Home Political News ಪ್ರತಿಪಕ್ಷವಾಗಿ ಎಡವಿದ್ಯಾ ಬಿಜೆಪಿ : ಹೋರಾಟ ರೂಪಿಸುವಲ್ಲಿ ವಿಫಲ
Political News

ಪ್ರತಿಪಕ್ಷವಾಗಿ ಎಡವಿದ್ಯಾ ಬಿಜೆಪಿ : ಹೋರಾಟ ರೂಪಿಸುವಲ್ಲಿ ವಿಫಲ

Share
Share

ಚಿಕ್ಕಮಗಳೂರು : ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷದ ಕಥೆವ್ಯಥೆ ಎಲ್ಲರಿಗೂ ಗೊತ್ತು ಮನೆಯೊಂದು ಮೂರು ಬಾಗಿಲು ಆಗಿದೆ ಆದರೆ ಚಿಕ್ಕಮಗಳೂರು ಬಿಜೆಪಿಯಲ್ಲಿ‌ ಅಂತಹ ಪರಿಸ್ಥಿತಿ ಇಲ್ಲ ಆದರೂ ವಿರೋಧ ಪಕ್ಷವಾಗಿ ಒಗ್ಗಟ್ಟಿನ ಪ್ರದರ್ಶನ ಕಾಣುತ್ತಿಲ್ಲ ಎಂದು ಕಾರ್ಯಕರ್ತರು ಗೊಣಗುತ್ತಾ ತಿರುಗುವುದು ಎಲ್ಲರಿಗೂ ಗೊತ್ತು.

ಚಿಕ್ಕಮಗಳೂರು ಜಿಲ್ಲಾ ಭಾರತೀಯ ಜನತಾ ಪಕ್ಷದ ಅಧ್ಯಕ್ಷ ದೇವರಾಜ್‌ ಶೆಟ್ಟಿ ಅತ್ಯಂತ ಚುರುಕಾಗಿ ಓಡಾಟ ಮಾಡುತ್ತಿದ್ದಾರೆ ಪಕ್ಷ ಕಟ್ಟಬೇಕೆಂಬ ಹಂಬಲ ,ಆಸೆ ಇದೆ ಆದರೆ ಆಡಳಿತ ಪಕ್ಷದ ವಿರುದ್ಧ ಹೋರಾಟ ರೂಪಿಸುವಲ್ಲಿ ಎಡುವುತ್ತಿದ್ದಾರೆ ಎಂದು ಬಿಜೆಪಿಯ ಕಾರ್ಯಕರ್ತರು ಮುಖಂಡರು ಹೇಳಿಕೊಂಡು ಓಡಾಡುತ್ತಿರೋದು ಸುಳ್ಳೇನಲ್ಲಾ

ವಿಧಾನ ಪರಿಷತ್ ಉಪ ಸಭಾಪತಿ ಪ್ರಾಣೇಶ್ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಾರೆ ಅವರಿಗೆ ಇತಿ ಮಿತಿ ಇದೆ ಆದರೆ ಬೆಂಕಿ ಚೆಂಡು ಸಿ,ಟಿ, ರವಿ ಜಿಲ್ಲೆಯಲ್ಲಿ ಸೈಲೆಂಟ್ ರಾಜ್ಯದಲ್ಲಿ ವೈಲೆಂಟ್ ಆಗಿದ್ದಾರೆ ಎಂದರೆ ರಾಜ್ಯ ನಾಯಕ ಎನ್ನಿಸಿಕೊಳ್ಳಬೇಕೆಂಬ ಆಸೆ ಇರಬಹುದು. ಖಾಸಗಿಯಾಗಿ ಸಿಕ್ಕಾಗ ಇನ್ನೂ ಎರಡು ವರ್ಷ ಜಿಲ್ಲೆಯಲ್ಲಿ ಮಾತನಾಡುವುದಿಲ್ಲ ಏಕೆಂದರೆ ಸೋತು ಹತಾಶರಾಗಿದ್ದಾರೆ ಎನ್ನುತ್ತಾರೆಂದೆ ಜಾರಿಕೊಳ್ಳುತ್ತಿದ್ದಾರೆ.

ವಿಧಾನ ಸಭಾ ಚುನಾವಣೆಯಲ್ಲಿ ಐದು ಕ್ಷೇತ್ರದಲ್ಲಿ ಪರಾಭವ ಗೊಂಡಿರುವ ಬಿಜೆಪಿ ಕಾದು ನೋಡುವಾ ತಂತ್ರದಲ್ಲಿ ಇರಬಹುದು. ವಿಧಾನ ಸಭಾ ಚುನಾವಣೆಯಲ್ಲಿ ಸೋತರು ಲೋಕಸಭಾ ಚುನಾವಣೆಯಲ್ಲಿ ಫೀನಿಕ್ಸ್ ನಂತೆ ಐದು ಕ್ಷೇತ್ರದಲ್ಲಿ ಮೇಲುಗೈ ಸಾಧಿಸಿರುವ ಬಿಜೆಪಿ ಜಿಲ್ಲೆಯ ಸಮಸ್ಯೆಗಳ ಬಗ್ಗೆ ಪರಿಣಾಮಕಾರಿ ಹೋರಾಟ ರೂಪಿಸಿಲ್ಲ ಎಂಬ ದೂರಿದೆ.

ಬಿಜೆಪಿ ಜಿಲ್ಲಾ ಅಧ್ಯಕ್ಷರು ನೀಟಾಗಿ ಡ್ರೆಸ್ ಮಾಡಿಕೊಂಡು ನಗು,ನಗುತ್ತಾ ಎಲ್ಲರಿಗೂ ಮಾತನಾಡಿಸುವ ಕಲೆಗಾರಿಕೆ ಇದ್ದರು ಪಕ್ಷ ಸರಿಯಾದ ಹೋರಾಟ ಮಾಡುತ್ತಿಲ್ಲ ಎಂದು ಕಾರ್ಯಕರ್ತರು ಗೊಣಗುತ್ತಾ ಇರುವುದು ಗುಟ್ಟಾಗಿ ಉಳಿದಿಲ್ಲ, ಕಾಂಗ್ರೆಸ್ ನವರು ಅಭಿವೃದ್ಧಿ ಕೆಲಸವಿರಲಿ ಸಾಮಾನ್ಯ ಕೆಲಸವನ್ನು ಮಾಡದಿರುವ ಸಂದರ್ಭದಲ್ಲಿ ಬಿಜೆಪಿಯ ಮೌನ ರಹದಾರಿ ಮಾಡಿದಂತೆ ಆಗಿದೆ ಎಂದು ಅಸಮಾಧಾನ ಇರುವುದು ಮಾತ್ರ ನಿಜ.

Share

Leave a comment

Leave a Reply

Your email address will not be published. Required fields are marked *

Don't Miss

ಪದವಿ ಪೂರ್ವ ಕಾಲೇಜುಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟ

ಚಿಕ್ಕಮಗಳೂರು:  ಪರಿಶ್ರಮ ವಹಿಸಿದಾಗ ನಿಮ್ಮ ಭವಿಷ್ಯ ಸ್ವತಹಾ ನೀವೇ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು. ಅವರು ಇಂದು ರಾಮನಹಳ್ಳಿಯ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಶಾಲಾ ಶಿಕ್ಷಣ...

ನಗರಸಭೆ ನೂತನ ಉಪಾಧ್ಯಕ್ಷರಾಗಿ ಲಲಿತಾ ರವಿನಾಯ್ಕ ಅವಿರೋಧ ಆಯ್ಕೆ

ಚಿಕ್ಕಮಗಳೂರು:  ನಗರಸಭೆ ೩೫ನೇ ವಾರ್ಡಿನ ಕೆಂಪನಹಳ್ಳಿ ಬಡಾವಣೆಯ ಬಿಜೆಪಿ ಸದಸ್ಯೆ ಲಲಿತಾ ರವಿನಾಯ್ಕ ನಗರಸಭೆ ನೂತನ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿಯಾಗಿದ್ದ ಉಪವಿಭಾಗಾಧಿಕಾರಿ ಸುದರ್ಶನ್ ಘೋಷಿಸಿದರು. ಅವರು ಇಂದು ನಗರಸಭೆಯಲ್ಲಿ ಪಕ್ಷದ...

Related Articles

ಕೇಂದ್ರ ಸರ್ಕಾರದ ಅನುದಾನ ಹಾಗೂ ತೆರಿಗೆ ಪಾಲು ಕುರಿತು ನಮ್ಮ ಸರ್ಕಾರ ‘ಶ್ವೇತಪತ್ರ’ ಪತ್ರ

ವಿಧಾನಸಭೆ:  ಕೇಂದ್ರ ಸರ್ಕಾರವು ಕೇಂದ್ರ ಪುರಸ್ಕೃತ ಯೋಜನೆಗಳಿಗೆ ರಾಜ್ಯಕ್ಕೆ ನೀಡುತ್ತಿರುವ ಅನುದಾನ ಹಾಗೂ ತೆರಿಗೆ ಪಾಲು...

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಎಂಬ ನಾಟಕ…!

ಚಿಕ್ಕಮಗಳೂರು: ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಲು ತುದಿಗಾಲಿನಲ್ಲಿ ನಿಂತಿದ್ದವರಿಗೆ ಸದ್ಯಕ್ಕೆ ಬ್ರೇಕ್ ಬಿದ್ದಿದೆ. ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷರಾಗಲು...

ಬಿ.ಎಲ್.ಶಂಕರ್ ರಾಜಕೀಯ ಹಿನ್ನಡೆ ಏಕೆ ?

ಚಿಕ್ಕಮಗಳೂರು: ಬಿ.ಎಲ್.ಶಂಕರ್ ರಾಜಕೀಯ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ದೊಡ್ಡ ಶಕ್ತಿಯಾಗಿದ್ದವರು ಹಿನ್ನಡೆ ಅನುಭವಿಸುತ್ತಿರುವುದು ಏಕೆ ?...

ಬಿ.ಎಲ್.ಶಂಕರ್ ಗೆ ಮತ್ತೆ ಮತ್ತೆ ಮಿಸ್…?

ಚಿಕ್ಕಮಗಳೂರು: ರಾಜ್ಯ ಸಭೆ ಅಥವಾ ವಿಧಾನ ಪರಿಷತ್ ಸ್ಥಾನಗಳಿಗೆ ಆಯ್ಕೆ ಮಾಡುವಾಗ ಬಿ.ಎಲ್.ಶಂಕರ್ ಹೆಸರು ಎವರೆಸ್ಟ್...