Home Political News ಆನೆ ಹಾವಳಿ ವಿಧಾನಸಭೆ ಅಧಿವೇಶನದಲ್ಲಿ ಚರ್ಚೆಯಾಗಲಿ : ಮಾಜಿ ಸಚಿವ ನಿಂಗಯ್ಯ ಒತ್ತಾಯ
Political News

ಆನೆ ಹಾವಳಿ ವಿಧಾನಸಭೆ ಅಧಿವೇಶನದಲ್ಲಿ ಚರ್ಚೆಯಾಗಲಿ : ಮಾಜಿ ಸಚಿವ ನಿಂಗಯ್ಯ ಒತ್ತಾಯ

Share
Share

ಚಿಕ್ಕಮಗಳೂರು : ಮಲೆನಾಡಿನಲ್ಲಿ ಆನೆ ಹಾವಳಿ ತೀವ್ರಗೊಂಡಿದ್ದು ಮುಂಬರುವ ಚಳಿಗಾಲದ ಅಧಿವೇಶನದಲ್ಲಿ ಈ ಕುರಿತು ವಿಸ್ತೃತ ಚರ್ಚೆ ನಡೆಸಬೇಕು ಎಂದು ಮಾಜಿ ಸಚಿವ ಬಿ.ಬಿ ನಿಂಗಯ್ಯ ಒತ್ತಾಯಿಸಿದರು.

ಪಕ್ಷಾತೀತವಾಗಿ ಎಲ್ಲ ರಾಜಕೀಯ ಮುಖಂಡರು ಆನೆ ಹಾವಳಿಗೆ ಶಾಶ್ವತ ಪರಿಹಾರ ಹುಡುಕಲು ಯತ್ನಿಸಬೇಕು. ಕಳೆದ 15 ದಿನಗಳಿಂದ ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಮಾರಿಬೆಟ್ಟ ಸುತ್ತಮುತ್ತ ಬೀಟ್ಟಮ್ಮ ಕಾಡಾನೆ ಹಾವಳಿ ತೀವ್ರಗೊಂಡಿದ್ದು, ಕಾಫಿ ಮೆಣಸು ಸೇರಿದಂತೆ ನೂರಾರು ಎಕರೆ ತೋಟ ಹಾನಿಗೊಳಗಾಗಿವೆ ಜೊತೆಗೆ ಕಾಫಿ ಕೊಯ್ಲಿನ ಸಂದರ್ಭವಾದ್ದರಿಂದ ತೋಟಗಳಿಗೆ ಕಾರ್ಮಿಕರು ತೆರಳಲು ಸಾಧ್ಯವಾಗುತ್ತಿಲ್ಲ ಅಲ್ಲದೇ ಕಾಫಿ ಹಣ್ಣುಗಳು ಉದುರುತ್ತಿದ್ದು ಕೋಟ್ಯಂತರ ರೂ. ನಷ್ಟ ಸಂಭವಿಸುವ ಭೀತಿ ಎದುರಾಗಿದೆ.

ಕಾರ್ಮಿಕರು ಹಾಗೂ ತೋಟದ ಮಾಲೀಕರಿಗೆ ಜೀವದ ಅಪಾಯ ಕೂಡ ಎದುರಾಗಿದ್ದು, ಈ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳು ನೀಡುವ ಉತ್ತರ ಕೂಡಾ ಸಮಂಜಸವಾಗಿಲ್ಲ. ಕಾಡಾನೆಗಳು ರಾತ್ರಿಪೂರ್ತಿ ಬೆಳೆನಾಶ ಮಾಡಿ ಬೆಳಗಿನ ವೇಳೆ ಮಲಗಿರುತ್ತವೆ. ಅಲ್ಲದೆ ಬೀಟ್ಟಮ್ಮ ಗ್ಯಾಂಗಿನಲ್ಲಿ ನಾಲ್ಕು ಮರಿಗಳಿದ್ದು, ಸ್ಥಳಾಂತರಗೊಳಿಸಲು ಅರಣ್ಯ ಇಲಾಖೆಗೆ ಸಾಧ್ಯವಾಗುತ್ತಿಲ್ಲ. ಆನೆ ಹಾವಳಿಯಿಂದ ಉಂಟಾಗಿರುವ ನಷ್ಟದ ವೈಜ್ಞಾನಿಕ ಸಮೀಕ್ಷೆ ಆಗಬೇಕು ಮತ್ತು ಸೂಕ್ತ ಪರಿಹಾರದ ಮೊತ್ತವನ್ನು ನೀಡಬೇಕೆಂದು ಬಿ.ಬಿ ನಿಂಗಯ್ಯ ಒತ್ತಾಯಿಸಿದರು.

Share

Leave a comment

Leave a Reply

Your email address will not be published. Required fields are marked *

Don't Miss

ಪದವಿ ಪೂರ್ವ ಕಾಲೇಜುಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟ

ಚಿಕ್ಕಮಗಳೂರು:  ಪರಿಶ್ರಮ ವಹಿಸಿದಾಗ ನಿಮ್ಮ ಭವಿಷ್ಯ ಸ್ವತಹಾ ನೀವೇ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು. ಅವರು ಇಂದು ರಾಮನಹಳ್ಳಿಯ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಶಾಲಾ ಶಿಕ್ಷಣ...

ನಗರಸಭೆ ನೂತನ ಉಪಾಧ್ಯಕ್ಷರಾಗಿ ಲಲಿತಾ ರವಿನಾಯ್ಕ ಅವಿರೋಧ ಆಯ್ಕೆ

ಚಿಕ್ಕಮಗಳೂರು:  ನಗರಸಭೆ ೩೫ನೇ ವಾರ್ಡಿನ ಕೆಂಪನಹಳ್ಳಿ ಬಡಾವಣೆಯ ಬಿಜೆಪಿ ಸದಸ್ಯೆ ಲಲಿತಾ ರವಿನಾಯ್ಕ ನಗರಸಭೆ ನೂತನ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿಯಾಗಿದ್ದ ಉಪವಿಭಾಗಾಧಿಕಾರಿ ಸುದರ್ಶನ್ ಘೋಷಿಸಿದರು. ಅವರು ಇಂದು ನಗರಸಭೆಯಲ್ಲಿ ಪಕ್ಷದ...

Related Articles

ಕೇಂದ್ರ ಸರ್ಕಾರದ ಅನುದಾನ ಹಾಗೂ ತೆರಿಗೆ ಪಾಲು ಕುರಿತು ನಮ್ಮ ಸರ್ಕಾರ ‘ಶ್ವೇತಪತ್ರ’ ಪತ್ರ

ವಿಧಾನಸಭೆ:  ಕೇಂದ್ರ ಸರ್ಕಾರವು ಕೇಂದ್ರ ಪುರಸ್ಕೃತ ಯೋಜನೆಗಳಿಗೆ ರಾಜ್ಯಕ್ಕೆ ನೀಡುತ್ತಿರುವ ಅನುದಾನ ಹಾಗೂ ತೆರಿಗೆ ಪಾಲು...

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಎಂಬ ನಾಟಕ…!

ಚಿಕ್ಕಮಗಳೂರು: ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಲು ತುದಿಗಾಲಿನಲ್ಲಿ ನಿಂತಿದ್ದವರಿಗೆ ಸದ್ಯಕ್ಕೆ ಬ್ರೇಕ್ ಬಿದ್ದಿದೆ. ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷರಾಗಲು...

ಬಿ.ಎಲ್.ಶಂಕರ್ ರಾಜಕೀಯ ಹಿನ್ನಡೆ ಏಕೆ ?

ಚಿಕ್ಕಮಗಳೂರು: ಬಿ.ಎಲ್.ಶಂಕರ್ ರಾಜಕೀಯ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ದೊಡ್ಡ ಶಕ್ತಿಯಾಗಿದ್ದವರು ಹಿನ್ನಡೆ ಅನುಭವಿಸುತ್ತಿರುವುದು ಏಕೆ ?...

ಬಿ.ಎಲ್.ಶಂಕರ್ ಗೆ ಮತ್ತೆ ಮತ್ತೆ ಮಿಸ್…?

ಚಿಕ್ಕಮಗಳೂರು: ರಾಜ್ಯ ಸಭೆ ಅಥವಾ ವಿಧಾನ ಪರಿಷತ್ ಸ್ಥಾನಗಳಿಗೆ ಆಯ್ಕೆ ಮಾಡುವಾಗ ಬಿ.ಎಲ್.ಶಂಕರ್ ಹೆಸರು ಎವರೆಸ್ಟ್...