Home Latest News ಅಬಕಾರಿ ಇಲಾಖೆಯಲ್ಲಿ ಲಂಚ ಲಂಚ ಲಂಚ
Latest News

ಅಬಕಾರಿ ಇಲಾಖೆಯಲ್ಲಿ ಲಂಚ ಲಂಚ ಲಂಚ

Share
Share

ಚಿಕ್ಕಮಗಳೂರು : ರಾಜ್ಯದಲ್ಲಿ ಅಬಕಾರಿಯ ಕರ್ಮ ಕಾಂಡ ಮತ್ತೆ, ಮತ್ತೆ ಅಪ್ಪಳಿಸುತ್ತಿದೆ.ಅಬಕಾರಿ ಮಂತ್ರಿ ತಿಮ್ಮಾಪುರ ಕೋಟಿ,ಕೋಟಿ ಲಂಚ ಪಡೆಯುತ್ತಿದ್ದಾರೆ ಎಂದು ಮಧ್ಯ ಮಾರಾಟ ಸಂಘದವರು ದೂರು ನೀಡಿದ್ದರು.ಅದಕ್ಕೆ ತೇಪೆ ಹಾಕಲಾಗಿದೆ. ನಿನ್ನೆ ಮಂಡ್ಯದಲ್ಲಿ ಸಿ,ಎಲ್7 ಪಡೆಯಲು ಅಧಿಕಾರಿಗಳು ನಲವತ್ತು ಲಕ್ಷ ಲಂಚ ಕೇಳಿದ್ದಾರೆ ಎಂದು ವಿಡಿಯೋ ವೈರಲ್ ಅದ ತಕ್ಷಣ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ಅಬಕಾರಿ ಇಲಾಖೆಯಲ್ಲಿ ನಡೆಯುತ್ತಿರುವ ಅವ್ಯವಹಾರಗಳು ಕೇಳುವವರೇ ಇಲ್ಲದಂತೆ ಆಗಿದೆ. ಕಳೆದ ಒಂದು ವರ್ಷದಿಂದ ಜಿಲ್ಲೆಯಲ್ಲಿ ಸಿ,ಎಲ್ 7ನೀಡಿರುವುದನ್ನು ನೋಡಿದರೆ ಇಲಾಖೆ ಹಣಕ್ಕಾಗಿ ಇದ್ದಂತೆ ಮತ್ತು ಕೆಲವು ಶಾಸಕರ ಒತ್ತಡದಲ್ಲಿ ಇರುವಂತೆ ಕಾಣುತ್ತದೆ.
ಸಿ,ಎಲ್ 7ನೀಡಲು ಬೇಕಾದ ನಿಯಮಗಳನ್ನು ಮೀರಿ ಅನುಮತಿ ನೀಡಿರುವುದು ಗುಟ್ಟಾಗಿ ಉಳಿದಿಲ್ಲ. ಆಸ್ಪತ್ರೆ ಪಕ್ಕ,ಪುರಸಭೆ ಲೈಸೆನ್ಸ್ ಇಲ್ಲದ ಕಟ್ಟಡಗಳು ,ರಸ್ತೆ ಬದಿಯಲ್ಲಿ ಲಾಡ್ಜಗಳಲ್ಲಿ ಶಾಪ್ ತೆರೆದಿರುವುದು ನೋಡಿದರೆ ಇಲಾಖೆ ಇದೆಯೋ ಇಲ್ಲವೋ ಎಂಬ ಅನುಮಾನ ಬರುತ್ತಿದೆ.

ಜಿಲ್ಲೆಯ ಇಬ್ಬರು ಶಾಸಕರು ಪೈಪೋಟಿಗೆ ಬಿದ್ದು ಸಿ,ಎಲ್,7 ಸಂಬಂಧಿಕರ ಪಾಲುದಾರಿಕೆ ಪಡೆದಿದ್ದಾರೆ. ಇವರುಗಳು ಬಾರ್ ಮಾಲೀಕರಿಂದ ತಿಂಗಳ ಮಾಮೂಲಿ ವಸೂಲಿ ಮಾಡುತ್ತಿದ್ದಾರೆ ಎಂದು ಮಧ್ಯ ಮಾರಾಟಗಾರರು ಶಾಪ ಹಾಕುತ್ತಿದ್ದಾರೆ.
ಗ್ರಾಹಕರಿಗೆ ಬೇಕಾ ಬಿಟ್ಟಿ ದರದಲ್ಲಿ ಮಾರಾಟ ಮಾಡುತ್ತಿರುವುದು ಗುಟ್ಟಾಗಿ ಉಳಿದಿಲ್ಲ ಆದರೂ ಇಲಾಖೆ ಬದುಕಿ ಸತ್ತಂತೆ ಇದೇ ಎನ್ನುವುದಕ್ಕಿಂತ ಹಣ,ಹಣ,ಎಂದು ಕಣ್ಣ್,ಕಣ್ಣ್ ಬಿಟ್ಟುಕೊಂಡು ಹೆಚ್ಚು ಜೇಬಿಗಳಿರುವ ಪ್ಯಾಂಟ್, ಶರ್ಟ್ ಧರಿಸಿಕೊಂಡು ಇಲಾಖೆಯ ಬಾಗಿಲು ಬಂದ್ ಮಾಡಿಕೊಂಡು ವಸೂಲಿಗೆ ಇಳಿದಿದ್ದಾರೆ ಎಂಬ ವ್ಯಾಪಕ ದೂರುಗಳು ಇವೆ.

Share

Leave a comment

Leave a Reply

Your email address will not be published. Required fields are marked *

Don't Miss

ದನದ ಮಾಂಸ ಮಾರಾಟದಲ್ಲಿ 40 ಕೆ.ಜಿ ಮಾಂಸ, ಕತ್ತಿ–ಚಾಕುಗಳು ಜಪ್ತಿ

ಚಿಕ್ಕಮಗಳೂರು: ನಗರದ ಅಯ್ಯಪ್ಪನಗರದ ಸಮೀಪದ ಶೆಡ್‌ನಲ್ಲಿ ಯಾವುದೇ ಪರವಾನಗಿ ಇಲ್ಲದೆ ದನದ ಮಾಂಸ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ನಗರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆ.9ರಂದು ಮಧ್ಯಾಹ್ನ...

ವಕೀಲ ವಿ.ಕೆ.ರಘು ಸಾಧನೆ ಯೋಗ ಮಾಡುವವರಿಗೆ ಪ್ರೇರಣೆ

ಚಿಕ್ಕಮಗಳೂರು: ಯೊಗ ನಮ್ಮ ಪ್ರಾಚೀನ ಋಷಿಮುನಿಗಳು ಜಗತ್ತಿಗೆ ಕೊಟ್ಟಂತಹ ಕೊಡುಗೆ. ವಕೀಲ ವಿ.ಕೆ.ರಘು ಅವರ ಯೋಗದ ಸಾಧನೆ ಯೋಗ ಮಾಡುವವರಿಗೆ ಒಂದು ಪ್ರೇರಣೆ ಕೊಡುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಸಿ.ಟಿ.ರವಿ...

Related Articles

ಕೇಬಲ್ ಕಳ್ಳರೆಂದು ಶಂಕಿಸಿ ಮೂವರ ಮೇಲೆ ಹಲ್ಲೆ

ಕಡೂರು: ಪಂಪ್‌ಸೆಟ್‌ ಮೋಟಾರ್‌ ಕೇಬಲ್‌ ಕಳ್ಳರೆಂದು ಅನುಮಾನಿಸಿ ಮೂವರು ಯುವಕರ ಮೇಲೆ ಗುಂಪೊಂದು ಗಂಭೀರವಾಗಿ ಹಲ್ಲೆ...

₹5 ಲಕ್ಷ ಮೌಲ್ಯದ ಶ್ರೀಗಂಧದ ಮರಗಳ ಕಳವು

ತರೀಕೆರೆ: ಕೃಷಿ ತೋಟಕ್ಕೆ ನುಗ್ಗಿದ ಕಳ್ಳರು ಸುಮಾರು 15 ಶ್ರೀಗಂಧದ ಮರಗಳನ್ನು ಕಡಿದು ಕಳವು ಮಾಡಿಕೊಂಡು...

ಸ್ಕೂಟರ್‌ ಅಪಘಾತ: ಚಿಕಿತ್ಸೆ ಫಲಿಸದೆ ಸಾವು

ಕಡೂರು: ರಸ್ತೆಯಲ್ಲಿ ಅಡ್ಡಬಂದ ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಸ್ಕೂಟರ್‌ ನಿಯಂತ್ರಣ ತಪ್ಪಿ ಬಿದ್ದು...

ಧ್ವಜಾರೋಹಣದ ಕೆಲವೇ ಗಂಟೆಗಳಲ್ಲಿ ಕೆಳಗಿಳಿಸಿದ ರಾಷ್ಟ್ರಧ್ವಜ …?

ಚಿಕ್ಕಮಗಳೂರು: ಸ್ವಾತಂತ್ರ್ಯ ದಿನಾಚರಣೆಯಂದೇ ಚಿಕ್ಕಮಗಳೂರಿನಲ್ಲಿ ರಾಷ್ಟ್ರಧ್ವಜಕ್ಕೆ ಸಂಬಂಧಿಸಿದಂತೆ ವಿವಾದವೊಂದು ಭುಗಿಲೆದ್ದಿದ್ದು, ಕರ್ನಾಟಕ ರಾಜ್ಯ ರೈತ ಸಂಘದ...