Home Latest News ಇಯರ್ ಎಂಡ್ ಪಾರ್ಟಿ ಮಾಡೋರಿಗೆ ಅಬಕಾರಿ ಇಲಾಖೆ ಬಂಪರ್ ಗಿಫ್ಟ್
Latest News

ಇಯರ್ ಎಂಡ್ ಪಾರ್ಟಿ ಮಾಡೋರಿಗೆ ಅಬಕಾರಿ ಇಲಾಖೆ ಬಂಪರ್ ಗಿಫ್ಟ್

Share
Share

ಚಿಕ್ಕಮಗಳೂರು : ವರ್ಷಾಂತ್ಯದಲ್ಲಿ ಸರ್ಕಾರದಿಂದ ತೆರಿಗೆ ಹೆಚ್ಚಿಸಿಕೊಳ್ಳಲು ಹೊಸ ಪ್ಲಾನ್ ನಡೆದಿದೆ, ಅಬಕಾರಿ ಇಲಾಖೆಯಲ್ಲಿನ ಸಿಎಲ್ 5 ಬಾರ್ ಲೈಸೆನ್ಸ್ ಕೊಡಲು ಮುಂದಾಗಿದೆ (ಸಿಎಲ್ 5 )ಸಾಂದರ್ಭಿಕ ಲೈಸನ್ಸ್ ನೀಡಲು ಮುಂದಾದ ಸರ್ಕಾರ ಗಮನ ಸೆಳೆದಿದೆ.

ಅಬಕಾರಿ ನಿಯಮದಂತೆ ಸಾಂದರ್ಭಿಕ ಲೈಸನ್ಸ್ ನೀಡಲು ಮುಂದಾದ ಇಲಾಖೆ ಈ ಮೂಲಕ ಕ್ರಿಸ್ ಮಸ್, ಹೊಸ ವರ್ಷ ಆಚರಣೆಯ ಸಂದರ್ಭದಲ್ಲಿ ತೆರಿಗೆ ಹೆಚ್ಚಿಸಿಕೊಳ್ಳಲು ಪ್ಲಾನ್ ಮಾಡಿದೆ. ಒಂದು ದಿನದ ಸಾಂದರ್ಭಿಕ ಬಾರ್ ಲೈಸೆನ್ಸ್ ಕೊಡುವುದು ಇದರ ಉದ್ದೇಶವಾಗಿದೆ, ಪ್ರವಾಸಿಗರ ಪಾಲಿನ ಸ್ವರ್ಗ ಎನಿಸಿರುವ ಚಿಕ್ಕಮಗಳೂರಿನಲ್ಲಿ ಸಿಎಲ್ 5 ಲೈಸೆನ್ಸ್ ನೀಡಿಕೆ ಅವಕಾಶ ಕೊಟ್ಟಿರುವುದು ವಿಶೇಷವಾಗಿದೆ

24 ಗಂಟೆಯ ಈ ಲೈಸೆನ್ಸ್ ಗೆ 12 ಸಾವಿರ ರೂಪಾಯಿಗಳ ದರ ನಿಗದಿ ಪಡಿಸಲಾಗಿದೆ, ಕ್ರಿಸ್ಮಸ್ ಹಬ್ಬದ ಆಚರಣೆ ನಿಮಿತ್ತ ಆರು ಅರ್ಜಿಗಳು ಈಗಾಗಲೇ ಅಬಕಾರಿ ಇಲಾಖೆಗೆ ಸಲ್ಲಿಕೆಯಾಗಿವೆ, ಪ್ರವಾಸಿಗರನ್ನು ಟಾರ್ಗೆಟ್ ಮಾಡಿ ಸಾಂದರ್ಭಿಕ ಲೈಸನ್ಸ್ ನೀಡಲು ಇಲಾಖೆ ಮುಂದಾಗಿದೆ, ರೆಸ್ಟೋರೆಂಟ್, ಹೋಂ ಸ್ಟೇ ರೆಸಾರ್ಟ್ , ಹೋಟೆಲ್ , ಪಾರ್ಟಿ ಮಾಡುವ ಜಾಗಗಳಿಗೆ ಲೈಸೆನ್ಸ್ ನೀಡಲು ಮುಂದಾಗಿರುವ ಇಲಾಖೆಯ ನಿಯಮಕ್ಕೆ ಮೂಲ ಸನ್ನದುದಾರರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Don't Miss

ದನದ ಮಾಂಸ ಮಾರಾಟದಲ್ಲಿ 40 ಕೆ.ಜಿ ಮಾಂಸ, ಕತ್ತಿ–ಚಾಕುಗಳು ಜಪ್ತಿ

ಚಿಕ್ಕಮಗಳೂರು: ನಗರದ ಅಯ್ಯಪ್ಪನಗರದ ಸಮೀಪದ ಶೆಡ್‌ನಲ್ಲಿ ಯಾವುದೇ ಪರವಾನಗಿ ಇಲ್ಲದೆ ದನದ ಮಾಂಸ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ನಗರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆ.9ರಂದು ಮಧ್ಯಾಹ್ನ...

ವಕೀಲ ವಿ.ಕೆ.ರಘು ಸಾಧನೆ ಯೋಗ ಮಾಡುವವರಿಗೆ ಪ್ರೇರಣೆ

ಚಿಕ್ಕಮಗಳೂರು: ಯೊಗ ನಮ್ಮ ಪ್ರಾಚೀನ ಋಷಿಮುನಿಗಳು ಜಗತ್ತಿಗೆ ಕೊಟ್ಟಂತಹ ಕೊಡುಗೆ. ವಕೀಲ ವಿ.ಕೆ.ರಘು ಅವರ ಯೋಗದ ಸಾಧನೆ ಯೋಗ ಮಾಡುವವರಿಗೆ ಒಂದು ಪ್ರೇರಣೆ ಕೊಡುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಸಿ.ಟಿ.ರವಿ...

Related Articles

ಕೇಬಲ್ ಕಳ್ಳರೆಂದು ಶಂಕಿಸಿ ಮೂವರ ಮೇಲೆ ಹಲ್ಲೆ

ಕಡೂರು: ಪಂಪ್‌ಸೆಟ್‌ ಮೋಟಾರ್‌ ಕೇಬಲ್‌ ಕಳ್ಳರೆಂದು ಅನುಮಾನಿಸಿ ಮೂವರು ಯುವಕರ ಮೇಲೆ ಗುಂಪೊಂದು ಗಂಭೀರವಾಗಿ ಹಲ್ಲೆ...

₹5 ಲಕ್ಷ ಮೌಲ್ಯದ ಶ್ರೀಗಂಧದ ಮರಗಳ ಕಳವು

ತರೀಕೆರೆ: ಕೃಷಿ ತೋಟಕ್ಕೆ ನುಗ್ಗಿದ ಕಳ್ಳರು ಸುಮಾರು 15 ಶ್ರೀಗಂಧದ ಮರಗಳನ್ನು ಕಡಿದು ಕಳವು ಮಾಡಿಕೊಂಡು...

ಸ್ಕೂಟರ್‌ ಅಪಘಾತ: ಚಿಕಿತ್ಸೆ ಫಲಿಸದೆ ಸಾವು

ಕಡೂರು: ರಸ್ತೆಯಲ್ಲಿ ಅಡ್ಡಬಂದ ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಸ್ಕೂಟರ್‌ ನಿಯಂತ್ರಣ ತಪ್ಪಿ ಬಿದ್ದು...

ಧ್ವಜಾರೋಹಣದ ಕೆಲವೇ ಗಂಟೆಗಳಲ್ಲಿ ಕೆಳಗಿಳಿಸಿದ ರಾಷ್ಟ್ರಧ್ವಜ …?

ಚಿಕ್ಕಮಗಳೂರು: ಸ್ವಾತಂತ್ರ್ಯ ದಿನಾಚರಣೆಯಂದೇ ಚಿಕ್ಕಮಗಳೂರಿನಲ್ಲಿ ರಾಷ್ಟ್ರಧ್ವಜಕ್ಕೆ ಸಂಬಂಧಿಸಿದಂತೆ ವಿವಾದವೊಂದು ಭುಗಿಲೆದ್ದಿದ್ದು, ಕರ್ನಾಟಕ ರಾಜ್ಯ ರೈತ ಸಂಘದ...