Home namma chikmagalur chikamagalur ಶ್ರೀನಂದಾ ಮೃತದೇಹ ಪತ್ತೆ ಶೋಕಸಾಗರದಲ್ಲಿ ಕುಟುಂಬ
chikamagalurHomeLatest Newsnamma chikmagalur

ಶ್ರೀನಂದಾ ಮೃತದೇಹ ಪತ್ತೆ ಶೋಕಸಾಗರದಲ್ಲಿ ಕುಟುಂಬ

Share
Share

ಚಿಕ್ಕಮಗಳೂರು: ಪ್ರಸಿದ್ಧ ಪ್ರವಾಸಿ ತಾಣ ಮಾಣಿಕ್ಯಧಾರಾದಲ್ಲಿ ಕಳೆದ ಮಂಗಳವಾರ ನಾಪತ್ತೆಯಾಗಿದ್ದ ಕೇರಳ ಮೂಲದ ಬಾಲಕಿ ಶ್ರೀನಂದಾ ಮೃತದೇಹ ಇಂದು ಮಧ್ಯಾಹ್ನ ಕಡಿದಾದ ಪ್ರದೇಶದಲ್ಲಿ ಪತ್ತೆಯಾಗಿದೆ. ಕಳೆದ ಮೂರು ದಿನಗಳಿಂದ ಸ್ಥಳೀಯ ಪೊಲೀಸರು ಹಾಗೂ ರಕ್ಷಣಾ ಸಿಬ್ಬಂದಿ ನಿರಂತರವಾಗಿ ಶೋಧ ಕಾರ್ಯ ನಡೆಸುತ್ತಿದ್ದರು.

ಇಂದು ಕಾರ್ಯಾಚರಣೆ ಮುಂದುವರಿಯುತ್ತಿದ್ದಾಗ, ಕೊಳೆತ ವಾಸನೆ ಬರುತ್ತಿದ್ದ ದಿಕ್ಕಿನತ್ತ ತೆರಳಿದ ಸಿಬ್ಬಂದಿಗೆ ಬಾಲಕಿಯ ಶವ ಸಿಕ್ಕಿದೆ. ಈ ಕಷ್ಟಕರವಾದ ಶೋಧ ಕಾರ್ಯದಲ್ಲಿ ಥರ್ಮಲ್ ಡೋನ್ ತಂತ್ರಜ್ಞಾನವೂ ಪ್ರಮುಖ ಪಾತ್ರ ವಹಿಸಿದ್ದು,

ಮೃತದೇಹದ ದೃಶ್ಯಗಳು ಡೋನ್ನಲ್ಲಿ ಸೆರೆಯಾದ ಕಾರಣ ಕಾರ್ಯಾಚರಣೆ ನಡೆಸಲು ಅನುಕೂಲವಾಗಿದೆ ಸದ್ಯ ಪೊಲೀಸರು ತನಿಖೆ ಮುಂದುವರಿಸಿದ್ದು ಬಾಲಕಿಯ ಸಾವಿಗೆ ನಿಖರ ಕಾರಣವೇನು ಎಂಬುದು ತನಿಖೆಯ ನಂತರವಷ್ಟೇ ತಿಳಿದುಬರಬೇಕಿದೆ.

ಶೋಕಸಾಗರ: ಕಾಫಿನಾಡಿನಲ್ಲಿ ನಾಪತ್ತೆಯಾಗಿದ್ದ ಕೇರಳ ಮೂಲದ ಬಾಲಕಿ ಶ್ರೀನಂದಾ ಪ್ರಕರಣವು ಇಂದು ಅತ್ಯಂತ ದುಃಖದಾಯಕ ಅಂತ್ಯ ಕಂಡಿದೆ. ಪ್ರವಾಸಕ್ಕೆಂದು ಬಂದು ಕಣ್ಮರೆಯಾಗಿದ್ದ ಬಾಲಕಿಯ ಮೃತದೇಹವು ಕಡಿದಾದ ಪ್ರಪಾತದಲ್ಲಿ ಪತ್ತೆಯಾಗಿದ್ದು, ಕುಟುಂಬವನ್ನು ಶೋಕಸಾಗರದಲ್ಲಿ ಮುಳುಗಿಸಿದ

ಮೃತದೇಹವು ಪತ್ತೆಯಾದ ಸ್ಥಳವು ತೀರ ಇಳಿಜಾರಿನಿಂದ ಕೂಡಿದ ದುರ್ಗಮ ಪ್ರದೇಶವಾದ ಕಾರಣ, ಕಾರ್ಯಾಚರಣೆ ನಡೆಸುತ್ತಿರುವ ಸಿಬ್ಬಂದಿಗೆ ಶವವನ್ನು ಮೇಲಕ್ಕೆ ತರುವುದು ದೊಡ್ಡ ಸವಾಲಾಗಿ ಪರಿಣಮಿಸಿದೆ.

ಅಗ್ನಿಶಾಮಕ ದಳ, ಪೊಲೀಸರು, ಅರಣ್ಯ ಸಿಬ್ಬಂದಿ ಹಾಗೂ ಪ್ರವಾಸಿ ಮಿತ್ರರು ಜಂಟಿಯಾಗಿ ಹರಸಾಹಸ ಪಡುತ್ತಿದ್ದು, ಮೃತದೇಹ ಕೊಳೆತ ಸ್ಥಿತಿಯಲ್ಲಿರುವುದರಿಂದ ಕಾರ್ಯಾಚರಣೆ ಮತ್ತಷ್ಟು ಸಂಕಷ್ಟಕ್ಕೆ ಈಡಾಗಿದೆ. ಈಗಾಗಲೇ ಸ್ಥಳಕ್ಕೆ ಭೇಟಿ ನೀಡಿರುವ ಸೋಕೋ ತಂಡವು ಮಹತ್ವದ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದು, ಮರಣೋತ್ತರ ಪರೀಕ್ಷೆಯ ನಂತರವಷ್ಟೇ ಸಾವಿನ ನಿಖರ ಕಾರಣ ತಿಳಿದುಬರಬೇಕಿದೆ.

ಪ್ರಕೃತಿಯ ಮಡಿಲಲ್ಲಿ ಸಂಭ್ರಮಿಸಲು ಬಂದ ಕುಟುಂಬಕ್ಕೆ ಈಗ ವಿಧಿಯಾಟವು ಅರಗಿಸಿಕೊಳ್ಳಲಾಗದ ನೋವನ್ನು ನೀಡಿದೆ.

Family in mourning after discovery of Srinanda’s body

Share

Leave a comment

Leave a Reply

Your email address will not be published. Required fields are marked *

Don't Miss

ಜೀವಾಣು ಹೆಚ್ಚಿಸುವ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕು

ಚಿಕ್ಕಮಗಳೂರು: ಮಣ್ಣು ರೋಗಯುಕ್ತವಾಗಿದ್ದು, ಅದಕ್ಕೆ ಬೇಕಿರುವ ಜೀವಾಣುಗಳನ್ನು ಹೆಚ್ಚಿಸುವ ಮೂಲಕ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕಾದ ಅನಿವಾರ್ಯ ಇದೆ’ ಎಂದು ಕನ್ನೇರ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ತಿಳಿಸಿದರು. ಸಾವಯವ ರೈತರ ಬಳಗದಿಂದ...

ಅಡ್ಡ ಮತದಾನದ ಸತ್ಯಶೋಧನಾ ಸಮಿತಿ ವರದಿ ಸಿದ್ದ

ಚಿಕ್ಕಮಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನದ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ರಚಿಸಿರುವ ಸತ್ಯಶೋಧನಾ ಸಮಿತಿಯು ತನ್ನ ಪ್ರಾಥಮಿಕ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ. ಸಮಿತಿಯ ಸದಸ್ಯರಾದ ಸಿ.ಟಿ. ರವಿ ಅವರು ಚಿಕ್ಕಮಗಳೂರಿನಲ್ಲಿ ಈ...

Related Articles

ಸ್ವಚ್ಛ ಪರಿಸರ ಉಳಿಸಿ ಬೆಳೆಸುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ

ಚಿಕ್ಕಮಗಳೂರು: ಮಲೆನಾಡಿನ ನಿಸರ್ಗದತ್ತ ಸೌಂದರ್ಯ ಮತ್ತು ಸ್ವಚ್ಛ ಪರಿಸರವನ್ನು ಉಳಿಸಿ ಬೆಳೆಸುವ ಮಹತ್ತರವಾದ ಹೊಣೆಗಾರಿಕೆ ನಮ್ಮೆಲ್ಲರ...

ಪ್ರವಾಹ ಪರಿಸ್ಥಿತಿ ಎದುರಿಸುವ ಅಣಕು ಪ್ರದರ್ಶನ

ಚಿಕ್ಕಮಗಳೂರು: ಕಾಫಿನಾಡಿನ ಹಿರೇಕೊಳಲೆ ಕೆರೆಯಲ್ಲಿ ಪ್ರವಾಹ ಪರಿಸ್ಥಿತಿಯನ್ನು ಎದುರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಹಾಗೂ ಅಗ್ನಿಶಾಮಕ ಮತ್ತು...

ಯುವಜನತೆ ಮಾದಕ ವಸ್ತು ಮುಕ್ತ ಸಮಾಜ ನಿರ್ಮಾಣಕ್ಕೆ ಮುಂದಾಗಲಿ

ಚಿಕ್ಕಮಗಳೂರು: ಇಂದಿನ ಸಮಾಜದಲ್ಲಿ ಮಾದಕ ದ್ರವ್ಯಗಳ ಹಾವಳಿ ಹೆಚ್ಚಾಗುತ್ತಿದ್ದು, ಇದು ಯುವ ಪೀಳಿಗೆಯ ಭವಿಷ್ಯ ಹಾಗೂ...

ಭಿಕ್ಷುಕಿಯನ್ನು ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು:  ಕ್ಷುಲ್ಲಕ ಕಾರಣಕ್ಕೆ ಸೈಜುಕಲ್ಲು ಎತ್ತಿಹಾಕಿ ಮಹಿಳೆಯನ್ನು ಕೊಲೆ ಮಾಡಿದ ಆರೋಪಿಗೆ ಇಲ್ಲಿನ ಒಂದನೇ ಅಧಿಕ...