Home namma chikmagalur Banagalore ನಕಲಿ “ಐ.ಎ.ಎಸ್” ಮಿಥುನ್ ಬಂಧನ
BanagaloreHomeLatest Newsnamma chikmagalur

ನಕಲಿ “ಐ.ಎ.ಎಸ್” ಮಿಥುನ್ ಬಂಧನ

Share
Share

ಬೆಂಗಳೂರು: ಚಿಕ್ಕಮಗಳೂರು ಮೂಲದ ಮಿಥುನ್ ಎಂಬತಾ ಐ.ಎ.ಎಸ್.ನ ನಕಲಿ ದಾಖಲೆ ಸೃಷ್ಟಿ ಮಾಡಿ ಹಲವರಿಗೆ ವಂಚನೆ ಮಾಡಿದ್ದು ಬೆಂಗಳೂರಿನ ಅಮೃತಹಳ್ಳಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಅರೋಗ್ಯ ಇಲಾಖೆಯ ಎನ್.ಹೆಚ್.ಎಮ್.ನ ಉಸ್ತುವಾರಿ ಎಂದು ಹೇಳಿಕೊಂಡ ಮಲ್ಲೇಗೌಡ ಜನರ ಆಸ್ಪತ್ರೆಯಲ್ಲಿ ಠೀಕಾಣೆ ಹೂಡಿದ್ದ ಈತ ಹಲವು ಮೆಡಿಕಲ್ ಶಾಪ್ ನವರನ್ನು ನಂಬಿಸಿ ಮೆಡಿಕಲ್ ಸಪ್ಲೈ ಮಾಡಿಸಿಕೊಡುವುದಾಗಿ ಹಣ ಪಡೆದಿದ್ದಾನೆ ಎನ್ನಲಾಗಿದೆ.

ಶ್ರೇಯಸ್ ಮೆಡಿಕಲ್ ಶಾಪ್ ನ ಸತೀಶ್ ಎಂಬುವರಿಂದ ನಲವತ್ತು ಲಕ್ಷಕ್ಕೂ ಹೆಚ್ಚು ಹಣ ತೆಗೆದುಕೊಂಡು ಮೋಸ ಮಾಡಿದ್ದಾನೆ ಎಂದು ದೂರು ದಾಖಲಾಗಿದೆ.ಇದೇ ರೀತಿಯಲ್ಲಿ ಹಲವರಿಗೆ ವಂಚಿಸಿರುವ ಮಾಹಿತಿಗಳು ಹರಿದಾಡುತ್ತಿವೆ.

ಬೆಂಗಳೂರಿನ ಲಾಡ್ಜ್ ಬಳಿ ಗಲಾಟೆಗೆ ಸಂಬಂಧಿಸಿದಂತೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಈತ ನಕಲಿ ದಾಖಲೆ ಸೃಷ್ಟಿ ಮಾಡಿರವುದು ಬೆಳಕಿಗೆ ಬಂದಿದೆ.

ನ್ಯೂಸ್ ಕಿಂಗ್ ನಲ್ಲಿ ಜಿಲ್ಲೆಯ ಮಿಥುನ್ ಐ.ಎ.ಎಸ್.ಮಾಡಿರುವ ಬಗ್ಗೆ ಈ ಹಿಂದೆ ಸುದ್ದಿ ಪ್ರಕಟಿಸಿತ್ತು.ಇದಕ್ಕೂ ಪೂರಕ ದಾಖಲೆ ಪರಿಶೀಲನೆ ಮಾಡಿತ್ತು.ಆದರೆ ಅವನ ವರ್ತನೆ ಮತ್ತು ನಡವಳಿಕೆ ಈತ ಐ.ಎ.ಎಸ್.ಮಾಡಿರಲು ಸಾಧ್ಯವಿಲ್ಲ ಎನ್ನುತ್ತಿರುವಾಗಲೇ ಈತನ ಬಂಧನ ಸುದ್ದಿ ಹೊರ ಬಂದಿದೆ.

ಜಿಲ್ಲೆಯಲ್ಲಿ ಎರಡು ಕೋಟಿಗೂ ಹೆಚ್ಚಿನ ವಂಚನೆ ಮಾಡಲಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ.ಇನ್ನೂ ಬೆಂಗಳೂರಿನಲ್ಲಿ ಎಷ್ಟು ಜನರಿಗೆ ವಂಚನೆ ಆಗಿದೆ ಎಂಬದು ತಿಳಿದು ಬರಬೇಕಾಗಿದೆ.ಚಿಕ್ಕಮಗಳೂರು ಆಸ್ಪತ್ರೆಯಲ್ಲಿ ಗುತ್ತಿಗೆ ಅಧಾರದ ಮೇಲೆ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬಳ ಹೆಸರು ಕೇಳಿಬರುತ್ತಿದೆ.

Fake “IAS” Mithun arrested

Share

Leave a comment

Leave a Reply

Your email address will not be published. Required fields are marked *

Don't Miss

ಬೀಗ ಹಾಕಿದ್ದ ಮನೆಯೊಂದರ ಹಿಂಬಾಗಿಲು ಮುರಿದು ಕಳ್ಳತನ

ಚಿಕ್ಕಮಗಳೂರು: ಬೀಗ ಹಾಕಿದ್ದ ಮನೆಯೊಂದರ ಹಿಂಬಾಗಿಲು ಮುರಿದು ಕಳ್ಳತನ ನಡೆಸಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕೆ.ಬಿ. ಹಾಳ್‌ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಿವಾಸಿ ಕಮಲಮ್ಮ ಎಂಬುವರು ಮೇ 19ರಂದು ತಮ್ಮ ಸೊಸೆಯೊಂದಿಗೆ...

ಟ್ರ್ಯಾಕ್ಟರ್‌ನಲ್ಲಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಪ್ರಕರಣ ಪತ್ತೆ

ಕೊಪ್ಪ: ಟ್ರ್ಯಾಕ್ಟರ್‌ನಲ್ಲಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ದಂಧೆಯನ್ನು ಪೊಲೀಸರು ಯಶಸ್ವಿಯಾಗಿ ಪತ್ತೆ ಹಚ್ಚಿದ್ದಾರೆ. ಕೊಪ್ಪ ತಾಲೂಕಿನ ಹರಿಹರಪುರ ಪೊಲೀಸ್ ಠಾಣಾ ವ್ಯಾಪ್ತಿಯ ಭಂಡಿಗಡಿ ಕಡೆಯಿಂದ ಹರಿಹರಪುರದ ಕಡೆಗೆ ಮರಳು ಸಾಗಿಸುತ್ತಿದ್ದಾಗ ಖಚಿತ...

Related Articles

ಬೆಳ್ಳಿ ಮಾರಾಟ ಪ್ರಕರಣದ ಆರೋಪಿಯಿಂದ 41.90 ಲಕ್ಷ ರೂ ನಗದು ಜಪ್ತಿ

ಚಿಕ್ಕಮಗಳೂರು: ಬೆಳ್ಳಿ ಮಾರಾಟದ ಹೆಸರಿನಲ್ಲಿ ನಡೆದಿದ್ದ ಬರೋಬ್ಬರಿ 45 ಲಕ್ಷ ರೂಪಾಯಿ ವಂಚನೆ ಪ್ರಕರಣವನ್ನು ಭೇದಿಸುವಲ್ಲಿ...

ಭದ್ರಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಪುಂಡಾಟ

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಹೆಬ್ಬೆ ವಲಯ ವ್ಯಾಪ್ತಿಯ ಭದ್ರಾ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ...

ರೈತ ಸಂಘದ ಡಿ.ರಾಮೇಗೌಡ ಕಲ್ಲಹಳ್ಳಿ ಆಯ್ಕೆ ಕ್ರಮಬದ್ಧ

ಚಿಕ್ಕಮಗಳೂರು: ತಾಲ್ಲೂಕು ಅಧ್ಯಕ್ಷರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ತಾಲ್ಲೂಕು ಸಮಿತಿಯ ಸಭೆಯಲ್ಲಿ ಹಾಜರಿದ್ದ ಪದಾಧಿಕಾರಿಗಳ ನಿರ್ಣಯದಂತೆ...

ಮುಂಗಾರು ಹಾನಿ ತಡೆಗೆ ಕಟ್ಟೆಚ್ಚರ ವಹಿಸಲು ಸೂಚನೆ

ಚಿಕ್ಕಮಗಳೂರು: ಮುಂಗಾರು ಬಿರುಗಾಳಿ ಮಳೆಗೆ ಸಂಭವನೀಯ ಅಪಾಯ, ಹಾನಿ ತಡೆಗಟ್ಟುವುದು ಹಾಗೂ ತುರ್ತು ಕ್ರಮ ವಹಿಸುವ...