Home namma chikmagalur ಸವಿತಾ ಸಮಾಜದಿಂದ ಕಣ್ಣು-ದಂತ ಚಿಕಿತ್ಸಾ ಶಿಬಿರ
namma chikmagalurHomeLatest News

ಸವಿತಾ ಸಮಾಜದಿಂದ ಕಣ್ಣು-ದಂತ ಚಿಕಿತ್ಸಾ ಶಿಬಿರ

Share
Share

ಚಿಕ್ಕಮಗಳೂರು: – ಕಣ್ಣು ಹಾಗೂ ಹಲ್ಲುಗಳು ಮನುಷ್ಯನ ವೃದ್ದಾಪ್ಯದಲ್ಲಿ ಬರುವಂಥ ಕಾ ಯಿಲೆಗಳಾಗಿದ್ದು, ಚಿಕಿತ್ಸೆಯಲ್ಲಿ ನಿರ್ಲಕ್ಷ್ಯ ವಹಿಸಿದರೆ ಶರೀರವು ಅನಾರೋಗ್ಯಕ್ಕೆ ತುತ್ತಾಗಲಿದೆ ಎಂದು ನೇಚ ರ್ ಕನ್ಸರ್‌ವೇಷನ್ ಟ್ರಸ್ಟ್ ಅಧ್ಯಕ್ಷ ಡಾ|| ಕೆ.ಸುಂದರಗೌಡ ಎಚ್ಚರಿಕೆ ನೀಡಿದರು.

ನಗರದ ನೆಹರು ರಸ್ತೆಯ ಆರ್ಯ ನಯನಜ ಶ್ರೀರಾಮಮಂದಿರ ಸವಿತಾ ಸಮಾಜದ ಸಭಾಂಗಣದಲ್ಲಿ ಪ್ರಸಾದ್ ನೇತ್ರಾಲಯ, ಆರ್ಯ ನಯನಜ ಸವಿತಾ ಸಮಾಜ, ಲಯನ್ಸ್ ಕ್ಲಬ್, ನೇಚರ್ ಕನ್ಸರ್‌ವೇಷನ್ ಟ್ರಸ್ಟ್ ವತಿಯಿಂದ ಮಂಗಳವಾರ ಏರ್ಪಡಿಸಿದ್ಧ ಉಚಿತ ಕಣ್ಣು, ದಂತ ಹಾಗೂ ಶಸ್ತ್ರ ಚಿಕಿತ್ಸಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಾನವನ ದೇಹದ ಬಹುಮಖ್ಯ ಅಂಗಾಂಗಳಾದ ಕಣ್ಣು, ಹಲ್ಲುಗಳನ್ನು ಕಾಪಾಡಲು ಪ್ರತಿಯೊಬ್ಬರು ಕಾಳಜಿ ವಹಿಸಬೇಕು. ಕನಿಷ್ಟ ಆರು ತಿಂಗಳಿಗೊಮ್ಮೆ ನೇತ್ರ, ದಂತಗಳ ತಪಾಸಣೆಗೆ ಒಳಪಡಿಸಿದರೆ ಸುರಕ್ಷಿತ ವಾಗಿ ರಕ್ಷಿಸಿಕೊಳ್ಳಲು ಸಾಧ್ಯವಾಗಿದ್ದು ಈ ಬಗ್ಗೆ ಅಸಡ್ಡೆ ತೋರಬಾರದು ಎಂದು ತಿಳಿಸಿದರು.

ಇತ್ತೀಚಿನ ದಿನಗಳಲ್ಲಿ ಹಲ್ಲುಗಳ ಬಗ್ಗೆ ಕಾಳಜಿ ವಹಿಸದ ಕಾರಣ ಯುವಪೀಳಿಗೆಯಲ್ಲೂ ಹಲ್ಲಿನ ಬಾಧೆ ಗಳು ಹೆಚ್ಚಳಗೊಳ್ಳುತ್ತಿವೆ. ಜೊತೆಗೆ ಬಾಲ್ಯಾವಸ್ಥೆಯಲ್ಲೇ ಮಕ್ಕಳಿಗೆ ದಂತದ ಬಗ್ಗೆ ಪಾಲಕರು ಮುತುವರ್ಜಿ ಹಾಗೂ ಸುರಕ್ಷತೆ ವಹಿಸದ ಕಾರಣ ಸಣ್ಣ ವಯಸ್ಸಿನಲ್ಲೇ ಹಲ್ಲುಗಳನ್ನು ಕಳೆದುಕೊಳ್ಳುವ ಸ್ಥಿತಿ ನಿರ್ಮಾಣ ವಾಗುತ್ತಿದೆ ಎಂದರು.

ಆರ್ಯ ನಯನಜ ಸವಿತಾ ಸಮಾಜದ ಜಿಲ್ಲಾಧ್ಯಕ್ಷ ಮಹಾಲಿಂಗಪ್ಪ ಮಾತನಾಡಿ ಆರ್ಥಿಕ ಸಂಕಷ್ಟ ದಿಂದ ಬಳಲುತ್ತಿರುವ ನಾಗರೀಕರಿಗೆ ನೇತ್ರ, ಹಲ್ಲು ಮತ್ತು ಶಸ್ತ್ರತಪಾಸಣೆ ನಡೆಸುವ ಮೂಲಕ ಸಾರ್ವಜನಿಕರ ಆರೋಗ್ಯವನ್ನು ಕಾಪಾಡಲು ಉಚಿತ ಶಿಬಿರವನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.

ಇತ್ತೀಚೆಗೆ ಮಕ್ಕಳ ಪಾಲನೆ, ಸಂಸಾರ ನಿರ್ವಹಣೆಯಲ್ಲಿ ಮನೆಯ ಹಿರಿಯರು ಸ್ವಂತ ಆರೋಗ್ಯದ ಬಗ್ಗೆ ಗಮನಹರಿಸುತ್ತಿಲ್ಲ. ಇದರಿಂದ ಅನಾರೋಗ್ಯ ಕಾಡುವ ಮೂಲಕ ಭವಿಷ್ಯದಲ್ಲಿ ಬಹುದೊಡ್ಡ ಸಮಸ್ಯೆ ಎದು ರಾಗಲಿದೆ. ಆದ್ದರಿಂದ ಅಲ್ಲಲ್ಲಿ ನಡೆಯುವ ಉಚಿತ ಶಿಬಿರದಲ್ಲಿ ಪಾಲ್ಗೊಳ್ಳಬೇಕು ಎಂದರು

ಆರ್ಯ ನಯನಜ ಶ್ರೀರಾಮಮಂದಿರ ಸವಿತಾ ಸಮಾಜದ ಅಧ್ಯಕ್ಷ ಸಿ.ಎಂ.ಯೋಗೀಶ್ ಮಾತನಾಡಿ ಇಂದಿನ ಶಿಬಿರದಲ್ಲಿ ಒಟ್ಟು ೭೦ಕ್ಕೂ ಹೆಚ್ಚು ಮಂದಿ ಭಾಗವಹಿಸಿ ಚಿಕಿತ್ಸೆಗೆ ಒಳಗಾಗಿದ್ದಾರೆ. ಒಟ್ಟಾರೆ ಸಾರ್ವಜ ನಿಕರ ಆರೋಗ್ಯ ದೃಷ್ಟಿಯಿಂದ ಶಿಬಿರಗಳನ್ನು ನಡೆಸಿ ಸ್ಪಂದಿಸುವ ಕಾರ್ಯ ಮಾಡಲಾಗಿದೆಎಂದು ಹೇಳಿದರು.

ಈ ಸಂದರ್ಭದಲ್ಲಿ ಲಯನ್ಸ್ ಕ್ಲಬ್ ಅಧ್ಯಕ್ಷ ಕುಮಾರ್, ಆರ್ಯ ನಯನಜ ಶ್ರೀರಾಮಮಂದಿರ ಸವಿತಾ ಸಮಾಜದ ಯುವವೇದಿಕೆ ಅಧ್ಯಕ್ಷ ಧನರಾಜ್, ಪ್ರಧಾನ ಕಾರ್ಯದರ್ಶಿ ಡಿ.ಶೇಷಾದ್ರಿ, ಖಜಾಂಚಿ ಎನ್.ಗಿರೀ ಶ್, ಸಮಾಜದ ಮುಖಂಡರುಗಳಾದ ನಾರಾಯಣ್, ಲಕ್ಷ್ಮೀಕಾಂತ್, ಲತೇಶ್, ಸಿ.ಶಿವಣ್ಣ, ಕೆ.ಟಿ.ಕೃಷ್ಣಮೂ ರ್ತಿ, ಎನ್.ಶ್ರೀಧರ್ ಮತ್ತಿತರರು ಉಪಸ್ಥಿತರಿದ್ದರು.

Eye and dental treatment camp by Savita Samaj

 

Share

Leave a comment

Leave a Reply

Your email address will not be published. Required fields are marked *

Don't Miss

ಭದ್ರಾ ಮೇಲ್ದಂಡೆ ಯೋಜನೆಗೆ ರಾಜ್ಯದಿಂದಲೇ 12 ಸಾವಿರ ಕೋಟಿ ರೂ. ವೆಚ್ಚ

ಚಿಕ್ಕಮಗಳೂರು:  ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್‌ನಲ್ಲಿ ೫,೩೦೦ ಕೋಟಿ ರೂ. ಘೋಷಿಸಿದ್ದ ಕೇಂದ್ರ ಸರ್ಕಾರ ಇದುವರೆಗೆ ನಯಾಪೈಸೆ ಬಿಡುಗಡೆ ಮಾಡಿಲ್ಲ. ಆದರೆ, ನಮ್ಮ ರಾಜ್ಯ ಸರ್ಕಾರ ಈಗಾಗಲೇ ತನ್ನ ಪಾಲಿನ ೧೨,೦೦೦...

ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಬಿಜೆಪಿ ರಾಜಕೀಯ

ಕಡೂರು: ಚಿಕ್ಕಮಗಳೂರು ಜಿಲ್ಲಾ ಪ್ರವಾಸದಲ್ಲಿರುವ ಸಚಿವ ರಾಮಲಿಂಗಾರೆಡ್ಡಿ ಅವರು ರಾಜಕೀಯ ವಲಯದ ಪ್ರಮುಖ ವಿದ್ಯಮಾನಗಳು, ರಾಜ್ಯದ ಜಲವಿವಾದ ಹಾಗೂ ಸಚಿವ ಸಂಪುಟ ವಿಸ್ತರಣೆಯ ಕುರಿತಾಗಿ ಮಾಧ್ಯಮಗಳ ಎದುರು ಮಹತ್ವದ ಹೇಳಿಕೆಗಳನ್ನು ನೀಡಿದ್ದಾರೆ....

Related Articles

ವಾಹನ ಡಿಕ್ಕಿಗೆ ಬೈಕ್ ಸವಾರ ಸಾವು

ಬೀರೂರು: ಕಡೂರು ತಾಲ್ಲೂಕಿನ ಹೇಮಗಿರಿ ಗೇಟ್ ಬಳಿಯ ಜಮೀನಿನಲ್ಲಿ ಕೆಲಸ ಮುಗಿಸಿ, ಅಜ್ಜಂಪುರ ಕಡೆಗೆ ಬೀರೂರು...

ಕಾಫಿ ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ಮನವಿ

ಚಿಕ್ಕಮಗಳೂರು: ಮೂಡಿಗೆರೆ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಮುಖಂಡರು ಇತ್ತೀಚೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ...

ದನ ಅಕ್ರಮ ಸಾಗಾಟ: ಪ್ರಕರಣ ದಾಖಲು

ಅಲ್ಲೂರು: ಇಲ್ಲಿಗೆ ಸಮೀಪದ ಹಾಂದಿಯ ಅಂಬೇಡ್ಕರ್ ವೃತ್ತದ ಬಳಿಯ ರಜಾ ಕ್ಯಾಂಟೀನ್ ಎದುರು 5 ವರ್ಷ...

ಅಕ್ರಮ ನುಸುಳುಕೋರರ ಮತಪಟ್ಟಿಗೆ ದಾಖಲಿಸದಂತೆ ಕ್ರಮವಹಿಸಿ

ಚಿಕ್ಕಮಗಳೂರು: ಎಸ್‌ಐಆರ್ ಸಂಬಂಧ ಬಿಎಲ್‌ಒ೨ಗಳು ಪಕ್ಷದ ಮತದಾರರನ್ನು ಪಟ್ಟಿ ಯಿಂದ ಕೈಜಾರದಂತೆ ಗಮನಹರಿಸುವ ಜೊತೆಗೆ ಅಕ್ರಮ...