Home namma chikmagalur ಆನೆಗಳ ಚಲನವಲನ ಡ್ರೋನ್‌ನಿಂದ ಪತ್ತೆಹಚ್ಚಲು ರೈತ ಸಂಘ ಮನವಿ
namma chikmagalurchikamagalurHomeLatest News

ಆನೆಗಳ ಚಲನವಲನ ಡ್ರೋನ್‌ನಿಂದ ಪತ್ತೆಹಚ್ಚಲು ರೈತ ಸಂಘ ಮನವಿ

Share
Share

ಶೃಂಗೇರಿ: ‘ತಾಲ್ಲೂಕಿನ ಸುತ್ತಮುತ್ತ ಆನೆ, ಕಾಡುಕೋಣ ಮತ್ತು ಇನ್ನಿತರೆ ಕಾಡು ಪ್ರಾಣಿಗಳ ಹಾವಳಿ ಹೆಚ್ಚಾಗುತ್ತಿದ್ದು, ಕೂಡಲೇ ಅರಣ್ಯ ಇಲಾಖೆಯವರು ಅವುಗಳನ್ನು  ನಿಯಂತ್ರಿಸಲು ಕ್ರಮ ತೆಗೆದುಕೊಳ್ಳಬೇಕು’ ಎಂದು ತಾಲ್ಲೂಕು ರೈತ ಸಂಘದ ಅಧ್ಯಕ್ಷ ಕಾನೋಳ್ಳಿ ಚಂದ್ರಶೇಖರ್ ಹೇಳಿದರು.

ಶೃಂಗೇರಿ ತಾಲ್ಲೂಕಿನಲ್ಲಿ ಕಾಡು ಪ್ರಾಣಿಗಳ ಹಾವಳಿ ತಪ್ಪಿಸುವಂತೆ ತಾಲ್ಲೂಕು ರೈತ ಸಂಘದವರು ಅರಣ್ಯ ಇಲಾಖೆಯ ವಲಯ ಅರಣ್ಯಾಧಿಕಾರಿಗೆ ಮನವಿ ಸಲ್ಲಿಸಿ ಅವರು ಮಾತನಾಡಿದರು.

‘ಕಾಡಾನೆಗಳು ಬಾಳೆ, ಅಡಿಕೆ, ಭತ್ತದ ಗದ್ದೆಗಳಿಗೆ ನುಗ್ಗಿ ಬೆಳೆಗೆ ಹಾನಿ ಉಂಟು ಮಾಡುತ್ತಿದ್ದು, ಇದರಿಂದ ರೈತರಿಗೆ ತೀವ್ರ ಸಮಸ್ಯೆಯಾಗಿದೆ. ಕಾಡಾನೆಗಳ ಹಾವಳಿಯಿಂದ ಕಾರ್ಮಿಕರು, ರೈತರು ಕೃಷಿ ಜಮೀನುಗಳಿಗೆ ಓಡಾಡಲು ಕಷ್ಟ ಪಡುವಂತಾಗಿದೆ. ಆದ್ದರಿಂದ ಆನೆಗಳ ಚಲನ–ವಲನಗಳನ್ನು ಡ್ರೋನ್ ಮೂಲಕ ಪತ್ತೆಹಚ್ಚಿ ಸಾರ್ವಜನಿಕರಿಗೆ ಧ್ವನಿ ವರ್ಧಕಗಳ ಮೂಲಕ ತಿಳಿಸಬೇಕು’ ಎಂದರು.

ರೈತ ಸಂಘದ ಕೆಲವಳ್ಳಿ ಗುಂಡಪ್ಪ ಮಾತನಾಡಿ, ‘ಆನೆಗಳಿಂದ ರೈತರಿಗೆ ತೊಂದರೆಯಾದರೆ, ಅರಣ್ಯ ಇಲಾಖೆಯೇ ನೇರ ಹೊಣೆ. ಇತ್ತೀಚಿಗೆ ಕಾಡುಕೋಣಗಳಿಂದಲೂ ಬೆಳೆಗಳಿಗೆ ಹಾನಿ ಉಂಟಾಗುತ್ತಿದ್ದು, ರೈತರು ಬೇಸತ್ತಿದ್ದಾರೆ. ಕಾಡುಕೋಣಗಳ ಹಾವಳಿ ತಡೆಗಟ್ಟಲು ರೈತರು ಮಾಡುವ ಬೇಲಿಗಳಿಗೆ ಸಹಾಯಧನ ನೀಡಬೇಕು. ಇವುಗಳನ್ನು ನಿಯಂತ್ರಿಸುವುದರ ಜೊತೆಗೆ ರೈತರ ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡಬೇಕು’ ಎಂದು ಆಗ್ರಹಿಸಿದರು.

‘18 ದಿನಗಳ ಹಿಂದೆ ಎರಡು ಆನೆಗಳು ತಾಲ್ಲೂಕಿನಲ್ಲಿ ಕಾಣಿಸಿದ್ದವು. ಅವುಗಳನ್ನು ಕಾಡಿಗೆ ಓಡಿಸಲಾಗಿದೆ. 5 ದಿನಗಳಿಂದ ಒಂದು ಪುಂಡಾನೆಯು ಅಡ್ಡಗದ್ದೆ, ಕಾವಡಿ, ಚಿತ್ರವಳ್ಳಿ, ಕೆಳಕೊಪ್ಪ, ಹಿಂಬ್ರವಳ್ಳಿ, ಹೊಳೆಕೊಪ್ಪ ಭಾಗದಲ್ಲಿ ಕಾಣಿಸಿಗೊಂಡಿದ್ದರಿಂದ ಸಾರ್ವಜನಿಕರ ಸುರಕ್ಷತೆ ದೃಷ್ಟಿಯಿಂದ ಆ ಭಾಗದಲ್ಲಿ ತೋಟ ಮತ್ತು ಗದ್ದೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರನ್ನು ಮನೆಗೆ ಕಳಿಸಲಾಗಿದೆ.

ಅರಣ್ಯ ಇಲಾಖೆ ಸಿಬ್ಬಂದಿ ಮತ್ತು ಆನೆ ಕಾರ್ಯ ಪಡೆಯವರು ಆನೆ ಸಂಚಾರದ ಚಲನವಲನದ ಬಗ್ಗೆ ಗಮನ ಹರಿಸಿದ್ದಾರೆ. ಆನೆ ಸಂಚರಿಸುವ ಪ್ರದೇಶಗಳ ಶಾಲೆಗಳಿಗೆ ಮುನ್ನೆಚ್ಚರಿಕೆ ಕ್ರಮವಾಗಿ ರಜೆ ನೀಡಲಾಗಿದೆ’ ಎಂದು ವಲಯ ಅರಣ್ಯಾಧಿಕಾರಿ ಮಧುಕರ್ ಹೇಳಿದರು.

ರೈತ ಸಂಘ ಬಂಡ್ಲಪುರ ಶ್ರೀಧರ್ ರಾವ್, ಉಳುವಳ್ಳಿ ಪೂರ್ಣೇಶ್, ಚೆನ್ನಕೇಶವ ಮೆಣಸೆ, ಅನಂತಯ್ಯ, ಗಿಣಿಕಲ್ ಚಂದ್ರಶೇಖರ್, ಸತೀಶ್ ಮೀಗಾ ಭಾಗವಹಿಸಿದ್ದರು.

Farmers’ association appeals to track elephant movements using drones

Share

Leave a comment

Leave a Reply

Your email address will not be published. Required fields are marked *

Don't Miss

ಎತ್ತಿನ ಗಾಡಿ ತೆರಿಗೆ ಬಡಿದು ಒಬ್ಬರಿಗೆ ಗಂಭೀರ ಗಾಯ

ಚಿಕ್ಕಮಗಳೂರು : ಇತಿಹಾಸ ಪ್ರಸಿದ್ಧ ಅಂತರಘಟ್ಟೆ ಜಾತ್ರಾ ಮಹೋತ್ಸವದಲ್ಲಿ ಎತ್ತಿನ ಗಾಡಿ ತೆರಿಗೆ ಬಡಿದು ಒಬ್ಬರಿಗೆ ಗಂಭೀರ ಗಾಯವಾಗಿದೆ. ರೇಸಿಗೆ ಬಿದ್ದ ಎತ್ತಿನಗಾಡಿಗಳ ಪೈಪೋಟಿ ಮಧ್ಯೆ ಎತ್ತಿನ ಗಾಡಿ ತೇರಿಗೆ ಡಿಕ್ಕಿಯೊಡೆದಿದೆ....

ಕಡೂರು ಪುರಸಭೆಯ ಇಬ್ಬರು ದ್ವಿತೀಯ ದರ್ಜೆ ಸಹಾಯಕರ ಅಮಾನತು

ಚಿಕ್ಕಮಗಳೂರು: ಆಸ್ತಿ ಗುರುತಿನ ಸ್ವತ್ತಿನ ಚಕ್ಕುಬಂಧಿಯನ್ನು ಅಕ್ರಮವಾಗಿ ತಿದ್ದುಪಡಿ ಮಾಡಿರುವ ಹಿನ್ನೆಲೆಯಲ್ಲಿ ಕಡೂರು ಪುರಸಭೆಯ ಇಬ್ಬರು ದ್ವಿತೀಯ ದರ್ಜೆ ಸಹಾಯಕರನ್ನು ಜಿಲ್ಲಾಧಿಕಾರಿ ಎನ್.ಎಂ. ನಾಗರಾಜ್ ಸೇವೆಯಿಂದ ಅಮಾನತ್ತುಗೊಳಿಸಿ ಬುಧವಾರ ಆದೇಶಿಸಿದ್ದಾರೆ. ಪಟ್ಟಣದ...

Related Articles

ಜಿಲ್ಲೆಯಲ್ಲಿ ಮಲೆನಾಡು ಡ್ರೈವಿಂಗ್ ಸ್ಕೂಲ್ ಅಸೋಸಿಯೇಷನ್ ಸ್ಥಾಪನೆ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮಲೆನಾಡು ಡ್ರೈವಿಂಗ್ ಸ್ಕೂಲ್ ಅಸೋಸಿಯೇಶನ್ ಸ್ಥಾಪಿಸಿದ್ದು, ಮುಂದಿನ ದಿನಗಳಲ್ಲಿ ರಸ್ತೆ ಸುರಕ್ಷತೆ ಬಗ್ಗೆ...

ಮೂಡಿಗೆರೆ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಭಿವೃದ್ಧಿ ಶೂನ್ಯ

ಚಿಕ್ಕಮಗಳೂರು: ಮೂಡಿಗೆರೆ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಭಿವೃದ್ಧಿ ಶೂನ್ಯ ಸಾಧನೆ ಮಾಡಿರುವ ಶಾಸಕರು ಉಳಿದಿರುವ...

ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದ ವಾಹನ ವಶ

ಚಿಕ್ಕಮಗಳೂರು : ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ವಾಹನವೊಂದನ್ನು ಪೊಲೀಸರು ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ. ಕೆಎಂ ರಸ್ತೆಯ...

ಮನೆಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ನಗ-ನದದು ಕಳವು

ಚಿಕ್ಕಮಗಳೂರು : ತಾಲೂಕಿನ ಕಂಚೇನಹಳ್ಳಿಯಲ್ಲಿ ಹಾಡಹಗಲೇ ಕಳ್ಳತನ ನಡೆದಿದ್ದು ರೈತ ಉಮೇಶ್ ಎಂಬುವವರ ಮನೆಯಿಂದ ಲಕ್ಷಾಂತರ...