Home namma chikmagalur chikamagalur ಎಸ್ಸಿ ಜಿತೇಂದ್ರ ಕುಮಾ‌ರ್ ದಯ್ಯಾ ಹೆಸರಿನಲ್ಲೇ ನಕಲಿ ಫೇಸ್‌ಬುಕ್ ಖಾತೆ
chikamagalurCrime NewsHomeLatest Newsnamma chikmagalur

ಎಸ್ಸಿ ಜಿತೇಂದ್ರ ಕುಮಾ‌ರ್ ದಯ್ಯಾ ಹೆಸರಿನಲ್ಲೇ ನಕಲಿ ಫೇಸ್‌ಬುಕ್ ಖಾತೆ

Share
Share

ಚಿಕ್ಕಮಗಳೂರು: ಕಾಫಿನಾಡಿನ ರಕ್ಷಕರಿಗೇ ಈಗ ಸೈಬರ್ ಕಳ್ಳರ ಕಾಟ ಶುರುವಾಗಿದೆ. ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಸಿ) ಜಿತೇಂದ್ರ ಕುಮಾ‌ರ್ ದಯ್ಯಾ ಅವರ ಹೆಸರಿನಲ್ಲೇ ಕಿಡಿಗೇಡಿಗಳು ನಕಲಿ ಫೇಸ್‌ಬುಕ್ ಖಾತೆಯನ್ನು ಸೃಷ್ಟಿಸಿದ್ದಾರೆ.

ಜಿತೇಂದ್ರ ಕುಮಾರ್ ದಯ್ಯಾ ಅವರು ಚಿಕ್ಕಮಗಳೂರು ಜಿಲ್ಲೆಯ ಎಸ್ಪಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಈ ನಕಲಿ ಖಾತೆ ಸಕ್ರಿಯಗೊಂಡಿರುವುದು ಅಚ್ಚರಿ ಮೂಡಿಸಿದೆ. “ಐ.ಪಿ.ಎಸ್ ಜಿತೇಂದ್ರ ಕುಮಾರ್ ದಯ್ಯಾ” ಎಂಬ ಹೆಸರಿನಲ್ಲಿ ಖಾತೆ ತೆರೆದಿರುವ ಕಿಡಿಗೇಡಿ, ಇದು ಅಸಲಿ ಖಾತೆಯೆಂದೇ ಬಿಂಬಿಸಲು ಸಕಲ ತಯಾರಿ ನಡೆಸಿದ್ದಾನೆ.

ಇದರಲ್ಲಿ ಚಿಕ್ಕಮಗಳೂರು ಪೊಲೀಸ್ ಇಲಾಖೆಯ ಅಧಿಕೃತ ಚಟುವಟಿಕೆಗಳು ಹಾಗೂ ಪ್ರಮುಖ ಮಾಹಿತಿಗಳನ್ನೇ ನಿರಂತರವಾಗಿ ಪೋಸ್ಟ್ ಮಾಡುವ ಮೂಲಕ ಸಾರ್ವಜನಿಕರನ್ನು ವಂಚಿಸುವ ಮತ್ತು ನಂಬಿಸುವ ವ್ಯವಸ್ಥಿತ ಸಂಚು ರೂಪಿಸಲಾಗಿದೆ.

ಅಧಿಕಾರಿಯೊಬ್ಬರ ಹೆಸರನ್ನು ಬಳಸಿಕೊಂಡು ಇಲಾಖೆಯ ಒಳಗಿನ ಮಾಹಿತಿಯಂತೆ ಪೋಸ್ಟ್ ಮಾಡುತ್ತಿರುವುದು ಇಲಾಖೆಯ ಘನತೆಗೆ ಧಕ್ಕೆ ತರುವ ಆತಂಕವನ್ನು ಸೃಷ್ಟಿಸಿದೆ. ನಕಲಿ ಖಾತೆ ಸೃಷ್ಟಿಸಿ ಸಾರ್ವಜನಿಕರಲ್ಲಿ ಗೊಂದಲ ಮೂಡಿಸುತ್ತಿರುವ ಕಿಡಿಗೇಡಿಗಳನ್ನು ಪತ್ತೆಹಚ್ಚಿ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಸೈಬರ್ ಕ್ರೈಂ ಪೊಲೀಸರು ಮುಂದಾಗಿದ್ದಾರೆ.

ಸಾರ್ವಜನಿಕರು ಇಂತಹ ನಕಲಿ ಖಾತೆಗಳ ಬಗ್ಗೆ ಎಚ್ಚರದಿಂದಿರಬೇಕು ಮತ್ತು ಯಾವುದೇ ವೈಯಕ್ತಿಕ ಮಾಹಿತಿ ಅಥವಾ ಹಣಕಾಸಿನ ಬೇಡಿಕೆಗಳಿಗೆ ಸ್ಪಂದಿಸಬಾರದಾಗಿದೆ.

Fake Facebook account in the name of SC Jitendra Kumar Dayya

Share

Leave a comment

Leave a Reply

Your email address will not be published. Required fields are marked *

Don't Miss

ಕಾಫಿ ತೋಟದಲ್ಲಿ ಮರಗಸಿ – ಕಾರ್ಮಿಕನ ಸಾವು

ಚಿಕ್ಕಮಗಳೂರು : ಕಾಫಿ ತೋಟದ ಮಾಲೀಕರು ಮತ್ತು ಮೇಸ್ತ್ರಿಗಳ ನಿರ್ಲಕ್ಷ್ಯಕ್ಕೆ ಅಮಾಯಕ ಕಾರ್ಮಿಕನೊಬ್ಬ ಬಲಿಯಾದ ದಾರುಣ ಘಟನೆ ಮಲ್ಲಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ಜೋಳದಾಳ್ ಪಾಳ್ಯದಲ್ಲಿ ನಡೆದಿದೆ. ತ್ಯಾಗರಾಜ್ ಗೌಡ ಎಂಬುವವರ...

ಎಮ್ಮೆದೊಡ್ಡಿ ರಸ್ತೆಯಲ್ಲಿ ನಡೆದ ಅಪಘಾತದಲ್ಲಿ ವೃದ್ಧನ ಸಾವು

ಕಡೂರು: ತಾಲ್ಲೂಕಿನ ಎಮ್ಮೆದೊಡ್ಡಿ ರಸ್ತೆಯ ಕರಿಯಮ್ಮ ದೇವಸ್ಥಾನದ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ವೃದ್ಧರೊಬ್ಬರು ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಶೇಖರಪ್ಪ ಎಂದು ಗುರುತಿಸಲಾಗಿದ್ದು, ರಸ್ತೆಯ ಎಡಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಕಡೂರು...

Related Articles

ಚಿಕ್ಕಮಗಳೂರಿನಲ್ಲಿ ಡಕೋಟಾ ಬಸ್ಸುಗಳು

ಚಿಕ್ಕಮಗಳೂರು: ಚಿಕ್ಕಮಗಳೂರು ಕೆ,ಎಸ್,ಆರ್, ಟಿ ಸಿ ಬಸ್ಸುಗಳನ್ನು “ಡಕೋಟಾ” ಎಂದು ಜನ ಕರೆಯ ತೊಡಗಿದ್ದಾರೆ. ಕೆ,ಎಸ್,ಆರ್,ಟಿ...

ಜಿಲ್ಲೆಯಲ್ಲಿ ಜನನ-ಮರಣ ನೋಂದಣಿ ಕಡ್ಡಾಯ

ಚಿಕ್ಕಮಗಳೂರು:  ಭಾರತದ ನಾಗರಿಕ ನೋಂದಣಿ ನಿಯಮದ ಪ್ರಕಾರ ಜನನ-ಮರಣ ನೋಂದಣಿಯನ್ನು ಪ್ರತಿಯೊಬ್ಬರೂ ತಪ್ಪದೇ ಮಾಡಿಸಬೇಕು ಎಂದು...

ಜಿಲ್ಲೆಯಲ್ಲಿ ಗೃಹಬಳಕೆ ಗ್ಯಾಸ್ ಸಿಲಿಂಡರ್ ಕೊರತೆ ಇಲ್ಲ

ಚಿಕ್ಕಮಗಳೂರು: ಲ್ಲೆಯಲ್ಲಿ ಗೃಹ ಬಳಕೆಯ ಗ್ಯಾಸ್ ಸಿಲಿಂಡರ್‌ಗಳ ಕೊರತೆ ಇಲ್ಲ; ಬುಕಿಂಗ್ ಮಾಡಿದವರಿಗೆ ನಿಯಮಾನುಸಾರ ಗ್ಯಾಸ್...

ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿ-ಸವಾರ ಸಾವು

ಕಡೂರು: ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟಿರುವ ಘಟನೆ ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ...