Home Political News ಆನೆ ಹಾವಳಿ ವಿಧಾನಸಭೆ ಅಧಿವೇಶನದಲ್ಲಿ ಚರ್ಚೆಯಾಗಲಿ : ಮಾಜಿ ಸಚಿವ ನಿಂಗಯ್ಯ ಒತ್ತಾಯ
Political News

ಆನೆ ಹಾವಳಿ ವಿಧಾನಸಭೆ ಅಧಿವೇಶನದಲ್ಲಿ ಚರ್ಚೆಯಾಗಲಿ : ಮಾಜಿ ಸಚಿವ ನಿಂಗಯ್ಯ ಒತ್ತಾಯ

Share
Share

ಚಿಕ್ಕಮಗಳೂರು : ಮಲೆನಾಡಿನಲ್ಲಿ ಆನೆ ಹಾವಳಿ ತೀವ್ರಗೊಂಡಿದ್ದು ಮುಂಬರುವ ಚಳಿಗಾಲದ ಅಧಿವೇಶನದಲ್ಲಿ ಈ ಕುರಿತು ವಿಸ್ತೃತ ಚರ್ಚೆ ನಡೆಸಬೇಕು ಎಂದು ಮಾಜಿ ಸಚಿವ ಬಿ.ಬಿ ನಿಂಗಯ್ಯ ಒತ್ತಾಯಿಸಿದರು.

ಪಕ್ಷಾತೀತವಾಗಿ ಎಲ್ಲ ರಾಜಕೀಯ ಮುಖಂಡರು ಆನೆ ಹಾವಳಿಗೆ ಶಾಶ್ವತ ಪರಿಹಾರ ಹುಡುಕಲು ಯತ್ನಿಸಬೇಕು. ಕಳೆದ 15 ದಿನಗಳಿಂದ ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಮಾರಿಬೆಟ್ಟ ಸುತ್ತಮುತ್ತ ಬೀಟ್ಟಮ್ಮ ಕಾಡಾನೆ ಹಾವಳಿ ತೀವ್ರಗೊಂಡಿದ್ದು, ಕಾಫಿ ಮೆಣಸು ಸೇರಿದಂತೆ ನೂರಾರು ಎಕರೆ ತೋಟ ಹಾನಿಗೊಳಗಾಗಿವೆ ಜೊತೆಗೆ ಕಾಫಿ ಕೊಯ್ಲಿನ ಸಂದರ್ಭವಾದ್ದರಿಂದ ತೋಟಗಳಿಗೆ ಕಾರ್ಮಿಕರು ತೆರಳಲು ಸಾಧ್ಯವಾಗುತ್ತಿಲ್ಲ ಅಲ್ಲದೇ ಕಾಫಿ ಹಣ್ಣುಗಳು ಉದುರುತ್ತಿದ್ದು ಕೋಟ್ಯಂತರ ರೂ. ನಷ್ಟ ಸಂಭವಿಸುವ ಭೀತಿ ಎದುರಾಗಿದೆ.

ಕಾರ್ಮಿಕರು ಹಾಗೂ ತೋಟದ ಮಾಲೀಕರಿಗೆ ಜೀವದ ಅಪಾಯ ಕೂಡ ಎದುರಾಗಿದ್ದು, ಈ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳು ನೀಡುವ ಉತ್ತರ ಕೂಡಾ ಸಮಂಜಸವಾಗಿಲ್ಲ. ಕಾಡಾನೆಗಳು ರಾತ್ರಿಪೂರ್ತಿ ಬೆಳೆನಾಶ ಮಾಡಿ ಬೆಳಗಿನ ವೇಳೆ ಮಲಗಿರುತ್ತವೆ. ಅಲ್ಲದೆ ಬೀಟ್ಟಮ್ಮ ಗ್ಯಾಂಗಿನಲ್ಲಿ ನಾಲ್ಕು ಮರಿಗಳಿದ್ದು, ಸ್ಥಳಾಂತರಗೊಳಿಸಲು ಅರಣ್ಯ ಇಲಾಖೆಗೆ ಸಾಧ್ಯವಾಗುತ್ತಿಲ್ಲ. ಆನೆ ಹಾವಳಿಯಿಂದ ಉಂಟಾಗಿರುವ ನಷ್ಟದ ವೈಜ್ಞಾನಿಕ ಸಮೀಕ್ಷೆ ಆಗಬೇಕು ಮತ್ತು ಸೂಕ್ತ ಪರಿಹಾರದ ಮೊತ್ತವನ್ನು ನೀಡಬೇಕೆಂದು ಬಿ.ಬಿ ನಿಂಗಯ್ಯ ಒತ್ತಾಯಿಸಿದರು.

Share

Leave a comment

Leave a Reply

Your email address will not be published. Required fields are marked *

Don't Miss

30 ಲಕ್ಷ ರೂಪಾಯಿ ಹಣ ನೀಡುವಂತೆ ಬ್ಲಾಕ್‌ ಮೆಲ್

ಚಿಕ್ಕಮಗಳೂರು: ಎಡಿಟ್ ಮಾಡಿದ ಗೃಹಿಣಿಯೊಬ್ಬರ ಫೋಟೋಗಳನ್ನು ಅವರ ಮೊಬೈಲ್‌ಗೇ ಕಳುಹಿಸಿ, ಬರೋಬ್ಬರಿ 30 ಲಕ್ಷ ರೂಪಾಯಿ ಹಣ ನೀಡುವಂತೆ ಕಿಡಿಗೇಡಿಗಳು ಬೇಡಿಕೆಯಿಟ್ಟಿದ್ದ ಘಟನೆ ಬೆಳಕಿಗೆ ಬಂದಿದೆ. ಒಂದು ವೇಳೆ ಹಣ ನೀಡದಿದ್ದರೆ...

ವಿವಾಹಿತ ಮಹಿಳೆಗಾಗಿ ನಡೆದ ಜಗಳದಲ್ಲಿ ಕೈ ಕಟ್

ಎನ್.ಆ‌ರ್.ಪುರ: ವಿವಾಹಿತ ಮಹಿಳೆಯೊಬ್ಬರಿಗಾಗಿ ಇಬ್ಬರು ವ್ಯಕ್ತಿಗಳು ಲಾಂಗು ಮಚ್ಚಿನಿಂದ ಬಡಿದಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆ‌ರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಅಡಿಗೆಬೈಲು ಗ್ರಾಮದಲ್ಲಿ ನಡೆದಿದೆ. ಗಂಡನಿಂದ ದೂರವಿದ್ದ ಮಹಿಳೆಯೊಬ್ಬರ ವಿಚಾರವಾಗಿ ಶೇಷಗಿರಿ...

Related Articles

ರಾಜಕಾರಣದಲ್ಲಿ ಮಠಗಳ, ಸಂಘಟನೆಗಳ “ಆರ್ಭಟ”

ರಾಜ್ಯ ರಾಜಕಾರಣದಲ್ಲಿ ಇತ್ತೀಚಿನ ವರ್ಷಗಳಲ್ಲಿ ಮಠಗಳ ಪ್ರಭಾವ ಮತ್ತು ಸಂಘಟನೆಗಳು ಆರ್ಭಟ ಮಾಡುತ್ತಿರುವುದು ನೋಡಿದರೆ ಎತ್ತ...

ಜಿಲ್ಲೆಯಲ್ಲಿ ಗೂಟದ ಕಾರಿಗಾಗಿ “ಕೈ ಪಡೆ” ಯ ಕಸರತ್ತು !

ಚಿಕ್ಕಮಗಳೂರು: ಮುಖ್ಯ ಮಂತ್ರಿಯಾಗಿದ್ದ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದರಿಂದ ಉಳಿದ ಎರಡು ವರ್ಷಗಳ ಅವಧಿಗೆ ಡಿ.ಕೆ.ಮುಖ್ಯಮಂತ್ರಿಯಾಗಿ ದೇವಸ್ಥಾನ,...

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಂಪುಟದ 13 ಸಚಿವರಿಗೆ ಖಾತೆ ಹಂಚಿಕೆ

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್  ಅವರು ತಮ್ಮ ಸಂಪುಟದ (Cabinet) ಮೊದಲ 13 ಸಚಿವರಿಗೆ ಖಾತೆಯನ್ನು...

ಡಿ.ಕೆ.ಗೆ ಪ್ರಾರಂಭದಲ್ಲಿ ಡಿಚ್ಚಿ ! ಹರಿ ಬ್ರೇಕ್, ಸಿದ್ದು ಸ್ಟೀರಿಂಗ್ ಯಾವ ಕಡೆ ತಿರುಗುತ್ತದೆ

ಬೆಂಗಳೂರು:  ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಯಾರನ್ನು ನಂಬಿದ್ದರು ಅವರೇ ಕೈ ಕೊಡುವ ಸೂಚನೆ ಅರಿತು ರಾಹುಲ್...