Home Latest News ಇಯರ್ ಎಂಡ್ ಪಾರ್ಟಿ ಮಾಡೋರಿಗೆ ಅಬಕಾರಿ ಇಲಾಖೆ ಬಂಪರ್ ಗಿಫ್ಟ್
Latest News

ಇಯರ್ ಎಂಡ್ ಪಾರ್ಟಿ ಮಾಡೋರಿಗೆ ಅಬಕಾರಿ ಇಲಾಖೆ ಬಂಪರ್ ಗಿಫ್ಟ್

Share
Share

ಚಿಕ್ಕಮಗಳೂರು : ವರ್ಷಾಂತ್ಯದಲ್ಲಿ ಸರ್ಕಾರದಿಂದ ತೆರಿಗೆ ಹೆಚ್ಚಿಸಿಕೊಳ್ಳಲು ಹೊಸ ಪ್ಲಾನ್ ನಡೆದಿದೆ, ಅಬಕಾರಿ ಇಲಾಖೆಯಲ್ಲಿನ ಸಿಎಲ್ 5 ಬಾರ್ ಲೈಸೆನ್ಸ್ ಕೊಡಲು ಮುಂದಾಗಿದೆ (ಸಿಎಲ್ 5 )ಸಾಂದರ್ಭಿಕ ಲೈಸನ್ಸ್ ನೀಡಲು ಮುಂದಾದ ಸರ್ಕಾರ ಗಮನ ಸೆಳೆದಿದೆ.

ಅಬಕಾರಿ ನಿಯಮದಂತೆ ಸಾಂದರ್ಭಿಕ ಲೈಸನ್ಸ್ ನೀಡಲು ಮುಂದಾದ ಇಲಾಖೆ ಈ ಮೂಲಕ ಕ್ರಿಸ್ ಮಸ್, ಹೊಸ ವರ್ಷ ಆಚರಣೆಯ ಸಂದರ್ಭದಲ್ಲಿ ತೆರಿಗೆ ಹೆಚ್ಚಿಸಿಕೊಳ್ಳಲು ಪ್ಲಾನ್ ಮಾಡಿದೆ. ಒಂದು ದಿನದ ಸಾಂದರ್ಭಿಕ ಬಾರ್ ಲೈಸೆನ್ಸ್ ಕೊಡುವುದು ಇದರ ಉದ್ದೇಶವಾಗಿದೆ, ಪ್ರವಾಸಿಗರ ಪಾಲಿನ ಸ್ವರ್ಗ ಎನಿಸಿರುವ ಚಿಕ್ಕಮಗಳೂರಿನಲ್ಲಿ ಸಿಎಲ್ 5 ಲೈಸೆನ್ಸ್ ನೀಡಿಕೆ ಅವಕಾಶ ಕೊಟ್ಟಿರುವುದು ವಿಶೇಷವಾಗಿದೆ

24 ಗಂಟೆಯ ಈ ಲೈಸೆನ್ಸ್ ಗೆ 12 ಸಾವಿರ ರೂಪಾಯಿಗಳ ದರ ನಿಗದಿ ಪಡಿಸಲಾಗಿದೆ, ಕ್ರಿಸ್ಮಸ್ ಹಬ್ಬದ ಆಚರಣೆ ನಿಮಿತ್ತ ಆರು ಅರ್ಜಿಗಳು ಈಗಾಗಲೇ ಅಬಕಾರಿ ಇಲಾಖೆಗೆ ಸಲ್ಲಿಕೆಯಾಗಿವೆ, ಪ್ರವಾಸಿಗರನ್ನು ಟಾರ್ಗೆಟ್ ಮಾಡಿ ಸಾಂದರ್ಭಿಕ ಲೈಸನ್ಸ್ ನೀಡಲು ಇಲಾಖೆ ಮುಂದಾಗಿದೆ, ರೆಸ್ಟೋರೆಂಟ್, ಹೋಂ ಸ್ಟೇ ರೆಸಾರ್ಟ್ , ಹೋಟೆಲ್ , ಪಾರ್ಟಿ ಮಾಡುವ ಜಾಗಗಳಿಗೆ ಲೈಸೆನ್ಸ್ ನೀಡಲು ಮುಂದಾಗಿರುವ ಇಲಾಖೆಯ ನಿಯಮಕ್ಕೆ ಮೂಲ ಸನ್ನದುದಾರರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Don't Miss

ಬಾಲಕಾರ್ಮಿಕರನ್ನು ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧ

ಚಿಕ್ಕಮಗಳೂರು:  ಬಾಲ ಕಾರ್ಮಿಕರನ್ನು ಯಾವುದೇ ಅಪಾಯಕಾರಿ ಕ್ಷೇತ್ರದಲ್ಲಿ ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪ ರಾಧವಾಗಿದ್ದು, ಬಾಲ ಕಾರ್ಮಿಕರನ್ನು ದುಡಿಸಿಕೊಳ್ಳುವ ಮಾಲೀಕರಿಗೆ ೬ ತಿಂಗಳಿಗಿಂತ ಕಡಿಮೆಯಿಲ್ಲದಂತೆ ೨ ವರ್ಷ ಜೈಲು ಶಿಕ್ಷೆ ಹಾ ಗೂ...

ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಂಸದರ ಅಸಮಾಧಾನ

ಚಿಕ್ಕಮಗಳೂರು: ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಮಹತ್ವದ ಸಭೆಯಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ವಿವಿಧ ಏಜೆನ್ಸಿಗಳ ಆಮೆಗತಿಯ ಕಾರ್ಯವೈಖರಿಯ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿ, ಬಿಗಿ...

Related Articles

ಜು.5ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ

ಚಿಕ್ಕಮಗಳೂರು: ಮಲೆನಾಡಿನ ಜನತೆಗೆ ಗುಣಮಟ್ಟದ ಆರೋಗ್ಯ ಸೇವೆಯನ್ನು ತಲುಪಿಸುವ ಉದ್ದೇಶದಿಂದ ಆರ್‌ವಿಆರ್ ಹೆಲ್ತ್‌ಕೇರ್ ವತಿಯಿಂದ ಉಚಿತ...

ಡಿಟಿಡಿಸಿ ಎಕ್ಸ್‌ಪ್ರೆಸ್ ಲಿಮಿಟೆಡ್ ವಿರುದ್ಧ ಆಯೋಗದ ತೀರ್ಪು

ಚಿಕ್ಕಮಗಳೂರು: ಸಕಾಲದಲ್ಲಿ ಆಹಾರ ಪದಾರ್ಥವನ್ನು ತಲುಪಿಸದೆ ಆಹಾರ ಸಾಮಗ್ರಿಗಳು ಹಾಳಾಗಲು ಕಾರಣವಾದ ಡಿಟಿಡಿಸಿ ಎಕ್ಸ್‌ಪ್ರೆಸ್ ಲಿಮಿಟೆಡ್...

ಮುತ್ತೋಡಿ ಅರಣ್ಯದಲ್ಲಿ ಪ್ರವಾಸಿಗರನ್ನು ಆಕರ್ಷಿಸುತ್ತಿರುವ ಚಿರತೆ

ಚಿಕ್ಕಮಗಳೂರು: ಕಾಫಿನಾಡಿನ ಪ್ರಸಿದ್ದ ಮುತ್ತೋಡಿ ಅರಣ್ಯ ವಲಯದಲ್ಲಿ ಪ್ರವಾಸಿಗರಿಗೆ ಅತ್ಯಂತ ಅಪರೂಪದ ಹಾಗೂ ರೋಮಾಂಚನಕಾರಿ ದೃಶ್ಯವೊಂದು...

ಡಾ.ಮಂಜುನಾಥ್ ಚಿಕ್ಕ‌ಮಗಳೂರು ಡಿಎಚ್ಒ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕ‌ಮಗಳೂರಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ ಡಾ.ಎಚ್.ಕೆ.ಮಂಜುನಾಥ್ ನೇಮಕಗೊಂಡಿದ್ದಾರೆ. ಈ ಹಿಂದೆ...