Home namma chikmagalur chikamagalur ಜಿಲ್ಲೆಯಲ್ಲಿ ಸೌಹಾಧ ಬ್ಯಾಂಕ್ ಸ್ಥಾಪನೆ
chikamagalurHomeLatest Newsnamma chikmagalur

ಜಿಲ್ಲೆಯಲ್ಲಿ ಸೌಹಾಧ ಬ್ಯಾಂಕ್ ಸ್ಥಾಪನೆ

Share
Share

ಚಿಕ್ಕಮಗಳೂರು: ಜಿಲ್ಲಾ ಕೃಷಿ ಪರಿಕರಗಳ ಮಾರಾಟ ಸಂಘದ ವತಿಯಿಂದ ಜಿಲ್ಲೆಯಲ್ಲಿ ಸೌಹಾಧ ಬ್ಯಾಂಕ್ ಸ್ಥಾಪನೆ ಮಾಡಲು ಅಗತ್ಯವಾಗಿ ಬೇಕಾದ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಸಂಘದ ರಾಜ್ಯಾಧ್ಯಕ್ಷ ಬಸವನಗೌಡ ಮಾಲಿ ಪಾಟೀಲ್ ಭರವಸೆ ನೀಡಿದರು.

ಅವರು ಮಂಗಳವಾರ ಎಐಟಿ ಕಾಲೇಜು ವೃತ್ತದಲ್ಲಿ ಇರುವ ಒಕ್ಕಲಿಗರ ಸಮುದಾಯ ಭವನದಲ್ಲಿ ಜಿಲ್ಲಾ ಕೃಷಿ ಪರಿಕರಗಳ ಮಾರಾಟಗಾರರ ಸಂಘ ಏರ್ಪಡಿಸಿದ್ದ ೨೦೨೪-೨೫ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯನ್ನು ಉದ್ಘಾಟಿಸಿ ಮಾತನಾಡಿ  ಮುಂದಿನ ದಿನಗಳಲ್ಲಿ ರೈತರಿಗೆ ಕೃಷಿ ಇಲಾಖೆ ಸಹಯೋಗದಲ್ಲಿದೊರೆಯುವ ಹಲವಾರು ಸಾಮಾಜಿಕ ಕಾರ್ಯಗಳ ಜೊತೆಗೆ ಲಭ್ಯವಿರುವ ಸೌಲಭ್ಯಗಳನ್ನು ಒದಗಿಸಲು ಬದ್ಧವಾಗಿರುವುದಾಗಿಅವರು ಹೇಳಿ ವಿದ್ಯಾರ್ಥಿಯುವಜನರಿಗಾಗಿಟಾಟಾ, ಇನ್ಫೋಸಿಸ್, ಟೋಯಾಟಾ ಮುಂತಾದ ಪ್ರಸಿದ್ಧ ಕಂಪೆನಿಗಳಿಂದ ಉದ್ಯೋಗ ಮೇಳ ನೆಡೆಸುವಂತೆಜಿಲ್ಲಾಧ್ಯಕ್ಷರಿಗೆ ಸೂಚನೆ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಸಂಘದಜಿಲ್ಲಾಧ್ಯಕ್ಷಕೆ.ಆರ್‌ಯೋಗೀಶ್ ಮಾತನಾಡಿರೈತರ ಒಳಿತಿಗಾಗಿ ಸಾಮಾಜಿಕ, ಸ್ವತಂತ್ರ ಹೋರಾಟಗಾರರಿಗೆ, ಯೋಧರಿಗೆ, ಸಮಾಜದಲ್ಲಿಆರ್ಥಿಕ ಸಂಕಷ್ಟದಲ್ಲಿರುವ ಬಡವರಿಗೆಜಿಲ್ಲಾ ಸಂಘದ ವತಿಯಿಂದಆರ್ಥಿಕ ನೆರವು ನೀಡಲು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ ಎಂದರು. ಮುಂದಿನ ದಿನಗಳಲ್ಲಿ ಸಂಘದ ಸರ್ವ ಸದಸ್ಯರ ಸಭೆಕರೆದುಚರ್ಚಿಸಿ ವಿವಿದೋದ್ದೇಶಸೌಹಾರ್ಧ ಬ್ಯಾಂಕ್ ಸ್ಥಾಪಿಸಲು ನಿರ್ಧರಿಸುವುದಾಗಿ ಭರವಸೆ ನೀಡಿದರು.

ಕೃಷಿ ಇಲಾಖೆಯಜಂಟಿ ನಿರ್ದೇಶಕಡಾ. ತಿರುಮಲೇಶ್ ಮಾತನಾಡಿಹಾಲು ಉತ್ಪಾಧಕರ ಸಹಕಾರ ಸಂಘ, ಮಾವು ಬೆಳೆಗಾರರ ಸಂಘ, ಕಾಫೀ ಬೆಳೆಗಾರರ ಸಂಘ ಮುಂತಾದ ಸಂಘಗಳು ಶೂನ್ಯದಿಂದಆರಂಭವಾಗಿಕೋಟ್ಯಾಂತರರೂ ವಹಿವಾಟು ನೆಡೆಸುತ್ತಿರುವುದನ್ನುಕಾಣುತ್ತಿದ್ದು. ಇದೇ ಮಾದರಿಯಲ್ಲಿಕೃಷಿ ಪರಿಕರ ಮಾರಾಟಗಾರರ ಸಂಘ ಸೌಹಾರ್ಧ ಬ್ಯಾಂಕ್ ಸ್ಥಾಪಿಸುವ ಮೂಲಕ ಆರ್ಥಿಕ ಸದೃಢರಾಗಬೇಕೆಂದುಕರೆ ನೀಡಿದರು.

ಈ ಸಂದರ್ಭದಲ್ಲಿರಾಜ್ಯಉಪಾಧ್ಯಕ್ಷಡಾ. ಮಹಾಬಲ, ಮೈಸೂರು ಕಾರ್ಯದರ್ಶಿ ಮಾಲತೇಶ್, ಬಳ್ಳಾರಿ ತಿಮ್ಮೇಗೌಡ, ಜಿಲ್ಲಾ ಉಪಾಧ್ಯಕ್ಷರುಗಳಾದ ಉದಯ್ ಪೈ, ಟಿ.ಡಿತಿಮ್ಮಯ್ಯ, ಖಜಾಂಚಿ ಶ್ರೀಕಾಂತ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಜಿ.ಮನೂಪ್‌ಉಪಸ್ಥಿತರಿದ್ದರು.

Establishment of Souhadha Bank in the district

Share

Leave a comment

Leave a Reply

Your email address will not be published. Required fields are marked *

Don't Miss

ಅಮಾನವೀಯ ಜಾನುವಾರು ಸಾಗಾಟ – ಮೂವರ ಬಂಧನ

ಎನ್.ಆರ್. ಪುರ: ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಹಾಗೂ ಅಮಾನವೀಯ ಜಾನುವಾರು ಸಾಗಾಟ ಪ್ರಕರಣವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಈ ಸಂಬಂಧ ಮೂವರನ್ನು ಬಂಧಿಸಿ, ವಾಹನ ಮತ್ತು ಜಾನುವಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ...

ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವ ಕೆಲಸ ಮಾಧ್ಯಮಗಳು ಮಾಡಬೇಕು

ಚಿಕ್ಕಮಗಳೂರು: ಬಡವರ ಕಷ್ಟಗಳನ್ನು, ಸಮಸ್ಯೆಗಳನ್ನು ಸಮಾಜದ ಮತ್ತು ಸರ್ಕಾರದ ಗಮನಕ್ಕೆ ತರುವ ಕೆಲಸವನ್ನು ಮಾಧ್ಯಮಗಳು ಮಾಡಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಸಲಹೆ ಮಾಡಿದರು. ಹೊನ್ನ ಬಿತ್ತೇವು ಹೊಲಕೆಲ್ಲ ಮತ್ತು ನ್ಯೂಸ್ ಕಿಂಗ್...

Related Articles

ನೀರುಗಂಟಿ ಆತ್ಮಹತ್ಯೆ ಪ್ರಕರಣದಲ್ಲಿ ಎಫ್‌ಐಆರ್ ದಾಖಲು

ಚಿಕ್ಕಮಗಳೂರು: ಅಣೂರು ಗ್ರಾಮ ಪಂಚಾಯಿತಿಯಲ್ಲಿ ನೀರುಗಂಟಿಯಾಗಿ ಕೆಲಸ ಮಾಡುತ್ತಿದ್ದ ರಮೇಶ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ,...

ಹೇಮಾವತಿ ನದಿಯ ಅಕ್ರಮವಾಗಿ ಮರಳು ಸಾಗಣೆ ಪ್ರಕರಣ ಪತ್ತೆ

ಮೂಡಿಗೆರೆ: ಜೀವನದಿ ಹೇಮಾವತಿಯ ಒಡಲಿಗೆ ಕನ್ನ ಹಾಕಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಜಾಲದ ಮೇಲೆ ಗೋಣಿಬೀಡು...

ಕಾಫಿನಾಡಿನಲ್ಲಿ ರಂಜಾನ್ ಅಂಗವಾಗಿ ಸಾಮೂಹಿಕ ಪ್ರಾರ್ಥನೆ

ಚಿಕ್ಕಮಗಳೂರು : ಕಾಫಿನಾಡಿನಲ್ಲಿ ಪವಿತ್ರ ರಂಜಾನ್ ಹಬ್ಬದ ಸಂಭ್ರಮವು ಸಡಗರ ಹಾಗೂ ಸೌಹಾರ್ದತೆಯಿಂದ ಕಳೆಗಟ್ಟಿತ್ತು. ಕೆಂಪನಹಳ್ಳಿಯ...

ಕಾಫಿ ತೋಟದಲ್ಲಿ ಮರಗಸಿ – ಕಾರ್ಮಿಕನ ಸಾವು

ಚಿಕ್ಕಮಗಳೂರು : ಕಾಫಿ ತೋಟದ ಮಾಲೀಕರು ಮತ್ತು ಮೇಸ್ತ್ರಿಗಳ ನಿರ್ಲಕ್ಷ್ಯಕ್ಕೆ ಅಮಾಯಕ ಕಾರ್ಮಿಕನೊಬ್ಬ ಬಲಿಯಾದ ದಾರುಣ...