Home Latest News ಮಾಜಿ ಶಾಸಕ ಜೀವರಾಜ್‌ ಸರ್ಕಾರಕ್ಕೆ ತೆರಿಗೆ ವಂಚನೆ
Latest NewschikamagalurHomenamma chikmagalur

ಮಾಜಿ ಶಾಸಕ ಜೀವರಾಜ್‌ ಸರ್ಕಾರಕ್ಕೆ ತೆರಿಗೆ ವಂಚನೆ

Share
Share

ನರಸಿಂಹರಾಜಪುರ: ಮಾಜಿ ಶಾಸಕ ಡಿ.ಎನ್.ಜೀವರಾಜ್ ಅವರು ವ್ಯವಸಾಯದ ಜಮೀನನ್ನು ವ್ಯವಸಾಯೇತರ ಉದ್ದೇಶಕ್ಕೆ ಪರಿವರ್ತನೆ ಮಾಡಿಕೊಂಡ ಬಳಿಕ ಸಂಬಂಧಪಟ್ಟ ಗ್ರಾಮ ಪಂಚಾಯಿತಿಗೆ ಕಂದಾಯ ಪಾವತಿಸದೇ ಸರ್ಕಾರಕ್ಕೆ ₹15 ರಿಂದ ₹20 ಲಕ್ಷ ನಷ್ಟವನ್ನುಂಟು ಮಾಡಿ ವಂಚಿಸಿದ್ದಾರೆ ಎಂದು ಕಾಂಗ್ರೆಸ್ ಜಿಲ್ಲಾ ಸಂಚಾಲಕ ಎಂ.ಆರ್.ರವಿಶಂಕರ್ ಆರೋಪಿಸಿದರು.

ಇಲ್ಲಿನ ಪ್ರವಾಸಿ ಮಂದಿರದಲ್ಲಿ ಮಂಗಳವಾರ ನಡೆದ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ ಮೆಣಸೂರು ಗ್ರಾಮದ ಸ.ನಂ121/2 ಮತ್ತು ಸ.ನಂ 121/1 ಮಾಜಿ ಶಾಸಕರಿಗೆ ಮತ್ತು ಅವರ ಪರಿವಾರಕ್ಕೆ ಸೇರಿದ್ದು ಮೊದಲಿಗೆ ಕೃಷಿ ಭೂಮಿ ಅನ್ಯಕ್ರಾಂತಗೊಂಡಿದ್ದವು. ಇದರಲ್ಲಿ ಮತ್ತೊಮ್ಮೆ ಸ.ನಂ121/1 ಕಂದಾಯಕ್ಕೆ ಬಂದಿರುತ್ತದೆ. ಈ ಜಮೀನಿನಲ್ಲಿ ಚರಂಡಿ, ಕಾಂಕ್ರಿಟ್ ರಸ್ತೆ ನಿರ್ಮಾಣ ಮಾಡಿದ ಬಗ್ಗೆ ಸಾರ್ವಜನಿಕರೊಬ್ಬರು ದೂರು ಸಲ್ಲಿಸಿದ ಚಿಕ್ಕಮಗಳೂರು ಉಪವಿಭಾಗಾಧಿಕಾರಿ ತನಿಖೆ ನಡೆಸಿ ಈ ಅನ್ಯಕ್ರಾಂತ ಪ್ರದೇಶದಲ್ಲಿ ಕಾಂಕ್ರಿಟ್ ರಸ್ತೆ ಹಾಗೂ ಚರಂಡಿ ನಿರ್ಮಿಸಿದ್ದು ಕೃಷಿ ಉದ್ದೇಶಕ್ಕೆ ಜಮೀನು ಬಳಕೆಯಾಗಿಲ್ಲ. 0–23 ಗುಂಟೆ ನಕಾಶೆ ಕಂಡ ಕೆರೆಯನ್ನು ಖಾತೆದಾರರು ಒತ್ತುವರಿ ಮಾಡಿರುವುದು ಕಂಡು ಬಂದಿದೆ. ಸಂ.ನಂ 78ರಲ್ಲಿ 0–03 3/4 ಎ.ಗುಂ ಸರ್ಕಾರಿ ಪ್ರದೇಶದಲ್ಲಿ 2 ವಾಸದ ಮನೆ ನಿರ್ಮಿಸಿರುವುದು ಕಂಡು ಬಂದಿರುವ ಬಗ್ಗೆ ವರದಿ ನೀಡಿದ್ದಾರೆ ಎಂದರು.

ಅಧಿಕಾರ ದುರುಪಯೋಗ ಮಾಡಿ ಕೊಂಡು ಜಿಲ್ಲಾಡಳಿತದ ದಾರಿತಪ್ಪಿಸಿ ಕಂದಾಯ ಭೂಮಿಯಲ್ಲಿ ರಸ್ತೆ ಚರಂಡಿ ನಿರ್ಮಿಸಿದ್ದಾರೆ ಎಂದು ದೂರಿದರು.

ಕೊಪ್ಪದಲ್ಲಿ ನಡೆದ ಬಿಜೆಪಿ ಸಭೆಯಲ್ಲಿ ಮಿನಿ ವಿಧಾನಸೌಧಗಳು ಸೋರುತ್ತಿವೆ ಎಂದು ಮುಖಂಡರೊಬ್ಬರು ಆರೋಪಿಸಿದ್ದಾರೆ. ನರಸಿಂಹರಾಜಪುರದಲ್ಲಿ ಕೋಟಿ ಗಟ್ಟಲೆ ವೆಚ್ಚದಲ್ಲಿ ಮಿನಿವಿಧಾನ ಸೌಧ ನಿರ್ಮಿಸಿ ಹದಿನೈದು ವರ್ಷದಲ್ಲಿಯೇ ಶಿಥಿಲಾವಸ್ಥೆಗೆ ತಲುಪಿದ್ದು ಇದನ್ನು ನಿರ್ಮಿಸಿರುವ ಗುತ್ತಿಗೆದಾರನ ವಿರುದ್ಧ ಸರ್ಕಾರ ತನಿಖೆ ನಡೆಸಿ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.

ಪಟ್ಟಣದ ವಾರ್ಡ್ ನಂ7ರ ಅಸೆಸ್ ಮೆಂಟ್ ನಂ 432,438,690,691 ನಿವೇಶನವನ್ನು ಮಾಜಿ ಶಾಸಕರು ತಮ್ಮ ಪತ್ನಿ ಹೆಸರಿನಲ್ಲಿ ಖರೀದಿಸಿದ್ದು ಇದು 1962–63ರಲ್ಲಿ ಚಂದ್ರಶೇಖರ್ ಭಟ್ ಮತ್ತು ಕುಟುಂಬದ ಆಸ್ತಿಯಾಗಿದೆ. ಇದರ ದಾಖಲೆ ಮತ್ತು ಮಾಜಿ ಶಾಸಕರು ನೋಂದಣಿ ಮಾಡಿಸಿರುವ ಪತ್ರಕ್ಕೂ ವ್ಯತ್ಯಾಸವಿದ್ದು ಹೆಚ್ಚುವರಿ ಜಾಗವನ್ನು ಪ್ರತಿಷ್ಠಿತ ಸಂಸ್ಥೆಗೆ ಮಾರಾಟ ಮಾಡಿ ಮೋಸ ಎಸಗಿದ್ದಾರೆ ಎಂದು ದೂರಿದರು.

ಕಾಂಗ್ರೆಸ್ ಮುಖಂಡ ಎಚ್.ಎಂ.ಮನು ಮಾತನಾಡಿ, ಮಾಜಿ ಶಾಸಕರು ಸಭೆಗಳಲ್ಲಿ ವೈಯಕ್ತಿಕವಾಗಿ ನಿಂದಿಸುತ್ತಿದ್ದಾರೆ. ಇವರು ಎಷ್ಟು ಹಣ ಕೊಟ್ಟಿದ್ದಾರೆ. ಯಾವ ರೀತಿ ಆಹಾರ, ಬಟ್ಟೆ ನೀಡಿದ್ದಾರೆ ಎಂದು ಬಹಿರಂಗ ಪಡಿಸಲಿ. ಕಾರ್ಯಕರ್ತರ ಪರಿಶ್ರಮದಿಂದ ಶಾಸಕ, ಮಂತ್ರಿಯಾಗಿ ಪಿಂಚಣಿ ಪಡೆಯುತ್ತಿದ್ದಾರೆ. ಮಾಜಿ ಶಾಸಕರ ವಿರುದ್ಧ ದಾಖಲಾಗಿದ್ದ ಗಂಭೀರ ಪ್ರಕರಣದ ಆರೋಪಕ್ಕೆ ಸಂಬಂಧಿಸಿದಂತೆ ದೇವಸ್ಥಾನದಲ್ಲಿ ಬಂದು ಆಣೆ ಪ್ರಮಾಣ ಮಾಡಬೇಕು. ನನ್ನಿಂದ ಮಾನನಷ್ಟ ಆಗಿದ್ದರೆ ಇದುವರೆಗೆ ಯಾಕೆ ಮಾನನಷ್ಟ ಮೊಕದ್ದಮೆ ದಾಖಲಿಸಲಿಲ್ಲ ಎಂಬುದನ್ನು ಬಹಿರಂಗ ಪಡಿಸಬೇಕು ಎಂದರು.

ತಾಲ್ಲೂಕು ಕಾಂಗ್ರೆಸ್ ಘಟಕದ ಅಧ್ಯಕ್ಷೆ ಗೇರುಬೈಲು ನಟರಾಜ್ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಕ್ಷೇತ್ರದಲ್ಲಿ ಬಿಜೆಪಿಯವರು ಶಾಸಕರ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದು ಇದರ ಬಗ್ಗೆ ಹೋರಾಟ ಮಾಡಲಾಗುವುದು ಎಂದರು. ಮುಖಂಡರಾದ ಪಿ.ಆರ್.ಸದಾಶಿವ, ಪ್ರಶಾಂತ್ ಶೆಟ್ಟಿ, ಮಹೇಶ್ ಮಾತನಾಡಿದರು. ಮುಖಂಡರಾದ ಈ.ಸಿ.ಜೋಯಿ, ಜುಬೇದಾ, ಎಸ್.ಡಿ.ರಾಜೇಂದ್ರ, ಬೆನ್ನಿ, ಬಿನು, ರತನ್ ಗೌಡ, ದೇವಂತ್ ಗೌಡ, ನಂದೀಶ್, ಮುನಾವರಪಾಷ, ಬಿ.ಎಸ್.ಸುಬ್ರಹ್ಮಣ್ಯ, ಸಾಜು ಮತ್ತಿತರರಿದ್ದರು.

Ex-MLA Jivaraj tax evasion to the government

Share

Leave a comment

Leave a Reply

Your email address will not be published. Required fields are marked *

Don't Miss

ಮಲೆನಾಡು ಭಾಗದಲ್ಲಿ ಭಾರೀ ಗಾಳಿ-ಮಳೆಯ ಅಬ್ಬರಕ್ಕೆ ಜನ ಜೀವನ ಅಸ್ತವ್ಯಸ್ತ

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಮುಂಗಾರು ಮಳೆ ತಡವಾಗಿ ಆರಂಭಗೊಂಡಿದ್ದರೂ ಇದೀಗ ಭರ್ಜರಿಯಾಗಿ ಸುರಿಯುತ್ತಿದ್ದು, ಮಲೆನಾಡು ಭಾಗದಲ್ಲಿ ಭಾರೀ ಗಾಳಿ-ಮಳೆಯ ಅಬ್ಬರಕ್ಕೆ ಹಲವು ಅವಾಂತರಗಳು ಸೃಷ್ಟಿಯಾಗಿವೆ. ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಸುರಿಯುತ್ತಿರುವ ಮಳೆಗೆ ಹಲವು...

ಕಳಸದಲ್ಲಿ ಬೃಹತ್ ಮರ ಬಿದ್ದು ಆಟೋರಿಕ್ಷಾ ಜಖಂ

ಕಳಸ: ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಗುಡ್ಡೆಮಕ್ಕಿ ಗ್ರಾಮದಲ್ಲಿ ಭಾರಿ ಗಾಳಿ-ಮಳೆಯ ಆರ್ಭಟಕ್ಕೆ ಸುಧೀರ್ ಆಚಾರ್ ಎಂಬುವವರ ಮನೆ ಮುಂದೆ ನಿಲ್ಲಿಸಲಾಗಿದ್ದ ಆಟೋರಿಕ್ಷಾ ಹಾಗೂ ಅವರ ಮನೆಯ ಮೇಲೆ ಬೃಹತ್ ಮರವೊಂದು...

Related Articles

ವೀರಶೈವ ಲಿಂಗಾಯತ ಸಮಾರಂಭದಲ್ಲಿ “ಕುರ್ಚಿ” ತಿಕ್ಕಾಟ ಹಲವು ಸ್ವಾಮಿಜೀಗಳ ವಿರೋದ

ಚಿಕ್ಕಮಗಳೂರು: ವಿಗ್ರಹ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಸ್ವಾಮಿಗಳ ಮಧ್ಯೆ ಕುರ್ಚಿಗಾಗಿ ಪ್ರತಿರೋಧ ಪ್ಯಕ್ತಪಡಿಸಿ ಹೊರ ನಡೆದ ಘಟನೆ...

ಕಡೂರು ತಾಲ್ಲೂಕಿನಲ್ಲಿ ಬರದ ಆತಂಕ

ಕಡೂರು: ಮುಂಗಾರು ಮಳೆಯ ಕೊರತೆಯಿಂದ ಕಡೂರು ತಾಲ್ಲೂಕಿನಲ್ಲಿ ಬರದ ಆತಂಕ ಎದುರಾಗಿದ್ದು, ಕುಡಿಯುವ ನೀರು, ಜಾನುವಾರುಗಳ...

ಜು.21ಕ್ಕೆ ಕೊಪ್ಪಳದಲ್ಲಿ ಬೃಹತ್ ರೈತ ಸಮಾವೇಶ

ಚಿಕ್ಕಮಗಳೂರು : ೪೬ನೇ ರೈತ ಹುತಾತ್ಮ ದಿನಾಚರಣೆ ಅಂಗವಾಗಿ ಕೊಪ್ಪಳದಲ್ಲಿ ಬೃಹತ್ ರೈತ ಸಮಾವೇಶವನ್ನು ಜು.೨೧...

ಅಕ್ರಮವಾಗಿ ಸಾಗಿಸುತ್ತಿ ಕಾಡುಜಾತಿಯ ಮರಗಳ ದಿಮ್ಮಿಗಳ ವಶ

ಮೂಡಿಗೆರೆ: ಕಾಡುಜಾತಿಯ ಮರಗಳ ದಿಮ್ಮಿಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದುದನ್ನು ತಾಲ್ಲೂಕಿನ ಹಂಡುಗುಳಿ ಗ್ರಾಮದ ಸಮೀಪ ಅರಣ್ಯ ಇಲಾಖೆ...