Home namma chikmagalur Banagalore ನಕಲಿ “ಐ.ಎ.ಎಸ್” ಮಿಥುನ್ ಬಂಧನ
BanagaloreHomeLatest Newsnamma chikmagalur

ನಕಲಿ “ಐ.ಎ.ಎಸ್” ಮಿಥುನ್ ಬಂಧನ

Share
Share

ಬೆಂಗಳೂರು: ಚಿಕ್ಕಮಗಳೂರು ಮೂಲದ ಮಿಥುನ್ ಎಂಬತಾ ಐ.ಎ.ಎಸ್.ನ ನಕಲಿ ದಾಖಲೆ ಸೃಷ್ಟಿ ಮಾಡಿ ಹಲವರಿಗೆ ವಂಚನೆ ಮಾಡಿದ್ದು ಬೆಂಗಳೂರಿನ ಅಮೃತಹಳ್ಳಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಅರೋಗ್ಯ ಇಲಾಖೆಯ ಎನ್.ಹೆಚ್.ಎಮ್.ನ ಉಸ್ತುವಾರಿ ಎಂದು ಹೇಳಿಕೊಂಡ ಮಲ್ಲೇಗೌಡ ಜನರ ಆಸ್ಪತ್ರೆಯಲ್ಲಿ ಠೀಕಾಣೆ ಹೂಡಿದ್ದ ಈತ ಹಲವು ಮೆಡಿಕಲ್ ಶಾಪ್ ನವರನ್ನು ನಂಬಿಸಿ ಮೆಡಿಕಲ್ ಸಪ್ಲೈ ಮಾಡಿಸಿಕೊಡುವುದಾಗಿ ಹಣ ಪಡೆದಿದ್ದಾನೆ ಎನ್ನಲಾಗಿದೆ.

ಶ್ರೇಯಸ್ ಮೆಡಿಕಲ್ ಶಾಪ್ ನ ಸತೀಶ್ ಎಂಬುವರಿಂದ ನಲವತ್ತು ಲಕ್ಷಕ್ಕೂ ಹೆಚ್ಚು ಹಣ ತೆಗೆದುಕೊಂಡು ಮೋಸ ಮಾಡಿದ್ದಾನೆ ಎಂದು ದೂರು ದಾಖಲಾಗಿದೆ.ಇದೇ ರೀತಿಯಲ್ಲಿ ಹಲವರಿಗೆ ವಂಚಿಸಿರುವ ಮಾಹಿತಿಗಳು ಹರಿದಾಡುತ್ತಿವೆ.

ಬೆಂಗಳೂರಿನ ಲಾಡ್ಜ್ ಬಳಿ ಗಲಾಟೆಗೆ ಸಂಬಂಧಿಸಿದಂತೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಈತ ನಕಲಿ ದಾಖಲೆ ಸೃಷ್ಟಿ ಮಾಡಿರವುದು ಬೆಳಕಿಗೆ ಬಂದಿದೆ.

ನ್ಯೂಸ್ ಕಿಂಗ್ ನಲ್ಲಿ ಜಿಲ್ಲೆಯ ಮಿಥುನ್ ಐ.ಎ.ಎಸ್.ಮಾಡಿರುವ ಬಗ್ಗೆ ಈ ಹಿಂದೆ ಸುದ್ದಿ ಪ್ರಕಟಿಸಿತ್ತು.ಇದಕ್ಕೂ ಪೂರಕ ದಾಖಲೆ ಪರಿಶೀಲನೆ ಮಾಡಿತ್ತು.ಆದರೆ ಅವನ ವರ್ತನೆ ಮತ್ತು ನಡವಳಿಕೆ ಈತ ಐ.ಎ.ಎಸ್.ಮಾಡಿರಲು ಸಾಧ್ಯವಿಲ್ಲ ಎನ್ನುತ್ತಿರುವಾಗಲೇ ಈತನ ಬಂಧನ ಸುದ್ದಿ ಹೊರ ಬಂದಿದೆ.

ಜಿಲ್ಲೆಯಲ್ಲಿ ಎರಡು ಕೋಟಿಗೂ ಹೆಚ್ಚಿನ ವಂಚನೆ ಮಾಡಲಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ.ಇನ್ನೂ ಬೆಂಗಳೂರಿನಲ್ಲಿ ಎಷ್ಟು ಜನರಿಗೆ ವಂಚನೆ ಆಗಿದೆ ಎಂಬದು ತಿಳಿದು ಬರಬೇಕಾಗಿದೆ.ಚಿಕ್ಕಮಗಳೂರು ಆಸ್ಪತ್ರೆಯಲ್ಲಿ ಗುತ್ತಿಗೆ ಅಧಾರದ ಮೇಲೆ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬಳ ಹೆಸರು ಕೇಳಿಬರುತ್ತಿದೆ.

Fake “IAS” Mithun arrested

Share

Leave a comment

Leave a Reply

Your email address will not be published. Required fields are marked *

Don't Miss

ಜಿಲ್ಲೆಯಲ್ಲಿ ಮೂರು ತಿಂಗಳಿಂದ ಪಿಂಚಣಿ ಹಣ ಸ್ಥಗಿತ

ಚಿಕ್ಕಮಗಳೂರು: ಸಾಮಾಜಿಕ ಭದ್ರತಾ ಯೋಜನೆಗಳಡಿ ವೃದ್ಧಾಪ್ಯ, ವಿಧವಾ ಸೇರಿದಂತೆ ವಿವಿಧ ಮಾಸಿಕ ಪಿಂಚಣಿಗಳನ್ನು ಪಡೆಯುತ್ತಿರುವ ಫಲಾನುಭವಿಗಳಿಗೆ “ತಿಳುವಳಿಕೆ ಪತ್ರ” ನೀಡುವ ನೆಪದಲ್ಲಿ ಕಳೆದ ಸುಮಾರು ಮೂರು ತಿಂಗಳಿಂದ ಪಿಂಚಣಿ ಹಣ ತಡೆಹಿಡಿಯಲಾಗಿದೆ...

ಕಾಡುಕೋಣ ದಾಳಿಗೆ ಕಾರ್ಮಿಕ ಬಲಿ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಡುಕೋಣಗಳ ಹಾವಳಿ ಮತ್ತೆ ಜೀವ ಬಲಿ ಪಡೆದಿದೆ. ಕೊಪ್ಪ ತಾಲೂಕಿನ ಅಗಳಗಂಡಿ ಸಮೀಪದ ದೋಣಿಹಡ್ಲು ಗ್ರಾಮದಲ್ಲಿ ಕಾಡುಕೋಣ ದಾಳಿಗೆ 45 ವರ್ಷದ ಮಂಜುನಾಥ್ ಮೃತಪಟ್ಟಿದ್ದಾರೆ. ಮಂಜುನಾಥ್...

Related Articles

ಯಗಟಿ ಸಮೀಪದ ವಿದ್ಯುತ್ ತಂತಿ ತಗುಲಿ ವ್ಯಕ್ತಿ ಬಲಿ

ಚಿಕ್ಕಮಗಳೂರು: ಕಾಡುಹಂದಿ ಬೇಟೆಗಾಗಿ ಅಕ್ರಮವಾಗಿ ಅಳವಡಿಸಿದ್ದ ವಿದ್ಯುತ್ ತಂತಿ ತಗುಲಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಸಿಕ್ಕಿಬೀಳುವ ಭೀತಿಯಿಂದ ಬೇಟೆಗಾರರು...

ಸಿ.ಟಿ.ರವಿಯನ್ನು ಇನ್ನೆರಡು ದಿನದಲ್ಲಿ ಬಂಧಿಸದಿದ್ದರೆ ಜಿಲ್ಲಾ ಬಂದ್‌

ಮೂಡಿಗೆರೆ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಸಮರ್ಥಿಸುವ ಭರದಲ್ಲಿ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರು...

ಸಿ.ಟಿ.ರವಿಯಿಂದ ಸಮಾಜದಲ್ಲಿ ಸಾಮರಸ್ಯ ಕದಡುವ ಕೆಲಸ

ಚಿಕ್ಕಮಗಳೂರು : ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರು ಮುಲ್ಲಾನ ಎದೆ ಸೀಳಿದರೆ ಮೂರಕ್ಷರ ಇಲ್ಲ...

ಎಲ್ಲಾ ಧರ್ಮದವರನ್ನು ಗೌರವಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ

ಚಿಕ್ಕಮಗಳೂರು : ಜಿಲ್ಲೆಯಲ್ಲಿ ಎಲ್ಲಾ ಧರ್ಮದ ಜನರು ಪ್ರೀತಿ ಸ್ನೇಹದಿಂದ ಬದುಕುತ್ತಿರುವ ಇಂತಹ ಪರಂಪರೆಯನ್ನು ಗೌರವಿಸಬೇಕಾಗಿರುವುದು...