Home Latest News ಅಬಕಾರಿ ಇಲಾಖೆಯಲ್ಲಿ ಲಂಚ ಲಂಚ ಲಂಚ
Latest News

ಅಬಕಾರಿ ಇಲಾಖೆಯಲ್ಲಿ ಲಂಚ ಲಂಚ ಲಂಚ

Share
Share

ಚಿಕ್ಕಮಗಳೂರು : ರಾಜ್ಯದಲ್ಲಿ ಅಬಕಾರಿಯ ಕರ್ಮ ಕಾಂಡ ಮತ್ತೆ, ಮತ್ತೆ ಅಪ್ಪಳಿಸುತ್ತಿದೆ.ಅಬಕಾರಿ ಮಂತ್ರಿ ತಿಮ್ಮಾಪುರ ಕೋಟಿ,ಕೋಟಿ ಲಂಚ ಪಡೆಯುತ್ತಿದ್ದಾರೆ ಎಂದು ಮಧ್ಯ ಮಾರಾಟ ಸಂಘದವರು ದೂರು ನೀಡಿದ್ದರು.ಅದಕ್ಕೆ ತೇಪೆ ಹಾಕಲಾಗಿದೆ. ನಿನ್ನೆ ಮಂಡ್ಯದಲ್ಲಿ ಸಿ,ಎಲ್7 ಪಡೆಯಲು ಅಧಿಕಾರಿಗಳು ನಲವತ್ತು ಲಕ್ಷ ಲಂಚ ಕೇಳಿದ್ದಾರೆ ಎಂದು ವಿಡಿಯೋ ವೈರಲ್ ಅದ ತಕ್ಷಣ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ಅಬಕಾರಿ ಇಲಾಖೆಯಲ್ಲಿ ನಡೆಯುತ್ತಿರುವ ಅವ್ಯವಹಾರಗಳು ಕೇಳುವವರೇ ಇಲ್ಲದಂತೆ ಆಗಿದೆ. ಕಳೆದ ಒಂದು ವರ್ಷದಿಂದ ಜಿಲ್ಲೆಯಲ್ಲಿ ಸಿ,ಎಲ್ 7ನೀಡಿರುವುದನ್ನು ನೋಡಿದರೆ ಇಲಾಖೆ ಹಣಕ್ಕಾಗಿ ಇದ್ದಂತೆ ಮತ್ತು ಕೆಲವು ಶಾಸಕರ ಒತ್ತಡದಲ್ಲಿ ಇರುವಂತೆ ಕಾಣುತ್ತದೆ.
ಸಿ,ಎಲ್ 7ನೀಡಲು ಬೇಕಾದ ನಿಯಮಗಳನ್ನು ಮೀರಿ ಅನುಮತಿ ನೀಡಿರುವುದು ಗುಟ್ಟಾಗಿ ಉಳಿದಿಲ್ಲ. ಆಸ್ಪತ್ರೆ ಪಕ್ಕ,ಪುರಸಭೆ ಲೈಸೆನ್ಸ್ ಇಲ್ಲದ ಕಟ್ಟಡಗಳು ,ರಸ್ತೆ ಬದಿಯಲ್ಲಿ ಲಾಡ್ಜಗಳಲ್ಲಿ ಶಾಪ್ ತೆರೆದಿರುವುದು ನೋಡಿದರೆ ಇಲಾಖೆ ಇದೆಯೋ ಇಲ್ಲವೋ ಎಂಬ ಅನುಮಾನ ಬರುತ್ತಿದೆ.

ಜಿಲ್ಲೆಯ ಇಬ್ಬರು ಶಾಸಕರು ಪೈಪೋಟಿಗೆ ಬಿದ್ದು ಸಿ,ಎಲ್,7 ಸಂಬಂಧಿಕರ ಪಾಲುದಾರಿಕೆ ಪಡೆದಿದ್ದಾರೆ. ಇವರುಗಳು ಬಾರ್ ಮಾಲೀಕರಿಂದ ತಿಂಗಳ ಮಾಮೂಲಿ ವಸೂಲಿ ಮಾಡುತ್ತಿದ್ದಾರೆ ಎಂದು ಮಧ್ಯ ಮಾರಾಟಗಾರರು ಶಾಪ ಹಾಕುತ್ತಿದ್ದಾರೆ.
ಗ್ರಾಹಕರಿಗೆ ಬೇಕಾ ಬಿಟ್ಟಿ ದರದಲ್ಲಿ ಮಾರಾಟ ಮಾಡುತ್ತಿರುವುದು ಗುಟ್ಟಾಗಿ ಉಳಿದಿಲ್ಲ ಆದರೂ ಇಲಾಖೆ ಬದುಕಿ ಸತ್ತಂತೆ ಇದೇ ಎನ್ನುವುದಕ್ಕಿಂತ ಹಣ,ಹಣ,ಎಂದು ಕಣ್ಣ್,ಕಣ್ಣ್ ಬಿಟ್ಟುಕೊಂಡು ಹೆಚ್ಚು ಜೇಬಿಗಳಿರುವ ಪ್ಯಾಂಟ್, ಶರ್ಟ್ ಧರಿಸಿಕೊಂಡು ಇಲಾಖೆಯ ಬಾಗಿಲು ಬಂದ್ ಮಾಡಿಕೊಂಡು ವಸೂಲಿಗೆ ಇಳಿದಿದ್ದಾರೆ ಎಂಬ ವ್ಯಾಪಕ ದೂರುಗಳು ಇವೆ.

Share

Leave a comment

Leave a Reply

Your email address will not be published. Required fields are marked *

Don't Miss

30 ಲಕ್ಷ ರೂಪಾಯಿ ಹಣ ನೀಡುವಂತೆ ಬ್ಲಾಕ್‌ ಮೆಲ್

ಚಿಕ್ಕಮಗಳೂರು: ಎಡಿಟ್ ಮಾಡಿದ ಗೃಹಿಣಿಯೊಬ್ಬರ ಫೋಟೋಗಳನ್ನು ಅವರ ಮೊಬೈಲ್‌ಗೇ ಕಳುಹಿಸಿ, ಬರೋಬ್ಬರಿ 30 ಲಕ್ಷ ರೂಪಾಯಿ ಹಣ ನೀಡುವಂತೆ ಕಿಡಿಗೇಡಿಗಳು ಬೇಡಿಕೆಯಿಟ್ಟಿದ್ದ ಘಟನೆ ಬೆಳಕಿಗೆ ಬಂದಿದೆ. ಒಂದು ವೇಳೆ ಹಣ ನೀಡದಿದ್ದರೆ...

ವಿವಾಹಿತ ಮಹಿಳೆಗಾಗಿ ನಡೆದ ಜಗಳದಲ್ಲಿ ಕೈ ಕಟ್

ಎನ್.ಆ‌ರ್.ಪುರ: ವಿವಾಹಿತ ಮಹಿಳೆಯೊಬ್ಬರಿಗಾಗಿ ಇಬ್ಬರು ವ್ಯಕ್ತಿಗಳು ಲಾಂಗು ಮಚ್ಚಿನಿಂದ ಬಡಿದಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆ‌ರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಅಡಿಗೆಬೈಲು ಗ್ರಾಮದಲ್ಲಿ ನಡೆದಿದೆ. ಗಂಡನಿಂದ ದೂರವಿದ್ದ ಮಹಿಳೆಯೊಬ್ಬರ ವಿಚಾರವಾಗಿ ಶೇಷಗಿರಿ...

Related Articles

5 ದಶಕದ ಬಳಿಕ ನಿಡಘಟ್ಟ ಆಂಜನೇಯಸ್ವಾಮಿ ದೇವಾಲಯಕ್ಕೆ ದಲಿತರ ಪ್ರವೇಶ

ಚಿಕ್ಕಮಗಳೂರು: ಇತಿಹಾಸ ಪ್ರಸಿದ್ಧ ಗಟಾಗಟಿ ದೇವರು ಎಂದು ಕರೆಯಲ್ಪಡುವ ಕಡೂರು ತಾಲೂಕಿನ ನಿಡಘಟ್ಟದ ಶ್ರೀ ಆಂಜನೇಯಸ್ವಾಮಿ ದೇವಾಲಯಕ್ಕೆ...

ದೇಶ ವ್ಯಾಪ್ತಿ ಛಾತ್ರೋನ್ ಕಿ ಗೂಂಚ್ ವಿದ್ಯಾರ್ಥಿ ಆಂದೋಲನ

ಚಿಕ್ಕಮಗಳೂರು: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರ ನೇತೃತ್ವದಲ್ಲಿ ಛಾತ್ರೋನ್ ಕಿ ಗೂಂಚ್ ಎಂಬ ದೇಶ ವ್ಯಾಪಿ...

ಕುಡಿಯುವ ನೀರು-ಜಾನುವಾರು ಮೇವಿಗೆ ಕೊರತೆಯಾಗದಂತೆ ಕ್ರಮಕ್ಕೆ ಸೂಚನೆ

ಚಿಕ್ಕಮಗಳೂರು: ಕುಡಿಯುವ ನೀರು, ಜಾನುವಾರುಗಳ ಮೇವಿಗೆ ಕೊರತೆಯಾಗದಂತೆ ಕ್ರಮ ಕೈಗೊಳ್ಳುವಂತೆ ಇಂಧನ, ಪ್ರವಾಸೋದ್ಯಮ ಹಾಗೂ ಚಿಕ್ಕಮಗಳೂರು...

ಗೃಹಜ್ಯೋತಿ ಯೋಜನೆ ಅರ್ಹ ಗುರುತಿಸುವ ಉದ್ದೇಶದಿಂದ ಪರಿಷ್ಕರಣೆ

ಚಿಕ್ಕಮಗಳೂರು: ಸರ್ಕಾರ ಗೃಹಜ್ಯೋತಿ ಯೋಜನೆಯನ್ನು ಸಾರಾಸಗಟಾಗಿ ಪರಿಷ್ಕರಿಸುವ ಅಥವಾ ಕಡಿತಗೊಳಿಸುವ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು...