Home namma chikmagalur chikamagalur ರೈತರು-ಹೋರಿಗಳಿಗೂ ಅವಿನಾಭಾವ ಸಂಬಂಧ
chikamagalurHomeLatest Newsnamma chikmagalur

ರೈತರು-ಹೋರಿಗಳಿಗೂ ಅವಿನಾಭಾವ ಸಂಬಂಧ

Share
Share

ಚಿಕ್ಕಮಗಳೂರು:  ರೈತನಿಗೂ ಹಾಗೂ ಹೋರಿಗಳಿಗೂ ಅವಿನಾವಭಾವ ಸಂಬಂಧವಿದೆ. ಜೋಡೆತ್ತಿನ ಓಟದ ಸ್ಪರ್ಧೆ ರೈತರಿಗೆ ಮನರಂಜನೆ ಜೊತೆಗೆ ಕ್ರೀಡಾಸ್ಪೂರ್ತಿ ನೀಡುತ್ತಿದ್ದು ಯುವಜನತೆ ಹೆಚ್ಚು ಗ್ರಾಮೀಣ ಕ್ರೀಡೆಯಲ್ಲಿ ತೊಡಗಿಕೊಳ್ಳಬೇಕು ಎಂದು ಸಿಡಿಎ ಮಾಜಿ ಅಧ್ಯಕ್ಷ ಕೋಟೆ ರಂಗನಾಥ್ ಹೇಳಿದರು.

ನಗರದ ಕೋಟೆ ಸಮೀಪ ಮಿನಿ ವಿಮಾನ ಮೈದಾನದಲ್ಲಿ ಶ್ರೀ ಕೊಲ್ಲಾಪುರದಮ್ಮನವರ ಜಾತ್ರಾ ಮ ಹೋತ್ಸವ ಪ್ರಯುಕ್ತ ಭಾನುವಾರ ಆಯೋಜಿಸಿದ್ಧ ಅಂತರಾಜ್ಯ ಮಟ್ಟದ ಜೋಡಿ ಎತ್ತಿನಗಾಡಿ ಓಟದ ಸ್ಪರ್ಧಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿ ದೈನಂದಿನವು ಕೃಷಿ ಚಟುವಟಿಕೆ ಕೆಲಸಗಳಲ್ಲಿ ನಿರತರಾಗುವ ರೈತರಿಗೆ ಜೋಡೆತ್ತಿನ ಗಾಡಿ ಕ್ರೀಡಾಕೂಟ ಗಳು ಸಹಕಾರಿ. ಅಲ್ಲದೇ ರಾಸುಗಳು ಮತ್ತು ರೈತನ ನಡುವೆ ಬಾಂಧವ್ಯ ವೃದ್ದಿಸಲು ಈ ಕ್ರೀಡೆ ಸ್ಪೂರ್ತಿಯಾ ಗಿದ್ದು ಹೆಚ್ಚಿನ ಗ್ರಾಮೀಣ ಪ್ರದೇಶದ ಯುವಜನತೆ ಭಾಗಿಯಾಗುವುದು ಒಳ್ಳೆಯ ಬೆಳವಣಿಗೆ ಎಂದರು.

ಎತ್ತಿನಗಾಡಿ ಸ್ಪರ್ಧೆ ನಮ್ಮ ನೆಲದ ಗ್ರಾಮೀನ ಸೊಗಡಿನ ಸಂಸ್ಕೃತಿಯನ್ನು ಪ್ರತಿಬಿಂಬಿಸುತ್ತದೆ. ಪೂರ್ವಿ ಕರ ಕಾಲದಿಂದಲೂ ಉತ್ತಮ ರಾಸುಗಳನ್ನು ರೈತರು ಪ್ರೀತಿಯಿಂದ ಸಾಕುತ್ತಿದ್ದಾರೆ. ಸ್ಪರ್ಧೆಗಳಲ್ಲಿ ಭಾಗಹಿಸು ವ ಸ್ಪರ್ಧಾಳುಗಳು ಸೋಲು-ಗೆಲುವು ಎರಡನ್ನೂ ಸಮನಾಗಿ ಕ್ರೀಡಾ ಮನೋಭಾವನೆಯಿಂದ ಸ್ವೀಕರಿಸಬೇ ಕು ಎಂದರು.

ಜಯಕರ್ನಾಟಕ ವೇದಿಕೆ ಅಧ್ಯಕ್ಷ ಕೆ.ಆರ್.ಅನಿಲ್‌ಕುಮಾರ್ ಮಾತನಾಡಿ ಆಧುನಿಕ ಜಗತ್ತಿನಲ್ಲಿ ಯುವ ಕರು ಮೊಬೈಲ್ ಹಾಗೂ ಟಿವಿಗಳಿಗೆ ಅಂಟಿಕೊಂಡಿದ್ದಾರೆ. ಹೀಗಾಗಿ ಹೊರಾಂಗಣ ಕ್ರೀಡೆಗೆ ಹೆಚ್ಚು ಮನ್ನಣೆ ನೀಡುತ್ತಿಲ್ಲ. ಆದ್ದರಿಂದ ಹೆಚ್ಚು ಗ್ರಾಮೀಣ ಕ್ರೀಡೆಗಳಾದ ಜೋಡೆ ಎತ್ತಿನ ಗಾಡಿ, ಕಬ್ಬಡಿದಂಥ ಕ್ರೀಡಾಕೂಟದ ಲ್ಲಿ ತೊಡಗಿಸಿಕೊಳ್ಳಬೇಕು ಎಂದು ಹೇಳಿದರು.

ಜೋಡೆತ್ತಿನ ಸ್ಪರ್ಧೆಯಲ್ಲಿ ಸ್ಪರ್ಧಾಳುಗಳು ತೀರ್ಪುಗಾರರ ತೀರ್ಮಾನಕ್ಕೆ ಬದ್ಧರಾಗಬೇಕು. ಯಾವುದೇ ಅಡಚಣೆಯಾಗದಂತೆ ಸೂಕ್ತ ರೀತಿಯಲ್ಲಿ ಸ್ಪರ್ಧೆ ಯಶಸ್ವಿಗೊಳಿಸಿದರೆ, ಮುಂದೆಯೂ ಈ ರೀತಿಯ ಕಾ ರ್ಯಕ್ರಮ ನಡೆಸಲು ಆಯೋಜಕರಿಗೆ ಹೆಚ್ಚು ಮುಂದಾಗುತ್ತಾರೆ ಎಂದು ತಿಳಿಸಿದರು.

ಸ್ಪರ್ಧಾ ಆಯೋಜಕರು ಮಾತನಾಡಿ ಕರ್ನಾಟಕ, ಆಂಧ್ರ ಸೇರಿದಂತೆ ಹಲವು ರಾಜ್ಯಗಳಿಂದ ಸುಮಾ ರು ೬೨ ಜೋಡೆತ್ತಿನ ಗಾಡಿ ಸ್ಪರ್ಧೆಯಲ್ಲಿ ನೋಂದಾಯಿಸಿಕೊಂಡಿದ್ದಾರೆ. ಸ್ಪರ್ಧೆಯಲ್ಲಿ ವಿಜೇತರಾದ ಮೊದ ಲ ನಾಲ್ಕು ತಂಡಗಳಿಗೂ ಟ್ರೊಫಿ ಮತ್ತು ನಗದು ಬಹುಮಾನ ನಿಗಧಿಪಡಿಸಲಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ನಗರಸಭೆ ಸದಸ್ಯ ಕುಮಾರ್, ಸ್ಥಳೀಯರಾದ ಗುಂಡಣ್ಣ, ಹರೀಶ್, ವಿಶ್ವನಾಥ್, ಮಧುಕುಮಾರ್ ಅರಸ್, ಜೀವನ್, ಆಯೋಜಕರು ಮತ್ತು ದೋಣಿಖಣ, ಕೋಟೆ, ಮೂರುಮನೆಹಳ್ಳಿ , ಹೊಸಮನೆ ಗ್ರಾಮಸ್ಥರು ಉಪಸ್ಥಿತರಿದ್ದರು.

Farmers and bulls have an inseparable relationship.

Share

Leave a comment

Leave a Reply

Your email address will not be published. Required fields are marked *

Don't Miss

ನೋಟರಿ ವಿ.ಕೆ.ರಘುಯಿಂದ ನೀರಿನ ಮೇಲೆ ತೇಲುತ್ತಾ ಯೋಗ ಭಂಗಿ ಪ್ರದರ್ಶನ

ಚಿಕ್ಕಮಗಳೂರು: ಯೋಗ ಸಾಧಕ ನಗರದ ವಕೀಲ ಹಾಗೂ ನೋಟರಿ ವಿ.ಕೆ.ರಘು ಅವರು  ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ನೀರಿನ ಮೇಲೆ ತೇಲುತ್ತಾ ವಿವಿಧ ಯೋಗ ಭಂಗಿಗಳನ್ನು ಪ್ರದರ್ಶಿಸಿದರು. ಬೈಪಾಸ್ ರಸ್ತೆಯ ನರ್ಚರ್...

ಪೊಲೀಸರ ವಿಚಾರಣೆಗೆ ಒಳಗಾಗಿದ್ದ ಯುವಕ ಆತ್ಮಹತ್ಯೆಗೆ ಶರಣು

ಕಡೂರು: ಪೊಲೀಸರ ವಿಚಾರಣೆಗೆ ಒಳಗಾಗಿದ್ದ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಡೂರು ತಾಲೂಕಿನ ಬೀರೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕುಲ್ಲೂರು ಗ್ರಾಮದ 20 ವರ್ಷದ ಚಂದನ್ ಮೃತಪಟ್ಟ ದುರ್ದೈವಿ. ಇತ್ತೀಚೆಗೆ...

Related Articles

ಎಐಟಿ ವೃತ್ತದ ಬಳಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಎಐಟಿ ವೃತ್ತದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಚೇರಿಯಿಂದ ಮೋಟಾರ್ ಸೈಕಲ್‌ನಲ್ಲಿ...

ಅಭಿವೃದ್ಧಿ ಕೆಲಸಗಳ ಬಗ್ಗೆ ಕೆಲವರು ಪೂರ್ವಗ್ರಪಿಡಿತರಾಗಿ ಮಾತನಾಡುತ್ತಿದ್ದಾರೆ

ಚಿಕ್ಕಮಗಳೂರು: ಅಭಿವೃದ್ಧಿ ಕೆಲಸಗಳ ಬಗ್ಗೆ ಕೆಲವರು ಪೂರ್ವಗ್ರಪಿಡಿತರಾಗಿ ಮಾತನಾಡುತ್ತಿದ್ದಾರೆ. ಈ ಹಿಂದೆ ಒಬ್ಬರಿಗೆ ಮಾತ್ರ ಗುತ್ತಿಗೆ...

ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದ ಬಳಿ ಹೊಸ ವಿವಾದ

ಚಿಕ್ಕಮಗಳೂರು: ಕಾಫಿನಾಡಿನ ಧಾರ್ಮಿಕ ಕ್ಷೇತ್ರ ‘ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ’ (ದತ್ತಪೀಠ) ಆವರಣದಲ್ಲಿ ಈಗ ಮತ್ತೊಂದು...

ರ್‍ಯಾಪಿಡ್ ಬೈಕ್-ಆಟೋ ಪರವಾನಗಿ ನಿಲ್ಲಿಸುವಂತೆ ಆಗ್ರಹಿಸಿ ಪ್ರತಿಭಟನೆ

ಚಿಕ್ಕಮಗಳೂರು: ರ್‍ಯಾಪಿಡ್ ಬೈಕ್ ಮತ್ತು ಆಟೋ ಪರವಾನಗಿಯನ್ನು ನಿಲ್ಲಿಸಬೇಕು ಎ ಂದು ಒತ್ತಾಯಿಸಿ ಸೋಮವಾರ ಚಿಕ್ಕಮಗಳೂರು...