Home Latest News ಸುಟ್ಟು ಹೋದ ಟ್ರಾನ್ಸ್‌ಫಾರ್ಮರ್‌ 72 ಗಂಟೆಯೊಳಗೆ ರೈತರಿಗೆ ಸಿಗುತ್ತಿಲ್ಲ
Latest NewsHomenamma chikmagalurTarikere

ಸುಟ್ಟು ಹೋದ ಟ್ರಾನ್ಸ್‌ಫಾರ್ಮರ್‌ 72 ಗಂಟೆಯೊಳಗೆ ರೈತರಿಗೆ ಸಿಗುತ್ತಿಲ್ಲ

Share
Share

ತರೀಕೆರೆ: ಸುಟ್ಟು ಹೋದ ಟ್ರಾನ್ಸ್‌ಫಾರ್ಮರ್‌ 72 ಗಂಟೆಯೊಳಗೆ ರೈತರಿಗೆ ಸಿಗುತ್ತಿಲ್ಲ. ಪವರ್‌ಮೆನ್‌ಗಳು ಸರಿಯಾಗಿ ಕೆಲಸ ನಿರ್ವಹಿಸುತ್ತಿಲ್ಲ. ತುಂಡಾಗಿ ನೆಲಕ್ಕೆ ಬೀಳುತ್ತಿರುವ ಹಳೆಯ ವಿದ್ಯುತ್ ವೈರ್‌ಗಳನ್ನು ಬದಲಾಯಿಸುತ್ತಿಲ್ಲ. ಟಿ.ಸಿ ಸರಬರಾಜಿಗೆ ವಾಹನಗಳ ಕೊರತೆಯಿದೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು.

ಪಟ್ಟಣದ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಹಿರಿಯ ಅಧಿಕಾರಿಗಳ ಸಮ್ಮಖದಲ್ಲಿ ನಡೆದ ಜನ ಸಂಪರ್ಕ ಸಭೆಯಲ್ಲಿ ರೈತರು ಮತ್ತು ಸಾರ್ವಜನಿಕರು ಸಮಸ್ಯೆಗಳ ಸುರಿಮಳೆಗೈದರು.

ಭಾರತೀಯ ಕಿಸಾನ್ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಪರಮೇಶ್ವರಪ್ಪ ಮಾತನಾಡಿ, ಸುಟ್ಟ ಟಿ.ಸಿಗಳನ್ನು ದುರಸ್ತಿಪಡಿಸಿ 72 ಗಂಟೆಯೊಳಗೆ ರೈತರಿಗೆ ನೀಡಬೇಕು ಎಂಬ ನಿಯಮವನ್ನು ಮೆಸ್ಕಾಂ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸುತ್ತಿಲ್ಲ. ರಿಪೇರಿಯಾದ ಟಿ.ಸಿಗಳನ್ನು ರೈತರು ತಮ್ಮ ಖರ್ಚಿನಲ್ಲಿಯೇ ತೆಗೆದುಕೊಂಡು ಹೋದರೂ ಕೂಡ, ಅಳವಡಿಸಲು ಸಿಬ್ಬಂದಿ ಬರುವುದಿಲ್ಲ. ಟಿಸಿ ತುಂಬಿದ್ದ ವಾಹನಕ್ಕಾಗಿ ವಾರಗಟ್ಟೆಲೆ ಕಾಯುವ ಪರಿಪಾಟವಿದೆ ಎಂದು ದೂರಿದರು.

ರೈತ ಸಂತೋಷ್ ಮಾತನಾಡಿ, ದೋರನಾಳು ಭಾಗದಲ್ಲಿ ವಿದ್ಯುತ್ ತಂತಿಗಳು ತುಂಡಾಗಿ ಬೀಳುತ್ತಿವೆ. ಹಳೆಯ ವೈರ್ ಬದಲಾಯಿಸುವಂತೆ ಹಲವು ಬಾರಿ ಅರ್ಜಿ ಕೊಟ್ಟರೂ ಯಾವುದೇ ಪ್ರಯೋಜನವಾಗಿಲ್ಲ. ವಿದ್ಯುತ್‌ಗೆ ಸಂಬಂಧಿಸಿದ ಯಾವುದೇ ಅವಘಡ, ಎಷ್ಟೊತ್ತಿಗೆ ನಡೆದಿದ್ದರೂ ಕೂಡ ಪವರ್‌ಮೆನ್‌ಗಳು ಬರುವುದು ಮಾತ್ರ ಬೆಳಿಗ್ಗೆ 10 ಗಂಟೆಗೆ ಎಂದು ದೂರಿದರು.

‘ಸುಟ್ಟು ಹೋದ ಟಿ.ಸಿ.ಗಳನ್ನು ರಿಪೇರಿ ಮಾಡಿಸಿ ಬೀರೂರಿನಲ್ಲಿ ಇಡುವುದು ಬೇಡ. ದುರಸ್ತಿಯಾದ ಬಳಿಕ ರೈತರಿಗೆ ತುರ್ತಾಗಿ ವಿತರಿಸುವ ಕೆಲಸ ಮಾಡಬೇಕು ಎಂದು ಸೂಪರಿಂಟೆಂಡಿಂಗ್‌ ಎಂಜಿನಿಯರ್ ಮಂಜುನಾಥ್‌ ಸೂಚನೆ ನೀಡಿದರು.

ಮಾಚೇನಹಳ್ಳಿಯ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಾಸವಾಗುತ್ತಿದೆ. ವೋಲ್ಟೇಜ್ ಅವ್ಯವಸ್ಥೆಯಿಂದ ಮನೆಯಲ್ಲಿರುವ ಎಲೆಕ್ಟ್ರಾನಿಕ್ ಸಲಕರಣೆಗಳಿಗೆ ಹಾನಿಯಾಗುತ್ತಿದೆ. ಈ ಭಾಗಕ್ಕೆ ಪ್ರತ್ಯೇಕ ಟಿ.ಸಿ ಅಳವಡಿಸಿ ಸಮಸ್ಯೆ ಬಗೆಹರಿಸಬೇಕು ಎಂದು ಸ್ಥಳಿಯ ನಿವಾಸಿಗಳು ಮನವಿ ಮಾಡಿದರು.

ರೈತ ಮುಖಂಡರಾದ ಸುಣ್ಣದಹಳ್ಳಿ ಚಂದಪ್ಪ, ಹೊಸಳ್ಳಿ ತಾಂಡ್ಯದ ರಮೇಶ್‌ನಾಯ್ಕ, ಸುನಿಲ್ ಹಾಗೂ ಇತರರು ಸಭೆಯಲ್ಲಿ ಹಾಜರಿದ್ದು ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತಂದರು.

Farmers are unable to get their burnt transformers back within 72 hours.

Share

Leave a comment

Leave a Reply

Your email address will not be published. Required fields are marked *

Don't Miss

ಅಜ್ಜಂಪುರದ ಇಲಿಗೆ ‘ಹಣದ ಮೋಹ’

ಚಿಕ್ಕಮಗಳೂರು : ತುಮಕೂರಿನಲ್ಲಿ ಇತ್ತೀಚೆಗೆ ಇಲಿಯೊಂದು ಚಿನ್ನದ ಆಭರಣಗಳನ್ನು ಎಗರಿಸಿ ಸುದ್ದಿಯಾಗಿದ್ದರೆ, ಇತ್ತ ಚಿಕ್ಕಮಗಳೂರಿನಲ್ಲಿ ಮತ್ತೊಂದು ಚಾಣಾಕ್ಷ ಇಲಿ ಒಂದು ಹೆಜ್ಜೆ ಮುಂದೆ ಹೋಗಿ ನೇರವಾಗಿ ಹಣವನ್ನೇ ಕದ್ದು ತನ್ನ ಸಾಮ್ರಾಜ್ಯ...

ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಹೆಸರಿನಲ್ಲಿಯೂ ನಕಲಿ ವಾಟ್ಸಪ್ ಖಾತೆ

ಚಿಕ್ಕಮಗಳೂರು: ಇತ್ತೀಚಿನ ದಿನಗಳಲ್ಲಿ ಸೈಬರ್ ಕ್ರೈಂ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದ್ದು, ಹ್ಯಾಕರ್‌ಗಳು ಮತ್ತು ವಂಚಕರು ವಾಟ್ಸಪ್, ಫೇಸ್‌ಬುಕ್ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಪ್ರಮುಖರ ಹೆಸರನ್ನು ದುರ್ಬಳಕೆ ಮಾಡಿಕೊಂಡು ಜನರನ್ನು...

Related Articles

ಮುಳ್ಳಯ್ಯನಗಿರಿ ಕ್ರಾಸ್ ಬಳಿ ಟಿಟಿ ವಾಹನ ಮರಕ್ಕೆ ಡಿಕ್ಕಿ

ಚಿಕ್ಕಮಗಳೂರು: ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಮುಳ್ಳಯ್ಯನಗಿರಿ ಕ್ರಾಸ್ ಬಳಿ ಶುಕ್ರವಾರ ಇನೋವಾ ಕಾರು ನಿಯಂತ್ರಣ...

ಹಾಸ್ಟೆಲ್‌ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನ

ಚಿಕ್ಕಮಗಳೂರು: ಸಮಗ್ರ ಗಿರಿಜನ ಕಲ್ಯಾಣ ಇಲಾಖೆ (ಐಟಿಡಿಪಿ) ವ್ಯಾಪ್ತಿಯ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯ...

ಮನೆಯ ಮೇಲ್ಛಾವಣಿಯ ಹೆಂಚು ತೆಗೆದು ನುಗ್ಗಿ ಸರಗಳ್ಳತನ

ನರಸಿಂಹರಾಜಪುರ: ಮನೆಯಲ್ಲಿ ದಂಪತಿ ಮಲಗಿದ್ದ ವೇಳೆ ಮೇಲ್ಛಾವಣಿಯ ಹೆಂಚು ತೆಗೆದು ಒಳನುಗ್ಗಿದ ಕಳ್ಳನೊಬ್ಬ ಮಹಿಳೆಯ ಕೊರಳಿನಲ್ಲಿದ್ದ...

ಕನಸು ಫೈನಾನ್ಸ್ ಹೆಸರಿನಲ್ಲಿ ₹1.60 ಲಕ್ಷ ವಂಚನೆ ಆರೋಪ

ಕಡೂರು: ಪ್ರತಿದಿನ ಉಳಿತಾಯದ ಹಣವನ್ನು ಸ್ವೀಕರಿಸಿ ಶೇ.7ರಷ್ಟು ಬಡ್ಡಿ ನೀಡುವುದಾಗಿ ನಂಬಿಸಿ, ಹಣವನ್ನು ವಾಪಸ್ ನೀಡದೆ...