Home Crime News ವಿದ್ಯುತ್‌ ತಂತಿ ಸ್ಪರ್ಷಕ್ಕೆ ರೈತನ ಸಾವು
Crime NewschikamagalurHomeLatest Newsnamma chikmagalur

ವಿದ್ಯುತ್‌ ತಂತಿ ಸ್ಪರ್ಷಕ್ಕೆ ರೈತನ ಸಾವು

Share
Share

ಮೂಡಿಗೆರೆ: ವಿದ್ಯುತ್‌ ತಂತಿ ಸ್ಪರ್ಶಿಸಿ ರೈತರೊಬ್ಬರು ಸಾವನ್ನಪ್ಪಿರುವ ಘಟನೆ ಮೂಡಿಗೆರೆ ತಾಲೂಕಿನ ಊರುಬಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೈರಾಪುರ ಗ್ರಾಮದಲ್ಲಿ ನಡೆದಿದೆ

ಬೈರಾಪುರ ಗ್ರಾಮದ ಕೃಷಿಕರಾದ ನಾಗೇಶ್ ಗೌಡ (72 ವರ್ಷ) ಆಕಸ್ಮಿಕ ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ್ದಾರೆ.

ನಾಗೇಶ್ ಗೌಡ ಅವರು ಇಂದು ಮಂಗಳವಾರ ಮಧ್ಯಾಹ್ನ ತಮ್ಮ ಜಾನುವಾರುಗಳನ್ನು ಮೇಯಿಸಲು ತೆರಳಿದ್ದ ವೇಳೆ ಬೈರಾಪುರ ಸರ್ಕಾರಿ ಶಾಲೆಯ ಸಮೀಪ ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ್ದಾರೆ

11 ಕೆಂ.ವಿ. ವಿದ್ಯುತ್ ಪವರ್ ಲೈನ್ ಕಂಬದ ಬಳಿ ವಿದ್ಯುತ್ ಗೌಂಡ್ ಆಗಿದ್ದು ಘಟನೆಗೆ ಕಾರಣ ಎಂದು ಮೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ.

ಆ ಸ್ಥಳದಲ್ಲಿ ಜಾನುವಾರುಗಳನ್ನು ಮೇಯಿಸಲು ಹೋದಾಗ ನಾಗೇಶ್ ಗೌಡರಿಗೆ ವಿದ್ಯುತ್ ಸ್ಪರ್ಶಿಸಿ ಸ್ಥಳದಲ್ಲಿಯೇ ಸಾವನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಘಟನೆಗೆ ನಿಖರ ಕಾರಣ ಇನ್ನಷ್ಟೇ ತಿಳಿದು ಬರಬೇಕು.

ನಾಗೇಶ್ ಗೌಡ ಅವರು ಗ್ರಾಮದ ಹಿರಿಯ ಕೃಷಿಕರಾಗಿದ್ದರು. ಅವರು ಪತ್ನಿ ಹಾಗೂ ಇಬ್ಬರು ಪುತ್ರರು ಮತ್ತು ಅಪಾರ ಬಂಧುಗಳನ್ನು ಅಗಲಿದ್ದಾರೆ

Farmer dies after touching electric wire

Share

Leave a comment

Leave a Reply

Your email address will not be published. Required fields are marked *

Don't Miss

ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ಮಲೆನಾಡಿಗರು ಆಕ್ರೋಶ

ಕಳಸ: ಸರ್ಕಾರದ ಬೇಜವಾಬ್ದಾರಿತನ ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯದ ವಿರುದ್ಧ ಮಲೆನಾಡಿಗರು ಆಕ್ರೋಶದ ತೊಡೆ ತಟ್ಟಿದ್ದಾರೆ. ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳಾದರೂ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕಳಕೋಡು ಕುಗ್ರಾಮದ ಜನರಿಗೆ ಮಾತ್ರ...

ಭಾರಿ ಮಳೆಯ ಆರ್ಭಟಕ್ಕೆ ಮೆಸ್ಕಾಂಗೆ 3.21 ಕೋಟಿ ಹಾನಿ

ಚಿಕ್ಕಮಗಳೂರು: ಮುಂಗಾರುಪೂರ್ವ ಮಳೆ ಮತ್ತು ಭಾರಿ ಗಾಳಿಯ ಆರ್ಭಟಕ್ಕೆ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಮೆಸ್ಕಾಂ ವ್ಯಾಪ್ತಿಯಲ್ಲಿ ಭಾರಿ ಪ್ರಮಾಣದ ಆಸ್ತಿಪಾಸ್ತಿ ಹಾನಿ ಸಂಭವಿಸಿದೆ. ಏಪ್ರಿಲ್ ಒಂದರಿಂದ ಜೂನ್ ಒಂದರವರೆಗೆ ಮೆಸ್ಕಾಂ ಅಂಕಿ ಅಂಶಗಳ...

Related Articles

ಕಾಫಿ ಮೂಟೆ ಸಾಗಿಸುತ್ತಿದ್ದ ಲಾರಿ ಅಪಘಾತ

ಚಿಕ್ಕಮಗಳೂರು: ಕಾಫಿ ಮೂಟೆಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ಚಿಕ್ಕಮಗಳೂರು ನಗರದ ಕೆ.ಎಂ. ರಸ್ತೆಯಲ್ಲಿ ಸಂಚರಿಸುತ್ತಿದ್ದ ವೇಳೆ ಚಾಲಕನ...

ಬೈಕ್ – ಕಾರೊಂದು ಮುಖಾಮುಖಿ ಡಿಕ್ಕಿ: ಚಾಲಕ ತೀವ್ರ ಗಾಯ

ಚಿಕ್ಕಮಗಳೂರು: ಪ್ರವಾಸಕ್ಕೆಂದು ಬಂದಿದ್ದ ಬೀದರ್ ಮೂಲದ ಬೈಕ್ ಸವಾರನಿಗೆ ಕಾರೊಂದು ಮುಖಾಮುಖಿ ಡಿಕ್ಕಿಯಾಗಿರುವ ಘಟನೆ ಚಿಕ್ಕಮಗಳೂರು...

ತಂತಿ ಉರುಳಿಗೆ ಸಿಲುಕಿ ತೀವ್ರವಾಗಿ ಗಾಯಗೊಂಡ ಹುಲಿ

ಚಿಕ್ಕಮಗಳೂರು: ಮುತ್ತೋಡಿ ವಲಯದ ಏಳುನೂರುಖಾನ್ ತೋಟದ ಬಳಿ ತಂತಿ ಉರುಳಿಗೆ ಸಿಲುಕಿ ತೀವ್ರವಾಗಿ ಗಾಯಗೊಂಡಿರುವ ಹುಲಿಯೊಂದು...

ಗೋಲಿ ಆಟವಾಡಲು ಅವಕಾಶ ನೀಡದಕ್ಕೆ ಯುವಕ ಮೇಲೆ ಹಲ್ಲೆ

ಚಿಕ್ಕಮಗಳೂರು: ಕ್ಷುಲ್ಲಕ ಕಾರಣಕ್ಕೆ ಯುವಕನೊಬ್ಬನ ಮೇಲೆ ಮನಸೋ ಇಚ್ಛೆ ಹಲ್ಲೆ ನಡೆಸಿರುವ ಘಟನೆ ಚಿಕ್ಕಮಗಳೂರು ನಗರದ...