ಚಿಕ್ಕಮಗಳೂರು: ಪಶ್ಚಿಮ ಘಟ್ಟ ವ್ಯಾಪ್ತಿಯ ರಾಜ್ಯದ ೧೦ ಜಿಲ್ಲೆಗಳ ೨೦ ಸಾವಿರಕ್ಕೂ ಅಧಿಕ ಚದರ ಕಿಲೋ ಮೀಟರ್ ಪ್ರದೇಶವನ್ನು ಪರಿಸರ ಸೂಕ್ಷ್ಮ ವಲಯ ಎಂದು ಕೇಂದ್ರ ಸರ್ಕಾರದ ಪರಿಸರ ಮತ್ತು ಹವಾಮಾನ ಬದಲಾವಣೆ ಇಲಾಖೆ ಏಳನೇ ಕರಡು ಅಧಿಸೂಚನೆ ಹೊರಡಿಸಿರುವುದು ಮಲೆನಾಡಿನ ಜನರಿಗೆ ಮಾರಕವಾಗಿ ಪರಿಣಮಿಸಿದೆ. ಒಂದು ವೇಳೆ ಈ ಪ್ರದೇಶವನ್ನು ಪರಿಸರ ಸೂಕ್ಮಪ್ರದೇಶ ಎಂದು ಘೋಷಿಸಿದ್ದೇ ಆದಲ್ಲಿ ಮಲೆನಾಡಿನ ಜನ ಬೀದಿಗೆ ಬರಲಿದ್ದಾರೆ ಎಂದು ಸಾಮಾಜಿಕ ಹೋರಾಟಗಾರ ಹೊಲದಗದ್ದೆ ಗಿರೀಶ್ ಪ್ರಕಟಣೆಯಲ್ಲಿ ಆತಂಕ ವ್ಯಕ್ತಪಡಿಸಿದ್ದಾರೆ.
ಕರಡು ಅಧಿಸೂಚನೆಯಂತೆ ಚಿಕ್ಕಮಗಳೂರು ಜಿಲ್ಲೆಯ ೧೩೭ ಗ್ರಾಮಗಳು ಪರಿಸರ ಸೂಕ್ಷ್ಮ ಪ್ರದೇಶದ ವ್ಯಾಪ್ತಿಗೆ ಬರಲಿವೆ. ಒಂದು ವೇಳೆ ಇದು ಜಾರಿಯಾಗಿದ್ದೇ ಆದಲ್ಲಿ ರೈತರು ತಮ್ಮ ಸ್ವಂತ ಜಮೀನಲ್ಲಿ ಕೃಷಿ ಮಾಡುವುದು, ಅಗತ್ಯ ವಸತಿ ನಿರ್ಮಾಣ ಮಾಡಿಕೊಳ್ಳಲು ಅಥವಾ ಕೃಷಿಯೇತರ ಉದ್ದೇಶಗಳಿಗೆ ಭೂಮಿ ಬಳಸಲು ಕಠಿಣ ಅನುಮತಿ ಪಡೆಯಬೇಕಾಗುತ್ತದೆ ಎಂದು ಹೇಳಿದ್ದಾರೆ.
ಪರಿಸರ ಸೂಕ್ಷ್ಮ ಪ್ರದೇಶ ಘೋ?ಣೆಯಾದಲ್ಲಿ ಈಗಾಗಲೇ ಇರುವ ಜೀವನಾಧಾರಿತ ಒತ್ತುವರಿ, ಮನೆಗಳಿಗೆ ಯಾವುದೇ ಕಾರಣಕ್ಕೂ ಹಕ್ಕುಪತ್ರ ಸಿಗುವುದಿಲ್ಲ. ಮುಂದಿನ ದಿನಗಳಲ್ಲಿ ಅನಿವಾರ್ಯವಾಗಿ ಭೂಮಿಯನ್ನು ಸರ್ಕಾರಕ್ಕೆ ಕೊಡುವ ಪರಿಸ್ಥಿತಿ ಬಂದರೆ ಆ ಜಾಗದ ಮಾಲೀಕರಿಗೆ ಪರಿಹಾರವೂ ಸಿಗದ ಸ್ಥಿತಿ ನಿರ್ಮಾಣವಾಗಲಿದೆ. ಮಲೆನಾಡು ಭಾಗದಲ್ಲಿ ಬೆಳೆಯುವ ರಬ್ಬರ್, ಕಾಫಿ, ಕಾಳು ಮೆಣಸು, ಅಡಿಕೆ ಸೇರಿದಂತೆ ವಿವಿಧ ಬೆಳೆಗಳಿಗೆ ರಾಸಾಯನಿಕ ಅಥವಾ ರಾಸಾಯನಿಕ ಗೊಬ್ಬರ ಬಳಕೆ ಮಾಡಲು ನಿಬಂಧ ಹೇರಲಾಗುತ್ತದೆ. ಇದರಿಂದ ರೈತರು ಬೆಳೆ ಕಳೆದುಕೊಂಡು ಆರ್ಥಿಕವಾಗಿ ಸಂಕ?ಕ್ಕೆ ಸಿಲುಕುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.
ಪ್ರಮುಖವಾಗಿ ಮಲೆನಾಡಿನ ಗ್ರಾಮಗಳಲ್ಲಿರುವ ಹಳ್ಳಿಗಳಿಗೆ ರಸ್ತೆ ಸಂಪರ್ಕ ವಿದ್ಯುತ್ ಸಂಪರ್ಕ ಸೇರಿದಂತೆ ಮೂಲ ಸೌಕರ್ಯ ಒದಗಿಸಲು ಕಠಿಣ ಅನುಮತಿ ಪಡೆಯಬೇಕಾಗುತ್ತದೆ. ಅಲ್ಲದೆ ಪರಿಸರ ಸೂಕ್ಷ್ಮ ಪ್ರದೇಶ ಘೋ?ಣೆಯಿಂದ ಮಲೆನಾಡು ಭಾಗದ ಭೂಮಿಯ ಮಾರಾಟ, ಖರೀದಿ ಕಡಿಮೆಯಾಗಲಿದೆ. ಇದರಿಂದ ಭೂಮಿಯ ಮೌಲ್ಯ ಗಣನೀಯವಾಗಿ ಕುಸಿಯುವ ಸಾಧ್ಯತೆಯಿದೆ. ಭೂಮಿಯ ಮೌಲ್ಯ ಕುಸಿಯುವುದರಿಂದ ಬ್ಯಾಂಕುಗಳು ಕೃಷಿಕರಿಗೆ ಸಾಲ ನೀಡಲು ಹಿಂದೇಟು ಹಾಕುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಪರಿಸರ ಸೂಕ್ಷ್ಮ ವಲಯ ಪ್ರದೇಶ ಘೋ?ಣೆಯಿಂದ ವನ್ಯಜೀವಿ ಮತ್ತು ಮಾನವ ಸಂಘ? ಇನ್ನ? ಹೆಚ್ಚಾಗುವುದು ಜೊತೆಗೆ ಜನರು ಬದುಕುವುದೇ ಕ?ವಾಗಲಿದೆ. ವನ್ಯಜೀವಿಗಳ ದಾಳಿಯಿಂದ ಏನಾದರೂ ಅನಾಹುತ ಸಂಭವಿಸಿದಲ್ಲಿ ಪರಿಹಾರ ಸಿಗುವುದು ಕ?ವಾಗಲಿದೆ. ಜೊತೆಗೆ ಕಾಡಿನಲ್ಲಿ ಬದುಕುತ್ತಿರುವ ಆದಿವಾಸಿಗಳು ಸ್ಥಳಾಂತಗೊಳ್ಳಬೇಕಾದ ಅಪಾಯವೂ ಇದೆ. ಮಲೆನಾಡಿನ ಕೃಷಿಕರಿಂದಲೇ ಪರಿಸರ ಉಳಿದಿದೆ. ಇಲ್ಲಿ ಕೃಷಿಕರೇ ಇಲ್ಲ ಎಂದಾದಲ್ಲಿ ಪರಿಸರದ ಮೇಲೆ ದು?ರಿಣಾಮ ಉಂಟಾಗುವ ಸಾಧ್ಯತೆಯಿದೆ ಎಂದು ತಿಳಿಸಿದ್ದಾರೆ.
ಮಲೆನಾಡು ಜನರ ಹಿತರಕ್ಷಣೆಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ಪರಿಸರ ಸೂಕ್ಷ್ಮ ವಲಯ ಘೋ?ಣೆ ಅಧಿಸೂಚನೆ ಕೈ ಬಿಡಬೇಕು. ಇರುವ ಅರಣ್ಯ ಕಾಯ್ದೆಗಳನ್ನೇ ಬಳಸಿಕೊಂಡು ಅರಣ್ಯ ಸಂರಕ್ಷಿಸಲು ಕ್ರಮ ಕೈಗೊಳ್ಳಬೇಕು. ಮಲೆನಾಡು ಭಾಗದ ಜನರು ಕೂಡಲೇ ಈ ಅಧಿಸೂಚನೆಗೆ ವಿರೋಧ ವ್ಯಕ್ತಪಡಿಸಿ ನಿಗದಿತ ಅವಧಿಯೊಳಗೆ ಆಕ್ಷೇಪಣೆ ಸಲ್ಲಿಸಬೇಕು. ಜೊತೆಗೆ ರಾಜ್ಯ ಸರ್ಕಾರವೂ ವಿಧಾನ ಮಂಡಲದಲ್ಲಿ ಈ ಬಗ್ಗೆ ಒಮ್ಮತದ ನಿರ್ಣಯ ಕೈಗೊಂಡು ಕೇಂದ್ರ ಸರ್ಕಾರಕ್ಕೆ ಆಕ್ಷೇಪಣೆ ಸಲ್ಲಿಸಬೇಕಿದೆ. ಜೊತೆಗೆ ಈ ಭಾಗದ ಸಂಸದರು ಅಧಿಸೂಚನೆ ವಿರೋಧಿಸಿ ಸಂಸತ್ತಿನಲ್ಲಿ ಧ್ವನಿ ಎತ್ತಬೇಕು ಎಂದು ಮನವಿ ಮಾಡಿದ್ದಾರೆ.
Environmentally sensitive area draft notification a thorn in the side of Malnadi
Leave a comment