Home namma chikmagalur chikamagalur ಶೃಂಗೇರಿ ಕ್ಷೇತ್ರದಲ್ಲಿ ಆನೆಗಳ ಕಾಟ-ರಾಜಕೀಯದವರ ತಿಕ್ಕಾಟ
chikamagalurHomeLatest Newsnamma chikmagalur

ಶೃಂಗೇರಿ ಕ್ಷೇತ್ರದಲ್ಲಿ ಆನೆಗಳ ಕಾಟ-ರಾಜಕೀಯದವರ ತಿಕ್ಕಾಟ

Share
Share

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಗೂ ಕಾಡು ಪ್ರಾಣಿಗಳಿಗೂ ಅವಿನಾಭಾವ ಸಂಬಂಧ. ಆನೆಗಳು, ಕಾಡು ಕೋಣಗಳು,ಜಿಂಕೆ, ಸಾರಂಗ, ಚಿರತೆ,ಹುಲಿಗಳು ಸಾಮಾನ್ಯ. ಆದರೆ ಎಂದೂ ಮನುಷ್ಯರ ಜೊತೆಗೆ ಸಂಘರ್ಷ ಇರಲಿಲ್ಲ.ಆದರೆ ಇಂದು ‌ಮನುಷ್ಯನ ಜೀವ ತೆಗೆಯುತ್ತಿರುವ ಕಾಡಾನೆಗಳ ಉಪಟಳ ಹೇಳ ತೀರದಾಗಿದೆ

ಒಂದು ವಾರದಲ್ಲಿ ಇಬ್ಬರನ್ನು ಬಲಿ ತೆಗೆದುಕೊಂಡ ಆನೆಯ ಕಾಟಕ್ಕೆ ಜನ ತತ್ತರಗುಟ್ಟಿದ್ದಾರೆ.ಇದನ್ನು ಬಿಜೆಪಿಯವರು ಲಾಭ ಪಡೆಯಲು ಹೋರಾಟ ರೂಪಿಸುವ ಬದಲು ಶಾಸಕ ರಾಜೇಗೌಡರ ಹಣಿಯಲು ಹಿಂಸೆ ಮಾಡತೊಡಗಿದ್ದಾರೆ.

ಮೂಡಿಗೆರೆ ಕ್ಷೇತ್ರದಲ್ಲಿ ಆನೆಗಳ ಉಪಟಾಳ ಹೆಚ್ಚಾಗಿ ಆನೆ ವ್ಯಕ್ತಿಯೊಬ್ಬನ ಮೇಲೆ ದಾಳಿ ನಡೆಸಿದಾಗ ಸ್ಥಳಕ್ಕೆ ಭೇಟಿ ಕೊಟ್ಟಿದ್ದ ಶಾಸಕ ಎಂ.ಪಿ.ಕುಮಾರಸ್ವಾಮಿಯ ಬಟ್ಟೆ ಹರಿದು ಹಲ್ಲೆ ನಡೆಸಲು ಜನ ರೊಚ್ಚಿಗೆ ಎದ್ದಾಗ ಕುಮಾರಸ್ವಾಮಿ ಎದ್ದು,ಬಿದ್ದು ಓಡಿದ್ದು ಕಣ್ಣು ಮುಂದಿದೆ.

ಶೃಂಗೇರಿ ಕ್ಷೇತ್ರದಲ್ಲಿ ಕೂಡ ಇಂತಹ ವಾತವರಣ ಸೃಷ್ಟಿಯಾದರೆ ಆಶ್ಚರ್ಯ ಪಡುವಂತಿಲ್ಲ.ಒಂದೇ ವಾರದಲ್ಲಿ ಇಬ್ಬರ ಜೀವ ತೆಗೆದ ಆನೆ ಈ ವರ್ಷದಲ್ಲಿ ಹತ್ತಕ್ಕೂ ಹೆಚ್ಚು ಜನರ ಪ್ರಾಣ ತೆಗೆದಿರುವುದರಿಂದ ಜನ ಸಹಜವಾಗಿ ಆಕ್ರೋಶಗೊಂಡಿದ್ದಾರೆ.ಜಿಲ್ಲೆಯಲ್ಲಿ ಅರಣ್ಯ ಇಲಾಖೆ ಸತ್ತು ಹೋಗಿದೆ ಬಡವರಿಗೆ ಒಂದು ಕಾನೂನು ,ನೀತಿ,ನಿಯಮ ಶ್ರೀಮಂತ ರಿಗೆ ಅಧಿಕಾರಸ್ಥರಿಗೆ ಒಂದು ಕಾನೂನು ಪಾಲನೆ ಮಾಡುತ್ತಿದ್ದು ಜನರ ಸಿಟ್ಟಿನ ಕಟ್ಟೆ ಹೊಡೆಯುವುದು ಖಚಿತ.

ಕಾಡು ಪ್ರಾಣಿಗಳು ನಾಡಿಗೆ ಬರಲು ಪ್ರಮುಖ ಕಾರಣ ಅರಣ್ಯ ಇಲಾಖೆಗೆ ತಿಳಿದಿರುವುದು ಬಹಿರಂಗ ಸತ್ಯ. ಇವುಗಳಿಗೆ ತಿನ್ನಲು ಆಹಾರ,ಕುಡಿಯಲು ನೀರು ಸ್ವಚ್ಛಂದ ವಾಗಿ ಸುತ್ತಲೂ ಕಾಡು ಬೇಕು. ಆದರೆ ಇಂದು ಅರಣ್ಯ ಇಲಾಖೆ ರೆಸಾರ್ಟ್, ಹೋಮ್ ಸ್ಟೇ ಹಗಲು ರಾತ್ರಿ ತಿರುಗಾಡಲು ಪ್ರವಾಸಿಗರಿಗೆ ಅನುಮತಿ ಕೊಟ್ಟಿರುವುದರಿಂದ ಕಾಡುಪ್ರಾಣಿಗಳು ಕಾಡು ಬಿಟ್ಟು ನಾಡಿಗೆ ಬರ ತೊಡಗಿವೆ ಹೀಗಾಗಿ ದಿನಕ್ಕೊಂದು ಕ್ಷಣಕ್ಕೊಂದು ಅನಾಹುತಗಳು ನಡೆಯುತ್ತಿವೆ.

ಅಧಿಕಾರಸ್ಥರು,ಪರಿಸರ ವ್ಯಾಧಿಗಳು ಪತ್ರಿಕೆಗೆ ಹೇಳಿಕೆ ನೀಡಿ ಕೈತೊಳೆದು ಕೊಳ್ಳುತ್ತಿದ್ದಾರೆ.ಜನಸಾಮಾನ್ಯರ ಪ್ರಾಣಕ್ಕೆ ಪರಿಹಾರ ನೀಡುವ ಸರ್ಕಾರ ಶಾಶ್ವತ ಪರಿಹಾರ ಕಂಡುಕೊಳ್ಳದಿದ್ದರೆ ಜನ ರೊಚ್ಚಿಗೆದ್ದ ಕೈಗೆ ಸಿಕ್ಕವರಿಗೆ ಅನಾಹುತ ಮಾಡುವುದು ಖಚಿತ.

ಶೃಂಗೇರಿ ಕ್ಷೇತ್ರ ಬಂದ್: ಕಾಡಾನೆ ದಾಳಿಯಿಂದಾಗಿ ಜನ ರೊಚ್ಚಿಗೆದ್ದ ಘಟನೆ ನಡೆದಿದೆ. ಶಾಸಕ ರಾಜೇಗೌಡ ಮತ್ತು ಜಿಲ್ಲಾಡಳಿತದ ವಿರುದ್ದ ಘೋಷಣೆ ಕೂಗಿದಾಗ ಪೊಲೀಸರು ಲಘ ಲಾಠಿ ಬೀಸಿ ಜನರನ್ನು ಚದುರಿಸಿದ್ದಾರೆ.ಮೃತ ಮಹಿಳೆಯ ದೇಹ ಸಾಗಿಸಲು ಜನ ತಡೆ ಒಡ್ಡಿದಾಗ ಗಲಭೆ ಪ್ರಾರಂಭವಾಗಿ ಪೊಲೀಸರು ಜನರನ್ನು ಚದುರಿಸಲು ಲಾಠಿ ಬೀಸಿದ್ದಾರೆ.

Elephant menace-politician clash in Sringeri constituency

 

 

Share

Leave a comment

Leave a Reply

Your email address will not be published. Required fields are marked *

Don't Miss

ಮನೆಯ ಮೇಲೆ ಕಲ್ಲು ತೂರಾಟ-ದೂರು ಪ್ರತಿ ದೂರು ದಾಖಲು

ಚಿಕ್ಕಮಗಳೂರು: ನಗರದ ವಿಜಯಪುರ ಬಡಾವಣೆಯಲ್ಲಿ ಅನ್ಯಕೋಮಿನ ಯುವಕರು ಹಿಂದೂಗಳ ಮನೆಯ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಈ ಘಟನೆಯಿಂದಾಗಿ ಇಡೀ ನಗರ ಮಧ್ಯರಾತ್ರಿ ಅಕ್ಷರಶಃ ಬೂದಿ...

ಶಾಲಾ ಮಕ್ಕಳ ಕರ್ನಾಟಕ ದರ್ಶನಕ್ಕೆ ಚಾಲನೆ

ಚಿಕ್ಕಮಗಳೂರು: ಪ್ರವಾಸೋದ್ಯಮ ಇಲಾಖೆ ಹಾಗೂ ಶಾಲಾ ಶಿಕ್ಷಣ ಇಲಾಖೆ ಸಂಯುಕ್ತಾಶ್ರಯದಲ್ಲಿ ತಾಲ್ಲೂಕಿನ ೧೩೩ ಮಕ್ಕಳಿಗೆ ಉಚಿತವಾಗಿ ೫ ದಿನಗಳ ಕಾಲ ರಾಜ್ಯದ ವಿವಿಧ ತಾಣಗಳಿಗೆ ಏರ್ಪಡಿಸಲಾಗಿರುವ ಪ್ರವಾಸ ಕಾರ್ಯಕ್ರಮಕ್ಕೆ ಸೋಮವಾರ ಶಾಸಕ...

Related Articles

ಜೀವಹಾನಿ ತಪ್ಪಿಸಲು ಕರ್ನಾಟಕ ರಾಜ್ಯ ರೈತ ಸಂಘ ಮನವಿ

ಚಿಕ್ಕಮಗಳೂರು: ಜಿಲ್ಲೆಯ ಕಾಡಂಚಿನ ಗ್ರಾಮಗಳೂ ಸೇರಿದಂತೆ ಕಾಡುಪ್ರಾಣಿಗಳಿಂದ ಆಗುತ್ತಿರುವ ಜೀವಹಾನಿಯನ್ನು ತಪ್ಪಿಸಲು ಶಾಶ್ವತ ಪರಿಹಾರ ಕಂಡುಕೊಳ್ಳುವಂತೆ...

ಫೆ.̄25ಕ್ಕೆ ಪೌರಕಾರ್ಮಿಕರಿಗೊಂದು ನಮನ

ಚಿಕ್ಕಮಗಳೂರು: ಸ್ವಚ್ಛ ನಗರ ಸುಂದರ ಪರಿಸರ ಪೌರ ಕಾರ್ಮಿಕರ ಸೇವೆಗೆ ನಾಗರಿಕರ ನಮನ ಎಂಬ ಘೋಷವಾಕ್ಯದೊಂದಿಗೆ...

ಗ್ಯಾರಂಟಿ ಯೋಜನೆಗಳು ರಾಜ್ಯದ ಆರ್ಥಿಕ ಶಕ್ತಿ

ಚಿಕ್ಕಮಗಳೂರು: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಕೇವಲ ಭರವಸೆಗಳಾಗಿ ಉಳಿಯದೆ, ಇಂದು ನಾಡಿನ ಆರ್ಥಿಕತೆಯ...

ಕಾಡಾನೆ ತುಳಿತಕ್ಕೆ ಮಹಿಳೆ ಬಲಿ-29 ಮಂದಿ ವಿರುದ್ಧ ಎಫ್.ಐ.ಆರ್ ದಾಖಲು

ಚಿಕ್ಕಮಗಳೂರು: ಕಾಡಾನೆ ತುಳಿದು ಮಹಿಳೆಯೊಬ್ಬರು ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮರಣೋತ್ತರ ಪರೀಕ್ಷೆಗೆ ಶವವನ್ನು ಸಾಗಿಸುತ್ತಿದ್ದ ವಾಹನವನ್ನು...