿವೆ, ಜಮೀನಿನ ಕೆಲಸಕ್ಕೆ ತೆರಳಿದ ಶಿವಬಸಪ್ಪ ಆನೆಯ ದಾರುಣ ಸ್ಥಿತಿ ಕಂಡು ಮರುಕ ವ್ಯಕ್ತಪಡಿಸಿದ್ದಾರೆ, ಈ ಘಟನೆ ತರೀಕೆರೆ ತಾಲ್ಲೂಕಿನ ಲಿಂಗದಳ್ಳಿಯ ಉಡೆವಾ ಗ್ರಾಮದಲ್ಲಿ ನಡೆದಿದೆ, ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲ್ಲೂಕಿನಲ್ಲಿ ಎರಡು ಕಾಡಾನೆಗಳು ಮೃತಪಟ್ಟಂತಾಗಿದೆ.

Share

Leave a comment

Leave a Reply

Your email address will not be published. Required fields are marked *

Don't Miss

ನಗರದಲ್ಲಿ ಎರಡು ಗುಂಪುಗಳ ನಡುವಿನ ಗಲಾಟೆ

ಚಿಕ್ಕಮಗಳೂರು : ಮಧ್ಯರಾತ್ರಿ ರಸ್ತೆಯಲ್ಲಿ ಕೆಟ್ಟ ಶಬ್ದಗಳಿಂದ ಬೈದಾಡಿಕೊಳ್ಳುತ್ತಾ ಸಾರ್ವಜನಿಕರ ನೆಮ್ಮದಿಗೆ ಭಂಗ ತಂದ ಎರಡು ಗುಂಪುಗಳ ನಡುವಿನ ಗಲಾಟೆಯನ್ನು ತಡೆದ ಗಸ್ತು ಪೊಲೀಸರು ಮೂವರನ್ನು ವಶಕ್ಕೆ ಪಡೆದ ಘಟನೆ ಚಿಕ್ಕಮಗಳೂರು...

ಬಡ ಸಾಗುವಳಿದಾರರನ್ನು ಒಕ್ಕಲೆಬ್ಬಿಸಬಾರದು.

ಚಿಕ್ಕಮಗಳೂರು:   ಐದು ಎಕರೆಗಿಂತ ಕಡಿಮೆ ಭೂಮಿ ಹೊಂದಿರುವ ಬಡ ಸಾಗುವಳಿ ದಾರರನ್ನು ಯಾವುದೇ ಕಾರಣಕ್ಕೂ ಒಕ್ಕಲೆಬ್ಬಿಸಬಾರದು. ಈ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಅರಣ್ಯ ಸಚಿ ವರು ಸ್ಪಷ್ಟ ಸೂಚನೆ ನೀಡಿದ್ದಾರೆ ಎಂದು...

Related Articles

ಮುಳ್ಳಯ್ಯನಗಿರಿ ಕ್ರಾಸ್ ಬಳಿ ಟಿಟಿ ವಾಹನ ಮರಕ್ಕೆ ಡಿಕ್ಕಿ

ಚಿಕ್ಕಮಗಳೂರು: ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಮುಳ್ಳಯ್ಯನಗಿರಿ ಕ್ರಾಸ್ ಬಳಿ ಶುಕ್ರವಾರ ಇನೋವಾ ಕಾರು ನಿಯಂತ್ರಣ...

ಹಾಸ್ಟೆಲ್‌ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನ

ಚಿಕ್ಕಮಗಳೂರು: ಸಮಗ್ರ ಗಿರಿಜನ ಕಲ್ಯಾಣ ಇಲಾಖೆ (ಐಟಿಡಿಪಿ) ವ್ಯಾಪ್ತಿಯ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯ...

ಮನೆಯ ಮೇಲ್ಛಾವಣಿಯ ಹೆಂಚು ತೆಗೆದು ನುಗ್ಗಿ ಸರಗಳ್ಳತನ

ನರಸಿಂಹರಾಜಪುರ: ಮನೆಯಲ್ಲಿ ದಂಪತಿ ಮಲಗಿದ್ದ ವೇಳೆ ಮೇಲ್ಛಾವಣಿಯ ಹೆಂಚು ತೆಗೆದು ಒಳನುಗ್ಗಿದ ಕಳ್ಳನೊಬ್ಬ ಮಹಿಳೆಯ ಕೊರಳಿನಲ್ಲಿದ್ದ...

ಕನಸು ಫೈನಾನ್ಸ್ ಹೆಸರಿನಲ್ಲಿ ₹1.60 ಲಕ್ಷ ವಂಚನೆ ಆರೋಪ

ಕಡೂರು: ಪ್ರತಿದಿನ ಉಳಿತಾಯದ ಹಣವನ್ನು ಸ್ವೀಕರಿಸಿ ಶೇ.7ರಷ್ಟು ಬಡ್ಡಿ ನೀಡುವುದಾಗಿ ನಂಬಿಸಿ, ಹಣವನ್ನು ವಾಪಸ್ ನೀಡದೆ...