Home namma chikmagalur ಪ್ರಜಾಪ್ರಭುತ್ವದಲ್ಲಿ ಮಾತನಾಡಲು ಎಲ್ಲರಿಗೂ ಸ್ವಾತಂತ್ರವಿದೆ
namma chikmagalurchikamagalurHomeLatest News

ಪ್ರಜಾಪ್ರಭುತ್ವದಲ್ಲಿ ಮಾತನಾಡಲು ಎಲ್ಲರಿಗೂ ಸ್ವಾತಂತ್ರವಿದೆ

Share
Share

ಚಿಕ್ಕಮಗಳೂರು: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರಿಗೂ ಮಾತಾಡಲು ಸ್ವತಂತ್ರವಿದೆ. ರಾಜಣ್ಣ ಅವರು ತಮ್ಮ ಅಭಿಪ್ರಾಯ ಹೇಳಿದ್ದಾರೆ ಎಂದು ಸಚಿವ ಕೃಷ್ಣಭೈರೇಗೌಡ ಅವರು ಸೆಪ್ಟಂಬರ್ ಬಳಿಕ ಸರ್ಕಾರದಲ್ಲಿ ಬದಲಾವಣೆ ಕುರಿತ ರಾಜಣ್ಣ ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು.

ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಿನಿಮಾ ರೀತಿ ಸ್ಕ್ರಿಪ್ಟ್ ಇರುವುದಿಲ್ಲ. ಇಲ್ಲಿ ಏಳು-ಬೀಳು, ಅಡರು-ತೊಡರು ಇದ್ದೇ ಇರುತ್ತದೆ. ಅದರ ಮಧ್ಯೆಯೂ ಕೆಲಸ ಮಾಡುವುದಕ್ಕಾಗಿ ಜನ ನಮ್ಮನ್ನು ಆಯ್ಕೆ ಮಾಡಿ ಕಳುಹಿಸಿದ್ದಾರೆ ಎಂದು ತಿಳಿಸಿದರು.

ಎಷ್ಟು ದಿನ ಅಧಿಕಾರದಲ್ಲಿ ಇರುತ್ತೇವೆಯೋ ಗೊತ್ತಿಲ್ಲ. ಆದರೆ ಅಧಿಕಾರದಲ್ಲಿ ಇರುವಷ್ಟು ದಿನ ಜನರಿಗೆ ಒಳ್ಳೆಯದಾಗುವ ಕೆಲಸ ಮಾಡೋಣ ಎಂದರು.

ಯಾವ ಬದಲಾವಣೆ ಆಗುತ್ತದೆಯೋ ನನಗೆ ಗೊತ್ತಿಲ್ಲ. ಆದರೆ ಕಂದಾಯ ಇಲಾಖೆಯಲ್ಲಿ ಯಾವ ಬದಲಾವಣೆ ಮಾಡಬೇಕು ಎನ್ನುವುದು ಗೊತ್ತಿದೆ. ಇಲ್ಲಿ ಏನೇನು ಬದಲಾವಣೆ ಮಾಡಬೇಕು ಎಂದು ಸಿಎಂ ಹಾಗೂ ಪಕ್ಷ ಹೇಳಿದೆ. ಬೇರೆ ಬದಲಾವಣೆಗಳ ಬಗ್ಗೆ ನನಗೆ ಗೊತ್ತಿಲ್ಲ. ಜೊತೆಗೆ ಅದು ನನಗೆ ಬೇಕಾಗಿಯೂ ಇಲ್ಲ. ಯಾವ ಜನ್ಮದ ಪುಣ್ಯವೋ ಏನೋ ನನಗೆ ಜನರ ಕೆಲಸ ಮಾಡುವ ಅವಕಾಶ ಸಿಕ್ಕಿದೆ. ಅಷ್ಟು ಸಾಕು ಎಂದು ಹೇಳಿದರು.

Everyone has freedom of speech in a democracy.

Share

Leave a comment

Leave a Reply

Your email address will not be published. Required fields are marked *

Don't Miss

ಕಡೂರು ತಾಲೂಕು ಸರ್ಕಾರದ ಬರಪಟ್ಟಿಗೆ ವೈ.ಎಸ್.ವಿ. ದತ್ತಾ ಆಗ್ರಹ

ಕಡೂರು: ಇಡೀ ಜಿಲ್ಲೆಯಲ್ಲಿ ಅತ್ಯಂತ ಬರಗಾಲಕ್ಕೆ ತುತ್ತಾಗಿರುವ ತಾಲೂಕು ಎಂದರೆ ಕಡೂರು ತಾಲೂಕು, ಈ ಸಾಲಿನಲ್ಲಿ ಪ್ರಾರಂಭದಿಂದಲೂ  ಮಳೆ ಬಂದಿಲ್ಲ, ಮುಂಗಾರು ಬಿತ್ತನೆ ಆಗಿಲ್ಲ, ಆಗಸ್ಟ್ ತಿಂಗಳು ಕಳೆಯುತ್ತಾ ಬಂದರು ರಾಗಿ...

ಟಿಪ್ಪು ಕಟೌಟ್‌ಗೆ ಪಾಕಿಸ್ತಾನ ಪರ ಹಾಡು ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಬೃಹತ್ ಪ್ರತಿಭಟನೆ

ಚಿಕ್ಕಮಗಳೂರು: ನಗರದ ಟಿಪ್ಪುನಗರದಲ್ಲಿ ಈದ್ ಮಿಲಾದ್ ಹಿನ್ನೆಲೆಯಲ್ಲಿ ಅಳವಡಿಸಲಾಗಿದ್ದ ಟಿಪ್ಪು ಸುಲ್ತಾನ್ ಅವರ ಬೃಹತ್ ಕಟೌಟ್‌ಗೆ ಪಾಕಿಸ್ತಾನ ಪರವಾದ ಹಾಡನ್ನು ಅಳವಡಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿರುವುದನ್ನು ಖಂಡಿಸಿ, ರಾಷ್ಟ್ರ ಸುರಕ್ಷಾ ಸಮಿತಿ...

Related Articles

ಕಸಾಪ ಅಧ್ಯಕ್ಷಗಿರಿಗೆ ಜಾಣಗೆರೆ ವೆಂಕಟರಾಮಯ್ಯ ಸೂಕ್ತ

ಚಿಕ್ಕಮಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಡಿಸೆಂಬರ್‌ನಲ್ಲಿ ಚುನಾವಣೆ ನಡೆಯಲಿದ್ದು, ಈಗಾಗಲೇ ಸರ್ಕಾರ ಚುನಾವಣಾಧಿಕಾರಿಯನ್ನು...

ಚಿಕ್ಕೊಳಲೆ ಸುತ್ತ ಕುರುಡು ಕಾಡುಕೋಣದ ಉಪಟಳ

ಚಿಕ್ಕಮಗಳೂರು: ನಗರದ ಸಮೀಪದ ಚಿಕ್ಕೊಳಲೆ ಸುತ್ತಮುತ್ತ ಹಲವು ದಿನಗಳಿಂದ ಕಣ್ಣು ಕಾಣದ ಕಾಡುಕೋಣವೊಂದು ಸುತ್ತಾಡುತ್ತಿದ್ದು, ಗ್ರಾಮಸ್ಥರಲ್ಲಿ...

ರಾಜಕಾರಣದಲ್ಲೂ ಮಹಿಳೆಯರು ಸ್ಥಾನಮಾನಕ್ಕಾಗಿ ಒಗ್ಗಟ್ಟಾಗಿ ಧ್ವನಿ ಎತ್ತಬೇಕು

ಚಿಕ್ಕಮಗಳೂರು:  ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಬಳಿಕ ಡಿಕೆ ಶಿವಕುಮಾರ ನೇತೃತ್ವದ ರಚನೆಯಾದ ನೂತನ ಸಚಿವ...

ಗುಟ್ಕಾ ನಿಷೇಧ ವಿರೋಧಿಸಿ ಬಿಜೆಪಿ ಜಿಲ್ಲಾ ರೈತ ಮೋರ್ಚಾ ಪ್ರತಿಭಟನೆ

ಚಿಕ್ಕಮಗಳೂರು: ಗುಟ್ಕಾ ನಿಷೇಧದ ಕುರಿತು ರಾಜ್ಯ ಸರ್ಕಾರ ನೀಡಿರುವ ಹೇಳಿಕೆಯಿಂದ ಅಡಕೆ ಬೆಲೆ ಕುಸಿದು ರೈತರು...