Home Political News ಆನೆ ಹಾವಳಿ ವಿಧಾನಸಭೆ ಅಧಿವೇಶನದಲ್ಲಿ ಚರ್ಚೆಯಾಗಲಿ : ಮಾಜಿ ಸಚಿವ ನಿಂಗಯ್ಯ ಒತ್ತಾಯ
Political News

ಆನೆ ಹಾವಳಿ ವಿಧಾನಸಭೆ ಅಧಿವೇಶನದಲ್ಲಿ ಚರ್ಚೆಯಾಗಲಿ : ಮಾಜಿ ಸಚಿವ ನಿಂಗಯ್ಯ ಒತ್ತಾಯ

Share
Share

ಚಿಕ್ಕಮಗಳೂರು : ಮಲೆನಾಡಿನಲ್ಲಿ ಆನೆ ಹಾವಳಿ ತೀವ್ರಗೊಂಡಿದ್ದು ಮುಂಬರುವ ಚಳಿಗಾಲದ ಅಧಿವೇಶನದಲ್ಲಿ ಈ ಕುರಿತು ವಿಸ್ತೃತ ಚರ್ಚೆ ನಡೆಸಬೇಕು ಎಂದು ಮಾಜಿ ಸಚಿವ ಬಿ.ಬಿ ನಿಂಗಯ್ಯ ಒತ್ತಾಯಿಸಿದರು.

ಪಕ್ಷಾತೀತವಾಗಿ ಎಲ್ಲ ರಾಜಕೀಯ ಮುಖಂಡರು ಆನೆ ಹಾವಳಿಗೆ ಶಾಶ್ವತ ಪರಿಹಾರ ಹುಡುಕಲು ಯತ್ನಿಸಬೇಕು. ಕಳೆದ 15 ದಿನಗಳಿಂದ ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಮಾರಿಬೆಟ್ಟ ಸುತ್ತಮುತ್ತ ಬೀಟ್ಟಮ್ಮ ಕಾಡಾನೆ ಹಾವಳಿ ತೀವ್ರಗೊಂಡಿದ್ದು, ಕಾಫಿ ಮೆಣಸು ಸೇರಿದಂತೆ ನೂರಾರು ಎಕರೆ ತೋಟ ಹಾನಿಗೊಳಗಾಗಿವೆ ಜೊತೆಗೆ ಕಾಫಿ ಕೊಯ್ಲಿನ ಸಂದರ್ಭವಾದ್ದರಿಂದ ತೋಟಗಳಿಗೆ ಕಾರ್ಮಿಕರು ತೆರಳಲು ಸಾಧ್ಯವಾಗುತ್ತಿಲ್ಲ ಅಲ್ಲದೇ ಕಾಫಿ ಹಣ್ಣುಗಳು ಉದುರುತ್ತಿದ್ದು ಕೋಟ್ಯಂತರ ರೂ. ನಷ್ಟ ಸಂಭವಿಸುವ ಭೀತಿ ಎದುರಾಗಿದೆ.

ಕಾರ್ಮಿಕರು ಹಾಗೂ ತೋಟದ ಮಾಲೀಕರಿಗೆ ಜೀವದ ಅಪಾಯ ಕೂಡ ಎದುರಾಗಿದ್ದು, ಈ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳು ನೀಡುವ ಉತ್ತರ ಕೂಡಾ ಸಮಂಜಸವಾಗಿಲ್ಲ. ಕಾಡಾನೆಗಳು ರಾತ್ರಿಪೂರ್ತಿ ಬೆಳೆನಾಶ ಮಾಡಿ ಬೆಳಗಿನ ವೇಳೆ ಮಲಗಿರುತ್ತವೆ. ಅಲ್ಲದೆ ಬೀಟ್ಟಮ್ಮ ಗ್ಯಾಂಗಿನಲ್ಲಿ ನಾಲ್ಕು ಮರಿಗಳಿದ್ದು, ಸ್ಥಳಾಂತರಗೊಳಿಸಲು ಅರಣ್ಯ ಇಲಾಖೆಗೆ ಸಾಧ್ಯವಾಗುತ್ತಿಲ್ಲ. ಆನೆ ಹಾವಳಿಯಿಂದ ಉಂಟಾಗಿರುವ ನಷ್ಟದ ವೈಜ್ಞಾನಿಕ ಸಮೀಕ್ಷೆ ಆಗಬೇಕು ಮತ್ತು ಸೂಕ್ತ ಪರಿಹಾರದ ಮೊತ್ತವನ್ನು ನೀಡಬೇಕೆಂದು ಬಿ.ಬಿ ನಿಂಗಯ್ಯ ಒತ್ತಾಯಿಸಿದರು.

Share

Leave a comment

Leave a Reply

Your email address will not be published. Required fields are marked *

Don't Miss

ವಿದ್ಯುತ್ ಸ್ಪರ್ಶದಿಂದ ಎರಡು ಜಾನುವಾರುಗಳ ಸಾವು

ನರಸಿಂಹರಾಜಪುರ: ಜಮೀನಿಗೆ ಅಳವಡಿಸಿದ್ದ ಐಬೆಕ್ಸ್ ತಂತಿ ಬೇಲಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿದ್ದ ಪರಿಣಾಮ ಎರಡು ಜಾನುವಾರುಗಳು ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿರುವ ಘಟನೆ ನರಸಿಂಹರಾಜಪುರ ತಾಲೂಕಿನ ಗದ್ದೆಮನೆ ಕಾನೂರು ಗ್ರಾಮದಲ್ಲಿ ನಡೆದಿದೆ....

ಜಿಲ್ಲೆಯಲ್ಲಿ ಮಂತ್ರಿಯಾಗಲಿಲ್ಲ ರಗಳೆ ಬಿಟ್ಟಿಲ್ಲ

ಚಿಕ್ಕಮಗಳೂರು; ಮದುವೆ ಆಗಲಿಲ್ಲ, ಹುಚ್ಚು ಬಿಡಲಿಲ್ಲ ಎಂಬ ಸ್ಥಿತಿ ಮಂತ್ರಿ ಆಗಲಿಲ್ಲ, ಓಡಾಡುವುದು ತಪ್ಪಲಿಲ್ಲ.ಎಂಬ ದುಸ್ಥಿತಿ ಕಾಂಗ್ರೆಸ್ ಚುನಾಯಿತ ಪ್ರತಿನಿಧಿಗಳದ್ದು. ಜಿಲ್ಲೆಗೆ ಯಾವುದೇ ಕಾರಣಕ್ಕೂ ಮಂತ್ರಿಗಿರಿ ಸಿಗುವುದಿಲ್ಲ ಎಂಬುದಕ್ಕೆ ಕಾರಣ ನೀಡಿ...

Related Articles

ಅರತಿಕೃಷ್ಣಗೆ ಮಂತ್ರಿ ಗ್ಯಾರಂಟಿ – ಶ್ರೀನಿವಾಸ್ ತಿರುಪತಿಗೆ ? – ನಯನ ನವ ಅವತಾರಕ್ಕೆ ಭಂಗ, ಭಂಗ

ಚಿಕ್ಕಮಗಳೂರು: ಜಿಲ್ಲೆಯ ಲ್ಲಿ ಮಂತ್ರಿಯಾಗ ಬೇಕು ಎಂದು ಪಟ್ಟು ಹಿಡಿದವರು ಪಲ್ಟಿ ಹೊಡೆದಿದ್ದಾರೆ ಆದರೆ ಅರತಿಕೃಷ್ಣ...

ಮೌಲ್ಯ – ಸೇವೆ ಮರೆತು ಹಣ ದೂಚಲು ಪ್ರಜಾಪ್ರಭುತ್ವದ ಕಗ್ಗೂಲೆ…

ಅದಲು-ಬದಲು ಯಾವ ಪಕ್ಷಗಳಿಗೆ ಸಿದ್ದಾಂತ, ನೈತಿಕತೆ ಇದೆ ಭಾರತದಲ್ಲಿ ಸಾಧ್ಯವಿಲ್ಲ. ಎಲ್ಲಾ ಪಕ್ಷಗಳು ಬೆರಿಕೆಯ ತುರಿಕೆಯಲ್ಲಿವೆ.ಅದರಲ್ಲೂ...

ರಾಜಕಾರಣದಲ್ಲಿ ಮಠಗಳ, ಸಂಘಟನೆಗಳ “ಆರ್ಭಟ”

ರಾಜ್ಯ ರಾಜಕಾರಣದಲ್ಲಿ ಇತ್ತೀಚಿನ ವರ್ಷಗಳಲ್ಲಿ ಮಠಗಳ ಪ್ರಭಾವ ಮತ್ತು ಸಂಘಟನೆಗಳು ಆರ್ಭಟ ಮಾಡುತ್ತಿರುವುದು ನೋಡಿದರೆ ಎತ್ತ...

ಜಿಲ್ಲೆಯಲ್ಲಿ ಗೂಟದ ಕಾರಿಗಾಗಿ “ಕೈ ಪಡೆ” ಯ ಕಸರತ್ತು !

ಚಿಕ್ಕಮಗಳೂರು: ಮುಖ್ಯ ಮಂತ್ರಿಯಾಗಿದ್ದ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದರಿಂದ ಉಳಿದ ಎರಡು ವರ್ಷಗಳ ಅವಧಿಗೆ ಡಿ.ಕೆ.ಮುಖ್ಯಮಂತ್ರಿಯಾಗಿ ದೇವಸ್ಥಾನ,...