Home namma chikmagalur ಸುಲಿಗೆ ಪ್ರಕರಣ: ಇಬ್ಬರು ಆಪಾದಿತರಿಗೆ 5 ವರ್ಷ ಕಠಿಣ ಸಜೆ
namma chikmagalurchikamagalurHomeLatest News

ಸುಲಿಗೆ ಪ್ರಕರಣ: ಇಬ್ಬರು ಆಪಾದಿತರಿಗೆ 5 ವರ್ಷ ಕಠಿಣ ಸಜೆ

Share
Share

ಚಿಕ್ಕಮಗಳೂರು:  ಮೋಟಾರ್ ಬೈಕ್‌ನಲ್ಲಿ ತೆರಳುತ್ತಿದ್ದವರನ್ನು ದೂಡಿ ಬೀಳಿಸಿ ಚಿನ್ನಾಭರಣ ಕಸಿದು ಸುಲಿಗೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಇಬ್ಬರು ಆರೋಪಿಗಳಿಗೆ ಐದು ವರ್ಷಗಳ ಕಠಿಣ ಸಜೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದೆ.

ಕಡೂರು ತಾಲ್ಲೂಕು ಬುಕ್ಕಸಾಗರ ಕೊರಚರಹಟ್ಟಿಯ ಸಂತೋಷ್ ಹಾಗೂ ಹಾಲೇಶ ಎಂಬುವವರೇ ಶಿಕ್ಷೆಗೆ ಒಳಗಾದವರು. ಈ ಘಟನೆ ನಡೆದಿರುವುದು ೨೦೧೨ರ ಜೂನ್ ೪ ರಂದು. ಕಡೂರು ತಾಲ್ಲೂಕು ಸಖರಾಯಪಟ್ಟಣ ಸಮೀಪದ ಸ್ವಾಮಿಕಟ್ಟೆ ನಿವಾಸಿ ಸುಧಾ ಎಂಬುವವರು ತಮ್ಮ ಪತಿ ಶೇಖರ್ ಅವರೊಂದಿಗೆ ಕರಡಿಗವಿ ಮಠಕ್ಕೆ ತೆರಳಿ ತಮ್ಮ ಮಗುವಿನ ಮುಡಿ (ತಲೆಕೂಡಲು) ತೆಗೆಸಿಕೊಂಡು ತೆಗೆಸಿಕೊಂಡು ಅಂದು ಮಧ್ಯಾಹ್ನ ೨.೩೦ರ ಸುಮಾರಿಗೆ ಮಗುವಿನೊಂದಿಗೆ ಬೈಕ್‌ನಲ್ಲಿ ಮರಳುತ್ತಿದ್ದಾಗ ಶೇಖರ್ ಅವರನ್ನು ತಳ್ಳಿ ಬೈಕ್ ಅನ್ನು ದೂಡಿ ರಸ್ತೆಯ ಮೇಲೆ ಬೀಳಿಸಿದ್ದು, ಆರೋಪಿ ಸಂತೋಷ್ ಮಗುವನ್ನೆತ್ತಿಕೊಂಡು ಚಾಕು ತೋರಿಸಿ ಹೆದರಿಸಿದ್ದ ಎನ್ನಲಾಗಿದೆ. ಈ ಸಂದರ್ಭದಲ್ಲಿ ಹಾಲೇಶನು ಸುಧಾ ಅವರ ಕೊರಳಿನಲ್ಲಿದ್ದ ಬಂಗಾರದ ಮಾಂಗಲ್ಯ ಸರ, ಒಂದು ಬಂಗಾರದ ನೆಕ್ಲೇಸ್, ಮೊಬೈಲ್ ಹಾಗೂ ಬೈಕ್‌ನ ಕೀಯನ್ನು ಕಸಿದಿದ್ದರೆನ್ನಲಾಗಿದೆ. ಇನ್ನೋರ್ವ ಪ್ರಸನ್ನ ಬೈಕ್‌ನಲ್ಲಿದ್ದ ಶೇಖರ್ ಅವರನ್ನು ತಳ್ಳಿದ್ದ ಎನ್ನಲಾಗಿದೆ.

ಈ ಬಗ್ಗೆ ಸುಧಾ ಅವರು ನೀಡಿದ ದೂರಿನ ಮೇರೆಗೆ ಸಖರಾಯಪಟ್ಟಣ ಪೊಲೀಸರು ಪ್ರಕರಣ ದಾಖಲಿಸಿದ್ದರು. ಈ ಬಗ್ಗೆ ಕಡೂರು ಸರ್ಕಲ್ ವೃತ್ತ ನಿರೀಕ್ಷಕರಾದ ಬಾಲಚಂದ್ರಗೌಡವರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಭಾನುಮತಿ ಬಿ.ಸಿ. ಅವರು ಅಭಿಯೋಜನೆ ಸಾಕ್ಷಿದಾರರ ವಿಚಾರಣೆಯಿಂದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನವೆಂಬರ್ ೧೯ ರಂದು ಆಪಾದಿತರಾದ ಸಂತೋಷ್ ಮತ್ತು ಹಾಲೇಶ ಅವರಿಗೆ ೫ ವರ್ಷಗಳ ಕಠಿಣ ಸಜೆ ಹಾಗೂ ತಲಾ ೨೫ ಸಾವಿರ ರೂ. ದಂಡ ವಿಧಿಸಿದ್ದಾರೆ. ದಂಡ ತೆರಲು ತಪ್ಪಿದಲ್ಲಿ ಮತ್ತೆ ಆರು ತಿಂಗಳು ಸಾದಾ ಶಿಕ್ಷೆ ಅನುಭವಿಸುವಂತೆ ತೀರ್ಪಿನಲ್ಲಿ ತಿಳಿಸಿದ್ದಾರೆ. ಇನ್ನೋರ್ವ ಆರೋಪಿ ಪ್ರಸನ್ನ ಸಾವಿಗೀಡಾಗಿದ್ದಾನೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಸಖರಾಯಪಟ್ಟಣ ಠಾಣೆಯ ಎ.ಎಸ್.ಐ. ದೇವೇಂದ್ರಕುಮಾರ್ ಅವರು ಸಾಕ್ಷಿದಾರರನ್ನು ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರುಪಡಿಸಿದ್ದರು. ಪ್ರಕರಣದಲ್ಲಿ ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಹೆಚ್.ಎಸ್.ಲೋಹಿತಾಶ್ವಚಾರ್ ಅವರು ವಾದ ಮಂಡಿಸಿದ್ದರು.

Extortion case: Two accused get 5 years rigorous imprisonment

Share

Leave a comment

Leave a Reply

Your email address will not be published. Required fields are marked *

Don't Miss

ಅಂದರ್-ಬಾಹರ್ ಅಡ್ಡೆ ಮೇಲೆ ಪೊಲೀಸರ ದಾಳಿ – ಐವರ ಬಂಧನ

ಚಿಕ್ಕಮಗಳೂರು: ಹೊರವಲಯದ ಹುಕ್ಕುಂದ ಗ್ರಾಮದ ಖಾಲಿ ಜಾಗದಲ್ಲಿ ಯಾವುದೇ ಪರವಾನಗಿ ಇಲ್ಲದೆ ಅಕ್ರಮವಾಗಿ ಲಕ್ಷಾಂತರ ರೂಪಾಯಿ ಹಣವನ್ನು ಪಣವಾಗಿಟ್ಟುಕೊಂಡು ಅಂದರ್-ಬಾಹರ್ ಇಸ್ಪೀಟು ಜೂಜಾಟವಾಡುತ್ತಿದ್ದ ಹೈಟೆಕ್ ಅಡ್ಡೆಯ ಮೇಲೆ ಗ್ರಾಮಾಂತರ ಠಾಣೆಯ ಪಿಎಸ್‌ಐ...

30 ಲಕ್ಷ ರೂಪಾಯಿ ಹಣ ನೀಡುವಂತೆ ಬ್ಲಾಕ್‌ ಮೆಲ್

ಚಿಕ್ಕಮಗಳೂರು: ಎಡಿಟ್ ಮಾಡಿದ ಗೃಹಿಣಿಯೊಬ್ಬರ ಫೋಟೋಗಳನ್ನು ಅವರ ಮೊಬೈಲ್‌ಗೇ ಕಳುಹಿಸಿ, ಬರೋಬ್ಬರಿ 30 ಲಕ್ಷ ರೂಪಾಯಿ ಹಣ ನೀಡುವಂತೆ ಕಿಡಿಗೇಡಿಗಳು ಬೇಡಿಕೆಯಿಟ್ಟಿದ್ದ ಘಟನೆ ಬೆಳಕಿಗೆ ಬಂದಿದೆ. ಒಂದು ವೇಳೆ ಹಣ ನೀಡದಿದ್ದರೆ...

Related Articles

ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ

ಚಿಕ್ಕಮಗಳೂರು:  ಜಿಲ್ಲಾ ನ್ಯಾಯಾಲಯಕ್ಕೆ ಬಂದಿರುವ ಬಾಂಬ್ ಬೆದರಿಕೆ ಇ-ಮೇಲ್ ಆತಂಕಕ್ಕೆ ಕಾರಣವಾಗಿದೆ. ಮಧ್ಯಾಹ್ನ 1.30 ರಿಂದ...

5 ದಶಕದ ಬಳಿಕ ನಿಡಘಟ್ಟ ಆಂಜನೇಯಸ್ವಾಮಿ ದೇವಾಲಯಕ್ಕೆ ದಲಿತರ ಪ್ರವೇಶ

ಚಿಕ್ಕಮಗಳೂರು: ಇತಿಹಾಸ ಪ್ರಸಿದ್ಧ ಗಟಾಗಟಿ ದೇವರು ಎಂದು ಕರೆಯಲ್ಪಡುವ ಕಡೂರು ತಾಲೂಕಿನ ನಿಡಘಟ್ಟದ ಶ್ರೀ ಆಂಜನೇಯಸ್ವಾಮಿ ದೇವಾಲಯಕ್ಕೆ...

ದೇಶ ವ್ಯಾಪ್ತಿ ಛಾತ್ರೋನ್ ಕಿ ಗೂಂಚ್ ವಿದ್ಯಾರ್ಥಿ ಆಂದೋಲನ

ಚಿಕ್ಕಮಗಳೂರು: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರ ನೇತೃತ್ವದಲ್ಲಿ ಛಾತ್ರೋನ್ ಕಿ ಗೂಂಚ್ ಎಂಬ ದೇಶ ವ್ಯಾಪಿ...

ಕುಡಿಯುವ ನೀರು-ಜಾನುವಾರು ಮೇವಿಗೆ ಕೊರತೆಯಾಗದಂತೆ ಕ್ರಮಕ್ಕೆ ಸೂಚನೆ

ಚಿಕ್ಕಮಗಳೂರು: ಕುಡಿಯುವ ನೀರು, ಜಾನುವಾರುಗಳ ಮೇವಿಗೆ ಕೊರತೆಯಾಗದಂತೆ ಕ್ರಮ ಕೈಗೊಳ್ಳುವಂತೆ ಇಂಧನ, ಪ್ರವಾಸೋದ್ಯಮ ಹಾಗೂ ಚಿಕ್ಕಮಗಳೂರು...